Homeಅಂಕಣಗಳುನೀರನಡೆ | ಭವಿಷ್ಯದ ನೆರಳಿನಂತಿರುವ ವರ್ತಮಾನದ ಸಣ್ಣ ಸಂಗತಿಗಳು

ನೀರನಡೆ | ಭವಿಷ್ಯದ ನೆರಳಿನಂತಿರುವ ವರ್ತಮಾನದ ಸಣ್ಣ ಸಂಗತಿಗಳು

- Advertisement -
- Advertisement -
  • ಡಾ. ವಿನಯಾ ಒಕ್ಕುಂದ |

ನಮ್ಮ ಸುತ್ತ ನಡೆಯುತ್ತಿರುವ ಸಣ್ಣ ಸಂಗತಿಗಳನ್ನು ಉಪೇಕ್ಷಿಸಲು ಸಾಧ್ಯವಿಲ್ಲ. ಅವು ಬೃಹತ್ ವಿದ್ಯಮಾನದ ನೆರಳಿನಂತಿರುತ್ತವೆ. ಮೊನ್ನೆ ಧಾರವಾಡದ ಮೇ ಸಾಹಿತ್ಯದ ಕಾರ್ಯಕ್ರಮದಲ್ಲಿದ್ದೆ. ನನ್ನ ಪಕ್ಕ ಹಿರಿಯರೊಬ್ಬರು ಕೂತಿದ್ದರು. ನಿಧಾನ ಮಾತು ಆರಂಭಿಸಿದರು. ‘ನಿಮ್ಮ ಮಗಳಾ?’ ‘ಹೀಗೆ ಫೋಟೋ ತೆಗೆದು ಓಡಾಡಿ ಮುಂದೇನು ಮಾಡುತ್ತಾಳೆ?’ .. ಆ ಮಾತುಗಳಲ್ಲಿ ಮಮತೆ ಇರಲಿಲ್ಲ. ವ್ಯಂಗ್ಯವಿತ್ತು. ಪೇಚಿಗೆ ಸಿಲುಕಿಸುವ ಇರಾದೆಯಿತ್ತು. ನಾನು ‘ಗೊತ್ತಿಲ್ಲ’ ಎಂದೆ. ‘ಚಿತ್ರ ಗಿತ್ರ ತಗೀತಾಳಂತಲ್ಲ?’ ‘ಹೂಂ’. ‘ಓದೋದು ಬರೆಯೋದು?’ ‘ಅಂಥದೇನಿಲ್ಲ’… ನಾನು ಕುರ್ಚಿಯನ್ನು ಅತ್ತಿತ್ತ ಜರುಗಿಸಿಕೊಂಡು ಕೂತೆ. ಅವಳು ಬಂದಾಗ ‘ನೋಡು ಚಿತ್ರವೆಂದರೆ ಹೀಗೆ ತಗೀಬೇಕು’ ಎಂದು ಮೊಬೈಲ್‍ನಿಂದ ತೋರಿಸಿದರು. ಬಿಜೆಪಿ ಶಾಸಕರೊಬ್ಬರ ಚಿತ್ರ ಬಿಡಿಸಿದ ಕಲಾವಿದರೊಬ್ಬರ ಚಿತ್ರಗಳವು. ಇವಳು ತಲೆಯಾಡಿಸಿ ಎದ್ದುಹೋದಳು. ಧರ್ಮದ ಕುರಿತ ಗೋಷ್ಠಿಯಲ್ಲಿ ವೀರಶೈವ- ಲಿಂಗಾಯತ ಚರ್ಚೆ ಬಂತು. ಎಚ್.ಎಸ್.ಶಿವಪ್ರಕಾಶ್, ಎಸ್ ಜಿ. ಸಿದ್ದರಾಮಯ್ಯ, ರಂಜಾನ್ ದರ್ಗಾ ಚರ್ಚಿಸುತ್ತಿದ್ದರು. ‘ಇದೇನಿದು, ಸಾಹಿತ್ಯದ ಬಗ್ಗೆ ಮಾತಾ? ತಥ್.. ನೀವು ಇಂಗ್ಲಿಷ್ ಲಿಟರೇಚರ್ ಓದಿದ್ದೀರಾ ಮೇಡಂ? ಅಲ್ಲಿ ಹೀಗೆ ಮಾತಾಡುವುದನ್ನು ಮಾತಿನ ವಾಂತಿ ಅಂತಾರೆ’. ನನಗೆ ಕೋಪ ಬರುತ್ತಿತ್ತು. ‘ನಿಮಗೆ ಬೇಡವಾದರೆ ಎದ್ದು ಹೋಗಿ’ ಎಂದೆ. ‘ಇಲ್ಲ ಇಲ್ಲ ನಾನು ಕೇಳಲಿಕ್ಕೇ ಬಂದಿದ್ದು’ ಎಂದು ಉತ್ತರ ಬಂತು. ದಿನೇಶ್ ಅಮೀನ್‍ಮಟ್ಟು, ‘ಇಷ್ಟೆಲ್ಲ ಮಾಡುವ ಬದಲು ಇವಿಎಂ ಮಶಿನ್‍ಗಳನ್ನು ಹ್ಯಾಕ್ ಮಾಡುವವರನ್ನು ತಯಾರು ಮಾಡಿಕೊಂಡಿದ್ದರೆ ಸಾಕಾಗಿತ್ತು’ ಎಂದು ಪ್ರಜಾಪ್ರಭುತ್ವದ ಅಭದ್ರತೆಯ ಬಗ್ಗೆ ವ್ಯಂಗ್ಯದಿಂದ ಮಾತು ಆರಂಭಿಸಿದರು. ನನ್ನ ಪಕ್ಕದ ವ್ಯಕ್ತಿಗೆ ಸಿಟ್ಟು ನೆತ್ತಿಗೇರಿತ್ತು. ‘ಏನಿದು ಬಾಯಿಬಡುಕರ ಹಾಗೆ ಒದರಿದರೆ..? ವಿವಿಪ್ಯಾಟ್ ಲಗತ್ತಿಸಿಲ್ವಾ?’ ಈ ಬಾರಿ ಆಸಾಮಿ ನನ್ನ ಕಡೆ ಹೊರಳಿರಲಿಲ್ಲ. ಆ ಕಡೆಯ ವ್ಯಕ್ತಿಯ ಜತೆಗೆ ಮಾತಾಡುತ್ತಿತ್ತು. ಆ ಕ್ಷಣ ವಿವಿಪ್ಯಾಟ್ ಹಿಂದೆ ಹೀಗೆ ಬಾಯ್ಮುಚ್ಚಿಸುವ ತಂತ್ರಗಾರಿಕೆ ಇದೆ ಅನ್ನಿಸಿತು.

ಸಂಜೆಯ ಸಮಾರೋಪದಲ್ಲಿ ಮಾತನಾಡುತ್ತ ಸುನಂದಾ ಕಡಮೆ, ಪ್ರಕಾಶ್ ರೈ ಮನೆಗೆ ಬಂದಿದ್ದ ಫೋಟೋ ಫೇಸ್ ಬುಕ್ಕಿಗೆ ಹಾಕಿದಾಗ ಕೆಲ ದಿನ ನಿರಂತರವಾಗಿ ಕೆಟ್ಟ ಮೆಸೇಜ್‍ಗಳು ಬಂದಿದ್ದನ್ನು ಪ್ರಸ್ತಾಪಿಸಿದರು. ನನಗೆ ಗಾಬರಿಯಾಯಿತು. ಪ್ರಕಾಶ್ ರೈ ಮನೆಗೆ ಬಂದಿದ್ದ ಫೋಟೋಗಳನ್ನು ನನ್ನ ಗಂಡನೂ ಮಗಳೂ ಫೇಸ್ ಬುಕ್ಕಿಗೆ ಹಾಕಿದ್ದರು. ಮಗಳಿಗೆ ಪ್ರಕಾಶ್ ರೈ ಕುರಿತು ಕೆಲವು ಕೆಟ್ಟ ಕಮೆಂಟ್‍ಗಳು ಬಂದಿದ್ದವಂತೆ. ‘ನನಗೆ ಹೇಳಲಿಲ್ಲವಲ್ಲ’ಎಂದರೆ ‘ನಾನೇ ಓದ್ಲಿಲ್ಲ, ಹೀಗೆ ಅಂತ ಕಂಡ ತಕ್ಷಣ ಬ್ಲಾಕ್ ಮಾಡಿ ಒಗೆದೆ’ ಎಂದಳು ನಿಸೂರಾಗಿ. ಇವೆಲ್ಲ ಇಷ್ಟು ಉಪೇಕ್ಷಿಸುವ ಸಂಗತಿಗಳಲ್ಲ ಎಂದು ಅವಳಿಗೆ ತಿಳಿದಿರಲಿಲ್ಲ. ಪ್ರಕಾಶ್ ರೈ, ನಮ್ಮ ಮನೆಯಲ್ಲಿ ಕೆಲಗಂಟೆ ಕಳೆದು ಹೋದ ಮೇಲೆ ನಡೆದ ಸಂಗತಿಗಳನ್ನು ನೆನಪಿಸಿಕೊಂಡೆ. ಅಕ್ಕಪಕ್ಕದವರ ಕಣ್ಣು ಬೇರೆ ನಮೂನಿ ತೂಗತೊಡಗಿವೆ ಅನ್ನಿಸಿತ್ತು. ಎಲ್ಲರ ಹಾಗೆ ಬಾಗಿಲಿಗೆ ರಂಗೋಲಿ ಇಕ್ಕಿ, ಎಲ್ಲರ ಹಾಗೆ ಆಕಾಶಬುಟ್ಟಿ ತೂಗುಬಿಟ್ಟು, ಎಲ್ಲರ ಹಾಗೆ ಕಬ್ಬು ನಿಲ್ಲಿಸಿ ತುಳಸಿ ಪೂಜೆ ಮಾಡಿ… ಏನೆಲ್ಲಾ ಮಾಡಿದರೂ ಇವರು ನಮ್ಮಂತಿಲ್ಲ ಅಂತ ಸುತ್ತಲ ಜನ ಇರುಸು-ಮುರಸು ಅನುಭವಿಸುತ್ತಿದ್ದ ಹಾಗಿತ್ತು. ಅವರ ಬಗ್ಗೆ ಪಾಪ ಅನ್ನಿಸಿತು. ನಮ್ಮ ಕೆಲಸದವಳು, ಆವತ್ತು ಪ್ರಕಾಶ್ ರೈ ಅಡಿಗೆ ಮನೆ ಬಾಗಿಲವರೆಗೂ ಬಂದು ಅವಳೊಡನೊಂದು ಫೋಟೋ ಕೂಡ ತಗೊಂಡಿದ್ದರು. ಅವಳು ಆವತ್ತು ಪ್ರಕಾಶ್ ರೈ ಬಗ್ಗೆ ಫಿದಾ ಆಗಿದ್ದು ನಿಜ. ಆದರೆ ದಿನವೂ ಒಂದೊಂದು ಪ್ರಶ್ನೆಗಳನ್ನು ತರುತ್ತಿದ್ದಳು. ‘ಅವರಿಗೆ ಕಾಂಗ್ರೆಸ್ ಏಜೆಂಟ್ ಅಂತಾರಂತಲ್ಲ?’ ‘ಅವರಿಗೆ ಎರಡು ಮದುವೆಯಾಗಿದಾವಂತಲ್ಲ?’ ಹೀಗೆ. ತಿಳಿದಷ್ಟನ್ನು ಸಮಾಧಾನದಿಂದ ವಿವರಿಸಿದ್ದೆ. ಪ್ರಕಾಶ ರೈ ಭಾಷಣದ ತುಣುಕುಗಳನ್ನು ಕೇಳಿಸಿದೆ. ‘ ಹೌದ್ ಬಿಡ್ರೀ, ಸರಿ ಬಿಡ್ರೀ,’ ಅಂತ ಸುಮ್ಮನಾಗಿದ್ದಳು. ನಿಜಕ್ಕೂ ಅವಳ ಅಂತರಂಗದಲ್ಲಿ ಹೌದೆನ್ನಿಸಿತೇ ತಿಳಿಯಲಿಲ್ಲ. ದುಡಿದು ಬದುಕುವ ಇಂತಹ ಜನರ ಅನಕ್ಷರತೆ, ಮುಗ್ಧತೆಗಳನ್ನು ಕೋಮುವಾದ ಬಳಸಿಕೊಳ್ಳುವ ಪರಿ ದಂಗುಬಡಿಯುವಂಥದ್ದು. ಕಲ್ಬುರ್ಗಿಯವರ ಹತ್ಯೆಯ ನಂತರದ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡು ಮನೆಗೆ ಬರುವಾಗ ಆಟೋ ಚಾಲಕ ಕೇಳಿದ್ದ-‘ ಅವ್ರು ನಮ್ದೇವ್ರ ಮೇಲೆ ಉಚ್ಚಿ ಹೊಯ್ಬಹುದು ಅಂದಿದ್ರಂತಲ್ಲ. ಅಂಥವರ ಸಂಬಂಧ ರ್ಯಾಲಿ ಮಾಡೀರಿ? ಹುಷಾರ್ರೀ ನಿಮ್ಮ ಮನಿಗೋಳ ಮ್ಯಾಲೂ ಕಲ್ ಬಿದ್ದಾವು’. ಹಿಂದುತ್ವದ ಅಜೆಂಡಾ ತುಂಬಾ ಪ್ರಬಲವಾಗಿ ಈ ಕೆಲಸ ಮಾಡುತ್ತಿದೆ. ಸಾಮಾಜಿಕ ವ್ಯವಸ್ಥೆಯ ತಳಹದಿಯಲ್ಲಿರುವ ಜೀವಿಗಳಲ್ಲಿ ತನ್ನ ನಂಬಿಕೆಯನ್ನು ಉತ್ಪಾದಿಸುತ್ತಿದೆ. ನಿಧಾನ ವಿಷದಂತೆ ದಿನವೂ ಸುಳ್ಳುಗಳು ತಪ್ಪುಗಳು ಅರೆ ಬರೆ ವ್ಯಾಖ್ಯಾನಗಳು ಅವರನ್ನು ತಲುಪುತ್ತವೆ. ಮರು ವಿಶ್ಲೇಷಿಸಬಹುದಾದ ಸುದ್ದಿಯಾಗಿಯಲ್ಲ, ನಂಬಿಕೆಯಾಗಿ. ಈ ನಂಬಿಕೆಯ ಲೇಹ್ಯದ ಕಟುತ್ವವನ್ನು ಯಾವ ವೈಚಾರಿಕತೆಯೂ ಮಾಗಿಸಲಾರದು ಎನ್ನುವಷ್ಟು ತೀವ್ರವಾಗಿ.

ಪ್ರಕಾಶ್ ರೈ ಬಂದುಹೋದ ಕೆಲ ದಿನಗಳಲ್ಲಿ, ಮಗಳು ತನ್ನ ಗೆಳತಿಯೊಂದಿಗೆ ಸಮೀಪದ ಪರಿಚಯದ ಪಾರ್ಲರಿಗೆ ಹೋಗಿದ್ದಳು ಕೂದಲು ಶೇಪ್‍ಲೆಸ್ ಆಗಿದೆ ಎಂದು ಗೊಣಗಿಕೊಳ್ಳುತ್ತ. ಬೇಡವೆಂದರೂ ಏನೋ ಮಹತ್ವದ್ದನ್ನು ಪಡೆಯುವ ಉಮೇದಿಯಲ್ಲಿ. ಬಂದಾಗ ಕೋಪದಿಂದ ಧುಮುಗುಡುತ್ತಿದ್ದಳು. ಆ ಪಾರ್ಲರಿನಲ್ಲಿ ಗಂಡಹೆಂಡತಿ ಇಬ್ಬರೂ ಇರುತ್ತಾರೆ. ಮಕ್ಕಳ ಕೂದಲನ್ನು ಶೇಪ್ ಮಾಡೋದು ಸಾಮಾನ್ಯವಾಗಿ ಗಂಡನೇ ಅಂತೆ. ಅವರ ಮಗಳು ಇವರ ಗೆಳತಿ ಕೂಡ. ಅವರು ತೆಲುಗು ಮಾತಾಡುವ ದಲಿತರು. ಬಹಳ ಕಾಲದಿಂದ ಇಲ್ಲೇ ಇರುವವರು. ಇವಳು ಕೂದಲು ಕೊಟ್ಟು ಕೂತಾಗ ಆತ ಕೇಳಿದನಂತೆ. ‘ನಿಮ್ಮನೆಗೆ ಹುಚ್ಚ ಬಂದಿದ್ದನಂತಲ್ಲ?’ ‘ಆಂ’? ‘ಆ ಪ್ರಕಾಶ ರೈ ಅನ್ನೋ ಹುಚ್ಚ ಬಂದಿದ್ದನಂತಲ್ಲ?’ ‘ಯಾಕ್ರಿ ಅಂಕಲ್, ಅನಂತಕುಮಾರ ಹೆಗಡೆ ಬಂದಿದ್ದರೆ ಹಾಗನ್ನಬಹುದಿತ್ತು. ಹೋಗಿ ಹೋಗಿ ಅಷ್ಟು ದೊಡ್ಡ ವ್ಯಕ್ತಿಗೆ ಹೀಗನ್ನುತ್ತೀರಲ್ರೀ.. ಏನ್ರೀ ನೀವು…?’ ಆತ ದಂಗಾದನಂತೆ. ಇಷ್ಟು ಸಣ್ಣ ಹುಡುಗಿ ಹೀಗೆ ಉತ್ತರಿಸಬಹುದೆಂದುಕೊಂಡಿರಲಿಲ್ಲವೇನೋ. ನಂತರದ್ದು ಇನ್ನೊಂದು ಬಗೆಯ ವಿಕಾರ. ಚೆಂದದ ಕೂದಲನ್ನು ಅಸಡ್ಡಾಳ ಕತ್ತರಿಸಿದ್ದ. ಕಣ್ಣೊರೆಸಿಕೊಳ್ಳುತ್ತ ಬಂದವಳು ಕೂದಲ ದುಃಸ್ಥಿತಿ ನೋಡಿ ಕೊರಗುತ್ತಲೇ ಇದ್ದಳು. ಆದರೆ, ಪ್ರಕಾಶ್ ರೈ ಜತೆ ಇದ್ದ ಬಿದ್ದ ಫೋಟೋಗಳನ್ನೆಲ್ಲ ಅಪ್ ಲೋಡ್ ಮಾಡಿದಳು. ನನಗೆ ಅರ್ಧ ಹೇರ್ ಕಟಿಂಗ್ ಮಾಡಿ ಹೊರದಬ್ಬಿಸಿಕೊಂಡಿದ್ದ ಹಿರೇಕೆರೂರಿನ ದಲಿತ ಯುವಕ ನೆನಪಾಗುತ್ತಿದ್ದ. ಅವನನ್ನು ಹೊರದಬ್ಬಲಾಗಿತ್ತು. ಇವಳು ಇನ್ನೊಂದು ರೀತಿಯಲ್ಲಿ ಹೊರಬಂದಿದ್ದಳು, ಇನ್ನೆಂದೂ ಅಲ್ಲಿ ಕಾಲಿಡಲಾರದಂತೆ. ಜಾತಿ, ಧರ್ಮ, ಲಿಂಗಗಳ ಜತೆಗೆ ವೈಚಾರಿಕತೆಯೂ ತೀವ್ರ ಒತ್ತುವರಿಗೆ ಒಳಗಾಗುತ್ತಿರುವ ಕಾಲವಿದು.

ರಾಜೇಂದ್ರ ಚೆನ್ನಿಯವರು ನಮ್ಮ ಈ ವರ್ತಮಾನವನ್ನು ಜಾರ್ಜ್ ಆರ್ವೆಲ್ 1984ರಲ್ಲಿ ಬರೆದ Thought police ವಿಧಾನದೊಂದಿಗೆ ಇಡುತ್ತಾರೆ. ಬಿಗ್ ಬ್ರದರ್ ತನ್ನ ಪ್ರಜೆಗಳ ಮೇಲೆ ನಿಗಾ ಇಡುತ್ತಾನೆ. ಸಾರ್ವಜನಿಕ ಸ್ಥಳಗಳಲ್ಲಿ ಪರದೆಯ ಮೇಲೆ ದೊಡ್ಡ ಭಾವಚಿತ್ರ ಮೂಡುತ್ತದೆ. ಯಾರು ನಮಸ್ಕರಿಸುವುದಿಲ್ಲವೋ ಅದು ದಾಖಲಾಗುತ್ತದೆ. ಅಂಥವರನ್ನು ಅರೆಸ್ಟ್ ಮಾಡಲಾಗುತ್ತದೆ. ಇದು ಸಲೀಸಾಗಿ ನಡೆಯುತ್ತದೆ. ಯಾಕೆಂದರೆ ಪ್ರಭುತ್ವಕ್ಕೆ ಅಪಥ್ಯವೆನ್ನಿಸುವ ಚರಿತ್ರೆಯ ನೆನಪುಗಳನ್ನು ಜನರ ಮನಸ್ಸಿನಿಂದ ಶಾಶ್ವತವಾಗಿ ಅಳಿಸಲಾಗಿದೆ. ನಮ್ಮ ಸುತ್ತ ನಡೆಯುತ್ತಿರುವ ಸಣ್ಣಸಣ್ಣ ಸಂಗತಿಗಳು ಅದೇ ಕರೆಗಂಟೆಗಳೇ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...