Homeಅಂಕಣಗಳುನೂರರ ನೋಟ | ವಂಚಿತ ಸಮುದಾಯಗಳ ಕಡೆಗಣನೆ ನಿಲ್ಲಲಿ

ನೂರರ ನೋಟ | ವಂಚಿತ ಸಮುದಾಯಗಳ ಕಡೆಗಣನೆ ನಿಲ್ಲಲಿ

- Advertisement -
- Advertisement -
  • ಎಚ್.ಎಸ್.ದೊರೆಸ್ವಾಮಿ |

27.05.2018ರ ಪ್ರಜಾವಾಣಿ ಪತ್ರಿಕೆಯಲ್ಲಿ ಒಂದು ಜಾಹೀರಾತು ಅಚ್ಚಾಗಿದೆ. ಮಾದಿಗ ಜನಾಂಗದವರು ಕಾಂಗ್ರೆಸ್ಸನ್ನು ಚಿಂದಿ ಮಾಡಿದೆವು ಎಂದು ಹೆಮ್ಮೆಯಿಂದ ಹೇಳಿಕೊಂಡಿರುವ ಜಾಹೀರಾತು ಅದು.

ಮಾದಿಗರಿಗೆ ಪ್ರತ್ಯೇಕವಾಗಿ ಮೀಸಲಾತಿ ನೀಡಬೇಕೆಂದು ನಾಲ್ಕಾರು ವರ್ಷಗಳಿಂದ ಕರ್ನಾಟಕದಲ್ಲಿ ಚಳವಳಿ ನಡೆಯುತ್ತಿದೆ. ನ್ಯಾಯಮೂರ್ತಿ ಸದಾಶಿವ ಅವರು ಕೂಡ ತಮ್ಮ ವರದಿಯಲ್ಲಿ ಮಾದಿಗರಿಗೆ ಪ್ರತ್ಯೇಕ ಮೀಸಲಾತಿ ಸೌಲಭ್ಯ ಕಲ್ಪಿಸಿಕೊಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಹೀಗಿದ್ದೂ ಸಿದ್ದರಾಮಯ್ಯನವರ ಸರ್ಕಾರ ಮಾದಿಗರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿಲ್ಲ. ಇತ್ತೀಚೆಗೆ ವಿಭಜನೆಗೊಂಡ ಲಿಂಗಾಯತ ಸಮುದಾಯಕ್ಕೆ ಅಲ್ಪಸಂಖ್ಯಾತರ ಹಣೆಪಟ್ಟಿಗೆ ಶಿಫಾರಸ್ಸು ಮಾಡಿ, ಆ ಮೂಲಕ ಅವರಿಗೆ ಮೀಸಲಾತಿ ಸೌಲಭ್ಯಕ್ಕೂ ಅವಕಾಶ ಕಲ್ಪಿಸಿದÀ ಸರ್ಕಾರ ಮಾದಿಗ ಸಮುದಾಯದ ಬಹಳ ದಿನಗಳ ಕೋರಿಕೆಯನ್ನು ಗಂಭೀರವಾಗಿ ಪರಿಗಣಿಸಲೇ ಇಲ್ಲ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಮುನ್ನವೇ ಮಾದಿಗ ಮುಖಂಡರು ಕಾಂಗ್ರೆಸ್ಸಿಗೆ ಈ ಬಾರಿ ನಾವು ಮತ ಹಾಕುವುದಿಲ್ಲವೆಂದು ಘೋಷಣೆ ಕೂಡ ಮಾಡಿದ್ದರು. ನಾನಾಕಾರಣಗಳಿಂದ ಈ ಸಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ 78 ಉಮೇದುವಾರರು ಮಾತ್ರ ಗೆದ್ದು ಬಂದರು. ಭಾಜಪ, ಕಾಂಗ್ರೆಸ್, ಜಾತ್ಯತೀತ ಜನತಾದಳದ ಯಾರಿಗೂ ಬಹುಮತ ದೊರಕಲಿಲ್ಲ. ಈಗ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳದ ಸಂಯುಕ್ತ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹಾಲಿ ಸರ್ಕಾರ ಕೂಡಲೇ ತಡಮಾಡದೆ ವಂಚಿತ ಮಾದಿಗ ಸಮುದಾಯಕ್ಕೆ ಮೀಸಲಾತಿ ಸೌಲಭ್ಯ ಘೋಷಣೆ ಮಾಡಬೇಕು ಹಾಗೂ ಆ ಸಮುದಾಯದ ಆದರಕ್ಕೆ ಪಾತ್ರರಾಗಬೇಕು.

ಹಾಗೆಯೇ ಮಾದಿಗ ಸಮುದಾಯದವರು ಒಂದು ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಯಾರಿಗೋ ಅಪಶಕುನ ಮಾಡಲು ಹೋಗಿ ತನ್ನ ಮೂಗನ್ನೇ ಕೊಯ್ದುಕೊಂಡಂತಾಗಬಾರದು. ಒಳಮೀಸಲಾತಿ ಒದಗಿಸಲಿಲ್ಲವೆಂಬ ಕಾರಣಕ್ಕೆ ಕಾಂಗ್ರೆಸ್‍ಅನ್ನು ಚಿಂದಿ ಮಾಡುವ ಆವೇಶದಲ್ಲಿ, ಸಂವಿಧಾನವನ್ನೇ ಬುಡಮೇಲು ಮಾಡುವ ಹಾಗೂ ಮೀಸಲಾತಿ ವ್ಯವಸ್ಥೆಯನ್ನೇ ನಾಶ ಮಾಡಲು ಹವಣಿಸುತ್ತಿರುವ ಶಕ್ತಿಗಳ ಕಡೆಗೆ ವಾಲುವಂತಾಗಬಾರದು. ಹಾಗಾದರೆ ನಮ್ಮ ಕಾಲನ್ನು ನಾವೇ ಕತ್ತರಿಸಿಕೊಂಡಂತೆ.

ಮಾದಿಗ ಸಮುದಾಯದ ಜಾಹೀರಾತನ್ನು ಮತ್ತೊಂದು ದೃಷ್ಟಿಯಿಂದ ಗಮನಿಸಿ ಅರ್ಥಮಾಡಿಕೊಳ್ಳಬೇಕಾದ ಜರೂರಿದೆ. ಸ್ವತಂತ್ರ ಭಾರತದಲ್ಲಿ ಅಲ್ಪಸಂಖ್ಯಾತ ಸಮುದಾಯಗಳನ್ನು ಹೇಗೆ ನಡೆಸಿಕೊಳ್ಳಬೇಕು ಎಂಬುದನ್ನು ಕುರಿತು ನಾವೆಲ್ಲ ಚಿಂತನೆ ಮಾಡಬೇಕು. ಕೆಂಗಲ್ ಹನುಮಂತಯ್ಯನವರು ಮೈಸೂರು ಕಾಂಗ್ರೆಸ್ಸಿನ ಅಧ್ಯಕ್ಷರಾಗಿದ್ದ ಸಮಯದಲ್ಲಿ ವಿಧಾನಸಭೆಯ ಚುನಾವಣೆ ಬಂತು. ಕಾಂಗ್ರೆಸ್ ಉಮೇದುವಾರರ ಆಯ್ಕೆಯೂ ಆಯ್ತು. ಬಲಿಜ ಸಮುದಾಯಕ್ಕೆ ಸೇರಿದ ಕಾಂಗ್ರೆಸ್‍ನ ಹಿರಿಯ ಧುರೀಣ ಕೆ.ಪಟ್ಟಾಬಿರಾಮನ್ ಅವರಿಗೆ ಕಾಂಗ್ರೆಸ್ ಟಿಕೆಟ್ ಕೊಡಲಾಗಿತ್ತಾದರೂ, ಅವರು ಅಲ್ಪಸಂಖ್ಯಾತ ಸಮುದಾಯದವರ ಆಯ್ಕೆಯ ಕ್ರಮವನ್ನು ಒಪ್ಪದೆ ತಮಗೆ ನೀಡಿದ್ದ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದರು. ಅವರು ಹನುಮಂತಯ್ಯನವರಿಗೆ ಒಂದು ಪತ್ರ ಬರೆದು ‘ನೀವು ವಿಚಾರವಂತರು, ಆಧುನಿಕರು. ಉಮೇದುವಾರರ ಆಯ್ಕೆಯಲ್ಲಿ ಹೊಸ ವಿಧಾನವನ್ನು ಅನುಸರಿಸುವಿರಿ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೆ. ಒಕ್ಕಲಿಗರು ಹೆಚ್ಚು ಸಂಖ್ಯೆಯಲ್ಲಿರುವ ಕ್ಷೇತ್ರದಲ್ಲಿ ಒಕ್ಕಲಿಗರನ್ನು ಮತ್ತು ಲಿಂಗಾಯತರು ಜಾಸ್ತಿ ಇರುವ ಕ್ಷೇತ್ರಗಳಲ್ಲಿ ಲಿಂಗಾಯತ ಉಮೇದುವಾರರನ್ನೇ ಆಯ್ಕೆ ಮಾಡಿದ್ದಿರಿ. ಈ ಹಳೆಯ ಸಂಪ್ರದಾಯವನ್ನು ಕೈಬಿಟ್ಟು ಅಲ್ಪಸಂಖ್ಯಾತರನ್ನು ಒಕ್ಕಲಿಗ, ಲಿಂಗಾಯತ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಉಮೇದುವಾರರನ್ನಾಗಿ ನಿಲ್ಲಿಸಿ, ಗೆಲ್ಲಿಸುವಿರೆಂದು ಭಾವಿಸಿದ್ದೆ. ನೀವು ಕೂಡ ಹಿಂದಿನ ಅಧ್ಯಕ್ಷರುಗಳಂತೆ ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಳ್ಳುವ ಕೆಲಸ ಮಾಡಿದ್ದೀರಿ. ಇದನ್ನು ವಿರೋಧಿಸಿ ನಾನು ನೀವು ನೀಡಿರುವ ಟಿಕೆಟ್‍ಅನ್ನು ಹಿಂದಿರುಗಿಸುತ್ತಿದ್ದೇನೆ. ನಾನು ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ’ ಎಂದು ತಿಳಿಸಿದ್ದರು. ಅದರಂತೆ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕೋಲಾರದಲ್ಲಿ ನಿಂತು ಹೆಚ್ಚಿನ ಮತಗಳ ಅಂತರದಿಂದ ಗೆದ್ದು ಬಂದಿದ್ದರು. ಇಂಥಾ ಆದರ್ಶಗಳೆಲ್ಲಾ ಈಗ ಎಲ್ಲಿ ಮಾಯವಾದವು?

ಇಂದು ಕಾಂಗ್ರೆಸ್ ಮಾತ್ರವಲ್ಲ, ಎಲ್ಲ ಪಕ್ಷಗಳಲ್ಲೂ ಬಹುಸಂಖ್ಯೆಯಲ್ಲಿರುವ ಜಾತಿಗಳ ಉಮೇದುವಾರರನ್ನೇ ಹುಡುಕಿ ಹುಡುಕಿ ಉಮೇದುವಾರರನ್ನಾಗಿ ಮಾಡುವ ಚಾಳಿ ವ್ಯಾಪಿಸಿದೆ. ಅಲ್ಪಸಂಖ್ಯೆಯ ಸಮುದಾಯಗಳನ್ನು ಕಡೆಗಣಿಸಲಾಗುತ್ತಿದೆ. ಇತ್ತೀಚಿನ ಬೆಳವಣಿಗೆಯೆಂದರೆ ‘ನಿಮಗೆ ಜಾತಿಯ ಜಾತಿಯ ಬಲವಿದೆಯೆ? ನಿಮ್ಮಲ್ಲಿ ಕೋಟಿ ಕೋಟಿ ಹಣವಿದೆಯೆ? ನೀವು ಗೆಲ್ಲುವ ಕುದುರೆಯೆ?’ ಎಂಬ ಅಂಶಗಳ ಆಧಾರದ ಮೇಲೆ ಉಮೇದುವಾರರನ್ನು ಆಯ್ಕೆ ಮಾಡಲಾಗುತ್ತಿದೆ. ದೀನದಲಿತರು, ಅಲ್ಪಸಂಖ್ಯಾತರನ್ನು ಈ ಮೂಲಕ ಕಡೆಗಣಿಸಲಾಗುತ್ತಿದೆ.

ಚುನಾವಣೆಯಲ್ಲಿಯೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಕಡ್ಡಾಯ ಮೀಸಲಾತಿ ಇರುವುದರಿಂದ, ವಿಧಿಯಿಲ್ಲದೆ ರಾಜಕೀಯ ಪಕ್ಷಗಳು ಅವರಿಗೆ ಉಮೇದುವಾರಿಕೆ ನೀಡುತ್ತಿವೆ. ಈ ಮೀಸಲಾತಿ ವ್ಯವಸ್ಥೆ ಇಲ್ಲದೆ ಹೋಗಿದ್ದರೆ ಈ ರಾಜಕೀಯ ಪಕ್ಷಗಳು ಬಹುಸಂಖ್ಯೆಯ ಹಾಗೂ ಬಲಾಢ್ಯ ಜನಾಂಗದವರಿಗೇ ಎಲ್ಲ ಸೀಟುಗಳನ್ನು ಹಂಚಿಬಿಡುತ್ತಿದ್ದರು ಎಂಬುದರಲ್ಲಿ ಯಾರಿಗೂ ಅನುಮಾನ ಬೇಡ.

ಜನಸಂಖ್ಯೆಯ ಅನುಪಾತದಲ್ಲಿ ಲಿಂಗಾಯತ ಹಾಗೂ ಒಕ್ಕಲಿಗರಿಗೆ ಸಿಗಬೇಕಾಗಿದ್ದ ಪ್ರಾತಿನಿಧ್ಯ 57 ಶಾಸಕ ಸ್ಥಾನಗಳು ಮಾತ್ರ. ಆದರೆ 2018ರ ಚುನಾವಣೆಯಲ್ಲಿ ಗೆದ್ದು ಬಂದಿರುವ ಲಿಂಗಾಯತ ಮತ್ತು ಒಕ್ಕಲಿಗರ ಪ್ರಾತಿನಿಧ್ಯ 117. ಅಲ್ಪಸಂಖ್ಯಾತರನ್ನು ಕಡೆಗಣಿಸಿರುವುದಕ್ಕೆ ಜೀವಂತ ನಿದರ್ಶನ ಇದು. ಪ್ರಜಾತಂತ್ರದ ಮೂಲ ಆಶಯವನ್ನೇ ದುರ್ಬಲಗೊಳಿಸುತ್ತಿರುವ ಈ ಸಮಸ್ಯೆಯ ಬಗ್ಗೆ ಗಂಭೀರವಾಗಿ ಚರ್ಚಿಸಿ, ಸೂಕ್ತ ಪರಿಹಾರ ಕಂಡುಕೊಳ್ಳಬೇಕಾದ ತುರ್ತು ಬಂದೊದಗಿದೆ.

ಬಿಜೆಪಿಯಂತೂ ಮುಸ್ಲಿಮರಿಗೆ, ಕ್ರಿಶ್ಚಿಯನ್ನರಿಗೆ ಟಿಕೆಟ್ ಕೊಡಬಾರದು ಎಂಬ ತೀರ್ಮಾನ ಮಾಡಿ ಎಷ್ಟೋ ವರ್ಷಗಳಾದವು. ಇನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕೂಡ ಒಕ್ಕಲಿಗ ಮತ್ತು ಲಿಂಗಾಯತ ರಾಜಕಾರಣಿಗಳಿಗೆ ಸಿಂಹಪಾಲು ಹಂಚಿಕೆ ಮಾಡುತ್ತಿವೆ. ಬಿಜೆಪಿ ಪಕ್ಷವು ಈ ಮಲತಾಯಿ ಮಾತ್ಸರ್ಯದ ಜೊತೆಗೆ, ಅಲ್ಪಸಂಖ್ಯಾತ ಧಾರ್ಮಿಕರನ್ನು ಮೂಲೆಗುಂಪು ಮಾಡುವ ಧೋರಣೆಯನ್ನೂ ಅಳವಡಿಸಿಕೊಂಡಿದೆ.

ಅಲ್ಪಸಂಖ್ಯಾತರನ್ನು ಬಹುಸಂಖ್ಯಾತರಿರುವ ಕ್ಷೇತ್ರದಲ್ಲಿ ನಿಲ್ಲಿಸಿ, ನಿಮ್ಮ ಗೆಲುವು ನಮ್ಮ ಹೊಣೆ ಎಂದು ಬಹುಸಂಖ್ಯಾತರು ಘೋಷಣೆ ಮಾಡುವಂತಾಗಬೇಕು. ಆಗ ಸಾಮಾಜಿಕ ನ್ಯಾಯ ಎಲ್ಲ ಜನಾಂಗದವರಿಗೂ ದೊರಕಿಸಿಕೊಟ್ಟಂತಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...