Homeಅಂಕಣಗಳುನೂರುನೋಟ | ಚುನಾವಣಾ ಆಯೋಗವನ್ನು ಸರಿಪಡಿಸುವುದು ಬಹಳ ಮುಖ್ಯ

ನೂರುನೋಟ | ಚುನಾವಣಾ ಆಯೋಗವನ್ನು ಸರಿಪಡಿಸುವುದು ಬಹಳ ಮುಖ್ಯ

- Advertisement -
- Advertisement -

ಎಚ್.ಎಸ್.ದೊರೆಸ್ವಾಮಿ |

ಕರ್ನಾಟಕ 2018ರ ವಿಧಾನಸಭಾ ಚುನಾವಣೆಗಳು ಮುಗಿದಿದೆ. ಈ ಚುನಾವಣೆಯ ಫಲಿತಾಂಶವನ್ನು ಅವಲೋಕನ ಮಾಡುವುದರ ಅಗತ್ಯತೆ ಇದೆ. ಭಾಜಪ ಚುನಾವಣೆಯಲ್ಲಿ 104 ಸ್ಥಾನಗಳನ್ನು ಕಾಂಗ್ರೆಸ್ 78 ಸ್ಥಾನಗಳನ್ನು ಜನತಾದಳ (ಜಾತ್ಯತೀತ) 38 ಸ್ಥಾನಗಳನ್ನು ಪಕ್ಷೇತರರು 2 ಸ್ಥಾನಗಳನ್ನು ಗಳಿಸಿದ್ದಾರೆ.ಅಂದರೆ ಯಾವ ಪಕ್ಷಕ್ಕೂ ಬಹುಮತ ದೊರೆತಿಲ್ಲ.ಈ ಸಂದರ್ಭದಲ್ಲಿ ರಾಷ್ಟ್ರಿಯ ಕಾಂಗ್ರೆಸ್ ನಾಯಕರು ದೇವೇಗೌಡರನ್ನು ಸಂಧಿಸಿ ನಮ್ಮ ಬೆಂಬಲ ನೀಡುತ್ತೇವೆ ಜಾತ್ಯತೀತ ಜನತಾದಳ ಸರ್ಕಾರ ರಚಿಸಲಿ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಭಾರತೀಯ ಜನತಾಪಕ್ಷಕ್ಕೆ ಸರ್ಕಾರ ರಚಿಸಲು ಅವಕಾಶ ನೀಡದಂತೆ ತಾವೇ ಸರ್ಕಾರ ರಚಿಸುವ ನಿರ್ಧಾರಕ್ಕೆ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳ ಬಂದಿವೆ. ಕರ್ನಾಟಕದಲ್ಲಿ ಭಾಜಪ ಸರ್ಕಾರವನ್ನು ಅಸ್ತಿತ್ವಕ್ಕೆ ತರುವ ಮೋದಿಯವರ ಮಹತ್ವಾಕಾಂಕ್ಷೆಗೆ ಕೊಡಲಿ ಪೆಟ್ಟು ಬಿದ್ದಿದೆ. 2019ರ ಲೋಕಸಭೆಯ ಚುನಾವಣೆಯ ಮೇಲೆ ಬಿಜೆಪಿಯ ಈ ಹಿನ್ನಡೆ ತನ್ನ ಪ್ರಭಾವ ಬೀರುವುದೆಂಬುದು ಶತಃಸಿದ್ದ

2019ರ ಲೋಕಸಭಾ ಚುನಾವಣೆಗಳಲ್ಲಿ ಮೋದಿ ಮತ್ತು ಭಾರತೀಯ ಜನತಾಪಕ್ಷಗಳನ್ನು ಪರಾಭವಗೊಳಿಸಲು ವಿರೋಧಪಕ್ಷಗಳು ಈಗಾಗಲೇ ಧ್ರುವೀಕರಣದ ಮಾತುಕತೆಗಳನ್ನು ಆರಂಭ ಮಾಡಿವೆ. ಒಂದು ಕಡೆ ಪ್ರಾಂತೀಯ ಪಕ್ಷಗಳೆಲ್ಲ ಒಂದಾಗಿ ಬಿಜೆಪಿಯನ್ನು ಎದುರಿಸುವ ನಿರ್ಧಾರ ಮಾಡಿದ್ದಾರೆ. ರಾಷ್ಟ್ರಮಟ್ಟದ ರಾಜಕೀಯ ಪಕ್ಷಗಳೆಲ್ಲ ಕೂಡಿಕೊಂಡು ಬಿಜೆಪಿಯನ್ನು ಪರಾಭವಗೊಳಿಸುವ ಬಗೆಗೆ ಮಾತುಕತೆ ನಡೆಯುತ್ತಿದೆ.

ಈ ಎರಡೂ ಬಣಗಳು ಒಟ್ಟಾಗಿ ಕೂಡಿಕೊಂಡು ಭಾರತೀಯ ಜನತಾಪಕ್ಷವನ್ನು ಎದುರಿಸುದಾದರೆ ಮೋದಿಯನ್ನು ಮಣಿಸುವುದು ಮತ್ತಷ್ಟು ಸುಲಭವಾಗಬಹುದು. ಅವು ಬೇರೆ ಬೇರೆಯಾಗಿ ಚುನಾವಣೆಯನ್ನು ಎದುರಿಸುವ ಸಂದರ್ಭ ಏರ್ಪಟ್ಟರೂ ಮೋದಿ ಮತ್ತು ಬಿಜೆಪಿಯನ್ನು ಪರಾಭವಗೊಳಿಸುವುದು ಈ ಎರಡೂ ತಂಡಗಳ ಏಕೈಕಗುರಿಯಾಗಿರುವುದರಿಂದ ಅದು ಸ್ವಾಗತಾರ್ಹವೇ.

2019ರ ಚುನಾವಣಾ ಹೋರಾಟದ ರಾಜಕೀಯದಲ್ಲಿ ಬದಲಾವಣೆ ತರಲು ಬಯಸುವ ನಮ್ಮ ಪಾತ್ರವೇನು ಎಂಬುವುದನ್ನ ಕುರಿತು ವಿಚಾರ ವಿನಿಮಯ ಮಾಡಿಕೊಳ್ಳುವುದು ಅಗತ್ಯ.

ಕರ್ನಾಟಕದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮೋದಿಯನ್ನು ಎದುರಿಸಲು ಕೋಮುಸೌಹಾರ್ದವೇದಿಕೆಯ ನೇತೃತ್ವದಲ್ಲಿ ನಡೆದ ಸಂಘಟಿತ ಪ್ರಯತ್ನ ತುಂಬಾ ಪರಿಣಾಮಕಾರಿಯಾಗಿತ್ತು. ಈ ಸಂದರ್ಭದಲ್ಲಿ ಕೈಜೋಡಿಸಿದ ಎಲ್ಲಕೋಮುವಿರೋದಿ üಸಂಸ್ಥೆಗಳಿಗೆ ನನ್ನ ಮೆಚ್ಚುಗೆಯನ್ನು ಸೂಚಿಸುತ್ತೇನೆ. ಈ ಸಂಘಟಿತ ಪ್ರಯತ್ನದಲ್ಲಿ ಪ್ರಮುಖಪಾತ್ರ ವಹಿಸಿದ ಜನತೆಯ ಪರವಾಗಿ ಕೈಗೊಂಡ ಈ ಮತದಾರರ ಜಾಗೃತಿ ಕಾರ್ಯಕ್ರಮ ಲೋಕಸಭಾ ಚುನಾವಣೆ ಇನ್ನೂ ಒಂದು ವರ್ಷ ಅವಧಿ ಇರುವಾಗಲೇ ಕರ್ನಾಟಕದಲ್ಲಿ ಮುಂದುವರಿಯಬೇಕಲ್ಲದೆ ಉತ್ತರ ಭಾರತದಲ್ಲೂ ಈ ಪ್ರಚಾರಕಾರ್ಯ ನಡೆಸಬೇಕಿದೆ. ಕರ್ನಾಟಕದಲ್ಲಿ ಈಗಾಗಲೇ ರೂಪಿತವಾಗಿರುವ ಪ್ರಭಾವಿ ವ್ಯಕ್ತಿಗಳ ತಂಡ ಉತ್ತರಭಾರತದ ಎಲ್ಲ ರಾಜ್ಯಗಳಿಗೂ ಭೇಟಿಕೊಟ್ಟು ಅಲ್ಲಿಯೂ ಇಂತಹ ಮೋದಿ ವಿರೋಧಿ ಸಂಸ್ಥೆಗಳನ್ನು ಅಸ್ತಿತ್ವಕ್ಕೆ ತರಲು ಕೂಡಲೇ ಕಾರ್ಯೋನ್ಮುಖವಾಗಬೇಕು. ಹೀಗೆ ಅಲ್ಲಿ ಅಸ್ತಿತ್ವದಲ್ಲಿರುವ ಮೋದಿ ವಿರೋಧಿ ಸಂಸ್ಥೆಗಳು ಸಮರೋಪಾದಿಯಲ್ಲಿ ಮತದಾರರಮಧ್ಯೆ ಕೆಲಸ ಮಾಡುವುದಾದರೆ ಬಿಜೆಪಿಯ ಹಾಗೂ ಮೋದಿಯ ಪ್ರಭಾವವನ್ನು ಪರಿಣಾಮಕಾರಿಯಾಗಿ ಕುಗ್ಗಿಸಲು ಬರುತ್ತದೆ.

ಮೋದಿಯನ್ನು ಪರಾಭವಗೊಳಿಸುವುದು ಎಷ್ಟು ಮುಖ್ಯವೋ ಚುನಾವಣಾ ಆಯೋಗವನ್ನು ಪರಿಣಾಮಕಾರಿಯಾಗಿ ಕಾರ್ಯತತ್ಪರವಾಗುವಂತೆ ಮಾಡುವುದು ಅಷ್ಟೇ ಮುಖ್ಯ. ಚುನಾವಣಾ ಆಯೋಗ ಭಾರತದಂತಹ ದೊಡ್ಡ ರಾಷ್ಟ್ರದಲ್ಲಿ ಶಾಂತಿಯುತವಾಗಿ ಚುನಾವಣೆಗಳನ್ನು ನಡೆಸುತ್ತಿರುವುದಕ್ಕೆ ತನ್ನಬೆನ್ನನ್ನು ತಾನೇತಟ್ಟಿಕೊಳ್ಳುತ್ತಿದೆ.

ಚುನಾವಣೆಯಿಂದ ಚುನಾವಣೆಗೆ ರಾಜಕೀಯ ಭ್ರಷ್ಟಾಚಾರ ಹೆಚ್ಚುತ್ತಿದೆ. ಹಣ,ಹೆಂಡ, ಬಟ್ಟೆ ಸೀರೆ,ತಾಳಿ,ಬೆಳ್ಳಿ ಸಾಮಾನುಗಳೆಲ್ಲವನ್ನು ಮತದಾರರಿಗೆ ಹಂಚುವ ಪ್ರಯತ್ನ ಹೆಚ್ಚುಹೆಚ್ಚಾಗಿ ಬೆಳೆಯುತ್ತಿದೆ. ಈಗ ನಡೆದ ಚುನಾವಣೆಯಲ್ಲಿ 50-60 ಕೋಟಿರೂ.ಗಳನ್ನು ಹಂಚುವುದರಿಂದ ಆಯೋಗ ವಶಪಡಿಸಿಕೊಂಡಿದೆ.ಇದಕ್ಕೆ ಶೇ.100ರಷ್ಟು ಹಣ ಮತದಾರರಲ್ಲಿಗೆ ರಾಜಕೀಯ ಪಕ್ಷಗಳು ಹಂಚಿದ್ದಾರೆ. ಕರ್ನಾಟಕ ಚುನಾವಣಾ ಆಯೋಗದ ಮುಖ್ಯಸ್ಥರನ್ನು ಕೇಳಿದರೆ ಜಫ್ತಿಮಾಡಲಾದ ಎಲ್ಲ ಹಣವನ್ನು ಹುಜೂರ್ ಟ್ರಜರಿಗೆ ಕಟ್ಟಿದ್ದೇವೆ. ವಶಪಡಿಸಿಕೊಂಡ ಕುಡಿತಗಳನ್ನೆಲ್ಲ ನಾಶ ಮಾಡಿದ್ದೇವೆ ಎನ್ನುತ್ತಾರೆ.

ಪೊಲೀಸ್‍ ವರಿಷ್ಠರ ಕಚೇರಿಯ ಮುಖ್ಯಸ್ಥರನ್ನು ಕೇಳಿದರೆ ವಶ ಪಡಿಸಿಕೊಂಡ ಉಳಿದ ವಸ್ತುಗಳು ಆಯಾ ಪೊಲೀಸ್ ಠಾಣೆಯ ವಶದಲ್ಲಿದ್ದು ಅವರುಕಳ್ಳದಾಸ್ತಾನುದಾರರು ಕಳ್ಳಸಾಗಾಣಿಕೆದಾರರ ಕೇಸು ಹಾಕಿದ್ದಾರೆಎನ್ನುತ್ತಾರೆ.ಇದರ ಮಾಹಿತಿಯನ್ನು ನಮಗೆಕೊಡಲು ಎಸ್ಪಿಗಳಿಗೆ ಚುನಾವಣಾಧಿಕಾರಿಗಳು ಸುತ್ತೋಲೆ ಕಳಿಸಿದರೂ ಕೆಲದಿನಗಳನಂತರ ಇಬ್ಬರು ಎಸಿಪಿಗಳು ನಮ್ಮಜಿಲ್ಲೆಗಳಲ್ಲಿ ಅಂತಹದ್ದೇನುಪ್ರಸಂಗಗಳು ನಡೆದಿಲ್ಲ ಎಂದು ಬರೆದರು. ಉಳಿದ ಜಿಲ್ಲೆಗಳ ಎಸ್ಪಿಗಳು ಮೌನತಾಳಿದರು. ಉತ್ತರ ಬರೆಯುವ ಗೋಜಿಗೆ ಹೋಗಲಿಲ್ಲ.

ಈ ಭ್ರಷ್ಟಾಚಾರವನ್ನು ತೊಡೆದುಹಾಕಲು ಕಠಿಣ ಕ್ರಮಕೈಗೊಳ್ಳಿ, 2008 ಮತ್ತು 2013ರಲ್ಲಿ ನಡೆದಿರುವ ಎರಡು ಚುನಾವಣೆಗಳಲ್ಲಿ ಸಂಭವಿಸಿರುವ ಅವ್ಯವಹಾರಗಳ ವಿವರ, ಅದನ್ನು ಯಾವಪಕ್ಷದವರು ಎಸಗಿದ್ದಾರೆ, ಯಾರು ಮಾಡಿದ್ದಾರೆ ಎಂಬವವರ ಮೇಲೆಯಾವಾಗ ಕಟ್ಲೆ ಹೂಡಲಾಯಿತು, ಏನು ಶಿಕ್ಷೆಯಾಯಿತು, ಹಾಗೆ ಹಿಡಿದ ಸಾಮಗ್ರಿಗಳು ಯಾರು ವಶದಲ್ಲಿವೆ ಇವೆಲ್ಲದರ ವಿವರಗಳನ್ನೊಳಗೊಂಡ ಒಂದು ಶ್ವೇತಪತ್ರವನ್ನು 3ತಿಂಗಳೊಳಗೆ ಹೊರಡಿಸಬೇಕೆಂದು ಚುನಾವಣಾಧಿಕಾರಿಗಳನ್ನು ಒತ್ತಾಯ ಮಾಡಲು ಒಂದು ಅನಿರ್ದಿಷ್ಟ ಕಾಲದ ಧರಣಿಯನ್ನು ಅವರಕಚೇರಿಯ ಮುಂದೆ ನಡೆಸಬೇಕು.

ಕೇಂದ್ರದ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಇಷ್ಟೊಂದು ಭ್ರಷ್ಟಾಚಾರ ಹತ್ತಾರು ವರ್ಷಗಳಿಂದ ನಡೆಯುತ್ತಿದ್ದರೂ ಅದಕ್ಕೆ ಪರಿಣಾಮಕಾರಿಯಾದ ಕಠಿಣ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ಮುಂದಿನ ಚುನಾವಣೆ ವೇಳೆಗಾದರೂ ಹಣ, ಹೆಂಡ ಮತ್ತು ಇತರ ಸಾಮಗ್ರಿಗಳನ್ನು ಮತದಾರರಿಗೆ ಹಂಚುವ ರಾಜಕೀಯ ಪಕ್ಷಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿ ಈ ಕರ್ತವ್ಯವನ್ನು ನೀವು ನಿರ್ವಹಿಸದೆ ಕರ್ತವ್ಯ ಭ್ರಷ್ಟರಾದರೆ ಭ್ರಷ್ಟಾಚಾರಕ್ಕೆ ಅವಕಾಶ ಕೊಡದೆ ಚುನಾವಣೆ ನಡೆಸದಂತೆ ಕೇಂದ್ರಚುನಾವಣಾ ಕಮೀಷನ್ ವಿರುದ್ಧ ಶಾಂತಿಯುತ ಹೋರಾಟ ನಡೆಸುವುದಾಗಿ ಪತ್ರ ಬರೆಯಬೇಕು.

ಅಲ್ಲದೆ ಕೇಂದ್ರ ಸರ್ಕಾರಕ್ಕೆ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ಚುನಾವಣೆಗಳಲ್ಲಿ ನಡೆಯುವ ಎಲ್ಲಕ್ರಮಗಳನ್ನು ತಡೆಯಲು ಹಾಲಿ ಜಾರಿಯಲ್ಲಿರುವ ಎಲ್ಲ ಚುನಾವಣಾ ಕಾನೂನುಗಳನ್ನು ಮುಂಜಾಗ್ರತವಾಗಿ ಪರಿಷ್ಕರಿಸಿ ದ್ವೇಷಮುಕ್ತವಾದ ಕಾನೂನುಗಳನ್ನು ಜಾರಿಗೆ ಕೊಡಬೇಕೆಂದು ಒತ್ತಾಯಿಸುವ ಪತ್ರವನ್ನು ಬರೆಯಬೇಕು. ಈ ವರ್ಷ ಚುನಾವಣೆಗೆ ನಿಲ್ಲುವ ಅಭ್ಯರ್ಥಿಗಳು ಮತ್ತೆ ಮುಂದಿನ ಚುನಾವಣೆಗೆನಿಂತರೆಅವರು ಇದಕ್ಕೆಹಿಂದೆ ನಡೆದ ಚುನಾವಣೆಯ ವೇಳೆ ಕೊಟ್ಟ ತಮ್ಮ ಆಸ್ತಿಯ ವಿವರಗಳಿಗೂ ಈ ವರ್ಷ ಕೊಟ್ಟಿರುವ ವಿವರಗಳಿಗೂ ತುಂಬಾ ಅಂತರವಿದ್ದರೆ ಅದನ್ನು ನ್ಯಾಯಮಾರ್ಗದಲ್ಲಿ ಸಂಪಾದಿಸಿದ್ದಾರಾ ಇಲ್ಲವೆ ಅನ್ಯಾಯಮಾರ್ಗದಲ್ಲಿ ಸಂಪಾದಿಸಿದ್ದೀರಾ ಎಂಬುದನ್ನು ಪತ್ತೆ ಮಾಡಲು ಏನು ಕ್ರಮ ತೆಗೆದುಕೊಳ್ಳುತ್ತೀರಿ ಎಂದು ಚುನಾವಣಾ ಆಯೋಗದವರನ್ನು ಕೇಳಬೇಕು.

ಸ್ವತಂತ್ರ ಭಾರತದಲ್ಲಿ ಚುನಾವಣೆಗಳು ಕಳೆದ ಅರವತ್ತು ವರ್ಷಕ್ಕೆ ಮೇಲ್ಪಟ್ಟು ನಡೆಯುತ್ತಿದ್ದರೂ ಚುನಾವಣೆ ಕಾನೂನನ್ನು ಆಮೂಲಾಗ್ರವಾಗಿ ಪರಿಗಣಿಸುವ ಕೆಲಸ ಇಂದಿಗೂ ನಡೆದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...