Homeಅಂಕಣಗಳುನೂರುನೋಟ | ಚುನಾವಣಾ ಆಯೋಗವನ್ನು ಸರಿಪಡಿಸುವುದು ಬಹಳ ಮುಖ್ಯ

ನೂರುನೋಟ | ಚುನಾವಣಾ ಆಯೋಗವನ್ನು ಸರಿಪಡಿಸುವುದು ಬಹಳ ಮುಖ್ಯ

- Advertisement -
- Advertisement -

ಎಚ್.ಎಸ್.ದೊರೆಸ್ವಾಮಿ |

ಕರ್ನಾಟಕ 2018ರ ವಿಧಾನಸಭಾ ಚುನಾವಣೆಗಳು ಮುಗಿದಿದೆ. ಈ ಚುನಾವಣೆಯ ಫಲಿತಾಂಶವನ್ನು ಅವಲೋಕನ ಮಾಡುವುದರ ಅಗತ್ಯತೆ ಇದೆ. ಭಾಜಪ ಚುನಾವಣೆಯಲ್ಲಿ 104 ಸ್ಥಾನಗಳನ್ನು ಕಾಂಗ್ರೆಸ್ 78 ಸ್ಥಾನಗಳನ್ನು ಜನತಾದಳ (ಜಾತ್ಯತೀತ) 38 ಸ್ಥಾನಗಳನ್ನು ಪಕ್ಷೇತರರು 2 ಸ್ಥಾನಗಳನ್ನು ಗಳಿಸಿದ್ದಾರೆ.ಅಂದರೆ ಯಾವ ಪಕ್ಷಕ್ಕೂ ಬಹುಮತ ದೊರೆತಿಲ್ಲ.ಈ ಸಂದರ್ಭದಲ್ಲಿ ರಾಷ್ಟ್ರಿಯ ಕಾಂಗ್ರೆಸ್ ನಾಯಕರು ದೇವೇಗೌಡರನ್ನು ಸಂಧಿಸಿ ನಮ್ಮ ಬೆಂಬಲ ನೀಡುತ್ತೇವೆ ಜಾತ್ಯತೀತ ಜನತಾದಳ ಸರ್ಕಾರ ರಚಿಸಲಿ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಭಾರತೀಯ ಜನತಾಪಕ್ಷಕ್ಕೆ ಸರ್ಕಾರ ರಚಿಸಲು ಅವಕಾಶ ನೀಡದಂತೆ ತಾವೇ ಸರ್ಕಾರ ರಚಿಸುವ ನಿರ್ಧಾರಕ್ಕೆ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳ ಬಂದಿವೆ. ಕರ್ನಾಟಕದಲ್ಲಿ ಭಾಜಪ ಸರ್ಕಾರವನ್ನು ಅಸ್ತಿತ್ವಕ್ಕೆ ತರುವ ಮೋದಿಯವರ ಮಹತ್ವಾಕಾಂಕ್ಷೆಗೆ ಕೊಡಲಿ ಪೆಟ್ಟು ಬಿದ್ದಿದೆ. 2019ರ ಲೋಕಸಭೆಯ ಚುನಾವಣೆಯ ಮೇಲೆ ಬಿಜೆಪಿಯ ಈ ಹಿನ್ನಡೆ ತನ್ನ ಪ್ರಭಾವ ಬೀರುವುದೆಂಬುದು ಶತಃಸಿದ್ದ

2019ರ ಲೋಕಸಭಾ ಚುನಾವಣೆಗಳಲ್ಲಿ ಮೋದಿ ಮತ್ತು ಭಾರತೀಯ ಜನತಾಪಕ್ಷಗಳನ್ನು ಪರಾಭವಗೊಳಿಸಲು ವಿರೋಧಪಕ್ಷಗಳು ಈಗಾಗಲೇ ಧ್ರುವೀಕರಣದ ಮಾತುಕತೆಗಳನ್ನು ಆರಂಭ ಮಾಡಿವೆ. ಒಂದು ಕಡೆ ಪ್ರಾಂತೀಯ ಪಕ್ಷಗಳೆಲ್ಲ ಒಂದಾಗಿ ಬಿಜೆಪಿಯನ್ನು ಎದುರಿಸುವ ನಿರ್ಧಾರ ಮಾಡಿದ್ದಾರೆ. ರಾಷ್ಟ್ರಮಟ್ಟದ ರಾಜಕೀಯ ಪಕ್ಷಗಳೆಲ್ಲ ಕೂಡಿಕೊಂಡು ಬಿಜೆಪಿಯನ್ನು ಪರಾಭವಗೊಳಿಸುವ ಬಗೆಗೆ ಮಾತುಕತೆ ನಡೆಯುತ್ತಿದೆ.

ಈ ಎರಡೂ ಬಣಗಳು ಒಟ್ಟಾಗಿ ಕೂಡಿಕೊಂಡು ಭಾರತೀಯ ಜನತಾಪಕ್ಷವನ್ನು ಎದುರಿಸುದಾದರೆ ಮೋದಿಯನ್ನು ಮಣಿಸುವುದು ಮತ್ತಷ್ಟು ಸುಲಭವಾಗಬಹುದು. ಅವು ಬೇರೆ ಬೇರೆಯಾಗಿ ಚುನಾವಣೆಯನ್ನು ಎದುರಿಸುವ ಸಂದರ್ಭ ಏರ್ಪಟ್ಟರೂ ಮೋದಿ ಮತ್ತು ಬಿಜೆಪಿಯನ್ನು ಪರಾಭವಗೊಳಿಸುವುದು ಈ ಎರಡೂ ತಂಡಗಳ ಏಕೈಕಗುರಿಯಾಗಿರುವುದರಿಂದ ಅದು ಸ್ವಾಗತಾರ್ಹವೇ.

2019ರ ಚುನಾವಣಾ ಹೋರಾಟದ ರಾಜಕೀಯದಲ್ಲಿ ಬದಲಾವಣೆ ತರಲು ಬಯಸುವ ನಮ್ಮ ಪಾತ್ರವೇನು ಎಂಬುವುದನ್ನ ಕುರಿತು ವಿಚಾರ ವಿನಿಮಯ ಮಾಡಿಕೊಳ್ಳುವುದು ಅಗತ್ಯ.

ಕರ್ನಾಟಕದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮೋದಿಯನ್ನು ಎದುರಿಸಲು ಕೋಮುಸೌಹಾರ್ದವೇದಿಕೆಯ ನೇತೃತ್ವದಲ್ಲಿ ನಡೆದ ಸಂಘಟಿತ ಪ್ರಯತ್ನ ತುಂಬಾ ಪರಿಣಾಮಕಾರಿಯಾಗಿತ್ತು. ಈ ಸಂದರ್ಭದಲ್ಲಿ ಕೈಜೋಡಿಸಿದ ಎಲ್ಲಕೋಮುವಿರೋದಿ üಸಂಸ್ಥೆಗಳಿಗೆ ನನ್ನ ಮೆಚ್ಚುಗೆಯನ್ನು ಸೂಚಿಸುತ್ತೇನೆ. ಈ ಸಂಘಟಿತ ಪ್ರಯತ್ನದಲ್ಲಿ ಪ್ರಮುಖಪಾತ್ರ ವಹಿಸಿದ ಜನತೆಯ ಪರವಾಗಿ ಕೈಗೊಂಡ ಈ ಮತದಾರರ ಜಾಗೃತಿ ಕಾರ್ಯಕ್ರಮ ಲೋಕಸಭಾ ಚುನಾವಣೆ ಇನ್ನೂ ಒಂದು ವರ್ಷ ಅವಧಿ ಇರುವಾಗಲೇ ಕರ್ನಾಟಕದಲ್ಲಿ ಮುಂದುವರಿಯಬೇಕಲ್ಲದೆ ಉತ್ತರ ಭಾರತದಲ್ಲೂ ಈ ಪ್ರಚಾರಕಾರ್ಯ ನಡೆಸಬೇಕಿದೆ. ಕರ್ನಾಟಕದಲ್ಲಿ ಈಗಾಗಲೇ ರೂಪಿತವಾಗಿರುವ ಪ್ರಭಾವಿ ವ್ಯಕ್ತಿಗಳ ತಂಡ ಉತ್ತರಭಾರತದ ಎಲ್ಲ ರಾಜ್ಯಗಳಿಗೂ ಭೇಟಿಕೊಟ್ಟು ಅಲ್ಲಿಯೂ ಇಂತಹ ಮೋದಿ ವಿರೋಧಿ ಸಂಸ್ಥೆಗಳನ್ನು ಅಸ್ತಿತ್ವಕ್ಕೆ ತರಲು ಕೂಡಲೇ ಕಾರ್ಯೋನ್ಮುಖವಾಗಬೇಕು. ಹೀಗೆ ಅಲ್ಲಿ ಅಸ್ತಿತ್ವದಲ್ಲಿರುವ ಮೋದಿ ವಿರೋಧಿ ಸಂಸ್ಥೆಗಳು ಸಮರೋಪಾದಿಯಲ್ಲಿ ಮತದಾರರಮಧ್ಯೆ ಕೆಲಸ ಮಾಡುವುದಾದರೆ ಬಿಜೆಪಿಯ ಹಾಗೂ ಮೋದಿಯ ಪ್ರಭಾವವನ್ನು ಪರಿಣಾಮಕಾರಿಯಾಗಿ ಕುಗ್ಗಿಸಲು ಬರುತ್ತದೆ.

ಮೋದಿಯನ್ನು ಪರಾಭವಗೊಳಿಸುವುದು ಎಷ್ಟು ಮುಖ್ಯವೋ ಚುನಾವಣಾ ಆಯೋಗವನ್ನು ಪರಿಣಾಮಕಾರಿಯಾಗಿ ಕಾರ್ಯತತ್ಪರವಾಗುವಂತೆ ಮಾಡುವುದು ಅಷ್ಟೇ ಮುಖ್ಯ. ಚುನಾವಣಾ ಆಯೋಗ ಭಾರತದಂತಹ ದೊಡ್ಡ ರಾಷ್ಟ್ರದಲ್ಲಿ ಶಾಂತಿಯುತವಾಗಿ ಚುನಾವಣೆಗಳನ್ನು ನಡೆಸುತ್ತಿರುವುದಕ್ಕೆ ತನ್ನಬೆನ್ನನ್ನು ತಾನೇತಟ್ಟಿಕೊಳ್ಳುತ್ತಿದೆ.

ಚುನಾವಣೆಯಿಂದ ಚುನಾವಣೆಗೆ ರಾಜಕೀಯ ಭ್ರಷ್ಟಾಚಾರ ಹೆಚ್ಚುತ್ತಿದೆ. ಹಣ,ಹೆಂಡ, ಬಟ್ಟೆ ಸೀರೆ,ತಾಳಿ,ಬೆಳ್ಳಿ ಸಾಮಾನುಗಳೆಲ್ಲವನ್ನು ಮತದಾರರಿಗೆ ಹಂಚುವ ಪ್ರಯತ್ನ ಹೆಚ್ಚುಹೆಚ್ಚಾಗಿ ಬೆಳೆಯುತ್ತಿದೆ. ಈಗ ನಡೆದ ಚುನಾವಣೆಯಲ್ಲಿ 50-60 ಕೋಟಿರೂ.ಗಳನ್ನು ಹಂಚುವುದರಿಂದ ಆಯೋಗ ವಶಪಡಿಸಿಕೊಂಡಿದೆ.ಇದಕ್ಕೆ ಶೇ.100ರಷ್ಟು ಹಣ ಮತದಾರರಲ್ಲಿಗೆ ರಾಜಕೀಯ ಪಕ್ಷಗಳು ಹಂಚಿದ್ದಾರೆ. ಕರ್ನಾಟಕ ಚುನಾವಣಾ ಆಯೋಗದ ಮುಖ್ಯಸ್ಥರನ್ನು ಕೇಳಿದರೆ ಜಫ್ತಿಮಾಡಲಾದ ಎಲ್ಲ ಹಣವನ್ನು ಹುಜೂರ್ ಟ್ರಜರಿಗೆ ಕಟ್ಟಿದ್ದೇವೆ. ವಶಪಡಿಸಿಕೊಂಡ ಕುಡಿತಗಳನ್ನೆಲ್ಲ ನಾಶ ಮಾಡಿದ್ದೇವೆ ಎನ್ನುತ್ತಾರೆ.

ಪೊಲೀಸ್‍ ವರಿಷ್ಠರ ಕಚೇರಿಯ ಮುಖ್ಯಸ್ಥರನ್ನು ಕೇಳಿದರೆ ವಶ ಪಡಿಸಿಕೊಂಡ ಉಳಿದ ವಸ್ತುಗಳು ಆಯಾ ಪೊಲೀಸ್ ಠಾಣೆಯ ವಶದಲ್ಲಿದ್ದು ಅವರುಕಳ್ಳದಾಸ್ತಾನುದಾರರು ಕಳ್ಳಸಾಗಾಣಿಕೆದಾರರ ಕೇಸು ಹಾಕಿದ್ದಾರೆಎನ್ನುತ್ತಾರೆ.ಇದರ ಮಾಹಿತಿಯನ್ನು ನಮಗೆಕೊಡಲು ಎಸ್ಪಿಗಳಿಗೆ ಚುನಾವಣಾಧಿಕಾರಿಗಳು ಸುತ್ತೋಲೆ ಕಳಿಸಿದರೂ ಕೆಲದಿನಗಳನಂತರ ಇಬ್ಬರು ಎಸಿಪಿಗಳು ನಮ್ಮಜಿಲ್ಲೆಗಳಲ್ಲಿ ಅಂತಹದ್ದೇನುಪ್ರಸಂಗಗಳು ನಡೆದಿಲ್ಲ ಎಂದು ಬರೆದರು. ಉಳಿದ ಜಿಲ್ಲೆಗಳ ಎಸ್ಪಿಗಳು ಮೌನತಾಳಿದರು. ಉತ್ತರ ಬರೆಯುವ ಗೋಜಿಗೆ ಹೋಗಲಿಲ್ಲ.

ಈ ಭ್ರಷ್ಟಾಚಾರವನ್ನು ತೊಡೆದುಹಾಕಲು ಕಠಿಣ ಕ್ರಮಕೈಗೊಳ್ಳಿ, 2008 ಮತ್ತು 2013ರಲ್ಲಿ ನಡೆದಿರುವ ಎರಡು ಚುನಾವಣೆಗಳಲ್ಲಿ ಸಂಭವಿಸಿರುವ ಅವ್ಯವಹಾರಗಳ ವಿವರ, ಅದನ್ನು ಯಾವಪಕ್ಷದವರು ಎಸಗಿದ್ದಾರೆ, ಯಾರು ಮಾಡಿದ್ದಾರೆ ಎಂಬವವರ ಮೇಲೆಯಾವಾಗ ಕಟ್ಲೆ ಹೂಡಲಾಯಿತು, ಏನು ಶಿಕ್ಷೆಯಾಯಿತು, ಹಾಗೆ ಹಿಡಿದ ಸಾಮಗ್ರಿಗಳು ಯಾರು ವಶದಲ್ಲಿವೆ ಇವೆಲ್ಲದರ ವಿವರಗಳನ್ನೊಳಗೊಂಡ ಒಂದು ಶ್ವೇತಪತ್ರವನ್ನು 3ತಿಂಗಳೊಳಗೆ ಹೊರಡಿಸಬೇಕೆಂದು ಚುನಾವಣಾಧಿಕಾರಿಗಳನ್ನು ಒತ್ತಾಯ ಮಾಡಲು ಒಂದು ಅನಿರ್ದಿಷ್ಟ ಕಾಲದ ಧರಣಿಯನ್ನು ಅವರಕಚೇರಿಯ ಮುಂದೆ ನಡೆಸಬೇಕು.

ಕೇಂದ್ರದ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಇಷ್ಟೊಂದು ಭ್ರಷ್ಟಾಚಾರ ಹತ್ತಾರು ವರ್ಷಗಳಿಂದ ನಡೆಯುತ್ತಿದ್ದರೂ ಅದಕ್ಕೆ ಪರಿಣಾಮಕಾರಿಯಾದ ಕಠಿಣ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ಮುಂದಿನ ಚುನಾವಣೆ ವೇಳೆಗಾದರೂ ಹಣ, ಹೆಂಡ ಮತ್ತು ಇತರ ಸಾಮಗ್ರಿಗಳನ್ನು ಮತದಾರರಿಗೆ ಹಂಚುವ ರಾಜಕೀಯ ಪಕ್ಷಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿ ಈ ಕರ್ತವ್ಯವನ್ನು ನೀವು ನಿರ್ವಹಿಸದೆ ಕರ್ತವ್ಯ ಭ್ರಷ್ಟರಾದರೆ ಭ್ರಷ್ಟಾಚಾರಕ್ಕೆ ಅವಕಾಶ ಕೊಡದೆ ಚುನಾವಣೆ ನಡೆಸದಂತೆ ಕೇಂದ್ರಚುನಾವಣಾ ಕಮೀಷನ್ ವಿರುದ್ಧ ಶಾಂತಿಯುತ ಹೋರಾಟ ನಡೆಸುವುದಾಗಿ ಪತ್ರ ಬರೆಯಬೇಕು.

ಅಲ್ಲದೆ ಕೇಂದ್ರ ಸರ್ಕಾರಕ್ಕೆ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ಚುನಾವಣೆಗಳಲ್ಲಿ ನಡೆಯುವ ಎಲ್ಲಕ್ರಮಗಳನ್ನು ತಡೆಯಲು ಹಾಲಿ ಜಾರಿಯಲ್ಲಿರುವ ಎಲ್ಲ ಚುನಾವಣಾ ಕಾನೂನುಗಳನ್ನು ಮುಂಜಾಗ್ರತವಾಗಿ ಪರಿಷ್ಕರಿಸಿ ದ್ವೇಷಮುಕ್ತವಾದ ಕಾನೂನುಗಳನ್ನು ಜಾರಿಗೆ ಕೊಡಬೇಕೆಂದು ಒತ್ತಾಯಿಸುವ ಪತ್ರವನ್ನು ಬರೆಯಬೇಕು. ಈ ವರ್ಷ ಚುನಾವಣೆಗೆ ನಿಲ್ಲುವ ಅಭ್ಯರ್ಥಿಗಳು ಮತ್ತೆ ಮುಂದಿನ ಚುನಾವಣೆಗೆನಿಂತರೆಅವರು ಇದಕ್ಕೆಹಿಂದೆ ನಡೆದ ಚುನಾವಣೆಯ ವೇಳೆ ಕೊಟ್ಟ ತಮ್ಮ ಆಸ್ತಿಯ ವಿವರಗಳಿಗೂ ಈ ವರ್ಷ ಕೊಟ್ಟಿರುವ ವಿವರಗಳಿಗೂ ತುಂಬಾ ಅಂತರವಿದ್ದರೆ ಅದನ್ನು ನ್ಯಾಯಮಾರ್ಗದಲ್ಲಿ ಸಂಪಾದಿಸಿದ್ದಾರಾ ಇಲ್ಲವೆ ಅನ್ಯಾಯಮಾರ್ಗದಲ್ಲಿ ಸಂಪಾದಿಸಿದ್ದೀರಾ ಎಂಬುದನ್ನು ಪತ್ತೆ ಮಾಡಲು ಏನು ಕ್ರಮ ತೆಗೆದುಕೊಳ್ಳುತ್ತೀರಿ ಎಂದು ಚುನಾವಣಾ ಆಯೋಗದವರನ್ನು ಕೇಳಬೇಕು.

ಸ್ವತಂತ್ರ ಭಾರತದಲ್ಲಿ ಚುನಾವಣೆಗಳು ಕಳೆದ ಅರವತ್ತು ವರ್ಷಕ್ಕೆ ಮೇಲ್ಪಟ್ಟು ನಡೆಯುತ್ತಿದ್ದರೂ ಚುನಾವಣೆ ಕಾನೂನನ್ನು ಆಮೂಲಾಗ್ರವಾಗಿ ಪರಿಗಣಿಸುವ ಕೆಲಸ ಇಂದಿಗೂ ನಡೆದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...