Homeನ್ಯಾಯ ಪಥನೇರಳೆ ಹಣ್ಣಿನ ಮರವೂ, ನರೇಂದ್ರ ಮೋದಿಯವರೂ?...ಡಿ.ಉಮಾಪತಿ

ನೇರಳೆ ಹಣ್ಣಿನ ಮರವೂ, ನರೇಂದ್ರ ಮೋದಿಯವರೂ?…ಡಿ.ಉಮಾಪತಿ

- Advertisement -
- Advertisement -

1960ರಲ್ಲಿ ಪ್ರಸಿದ್ಧ ಕತೆಗಾರ ಕೃಷ್ಣಚಂದರ್ ಅವರು ಬರೆದ ಹಿಂದೀ ಕತೆಯೊಂದರಲ್ಲಿ ಇಂದಿನ ಸರ್ಕಾರದ ಟೀಕೆ ಇದೆ ಎಂದು ಆಕ್ಷೇಪಿಸಿ ಆ ಕತೆಯನ್ನು ಮೊನ್ನೆ ಮೊನ್ನೆ ಹತ್ತನೆಯ ತರಗತಿಯ ಪಠ್ಯಕ್ರಮದಿಂದ ತೆಗೆದು ಹಾಕಲಾಗಿದೆ.

ಪ್ರಸಿದ್ಧ ಹಿಂದೀ ಲೇಖಕ ಕೃಷ್ಣ ಚಂದರ್ ಅವರ ‘ಜಾಮೂನ್ ಕಾ ಪೇಡ್’ (ನೇರಳೆ ಮರ) ಎಂಬ ವಿಡಂಬನಾತ್ಮಕ ಲಘು ಕತೆಯನ್ನು ಕೇಂದ್ರ ಸರ್ಕಾರ ಐಸಿಎಸ್‍ಇ ಹತ್ತನೆಯ ತರಗತಿ ಶಾಲಾ ಪಠ್ಯದಿಂದ ತೆಗೆದುಹಾಕಿದೆ. 2015ರಲ್ಲಿ ಈ ಕತೆ ಪಠ್ಯಕ್ರಮಕ್ಕೆ ಸೇರಿತ್ತು.

ಸರ್ಕಾರೀ ಸಚಿವಾಲಯದ ಮುಂದಿನ ಹಸಿರು ಅವರಣದ ನೇರಳೆ ಮರವೊಂದು ಬಿದ್ದು ಅದರ ಅಡಿಗೆ ಸಿಕ್ಕಿಹಾಕಿಕೊಂಡ ವ್ಯಕ್ತಿಯೊಬ್ಬನ ಕತೆಯಿದು. ಮುಂಜಾನೆ ಮಾಲಿಯ ಗಮನಕ್ಕೆ ಬರುವ ಈ ಸಂಗತಿ ಸರ್ಕಾರಿ ಕರ್ಮಚಾರಿಗಳು ಮತ್ತು ಅಧಿಕಾರಿಗಳಿಗೆ ತಿಳಿಯುತ್ತದೆ. ಆದರೆ ಅವರೆಲ್ಲ ಈ ವ್ಯಕ್ತಿಯನ್ನು ಹಿಡಿದೆತ್ತಿ ಪಾರು ಮಾಡುವುದಿಲ್ಲ. ಬದಲಾಗಿ ಹೊಣೆಯನ್ನು ಮತ್ತೊಬ್ಬರಿಗೆ ಹೊರಿಸಿ ತಾವು ಪಾರಾಗುವ ವ್ಯಂಗ್ಯವಿದು.

1914-1977ರ ಅವಧಿಯಲ್ಲಿ ಜೀವಿಸಿದ್ದ ಕೃಷ್ಣ ಚಂದರ್ ಅವರು ಈ ಕತೆಯನ್ನು ಬರೆದದ್ದು 1960ರಲ್ಲಿ. ಕೆಲ ಸರ್ಕಾರಿ ಅಧಿಕಾರಿಗಳು ಈ ಕತೆಯಲ್ಲಿ ಹಾಲಿ ಕೇಂದ್ರ ಸರ್ಕಾರದ ವಿರುದ್ಧ ಟೀಕೆಯನ್ನು ಕಂಡರಂತೆ. ಹೀಗಾಗಿ ಕತೆಗೆ ಅರ್ಧಚಂದ್ರ ಪ್ರಯೋಗ ಆಗಿದೆ. 2020 ಮತ್ತು 2021ರ ಐ.ಸಿ.ಎಸ್.ಇ. ಪರೀಕ್ಷೆಗಳಲ್ಲಿ ಈ ಕತೆಯ ಕುರಿತು ಯಾವುದೇ ಪ್ರಶ್ನೆಗಳನ್ನು ಕೇಳಲಾಗುವುದಿಲ್ಲ ಎಂದು ನೋಟಿಸೊಂದರಲ್ಲಿ ತಿಳಿಯಪಡಿಸಲಾಗಿದೆ.
ಹತ್ತನೆಯ ತರಗತಿಯ ಶಾಲಾ ಮಕ್ಕಳು ಓದುವಂತಹ ಕತೆಯಲ್ಲ ಇದು ಎಂಬ ವಿವರಣೆಯನ್ನು ನೀಡಿರುವ ಐಸಿಎಸ್‍ಇ, ಯಾಕೆ ಏನು ಎಂಬ ಯಾವುದೇ ಸಮಜಾಯಿಷಿ ನೀಡಿಲ್ಲ.

ರಾತ್ರಿ ಬೀಸಿದ ಭಾರೀ ಬಿರುಗಾಳಿಯ ಕಾರಣ ಸಚಿವಾಲಯದ ಹುಲ್ಲುಹಾಸಿನ ನೇರಳೆ ಮರವೊಂದು ನೆಲಕ್ಕುರುಳುತ್ತದೆ. ಪ್ರಸಿದ್ಧ ಕವಿಯೊಬ್ಬನು ಅದರ ಕೆಳಗೆ ಸಿಕ್ಕಿ ಹಾಕಿಕೊಳ್ಳುತ್ತಾನೆ. ಮುಂಜಾನೆ ಈ ಸಂಗತಿಯನ್ನು ಗಮನಿಸುವ ಮಾಲಿ ಧಾವಿಸಿ ಹೋಗಿ ಚಪರಾಸಿಗೆ ತಿಳಿಸುತ್ತಾನೆ. ಚಪರಾಸಿ ಗುಮಾಸ್ತನ ಬಳಿ ತೆರಳುತ್ತಾನೆ. ಗುಮಾಸ್ತ ಸೂಪರಿಂಟಿಂಡೆಂಟ್ ಬಳಿಗೆ ಧಾವಿಸುತ್ತಾನೆ. ತುಸು ಹೊತ್ತಿನ ನಂತರ ಮರದ ಕೆಳಗೆ ಸಿಕ್ಕಿಹಾಕಿಕೊಂಡ ವ್ಯಕ್ತಿಯ ಸುತ್ತಮುತ್ತ ಗುಂಪು ಜಮಾಯಿಸುತ್ತದೆ. ಮರ ಬಿಡುತ್ತಿದ್ದ ರಸಭರಿತ ನೇರಳೆ ಹಣ್ಣಿನ ಚರ್ಚೆ ನಡೆಯುತ್ತದೆ. ಇನ್ನಷ್ಟು ಮಾಲಿಗಳು, ಚಪರಾಸಿಗಳು ಹಾಗೂ ಗುಮಾಸ್ತರೆಲ್ಲ ಕೈ ಹಾಕಿದರೆ ಮರದಡಿಯ ವ್ಯಕ್ತಿಯನ್ನು ಹೊರಗೆಳೆಯಬಹುದು ಎನ್ನುತ್ತಾನೆ ಮಾಲಿ. ಮಾಲಿ ಹೇಳುವುದು ಸರಿಯೆಂದು ಬಹಳಷ್ಟು ಮಂದಿ ಮರವನ್ನು ಸರಿಸಲು ಮುಂದಾಗುತ್ತಾರೆ. ನಿಲ್ಲಿ, ನಾನು ಅಂಡರ್ ಸೆಕ್ರೆಟರಿ ಅವರನ್ನು ಕೇಳಬೇಕು ಎನ್ನುತ್ತಾನೆ ಸೂಪರಿಂಟಿಂಡೆಂಟ್. ಅಂಡರ್ ಸೆಕ್ರೆಟರಿಯು ಡೆಪ್ಯೂಟಿ ಸೆಕ್ರೆಟರಿ ಬಳಿ ಹೋಗುತ್ತಾನೆ. ಡೆಪ್ಯೂಟಿ ಸೆಕ್ರೆಟರಿ ಜಾಯಿಂಟ್ ಸೆಕ್ರೆಟರಿ ಮುಂದೆ ಹಾಜರಾಗುತ್ತಾನೆ. ಜಾಯಿಂಟ್ ಸೆಕ್ರೆಟರಿಯು ಚೀಫ್ ಸೆಕ್ರೆಟರಿ ಬಳಿಗೆ ತೆರಳುತ್ತಾನೆ. ಚೀಫ್ ಸೆಕ್ರೆಟರಿಯು ಜಾಯಿಂಟ್ ಸೆಕ್ರೆಟರಿಗೆ ಏನೋ ಹೇಳುತ್ತಾನೆ. ಜಾಯಿಂಟ್ ಸೆಕ್ರೆಟರಿ ಡೆಪ್ಯೂಟಿ ಸೆಕ್ರೆಟರಿಗೆ, ಡೆಪ್ಯೂಟಿಯು ಅಂಡರ್ ಸೆಕ್ರೆಟರಿಗೆ ಅದನ್ನು ಹೇಳುತ್ತಾನೆ. ಕಡತ ಕಾಲ್ಚೆಂಡಾಗುತ್ತದೆ. ಅರ್ಧ ದಿನ ಕಳೆದೇ ಹೋಗಿರುತ್ತದೆ. ಊಟದ ವಿರಾಮ. ಮರದ ಬಳಿ ಸೇರಿದ ಗುಂಪು ಪುನಃ ವ್ಯಕ್ತಿಯನ್ನು ಪಾರು ಮಾಡಲು ತಾನೇ ಮುಂದಾಗುತ್ತದೆ. ಅಷ್ಟರಲ್ಲಿ ಸೂಪರಿಂಟಿಂಡೆಂಟ್ ಕಡತ ಹಿಡಿದು ಓಡಿಬರುತ್ತಾನೆ. ಈ ಮರವನ್ನು ನಾವಾಗಿಯೇ ಸರಿಸುವಂತಿಲ್ಲ. ನಾವು ವಾಣಿಜ್ಯ ಇಲಾಖೆಯವರು. ಮರ ಕೃಷಿ ಇಲಾಖೆಯಡಿ ಬರುತ್ತದೆ. ಕಡತದ ಮೇಲೆ ತುರ್ತು ಎಂದು ಬರೆದು ಕೃಷಿ ಇಲಾಖೆಗೆ ಕಳಿಸುತ್ತೇನೆ. ಅಲ್ಲಿಂದ ಜವಾಬು ಬರುತ್ತಲೇ ಮರವನ್ನು ಸರಿಸೋಣ ಎಂದು ಜನರನ್ನು ತಡೆಯುತ್ತಾನೆ. ಮರವನ್ನು ಸರಿಸುವ ಜವಾಬ್ದಾರಿ ನಿಮ್ಮದೇ ಎಂದು ವಾಣಿಜ್ಯ ಮತ್ತು ಕೃಷಿ ಇಲಾಖೆ ಪರಸ್ಪರ ದೂಷಿಸುತ್ತವೆ.

ಮರುದಿನವೂ ಕಡತ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ, ಒಬ್ಬ ಅಧಿಕಾರಿಯಿಂದ ಮತ್ತೊಬ್ಬ ಅಧಿಕಾರಿಗೆ ಸುತ್ತಾಡುತ್ತಲೇ ಇರುತ್ತದೆ. ಹಣ್ಣು ಬಿಡುವ ಮರವಾದ ಕಾರಣ ತೋಟಗಾರಿಕೆ ಇಲಾಖೆಗೆ ಹೊತ್ತು ಹಾಕುವ ಹೊತ್ತಿಗೆ ಸಂಜೆಯಾಗಿರುತ್ತದೆ. ಜನ ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡು ಮರವನ್ನು ಕತ್ತರಿಸುವ ಪರಿಸ್ಥಿತಿಯನ್ನು ತಡೆಯಲು ಸುತ್ತ ಪೆÇಲೀಸ್ ಕಾವಲು ಹಾಕಲಾಗಿರುತ್ತದೆ. ಮರದಡಿ ಸಿಕ್ಕಿ ಹಾಕಿಕೊಂಡ ವ್ಯಕ್ತಿಯ ಕುರಿತು ದಯೆ ತೋರುವ ಪೆÇಲೀಸ್ ಪೇದೆಯೊಬ್ಬ, ಆತನಿಗೆ ಉಣ್ಣಿಸಲು ಮಾಲಿಗೆ ಅನುಮತಿ ನೀಡುತ್ತಾನೆ. ನಿಮ್ಮ ಕಡತ ಸಂಚರಿಸುತ್ತಿದೆ. ನಾಳೆ ತೀರ್ಮಾನ ಆಗುವ ವಿಶ್ವಾಸ ಇದೆ ಎಂದು ಮಾಲಿ ಮರದಡಿಯ ವ್ಯಕ್ತಿಗೆ ತಿಳಿಸುತ್ತಾನೆ. ಮೂರನೆಯ ದಿನ ತೋಟಗಾರಿಕೆ ಇಲಾಖೆಯಿಂದ ಕಡತ ವಾಪಸು ಬರುತ್ತದೆ. ಫಲ ಬಿಡುವ ಮರವನ್ನು ಕಡಿಯಲಾಗದು ಎಂದಿರುತ್ತದೆ.

ಆದರೆ ವ್ಯಕ್ತಿಯನ್ನು ಪಾರು ಮಾಡಲು ಯಾರೂ ಮುಂದಾಗುವುದಿಲ್ಲ. ಅತ್ತ ಇತ್ತ ಜಗ್ಗಾಡುವ ಈ ಸಂಗತಿ ನಾಲ್ಕು ದಿನಗಳ ನಂತರ ಮುಖ್ಯಕಾರ್ಯದರ್ಶಿಯವರ ಮೇಜನ್ನು ತಲುಪುತ್ತದೆ. ಆ ನಂತರವೂ ಜವಾಬ್ದಾರಿಯನ್ನು ಒಂದು ಸರ್ಕಾರಿ ಇಲಾಖೆಯು ಮತ್ತೊಂದು ಸರ್ಕಾರಿ ಇಲಾಖೆಗೆ ದಾಟಿಸಿ ಕೈ ತೊಳೆದುಕೊಳ್ಳುವ ಪ್ರಯತ್ನಗಳು ನಡೆದಿರುತ್ತವೆ. ಕೃಷಿವನ ಇಲಾಖೆಯಿಂದ ಸಂಸ್ಕೃತಿ ಇಲಾಖೆಗೆ ತಲುಪುತ್ತದೆ. ಮರದ ಕೆಳಗೆ ಸಿಕ್ಕಿಹಾಕಿಕೊಂಡಿರುವ ವ್ಯಕ್ತಿ ಒಬ್ಬ ಪ್ರಸಿದ್ಧ ಕವಿಯಾಗಿದ್ದ ಕಾರಣ ವಿಷಯ ಸಂಸ್ಕೃತಿ ಇಲಾಖೆಗೆ ರವಾನೆಯಾಗಿರುತ್ತದೆ.

ಸಂಸ್ಕೃತಿ ಇಲಾಖೆಯ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡುತ್ತಾನೆ. ಮರದ ಕೆಳಗೆ ಸಿಕ್ಕಿ ಹಾಕಿಕೊಂಡಿರುವ ಪ್ರಸಿದ್ಧ ಕವಿಗೆ ಪ್ರಶಸ್ತಿ ಗಳಿಸಿಕೊಟ್ಟಿದ್ದ ಪುಸ್ತಕವನ್ನು ಹೊಗಳುತ್ತಾನೆ. ಮತ್ತು ಕವಿಯನ್ನು ಪಾರು ಮಾಡುವುದು ತನ್ನ ಕೆಲಸ ಅಲ್ಲವೆಂದು ಖುದ್ದು ಕವಿಗೇ ಹೇಳುತ್ತಾನೆ. ಆ ನಂತರ ಕವಿ ಮರದ ಕೆಳಗೆ ಸಿಕ್ಕಿಹಾಕಿಕೊಂಡಿರುವ ಕಡತ ಆರೋಗ್ಯ ಇಲಾಖೆಯನ್ನು ತಲುಪುತ್ತದೆ. ಈ ಇಲಾಖೆ ಕಡತವನ್ನು ವಿದೇಶ ಮಂತ್ರಾಲಯಕ್ಕೆ ಸಾಗ ಹಾಕುತ್ತದೆ. ಈ ನೇರಳೆ ಮರವನ್ನು ನೆರೆಯ ದೇಶದ ಪ್ರಧಾನಮಂತ್ರಿ ಇಲ್ಲಿಗೆ ಬಂದಾಗ ನೆಟ್ಟಿದ್ದೇ ಅದಕ್ಕೆ ಕಾರಣ.

ಈ ಮರವನ್ನು ಕತ್ತರಿಸಲು ವಿದೇಶೀ ಮಂತ್ರಾಲಯ ಒಪ್ಪುವುದಿಲ್ಲ. ನೆರೆಯ ದೇಶದ ಪ್ರಧಾನಿ ನೆಟ್ಟಿದ್ದ ಈ ಮರವನ್ನು ಕಡಿದರೆ ಉಭಯ ದೇಶಗಳ ನಡುವಣ ಸೌಹಾರ್ದ ಸಂಬಂಧ ಕೆಟ್ಟು ಹೋಗಬಹುದು ಎನ್ನುತ್ತದೆ. ಕಡೆಗೆ ಈ ವಿಷಯ ಪ್ರಧಾನಮಂತ್ರಿಯವರ ಸನ್ನಿಧಾನಕ್ಕೆ ಬರುತ್ತದೆ. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮರವನ್ನು ಕತ್ತರಿಸಲು ಒಪ್ಪಿಗೆ ನೀಡುತ್ತಾರೆ. ಈ ಆದೇಶದ ಕಡತವನ್ನು ಖುದ್ದು ಸೂಪರಿಂಟಿಂಡೆಂಟ್ ನೇರಳೆ ಮರದಡಿ ಸಿಕ್ಕಿ ಹಾಕಿಕೊಂಡಿದ್ದ ಕವಿಯ ಬಳಿಗೆ ಬರುತ್ತಾನೆ. ನೋಡಪ್ಪಾ, ಪ್ರಧಾನಿ ಎಲ್ಲ ಅಂತಾರಾಷ್ಟ್ರೀಯ ಜವಾಬ್ದಾರಿಯನ್ನು ತಾವೇ ವಹಿಸಿಕೊಂಡು ಮರ ಕತ್ತರಿಸಲು ಅನುಮತಿ ಕೊಟ್ಟಿದ್ದಾರೆ, ನಾಳೆ ಈ ಮರವನ್ನು ಕತ್ತರಿಸಿ ನಿನ್ನನ್ನು ಬಚಾವು ಮಾಡಲಾಗುವುದು ಎಂದು ಕೂಗಿ ಹೇಳುತ್ತಾನೆ. ಬಳಿ ಬಂದು ಅವನ ಭುಜ ಅಲುಗಿಸಿ ಮತ್ತೆ ಹೇಳುತ್ತಾನೆ. ಆದರೆ ಕವಿಯ ಕೈ ತಣ್ಣಗಾಗಿರುತ್ತದೆ. ಕಣ್ಣು ಗುಡ್ಡೆಗಳ ಬೆಳಕು ಆರಿರುತ್ತದೆ. ಇರುವೆಗಳ ದೊಡ್ಡ ಸಾಲೊಂದು ಆತನ ಬಾಯಿಯೊಳಕ್ಕೆ ಹೊಗುತ್ತಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...