Homeನ್ಯಾಯ ಪಥನೇರಳೆ ಹಣ್ಣಿನ ಮರವೂ, ನರೇಂದ್ರ ಮೋದಿಯವರೂ?...ಡಿ.ಉಮಾಪತಿ

ನೇರಳೆ ಹಣ್ಣಿನ ಮರವೂ, ನರೇಂದ್ರ ಮೋದಿಯವರೂ?…ಡಿ.ಉಮಾಪತಿ

- Advertisement -
- Advertisement -

1960ರಲ್ಲಿ ಪ್ರಸಿದ್ಧ ಕತೆಗಾರ ಕೃಷ್ಣಚಂದರ್ ಅವರು ಬರೆದ ಹಿಂದೀ ಕತೆಯೊಂದರಲ್ಲಿ ಇಂದಿನ ಸರ್ಕಾರದ ಟೀಕೆ ಇದೆ ಎಂದು ಆಕ್ಷೇಪಿಸಿ ಆ ಕತೆಯನ್ನು ಮೊನ್ನೆ ಮೊನ್ನೆ ಹತ್ತನೆಯ ತರಗತಿಯ ಪಠ್ಯಕ್ರಮದಿಂದ ತೆಗೆದು ಹಾಕಲಾಗಿದೆ.

ಪ್ರಸಿದ್ಧ ಹಿಂದೀ ಲೇಖಕ ಕೃಷ್ಣ ಚಂದರ್ ಅವರ ‘ಜಾಮೂನ್ ಕಾ ಪೇಡ್’ (ನೇರಳೆ ಮರ) ಎಂಬ ವಿಡಂಬನಾತ್ಮಕ ಲಘು ಕತೆಯನ್ನು ಕೇಂದ್ರ ಸರ್ಕಾರ ಐಸಿಎಸ್‍ಇ ಹತ್ತನೆಯ ತರಗತಿ ಶಾಲಾ ಪಠ್ಯದಿಂದ ತೆಗೆದುಹಾಕಿದೆ. 2015ರಲ್ಲಿ ಈ ಕತೆ ಪಠ್ಯಕ್ರಮಕ್ಕೆ ಸೇರಿತ್ತು.

ಸರ್ಕಾರೀ ಸಚಿವಾಲಯದ ಮುಂದಿನ ಹಸಿರು ಅವರಣದ ನೇರಳೆ ಮರವೊಂದು ಬಿದ್ದು ಅದರ ಅಡಿಗೆ ಸಿಕ್ಕಿಹಾಕಿಕೊಂಡ ವ್ಯಕ್ತಿಯೊಬ್ಬನ ಕತೆಯಿದು. ಮುಂಜಾನೆ ಮಾಲಿಯ ಗಮನಕ್ಕೆ ಬರುವ ಈ ಸಂಗತಿ ಸರ್ಕಾರಿ ಕರ್ಮಚಾರಿಗಳು ಮತ್ತು ಅಧಿಕಾರಿಗಳಿಗೆ ತಿಳಿಯುತ್ತದೆ. ಆದರೆ ಅವರೆಲ್ಲ ಈ ವ್ಯಕ್ತಿಯನ್ನು ಹಿಡಿದೆತ್ತಿ ಪಾರು ಮಾಡುವುದಿಲ್ಲ. ಬದಲಾಗಿ ಹೊಣೆಯನ್ನು ಮತ್ತೊಬ್ಬರಿಗೆ ಹೊರಿಸಿ ತಾವು ಪಾರಾಗುವ ವ್ಯಂಗ್ಯವಿದು.

1914-1977ರ ಅವಧಿಯಲ್ಲಿ ಜೀವಿಸಿದ್ದ ಕೃಷ್ಣ ಚಂದರ್ ಅವರು ಈ ಕತೆಯನ್ನು ಬರೆದದ್ದು 1960ರಲ್ಲಿ. ಕೆಲ ಸರ್ಕಾರಿ ಅಧಿಕಾರಿಗಳು ಈ ಕತೆಯಲ್ಲಿ ಹಾಲಿ ಕೇಂದ್ರ ಸರ್ಕಾರದ ವಿರುದ್ಧ ಟೀಕೆಯನ್ನು ಕಂಡರಂತೆ. ಹೀಗಾಗಿ ಕತೆಗೆ ಅರ್ಧಚಂದ್ರ ಪ್ರಯೋಗ ಆಗಿದೆ. 2020 ಮತ್ತು 2021ರ ಐ.ಸಿ.ಎಸ್.ಇ. ಪರೀಕ್ಷೆಗಳಲ್ಲಿ ಈ ಕತೆಯ ಕುರಿತು ಯಾವುದೇ ಪ್ರಶ್ನೆಗಳನ್ನು ಕೇಳಲಾಗುವುದಿಲ್ಲ ಎಂದು ನೋಟಿಸೊಂದರಲ್ಲಿ ತಿಳಿಯಪಡಿಸಲಾಗಿದೆ.
ಹತ್ತನೆಯ ತರಗತಿಯ ಶಾಲಾ ಮಕ್ಕಳು ಓದುವಂತಹ ಕತೆಯಲ್ಲ ಇದು ಎಂಬ ವಿವರಣೆಯನ್ನು ನೀಡಿರುವ ಐಸಿಎಸ್‍ಇ, ಯಾಕೆ ಏನು ಎಂಬ ಯಾವುದೇ ಸಮಜಾಯಿಷಿ ನೀಡಿಲ್ಲ.

ರಾತ್ರಿ ಬೀಸಿದ ಭಾರೀ ಬಿರುಗಾಳಿಯ ಕಾರಣ ಸಚಿವಾಲಯದ ಹುಲ್ಲುಹಾಸಿನ ನೇರಳೆ ಮರವೊಂದು ನೆಲಕ್ಕುರುಳುತ್ತದೆ. ಪ್ರಸಿದ್ಧ ಕವಿಯೊಬ್ಬನು ಅದರ ಕೆಳಗೆ ಸಿಕ್ಕಿ ಹಾಕಿಕೊಳ್ಳುತ್ತಾನೆ. ಮುಂಜಾನೆ ಈ ಸಂಗತಿಯನ್ನು ಗಮನಿಸುವ ಮಾಲಿ ಧಾವಿಸಿ ಹೋಗಿ ಚಪರಾಸಿಗೆ ತಿಳಿಸುತ್ತಾನೆ. ಚಪರಾಸಿ ಗುಮಾಸ್ತನ ಬಳಿ ತೆರಳುತ್ತಾನೆ. ಗುಮಾಸ್ತ ಸೂಪರಿಂಟಿಂಡೆಂಟ್ ಬಳಿಗೆ ಧಾವಿಸುತ್ತಾನೆ. ತುಸು ಹೊತ್ತಿನ ನಂತರ ಮರದ ಕೆಳಗೆ ಸಿಕ್ಕಿಹಾಕಿಕೊಂಡ ವ್ಯಕ್ತಿಯ ಸುತ್ತಮುತ್ತ ಗುಂಪು ಜಮಾಯಿಸುತ್ತದೆ. ಮರ ಬಿಡುತ್ತಿದ್ದ ರಸಭರಿತ ನೇರಳೆ ಹಣ್ಣಿನ ಚರ್ಚೆ ನಡೆಯುತ್ತದೆ. ಇನ್ನಷ್ಟು ಮಾಲಿಗಳು, ಚಪರಾಸಿಗಳು ಹಾಗೂ ಗುಮಾಸ್ತರೆಲ್ಲ ಕೈ ಹಾಕಿದರೆ ಮರದಡಿಯ ವ್ಯಕ್ತಿಯನ್ನು ಹೊರಗೆಳೆಯಬಹುದು ಎನ್ನುತ್ತಾನೆ ಮಾಲಿ. ಮಾಲಿ ಹೇಳುವುದು ಸರಿಯೆಂದು ಬಹಳಷ್ಟು ಮಂದಿ ಮರವನ್ನು ಸರಿಸಲು ಮುಂದಾಗುತ್ತಾರೆ. ನಿಲ್ಲಿ, ನಾನು ಅಂಡರ್ ಸೆಕ್ರೆಟರಿ ಅವರನ್ನು ಕೇಳಬೇಕು ಎನ್ನುತ್ತಾನೆ ಸೂಪರಿಂಟಿಂಡೆಂಟ್. ಅಂಡರ್ ಸೆಕ್ರೆಟರಿಯು ಡೆಪ್ಯೂಟಿ ಸೆಕ್ರೆಟರಿ ಬಳಿ ಹೋಗುತ್ತಾನೆ. ಡೆಪ್ಯೂಟಿ ಸೆಕ್ರೆಟರಿ ಜಾಯಿಂಟ್ ಸೆಕ್ರೆಟರಿ ಮುಂದೆ ಹಾಜರಾಗುತ್ತಾನೆ. ಜಾಯಿಂಟ್ ಸೆಕ್ರೆಟರಿಯು ಚೀಫ್ ಸೆಕ್ರೆಟರಿ ಬಳಿಗೆ ತೆರಳುತ್ತಾನೆ. ಚೀಫ್ ಸೆಕ್ರೆಟರಿಯು ಜಾಯಿಂಟ್ ಸೆಕ್ರೆಟರಿಗೆ ಏನೋ ಹೇಳುತ್ತಾನೆ. ಜಾಯಿಂಟ್ ಸೆಕ್ರೆಟರಿ ಡೆಪ್ಯೂಟಿ ಸೆಕ್ರೆಟರಿಗೆ, ಡೆಪ್ಯೂಟಿಯು ಅಂಡರ್ ಸೆಕ್ರೆಟರಿಗೆ ಅದನ್ನು ಹೇಳುತ್ತಾನೆ. ಕಡತ ಕಾಲ್ಚೆಂಡಾಗುತ್ತದೆ. ಅರ್ಧ ದಿನ ಕಳೆದೇ ಹೋಗಿರುತ್ತದೆ. ಊಟದ ವಿರಾಮ. ಮರದ ಬಳಿ ಸೇರಿದ ಗುಂಪು ಪುನಃ ವ್ಯಕ್ತಿಯನ್ನು ಪಾರು ಮಾಡಲು ತಾನೇ ಮುಂದಾಗುತ್ತದೆ. ಅಷ್ಟರಲ್ಲಿ ಸೂಪರಿಂಟಿಂಡೆಂಟ್ ಕಡತ ಹಿಡಿದು ಓಡಿಬರುತ್ತಾನೆ. ಈ ಮರವನ್ನು ನಾವಾಗಿಯೇ ಸರಿಸುವಂತಿಲ್ಲ. ನಾವು ವಾಣಿಜ್ಯ ಇಲಾಖೆಯವರು. ಮರ ಕೃಷಿ ಇಲಾಖೆಯಡಿ ಬರುತ್ತದೆ. ಕಡತದ ಮೇಲೆ ತುರ್ತು ಎಂದು ಬರೆದು ಕೃಷಿ ಇಲಾಖೆಗೆ ಕಳಿಸುತ್ತೇನೆ. ಅಲ್ಲಿಂದ ಜವಾಬು ಬರುತ್ತಲೇ ಮರವನ್ನು ಸರಿಸೋಣ ಎಂದು ಜನರನ್ನು ತಡೆಯುತ್ತಾನೆ. ಮರವನ್ನು ಸರಿಸುವ ಜವಾಬ್ದಾರಿ ನಿಮ್ಮದೇ ಎಂದು ವಾಣಿಜ್ಯ ಮತ್ತು ಕೃಷಿ ಇಲಾಖೆ ಪರಸ್ಪರ ದೂಷಿಸುತ್ತವೆ.

ಮರುದಿನವೂ ಕಡತ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ, ಒಬ್ಬ ಅಧಿಕಾರಿಯಿಂದ ಮತ್ತೊಬ್ಬ ಅಧಿಕಾರಿಗೆ ಸುತ್ತಾಡುತ್ತಲೇ ಇರುತ್ತದೆ. ಹಣ್ಣು ಬಿಡುವ ಮರವಾದ ಕಾರಣ ತೋಟಗಾರಿಕೆ ಇಲಾಖೆಗೆ ಹೊತ್ತು ಹಾಕುವ ಹೊತ್ತಿಗೆ ಸಂಜೆಯಾಗಿರುತ್ತದೆ. ಜನ ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡು ಮರವನ್ನು ಕತ್ತರಿಸುವ ಪರಿಸ್ಥಿತಿಯನ್ನು ತಡೆಯಲು ಸುತ್ತ ಪೆÇಲೀಸ್ ಕಾವಲು ಹಾಕಲಾಗಿರುತ್ತದೆ. ಮರದಡಿ ಸಿಕ್ಕಿ ಹಾಕಿಕೊಂಡ ವ್ಯಕ್ತಿಯ ಕುರಿತು ದಯೆ ತೋರುವ ಪೆÇಲೀಸ್ ಪೇದೆಯೊಬ್ಬ, ಆತನಿಗೆ ಉಣ್ಣಿಸಲು ಮಾಲಿಗೆ ಅನುಮತಿ ನೀಡುತ್ತಾನೆ. ನಿಮ್ಮ ಕಡತ ಸಂಚರಿಸುತ್ತಿದೆ. ನಾಳೆ ತೀರ್ಮಾನ ಆಗುವ ವಿಶ್ವಾಸ ಇದೆ ಎಂದು ಮಾಲಿ ಮರದಡಿಯ ವ್ಯಕ್ತಿಗೆ ತಿಳಿಸುತ್ತಾನೆ. ಮೂರನೆಯ ದಿನ ತೋಟಗಾರಿಕೆ ಇಲಾಖೆಯಿಂದ ಕಡತ ವಾಪಸು ಬರುತ್ತದೆ. ಫಲ ಬಿಡುವ ಮರವನ್ನು ಕಡಿಯಲಾಗದು ಎಂದಿರುತ್ತದೆ.

ಆದರೆ ವ್ಯಕ್ತಿಯನ್ನು ಪಾರು ಮಾಡಲು ಯಾರೂ ಮುಂದಾಗುವುದಿಲ್ಲ. ಅತ್ತ ಇತ್ತ ಜಗ್ಗಾಡುವ ಈ ಸಂಗತಿ ನಾಲ್ಕು ದಿನಗಳ ನಂತರ ಮುಖ್ಯಕಾರ್ಯದರ್ಶಿಯವರ ಮೇಜನ್ನು ತಲುಪುತ್ತದೆ. ಆ ನಂತರವೂ ಜವಾಬ್ದಾರಿಯನ್ನು ಒಂದು ಸರ್ಕಾರಿ ಇಲಾಖೆಯು ಮತ್ತೊಂದು ಸರ್ಕಾರಿ ಇಲಾಖೆಗೆ ದಾಟಿಸಿ ಕೈ ತೊಳೆದುಕೊಳ್ಳುವ ಪ್ರಯತ್ನಗಳು ನಡೆದಿರುತ್ತವೆ. ಕೃಷಿವನ ಇಲಾಖೆಯಿಂದ ಸಂಸ್ಕೃತಿ ಇಲಾಖೆಗೆ ತಲುಪುತ್ತದೆ. ಮರದ ಕೆಳಗೆ ಸಿಕ್ಕಿಹಾಕಿಕೊಂಡಿರುವ ವ್ಯಕ್ತಿ ಒಬ್ಬ ಪ್ರಸಿದ್ಧ ಕವಿಯಾಗಿದ್ದ ಕಾರಣ ವಿಷಯ ಸಂಸ್ಕೃತಿ ಇಲಾಖೆಗೆ ರವಾನೆಯಾಗಿರುತ್ತದೆ.

ಸಂಸ್ಕೃತಿ ಇಲಾಖೆಯ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡುತ್ತಾನೆ. ಮರದ ಕೆಳಗೆ ಸಿಕ್ಕಿ ಹಾಕಿಕೊಂಡಿರುವ ಪ್ರಸಿದ್ಧ ಕವಿಗೆ ಪ್ರಶಸ್ತಿ ಗಳಿಸಿಕೊಟ್ಟಿದ್ದ ಪುಸ್ತಕವನ್ನು ಹೊಗಳುತ್ತಾನೆ. ಮತ್ತು ಕವಿಯನ್ನು ಪಾರು ಮಾಡುವುದು ತನ್ನ ಕೆಲಸ ಅಲ್ಲವೆಂದು ಖುದ್ದು ಕವಿಗೇ ಹೇಳುತ್ತಾನೆ. ಆ ನಂತರ ಕವಿ ಮರದ ಕೆಳಗೆ ಸಿಕ್ಕಿಹಾಕಿಕೊಂಡಿರುವ ಕಡತ ಆರೋಗ್ಯ ಇಲಾಖೆಯನ್ನು ತಲುಪುತ್ತದೆ. ಈ ಇಲಾಖೆ ಕಡತವನ್ನು ವಿದೇಶ ಮಂತ್ರಾಲಯಕ್ಕೆ ಸಾಗ ಹಾಕುತ್ತದೆ. ಈ ನೇರಳೆ ಮರವನ್ನು ನೆರೆಯ ದೇಶದ ಪ್ರಧಾನಮಂತ್ರಿ ಇಲ್ಲಿಗೆ ಬಂದಾಗ ನೆಟ್ಟಿದ್ದೇ ಅದಕ್ಕೆ ಕಾರಣ.

ಈ ಮರವನ್ನು ಕತ್ತರಿಸಲು ವಿದೇಶೀ ಮಂತ್ರಾಲಯ ಒಪ್ಪುವುದಿಲ್ಲ. ನೆರೆಯ ದೇಶದ ಪ್ರಧಾನಿ ನೆಟ್ಟಿದ್ದ ಈ ಮರವನ್ನು ಕಡಿದರೆ ಉಭಯ ದೇಶಗಳ ನಡುವಣ ಸೌಹಾರ್ದ ಸಂಬಂಧ ಕೆಟ್ಟು ಹೋಗಬಹುದು ಎನ್ನುತ್ತದೆ. ಕಡೆಗೆ ಈ ವಿಷಯ ಪ್ರಧಾನಮಂತ್ರಿಯವರ ಸನ್ನಿಧಾನಕ್ಕೆ ಬರುತ್ತದೆ. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮರವನ್ನು ಕತ್ತರಿಸಲು ಒಪ್ಪಿಗೆ ನೀಡುತ್ತಾರೆ. ಈ ಆದೇಶದ ಕಡತವನ್ನು ಖುದ್ದು ಸೂಪರಿಂಟಿಂಡೆಂಟ್ ನೇರಳೆ ಮರದಡಿ ಸಿಕ್ಕಿ ಹಾಕಿಕೊಂಡಿದ್ದ ಕವಿಯ ಬಳಿಗೆ ಬರುತ್ತಾನೆ. ನೋಡಪ್ಪಾ, ಪ್ರಧಾನಿ ಎಲ್ಲ ಅಂತಾರಾಷ್ಟ್ರೀಯ ಜವಾಬ್ದಾರಿಯನ್ನು ತಾವೇ ವಹಿಸಿಕೊಂಡು ಮರ ಕತ್ತರಿಸಲು ಅನುಮತಿ ಕೊಟ್ಟಿದ್ದಾರೆ, ನಾಳೆ ಈ ಮರವನ್ನು ಕತ್ತರಿಸಿ ನಿನ್ನನ್ನು ಬಚಾವು ಮಾಡಲಾಗುವುದು ಎಂದು ಕೂಗಿ ಹೇಳುತ್ತಾನೆ. ಬಳಿ ಬಂದು ಅವನ ಭುಜ ಅಲುಗಿಸಿ ಮತ್ತೆ ಹೇಳುತ್ತಾನೆ. ಆದರೆ ಕವಿಯ ಕೈ ತಣ್ಣಗಾಗಿರುತ್ತದೆ. ಕಣ್ಣು ಗುಡ್ಡೆಗಳ ಬೆಳಕು ಆರಿರುತ್ತದೆ. ಇರುವೆಗಳ ದೊಡ್ಡ ಸಾಲೊಂದು ಆತನ ಬಾಯಿಯೊಳಕ್ಕೆ ಹೊಗುತ್ತಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...