Homeನ್ಯಾಯ ಪಥನೇರಳೆ ಹಣ್ಣಿನ ಮರವೂ, ನರೇಂದ್ರ ಮೋದಿಯವರೂ?...ಡಿ.ಉಮಾಪತಿ

ನೇರಳೆ ಹಣ್ಣಿನ ಮರವೂ, ನರೇಂದ್ರ ಮೋದಿಯವರೂ?…ಡಿ.ಉಮಾಪತಿ

- Advertisement -
- Advertisement -

1960ರಲ್ಲಿ ಪ್ರಸಿದ್ಧ ಕತೆಗಾರ ಕೃಷ್ಣಚಂದರ್ ಅವರು ಬರೆದ ಹಿಂದೀ ಕತೆಯೊಂದರಲ್ಲಿ ಇಂದಿನ ಸರ್ಕಾರದ ಟೀಕೆ ಇದೆ ಎಂದು ಆಕ್ಷೇಪಿಸಿ ಆ ಕತೆಯನ್ನು ಮೊನ್ನೆ ಮೊನ್ನೆ ಹತ್ತನೆಯ ತರಗತಿಯ ಪಠ್ಯಕ್ರಮದಿಂದ ತೆಗೆದು ಹಾಕಲಾಗಿದೆ.

ಪ್ರಸಿದ್ಧ ಹಿಂದೀ ಲೇಖಕ ಕೃಷ್ಣ ಚಂದರ್ ಅವರ ‘ಜಾಮೂನ್ ಕಾ ಪೇಡ್’ (ನೇರಳೆ ಮರ) ಎಂಬ ವಿಡಂಬನಾತ್ಮಕ ಲಘು ಕತೆಯನ್ನು ಕೇಂದ್ರ ಸರ್ಕಾರ ಐಸಿಎಸ್‍ಇ ಹತ್ತನೆಯ ತರಗತಿ ಶಾಲಾ ಪಠ್ಯದಿಂದ ತೆಗೆದುಹಾಕಿದೆ. 2015ರಲ್ಲಿ ಈ ಕತೆ ಪಠ್ಯಕ್ರಮಕ್ಕೆ ಸೇರಿತ್ತು.

ಸರ್ಕಾರೀ ಸಚಿವಾಲಯದ ಮುಂದಿನ ಹಸಿರು ಅವರಣದ ನೇರಳೆ ಮರವೊಂದು ಬಿದ್ದು ಅದರ ಅಡಿಗೆ ಸಿಕ್ಕಿಹಾಕಿಕೊಂಡ ವ್ಯಕ್ತಿಯೊಬ್ಬನ ಕತೆಯಿದು. ಮುಂಜಾನೆ ಮಾಲಿಯ ಗಮನಕ್ಕೆ ಬರುವ ಈ ಸಂಗತಿ ಸರ್ಕಾರಿ ಕರ್ಮಚಾರಿಗಳು ಮತ್ತು ಅಧಿಕಾರಿಗಳಿಗೆ ತಿಳಿಯುತ್ತದೆ. ಆದರೆ ಅವರೆಲ್ಲ ಈ ವ್ಯಕ್ತಿಯನ್ನು ಹಿಡಿದೆತ್ತಿ ಪಾರು ಮಾಡುವುದಿಲ್ಲ. ಬದಲಾಗಿ ಹೊಣೆಯನ್ನು ಮತ್ತೊಬ್ಬರಿಗೆ ಹೊರಿಸಿ ತಾವು ಪಾರಾಗುವ ವ್ಯಂಗ್ಯವಿದು.

1914-1977ರ ಅವಧಿಯಲ್ಲಿ ಜೀವಿಸಿದ್ದ ಕೃಷ್ಣ ಚಂದರ್ ಅವರು ಈ ಕತೆಯನ್ನು ಬರೆದದ್ದು 1960ರಲ್ಲಿ. ಕೆಲ ಸರ್ಕಾರಿ ಅಧಿಕಾರಿಗಳು ಈ ಕತೆಯಲ್ಲಿ ಹಾಲಿ ಕೇಂದ್ರ ಸರ್ಕಾರದ ವಿರುದ್ಧ ಟೀಕೆಯನ್ನು ಕಂಡರಂತೆ. ಹೀಗಾಗಿ ಕತೆಗೆ ಅರ್ಧಚಂದ್ರ ಪ್ರಯೋಗ ಆಗಿದೆ. 2020 ಮತ್ತು 2021ರ ಐ.ಸಿ.ಎಸ್.ಇ. ಪರೀಕ್ಷೆಗಳಲ್ಲಿ ಈ ಕತೆಯ ಕುರಿತು ಯಾವುದೇ ಪ್ರಶ್ನೆಗಳನ್ನು ಕೇಳಲಾಗುವುದಿಲ್ಲ ಎಂದು ನೋಟಿಸೊಂದರಲ್ಲಿ ತಿಳಿಯಪಡಿಸಲಾಗಿದೆ.
ಹತ್ತನೆಯ ತರಗತಿಯ ಶಾಲಾ ಮಕ್ಕಳು ಓದುವಂತಹ ಕತೆಯಲ್ಲ ಇದು ಎಂಬ ವಿವರಣೆಯನ್ನು ನೀಡಿರುವ ಐಸಿಎಸ್‍ಇ, ಯಾಕೆ ಏನು ಎಂಬ ಯಾವುದೇ ಸಮಜಾಯಿಷಿ ನೀಡಿಲ್ಲ.

ರಾತ್ರಿ ಬೀಸಿದ ಭಾರೀ ಬಿರುಗಾಳಿಯ ಕಾರಣ ಸಚಿವಾಲಯದ ಹುಲ್ಲುಹಾಸಿನ ನೇರಳೆ ಮರವೊಂದು ನೆಲಕ್ಕುರುಳುತ್ತದೆ. ಪ್ರಸಿದ್ಧ ಕವಿಯೊಬ್ಬನು ಅದರ ಕೆಳಗೆ ಸಿಕ್ಕಿ ಹಾಕಿಕೊಳ್ಳುತ್ತಾನೆ. ಮುಂಜಾನೆ ಈ ಸಂಗತಿಯನ್ನು ಗಮನಿಸುವ ಮಾಲಿ ಧಾವಿಸಿ ಹೋಗಿ ಚಪರಾಸಿಗೆ ತಿಳಿಸುತ್ತಾನೆ. ಚಪರಾಸಿ ಗುಮಾಸ್ತನ ಬಳಿ ತೆರಳುತ್ತಾನೆ. ಗುಮಾಸ್ತ ಸೂಪರಿಂಟಿಂಡೆಂಟ್ ಬಳಿಗೆ ಧಾವಿಸುತ್ತಾನೆ. ತುಸು ಹೊತ್ತಿನ ನಂತರ ಮರದ ಕೆಳಗೆ ಸಿಕ್ಕಿಹಾಕಿಕೊಂಡ ವ್ಯಕ್ತಿಯ ಸುತ್ತಮುತ್ತ ಗುಂಪು ಜಮಾಯಿಸುತ್ತದೆ. ಮರ ಬಿಡುತ್ತಿದ್ದ ರಸಭರಿತ ನೇರಳೆ ಹಣ್ಣಿನ ಚರ್ಚೆ ನಡೆಯುತ್ತದೆ. ಇನ್ನಷ್ಟು ಮಾಲಿಗಳು, ಚಪರಾಸಿಗಳು ಹಾಗೂ ಗುಮಾಸ್ತರೆಲ್ಲ ಕೈ ಹಾಕಿದರೆ ಮರದಡಿಯ ವ್ಯಕ್ತಿಯನ್ನು ಹೊರಗೆಳೆಯಬಹುದು ಎನ್ನುತ್ತಾನೆ ಮಾಲಿ. ಮಾಲಿ ಹೇಳುವುದು ಸರಿಯೆಂದು ಬಹಳಷ್ಟು ಮಂದಿ ಮರವನ್ನು ಸರಿಸಲು ಮುಂದಾಗುತ್ತಾರೆ. ನಿಲ್ಲಿ, ನಾನು ಅಂಡರ್ ಸೆಕ್ರೆಟರಿ ಅವರನ್ನು ಕೇಳಬೇಕು ಎನ್ನುತ್ತಾನೆ ಸೂಪರಿಂಟಿಂಡೆಂಟ್. ಅಂಡರ್ ಸೆಕ್ರೆಟರಿಯು ಡೆಪ್ಯೂಟಿ ಸೆಕ್ರೆಟರಿ ಬಳಿ ಹೋಗುತ್ತಾನೆ. ಡೆಪ್ಯೂಟಿ ಸೆಕ್ರೆಟರಿ ಜಾಯಿಂಟ್ ಸೆಕ್ರೆಟರಿ ಮುಂದೆ ಹಾಜರಾಗುತ್ತಾನೆ. ಜಾಯಿಂಟ್ ಸೆಕ್ರೆಟರಿಯು ಚೀಫ್ ಸೆಕ್ರೆಟರಿ ಬಳಿಗೆ ತೆರಳುತ್ತಾನೆ. ಚೀಫ್ ಸೆಕ್ರೆಟರಿಯು ಜಾಯಿಂಟ್ ಸೆಕ್ರೆಟರಿಗೆ ಏನೋ ಹೇಳುತ್ತಾನೆ. ಜಾಯಿಂಟ್ ಸೆಕ್ರೆಟರಿ ಡೆಪ್ಯೂಟಿ ಸೆಕ್ರೆಟರಿಗೆ, ಡೆಪ್ಯೂಟಿಯು ಅಂಡರ್ ಸೆಕ್ರೆಟರಿಗೆ ಅದನ್ನು ಹೇಳುತ್ತಾನೆ. ಕಡತ ಕಾಲ್ಚೆಂಡಾಗುತ್ತದೆ. ಅರ್ಧ ದಿನ ಕಳೆದೇ ಹೋಗಿರುತ್ತದೆ. ಊಟದ ವಿರಾಮ. ಮರದ ಬಳಿ ಸೇರಿದ ಗುಂಪು ಪುನಃ ವ್ಯಕ್ತಿಯನ್ನು ಪಾರು ಮಾಡಲು ತಾನೇ ಮುಂದಾಗುತ್ತದೆ. ಅಷ್ಟರಲ್ಲಿ ಸೂಪರಿಂಟಿಂಡೆಂಟ್ ಕಡತ ಹಿಡಿದು ಓಡಿಬರುತ್ತಾನೆ. ಈ ಮರವನ್ನು ನಾವಾಗಿಯೇ ಸರಿಸುವಂತಿಲ್ಲ. ನಾವು ವಾಣಿಜ್ಯ ಇಲಾಖೆಯವರು. ಮರ ಕೃಷಿ ಇಲಾಖೆಯಡಿ ಬರುತ್ತದೆ. ಕಡತದ ಮೇಲೆ ತುರ್ತು ಎಂದು ಬರೆದು ಕೃಷಿ ಇಲಾಖೆಗೆ ಕಳಿಸುತ್ತೇನೆ. ಅಲ್ಲಿಂದ ಜವಾಬು ಬರುತ್ತಲೇ ಮರವನ್ನು ಸರಿಸೋಣ ಎಂದು ಜನರನ್ನು ತಡೆಯುತ್ತಾನೆ. ಮರವನ್ನು ಸರಿಸುವ ಜವಾಬ್ದಾರಿ ನಿಮ್ಮದೇ ಎಂದು ವಾಣಿಜ್ಯ ಮತ್ತು ಕೃಷಿ ಇಲಾಖೆ ಪರಸ್ಪರ ದೂಷಿಸುತ್ತವೆ.

ಮರುದಿನವೂ ಕಡತ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ, ಒಬ್ಬ ಅಧಿಕಾರಿಯಿಂದ ಮತ್ತೊಬ್ಬ ಅಧಿಕಾರಿಗೆ ಸುತ್ತಾಡುತ್ತಲೇ ಇರುತ್ತದೆ. ಹಣ್ಣು ಬಿಡುವ ಮರವಾದ ಕಾರಣ ತೋಟಗಾರಿಕೆ ಇಲಾಖೆಗೆ ಹೊತ್ತು ಹಾಕುವ ಹೊತ್ತಿಗೆ ಸಂಜೆಯಾಗಿರುತ್ತದೆ. ಜನ ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡು ಮರವನ್ನು ಕತ್ತರಿಸುವ ಪರಿಸ್ಥಿತಿಯನ್ನು ತಡೆಯಲು ಸುತ್ತ ಪೆÇಲೀಸ್ ಕಾವಲು ಹಾಕಲಾಗಿರುತ್ತದೆ. ಮರದಡಿ ಸಿಕ್ಕಿ ಹಾಕಿಕೊಂಡ ವ್ಯಕ್ತಿಯ ಕುರಿತು ದಯೆ ತೋರುವ ಪೆÇಲೀಸ್ ಪೇದೆಯೊಬ್ಬ, ಆತನಿಗೆ ಉಣ್ಣಿಸಲು ಮಾಲಿಗೆ ಅನುಮತಿ ನೀಡುತ್ತಾನೆ. ನಿಮ್ಮ ಕಡತ ಸಂಚರಿಸುತ್ತಿದೆ. ನಾಳೆ ತೀರ್ಮಾನ ಆಗುವ ವಿಶ್ವಾಸ ಇದೆ ಎಂದು ಮಾಲಿ ಮರದಡಿಯ ವ್ಯಕ್ತಿಗೆ ತಿಳಿಸುತ್ತಾನೆ. ಮೂರನೆಯ ದಿನ ತೋಟಗಾರಿಕೆ ಇಲಾಖೆಯಿಂದ ಕಡತ ವಾಪಸು ಬರುತ್ತದೆ. ಫಲ ಬಿಡುವ ಮರವನ್ನು ಕಡಿಯಲಾಗದು ಎಂದಿರುತ್ತದೆ.

ಆದರೆ ವ್ಯಕ್ತಿಯನ್ನು ಪಾರು ಮಾಡಲು ಯಾರೂ ಮುಂದಾಗುವುದಿಲ್ಲ. ಅತ್ತ ಇತ್ತ ಜಗ್ಗಾಡುವ ಈ ಸಂಗತಿ ನಾಲ್ಕು ದಿನಗಳ ನಂತರ ಮುಖ್ಯಕಾರ್ಯದರ್ಶಿಯವರ ಮೇಜನ್ನು ತಲುಪುತ್ತದೆ. ಆ ನಂತರವೂ ಜವಾಬ್ದಾರಿಯನ್ನು ಒಂದು ಸರ್ಕಾರಿ ಇಲಾಖೆಯು ಮತ್ತೊಂದು ಸರ್ಕಾರಿ ಇಲಾಖೆಗೆ ದಾಟಿಸಿ ಕೈ ತೊಳೆದುಕೊಳ್ಳುವ ಪ್ರಯತ್ನಗಳು ನಡೆದಿರುತ್ತವೆ. ಕೃಷಿವನ ಇಲಾಖೆಯಿಂದ ಸಂಸ್ಕೃತಿ ಇಲಾಖೆಗೆ ತಲುಪುತ್ತದೆ. ಮರದ ಕೆಳಗೆ ಸಿಕ್ಕಿಹಾಕಿಕೊಂಡಿರುವ ವ್ಯಕ್ತಿ ಒಬ್ಬ ಪ್ರಸಿದ್ಧ ಕವಿಯಾಗಿದ್ದ ಕಾರಣ ವಿಷಯ ಸಂಸ್ಕೃತಿ ಇಲಾಖೆಗೆ ರವಾನೆಯಾಗಿರುತ್ತದೆ.

ಸಂಸ್ಕೃತಿ ಇಲಾಖೆಯ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡುತ್ತಾನೆ. ಮರದ ಕೆಳಗೆ ಸಿಕ್ಕಿ ಹಾಕಿಕೊಂಡಿರುವ ಪ್ರಸಿದ್ಧ ಕವಿಗೆ ಪ್ರಶಸ್ತಿ ಗಳಿಸಿಕೊಟ್ಟಿದ್ದ ಪುಸ್ತಕವನ್ನು ಹೊಗಳುತ್ತಾನೆ. ಮತ್ತು ಕವಿಯನ್ನು ಪಾರು ಮಾಡುವುದು ತನ್ನ ಕೆಲಸ ಅಲ್ಲವೆಂದು ಖುದ್ದು ಕವಿಗೇ ಹೇಳುತ್ತಾನೆ. ಆ ನಂತರ ಕವಿ ಮರದ ಕೆಳಗೆ ಸಿಕ್ಕಿಹಾಕಿಕೊಂಡಿರುವ ಕಡತ ಆರೋಗ್ಯ ಇಲಾಖೆಯನ್ನು ತಲುಪುತ್ತದೆ. ಈ ಇಲಾಖೆ ಕಡತವನ್ನು ವಿದೇಶ ಮಂತ್ರಾಲಯಕ್ಕೆ ಸಾಗ ಹಾಕುತ್ತದೆ. ಈ ನೇರಳೆ ಮರವನ್ನು ನೆರೆಯ ದೇಶದ ಪ್ರಧಾನಮಂತ್ರಿ ಇಲ್ಲಿಗೆ ಬಂದಾಗ ನೆಟ್ಟಿದ್ದೇ ಅದಕ್ಕೆ ಕಾರಣ.

ಈ ಮರವನ್ನು ಕತ್ತರಿಸಲು ವಿದೇಶೀ ಮಂತ್ರಾಲಯ ಒಪ್ಪುವುದಿಲ್ಲ. ನೆರೆಯ ದೇಶದ ಪ್ರಧಾನಿ ನೆಟ್ಟಿದ್ದ ಈ ಮರವನ್ನು ಕಡಿದರೆ ಉಭಯ ದೇಶಗಳ ನಡುವಣ ಸೌಹಾರ್ದ ಸಂಬಂಧ ಕೆಟ್ಟು ಹೋಗಬಹುದು ಎನ್ನುತ್ತದೆ. ಕಡೆಗೆ ಈ ವಿಷಯ ಪ್ರಧಾನಮಂತ್ರಿಯವರ ಸನ್ನಿಧಾನಕ್ಕೆ ಬರುತ್ತದೆ. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮರವನ್ನು ಕತ್ತರಿಸಲು ಒಪ್ಪಿಗೆ ನೀಡುತ್ತಾರೆ. ಈ ಆದೇಶದ ಕಡತವನ್ನು ಖುದ್ದು ಸೂಪರಿಂಟಿಂಡೆಂಟ್ ನೇರಳೆ ಮರದಡಿ ಸಿಕ್ಕಿ ಹಾಕಿಕೊಂಡಿದ್ದ ಕವಿಯ ಬಳಿಗೆ ಬರುತ್ತಾನೆ. ನೋಡಪ್ಪಾ, ಪ್ರಧಾನಿ ಎಲ್ಲ ಅಂತಾರಾಷ್ಟ್ರೀಯ ಜವಾಬ್ದಾರಿಯನ್ನು ತಾವೇ ವಹಿಸಿಕೊಂಡು ಮರ ಕತ್ತರಿಸಲು ಅನುಮತಿ ಕೊಟ್ಟಿದ್ದಾರೆ, ನಾಳೆ ಈ ಮರವನ್ನು ಕತ್ತರಿಸಿ ನಿನ್ನನ್ನು ಬಚಾವು ಮಾಡಲಾಗುವುದು ಎಂದು ಕೂಗಿ ಹೇಳುತ್ತಾನೆ. ಬಳಿ ಬಂದು ಅವನ ಭುಜ ಅಲುಗಿಸಿ ಮತ್ತೆ ಹೇಳುತ್ತಾನೆ. ಆದರೆ ಕವಿಯ ಕೈ ತಣ್ಣಗಾಗಿರುತ್ತದೆ. ಕಣ್ಣು ಗುಡ್ಡೆಗಳ ಬೆಳಕು ಆರಿರುತ್ತದೆ. ಇರುವೆಗಳ ದೊಡ್ಡ ಸಾಲೊಂದು ಆತನ ಬಾಯಿಯೊಳಕ್ಕೆ ಹೊಗುತ್ತಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...