Homeಮುಖಪುಟನೋಟು ರದ್ದತಿ : ಬಿಜೆಪಿಯ `ಕ್ಯಾಶ್ ಲೆಸ್’ ಸುಳ್ಳೂ ಇದೀಗ ಬಯಲಾಯ್ತು

ನೋಟು ರದ್ದತಿ : ಬಿಜೆಪಿಯ `ಕ್ಯಾಶ್ ಲೆಸ್’ ಸುಳ್ಳೂ ಇದೀಗ ಬಯಲಾಯ್ತು

- Advertisement -
- Advertisement -

ನೋಟು ರದ್ದತಿ ಮಾಡಲು ಹೊರಟಾಗ ಅದರಿಂದ ಕಪ್ಪುಹಣ ಹಿಡಿಯುತ್ತೇವೆಂದು ಹೇಳಿದ್ದರು. 3 ರಿಂದ 4 ಲಕ್ಷ ಕೋಟಿ ಕಪ್ಪುಹಣ ಬ್ಯಾಂಕ್‌ಗಳಿಗೆ ವಾಪಸ್ ಬರಲ್ಲ, ಅದೇ ದೊಡ್ಡ ಸಾಧನೆಯೆಂದು. ಶೇ.99.99ರಷ್ಟು ಹಣ ವಾಪಸ್ ಬಂದಿತು. ಏನೂ ಪ್ರಯೋಜನವಾಗಲಿಲ್ಲ. ಬದಲಿಗೆ ಸರ್ಕಾರವು ಹೊಸ ನೋಟು ಮುದ್ರಿಸಲು ಸಾವಿರಾರು ಕೋಟಿ ರೂ. ವೆಚ್ಚ ಮಾಡಬೇಕಾಯಿತು.

ಖೋಟಾ ನೋಟು ಹಿಡಿಯುತ್ತೇವೆಂದು ಹೇಳಿದ್ದರು. ಅದಕ್ಕಾಗಿ ಇಂತಹ ದೊಡ್ಡ ಸರ್ಕಸ್ ಬೇಕಿಲ್ಲವೆಂದು ತಜ್ಞರು ಹೇಳಿದ್ದರು. ಕೆಲವೇ ದಿನಗಳಲ್ಲಿ ಹೊಸ 2000 ರೂ. ಖೋಟಾ ನೋಟೂ ಪತ್ತೆಯಾಯಿತು.

ಭಯೋತ್ಪಾದನೆ ತಡೆಯುತ್ತೇವೆಂದಿದ್ದರು. ಈ ದೇಶದ ದುರಂತವೆಂದರೆ, ಯಾವ ಪಕ್ಷವೂ ಭಯೋತ್ಪಾದನೆ ನಿರ್ಮೂಲನೆಗೆ ಬೇಕಾದ ಸಮಗ್ರ ಕ್ರಮ ತೆಗೆದುಕೊಳ್ಳುತ್ತಿಲ್ಲ. ನೋಟು ರದ್ದತಿಯ ನಂತರ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾದವೆಂದು ಅಂಕಿ-ಅಂಶ ಹೇಳುತ್ತಿವೆ.

ಇರಲಿ, ಅವೆಲ್ಲಾ ವಿವರಗಳಿಗೆ ಇಲ್ಲಿ ಹೋಗಲ್ಲ.

ನೋಟು ರದ್ದತಿಯಿಂದಾಗುವ ಅನುಕೂಲವೆಂದು ಕಡೆಯಲ್ಲಿ ಹೇಳಿದ ಸುಳ್ಳು ಯಾವುದು ಗೊತ್ತೇ? ಡಿಸೆಂಬರ್ ಹೊತ್ತಿಗೆ ಮಿಕ್ಕವೆಲ್ಲಾ ಸುಳ್ಳು ಎಂದು ಬಯಲಾದ ನಂತರ ಹೊಸೆದ ಹೊಸ ಕಾರಣ ಅದು. ನವೆಂಬರ್ 8ರಂದು ಪ್ರಸ್ತಾಪಿಸಿಯೇ ಇರದಿದ್ದ ಕ್ಯಾಷ್‌ಲೆಸ್/ನಗದು ರಹಿತ ವಹಿವಾಟು ಹೆಚ್ಚಿಸುವುದು. ಹಾಗಾಗಿ ಇನ್ನು ಮುಂದೆ ನೋಟುಗಳ ಚಲಾವಣೆ ಬಹಳ ಕಡಿಮೆ ಇರುತ್ತದೆಂದು ಬಿಜೆಪಿ ಮತ್ತದರ ಪ್ರಚಾರಕರು ಹೇಳುತ್ತಾ ಹೋದರು.

ಇದೀಗ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯಲ್ಲಿ ವಿವರವಾಗಿ ಬರೆದಿರುವಂತೆ, ವಾಸ್ತವದಲ್ಲಿ ನೋಟುಗಳ ಚಲಾವಣೆ ಹೆಚ್ಚಾಗಿದೆ. ಅಂದರೆ ಆರ್‌ಬಿಐ ನೋಟು ಮುದ್ರಣವನ್ನು ಹೆಚ್ಚಿಸಬೇಕಾಗಿ ಬಂದಿದೆ. 2016 ನವೆಂಬರ್ 4ರಂದು (ಅಂದರೆ ನೋಟು ರದ್ದತಿಗೆ ನಾಲ್ಕು ದಿನ ಮುಂಚೆ ಆರ್‌ಬಿಐ ಬಿಡುಗಡೆ ಮಾಡಿದಂತೆ) ದೇಶದಲ್ಲಿ 17.97 ಲಕ್ಷ ಕೋಟಿಗಳಷ್ಟು ನೋಟು ಚಲಾವಣೆ ಇತ್ತು. ಮಾರ್ಚ್ 15, 2015ರ ಹೊತ್ತಿಗೆ ಭಾರತದ ಆರ್ಥಿಕತೆಯಲ್ಲಿ 21.41 ಲಕ್ಷ ಕೋಟಿಗಳಷ್ಟು ನೋಟುಗಳ ಚಲಾವಣೆ ಆಗುತ್ತಿದೆ. ಇದು ಸ್ವತಃ ಆರ್‌ಬಿಐ ಬಿಡುಗಡೆ ಮಾಡಿದ ಅಂಕಿ-ಅಂಶ ಆಗಿದೆ. ಅಂದರೆ ಶೇ.19ರಷ್ಟು ಹೆಚ್ಚಳ!

ನೋಟು ರದ್ದತಿಯಾದ ತಕ್ಷಣ ಸುಳ್ಳು ಪ್ರಚಾರಕರು ಬ್ಲ್ಯಾಕ್ ಅಂಡ್ ವೈಟ್ ಕಾರ್ಯಕ್ರಮ ಮಾಡಲು ಹೊರಟಿದ್ದರು. ಅದು ಫೇಕ್ ಎಂದು ಸಾಬೀತಾದ ನಂತರ ಕ್ಯಾಷ್‌ಲೆಸ್ ದುನಿಯಾ ಅಂತಹ ಸುಳ್ಳು ಹರಡಲು ಹೊರಟರು. ಈಗ ಕ್ಯಾಷ್‌ಫುಲ್ ಆಗಿದೆ. ಸಾಮಾನ್ಯ ಜನರು ಮಾತ್ರ ಕ್ಯಾಷ್‌ಲೆಸ್ ಆಗಿದ್ದಾರೆ.

ನೋಟು ರದ್ದತಿಯಂತಹ ಒಂದು ಅಪಕ್ವವಾದ, ದುರುದ್ದೇಶಪೂರ್ವಕವಾದ ಕ್ರಮದಿಂದ ಆದ ನಷ್ಟ ಅಗಾಧವಾದದ್ದು. ಅದರಿಂದ ಒಂದೇ ಒಂದು ಲಾಭವೂ ಆಗಲಿಲ್ಲ; ಬದಲಿಗೆ ಜನರಲ್ಲಿ ಹುಟ್ಟಿಸಿದ ಹೆದರಿಕೆಯಿಂದ ಜನರು ಹೆಚ್ಚೆಚ್ಚು ಕ್ಯಾಷ್ ಇಟ್ಟುಕೊಳ್ಳಲು ಆರಂಭಿಸಿರುವುದಷ್ಟೇ ಇದಕ್ಕೆ ಕಾರಣವಲ್ಲ. ಕ್ಯಾಷ್‌ಲೆಸ್ ಮಾಡಲು ಬೇಕಾದ ನಿಧಾನಗತಿಯ ಪ್ರೋತ್ಸಾಹಕರ ಕ್ರಮಗಳ ಮೂಲಕ ಬದಲಾವಣೆ ತರದೇ, ಕೆಟ್ಟ ಆಪರೇಷನ್ ಮಾಡಿದರು. ಕ್ಯಾಷ್‌ಲೆಸ್ ಆಗಲು ಪ್ರೋತ್ಸಾಹ ಕೊಡುವ ಬದಲು, ಜನರು ಕ್ಯಾಷ್‌ಲೆಸ್ ವಹಿವಾಟು ಮಾಡಿದರೆ, ಕಮೀಷನ್ ಕಟ್ ಆಗಲು ಶುರುವಾಯಿತು.

ಹಾಗಾಗಿ ಸುಳ್ಳು ಪ್ರಚಾರಕರು ಭಾಷಣಗಳ ಮುಖಾಂತರ ಮತ್ತು ವಾಟ್ಸಾಪ್ ಫಾರ್ವರ್ಡ್‌ಗಳ ಮೂಲಕ ಜನರನ್ನು ದಿಕ್ಕುತಪ್ಪಿಸಲು ಹೊಸ ಹೊಸ ಸುಳ್ಳುಗಳನ್ನು ಹೆಣೆಯಯುತ್ತಾ ಸಾಗಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿಗೆ ನೋಡಿ:

https://indianexpress.com/article/business/economy/cash-in-circulation-jumps-19-1-from-pre-demonetisation-level-5637325/

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....