Homeಅಂಕಣಗಳುನ್ಯಾಯದ ಕೈಯಿಯೇ ಅನ್ಯಾಯವ ಎಸಗಿದಾಗ....

ನ್ಯಾಯದ ಕೈಯಿಯೇ ಅನ್ಯಾಯವ ಎಸಗಿದಾಗ….

- Advertisement -
- Advertisement -

ಜನಸಾಮಾನ್ಯರು ನ್ಯಾಯಕ್ಕಾಗಿ ನ್ಯಾಯಾಧೀಶರ ಮೊರೆ ಹೋಗುವುದು ಸಹಜ. ಆದರೆ ನ್ಯಾಯಾಧೀಶರೇ ಅಪರಾಧಿ ಸ್ಥಾನದಲ್ಲಿ ನಿಂತರೆ…? ಬಿಹಾರದ ಖಗಾರಿಯಾ ಜಿಲ್ಲಾ ಸತ್ರ ನ್ಯಾಯಾಧೀಶ ಸುಭಾಷ್ ಚಂದ್ರ ಚೌರಾಸಿಯಾ ಅಂಥದೊಂದು ಘನಕಾರ್ಯದಲ್ಲಿ ಸಿಕ್ಕಿಬಿದ್ದಿದ್ದಾರೆ. ಕಾನೂನು ಪದವೀಧರೆಯಾಗಿರುವ ತನ್ನ 24 ವರ್ಷದ ಮಗಳು ಯಶಸ್ವಿನಿಯನ್ನು ಗೃಹಬಂಧನದಲ್ಲಿರಿಸಿ, ಹಿಂಸಿಸುವ ಮೂಲಕ. ಆ ಮಗಳು ಮಾಡಿದ ಅಪರಾಧವಾದರೂ ಏನು? ತನ್ನ ಇಚ್ಚೆಗೆ ವಿರುದ್ಧವಾಗಿ ಪ್ರೀತಿಸಿದವÀನನ್ನು ಮದುವೆಯಾಗಲು ಹೊರಟಿದ್ದು. ಆಕೆ ಸ್ವತಃ ನ್ಯಾಯಾಧೀಶಳಾಗಲು ಬಯಸಿ ಸಂಬಂಧಿತ ಪರೀಕ್ಷೆ ಕೂಡ ಬರೆದಿದ್ದಳು. ಆಕೆ ಪ್ರೇಮಿಸಿದ್ದು ಸುಪ್ರಿಂ ಕೋರ್ಟಿನಲ್ಲಿ ಪ್ರಾಕ್ಟೀಸ್ ಮಾಡುತ್ತಿರುವ ಸಿದ್ಧಾರ್ಥ್ ಬನ್ಸಲ್ ಎಂಬ ದೆಹಲಿಯ ಯುವ ವಕೀಲನನ್ನು.
ಈ ಮಹಾನುಭಾವ ನ್ಯಾಯಾಧೀಶ ತನ್ನ ಮಗಳು ಐಎಎಸ್ ಅಧಿಕಾರಿ ಅಥವ ನ್ಯಾಯಾಧೀಶ ಹುದ್ದೆಯಲ್ಲಿರುವ ವ್ಯಕ್ತಿಯನ್ನಷ್ಟೇ ಮದುವೆಯಾಗಬೇಕೆಂದು ಹಟ ಹಿಡಿದು ಈ ಘನ ಕಾರ್ಯ ಮಾಡಿದ್ದಾರಂತೆ. ಈ ನ್ಯಾಯಾಧೀಶರ ಮನವೊಲಿಸಲು ಪ್ರಯತ್ನಿಸಿ ವಿಫಲನಾದ ಆ ಪ್ರಿಯಕರ ಬೇರೆ ವಿಧಿಯಿಲ್ಲದೆ ಪಟ್ನಾ ಉಚ್ಚ ನ್ಯಾಯಾಲಯದ ಮೊರೆ ಹೋದ. ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಯಶಸ್ವಿನಿಯನ್ನು ಕರೆತಂದು ತನ್ನ ಮುಂದೆ ನಿಲ್ಲಿಸುವಂತೆ ಆದೇಶ ಹೊರಡಿಸಿದೆ. ಪರಿಣಾಮವಾಗಿ ಎಸ್ಪಿ ನೇತೃತ್ವದಲ್ಲಿ ಒಂದು ಟೀಂ ರಚಿಸಿ ಯಶಸ್ವಿನಿಯನ್ನು ಸುರಕ್ಷಿತವಾಗಿ ಕರೆ ತರುವಂತೆ ನಿರ್ದೇಶನ ನೀಡಿದೆ.
ನ್ಯಾಯಾಧೀಶರೊಬ್ಬರು ತಮ್ಮ ಮಗಳನ್ನು ಗೃಹ ಬಂಧನದಲ್ಲಿಟ್ಟಿದ್ದು ಇದೇ ಮೊದಲೇನಲ್ಲ. 2013 ರಲ್ಲಿ ರಾಜಸ್ಥಾನದ ರಾಠೋಡ್ ಎಂಬ ಜಿಲ್ಲಾ ನ್ಯಾಯಾಧೀಶರೊಬ್ಬರು ಇದನ್ನೇ ಮಾಡಿದ್ದರು. ಆದರೂ ಇಂತಹ ಘಟನೆಗಳು ಮುಂದುವರಿಯುತ್ತಲೇ ಇರುವುದಕ್ಕೆ ಇಂಥವರ ಮೇಲೆ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಇರುವುದೇ ಕಾರಣ.
ಇಲ್ಲಿ ಎರಡು ಪ್ರಮುಖ ಅಂಶಗಳನ್ನು ನಾವು ಗಮನಿಸಬೇಕು. ಒಬ್ಬ ತಂದೆಯಾಗಿ ಈ ನ್ಯಾಯಾಧೀಶ ಅದೇ ಪಿತೃಪ್ರಧಾನ ಕಟ್ಟುಪಾಡುಗಳಿಗೆ ಅಡಿಯಾಳಾಗಿರುವುದು ಒಂದು ಅಂಶವಾದರೆ, ಇಂತಹ ಮೌಲ್ಯಗಳನ್ನು ಹೊಂದಿರುವ ಇವರು ನ್ಯಾಯ ಪ್ರದಾನ ಮಾಡುವ ತಮ್ಮ ಕಾರ್ಯದಲ್ಲಿ ಎಷ್ಟರ ಮಟ್ಟಿಗೆ ಸಂವಿಧಾನ ಮತ್ತು ಕಾನೂನುಗಳಿಗೆ ನಿಷ್ಠರಾಗಿರುತ್ತಾರೆ ಎಂಬುದು ಇನ್ನೊಂದು ಅಂಶ. ಈ ಎರಡನೇ ಅಂಶ ಹೆಚ್ಚು ಅಪಾಯಕಾರಿ. ಏಕೆಂದರೆ ತನ್ನ ಎದುರು ಬರುವ ವ್ಯಾಜ್ಯಗಳನ್ನು ತೀರ್ಮಾನಿಸುವಾಗ ಪ್ರತಿಯೊಬ್ಬ ನ್ಯಾಯಾಧೀಶ ತನ್ನ ವೈಯಕ್ತಿಕ ಜ್ಞಾನ ಹಾಗೂ ಅನುಭವವಗಳ ಆಧಾರದಲ್ಲೇ ತೀರ್ಪು ಕೊಡುತ್ತಾರೆ. ಜಾತಿ ಹಾಗೂ ಅಂತಸ್ತುಗಳ ವ್ಯಸನದಲ್ಲಿರುವ ಇಂತಹ ಕುಂಠಿತ ಮನಸ್ಸಿನ ನ್ಯಾಯಾಧೀಶರಿಂದ ಮೊದಲೇ ಹದಗೆಟ್ಟಿರುವ ದೇಶದ ನ್ಯಾಯ ವ್ಯವಸ್ಥೆ ಇನ್ನೂ ಹೆಚ್ಚಿನ ಅಪಾಯವನ್ನು ಎದುರಿಸುವ ಸಾದ್ಯತೆಗಳಿವೆ.
ಕಾನೂನು ಪದವೀಧರೆಯಾದ ಮಗಳನ್ನೇ ಗೃಹ ಬಂಧನದಲ್ಲಿರಿಸುವ ಈ ವ್ಯಕ್ತಿ, ತಾನು ನ್ಯಾಯಾಧೀಶನಾಗಿರುವುದರಿಂದ ಏನು ಬೇಕಾದರೂ ಮಾಡಬಹುದು ಎಂಬ ದಾಷ್ಟ್ರ್ಯ ಪ್ರದರ್ಶಿಸಿದ್ದಾರೆ. ಇಂಥವರಿಂದ ‘ನ್ಯಾಯ ಪಡೆದ’ ಸಹಸ್ರಾರು ಬಡಪಾಯಿಗಳ ಪರಿಸ್ಥಿತಿಯನ್ನು ಯಾರಾದರೂ ಊಹಿಸಬಹುದು. ಇಲ್ಲಿ ಇನ್ನೂ ದಾರುಣವಾದ ಸಂಗತಿಯೆಂದರೆ, ಪ್ರಿಯಕರ ಸಿದ್ಧಾರ್ಥ್ ಬನ್ಸಲ್ ತನ್ನ ದೂರನ್ನು ಹೇಳಿಕೊಂಡು ಮಹಿಳಾ ಆಯೋಗದಿಂದ ಹಿಡಿದು ಪೊಲೀಸ್ ಠಾಣೆಗಳು ಹಾಗೂ ಓಉಔಗಳ ಬಳಿ ಅಲೆದಾಡಿದರೂ ಪರಿಹಾರ ಸಿಗುವುದಿರಲಿ, ನ್ಯಾಯದ ಭರವಸೆಯೂ ಸಿಗಲಿಲ್ಲವೆಂಬುದು. ಒಬ್ಬ ಸುಶಿಕ್ಷಿತ, ಸುಪ್ರಿಂಕೋರ್ಟ್ ವಕೀಲನ ಪಾಡೇ ಹೀಗಾದರೆ ಈ ನಮ್ಮ ದೇಶದ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಜನಸಾಮಾನ್ಯರ ಗತಿಯೇನು ಎಂಬುದಕ್ಕೆ ಈ ಪ್ರಕರಣ ಕನ್ನಡಿ ಹಿಡಿದಿದೆ. ಇಂತಹ ಅದೆಷ್ಟು ಪ್ರಕರಣಗಳು ಬೆಳಕಿಗೆ ಬಾರದೆ ಕತ್ತಲೆಯಲ್ಲಿ ಮುಚ್ಚಿ ಹೋಗುತ್ತವೆಯೋ ಗೊತ್ತಿಲ್ಲ. ಸಮಾನತೆ ಎಂಬುದು ಮಹಿಳೆಯರ ಪಾಲಿಗೆ ಕೇವಲ ಮರೀಚಿಕೆಯೇ?

– ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...