Homeಅಂಕಣಗಳುನ್ಯಾಯದ ಕೈಯಿಯೇ ಅನ್ಯಾಯವ ಎಸಗಿದಾಗ....

ನ್ಯಾಯದ ಕೈಯಿಯೇ ಅನ್ಯಾಯವ ಎಸಗಿದಾಗ….

- Advertisement -
- Advertisement -

ಜನಸಾಮಾನ್ಯರು ನ್ಯಾಯಕ್ಕಾಗಿ ನ್ಯಾಯಾಧೀಶರ ಮೊರೆ ಹೋಗುವುದು ಸಹಜ. ಆದರೆ ನ್ಯಾಯಾಧೀಶರೇ ಅಪರಾಧಿ ಸ್ಥಾನದಲ್ಲಿ ನಿಂತರೆ…? ಬಿಹಾರದ ಖಗಾರಿಯಾ ಜಿಲ್ಲಾ ಸತ್ರ ನ್ಯಾಯಾಧೀಶ ಸುಭಾಷ್ ಚಂದ್ರ ಚೌರಾಸಿಯಾ ಅಂಥದೊಂದು ಘನಕಾರ್ಯದಲ್ಲಿ ಸಿಕ್ಕಿಬಿದ್ದಿದ್ದಾರೆ. ಕಾನೂನು ಪದವೀಧರೆಯಾಗಿರುವ ತನ್ನ 24 ವರ್ಷದ ಮಗಳು ಯಶಸ್ವಿನಿಯನ್ನು ಗೃಹಬಂಧನದಲ್ಲಿರಿಸಿ, ಹಿಂಸಿಸುವ ಮೂಲಕ. ಆ ಮಗಳು ಮಾಡಿದ ಅಪರಾಧವಾದರೂ ಏನು? ತನ್ನ ಇಚ್ಚೆಗೆ ವಿರುದ್ಧವಾಗಿ ಪ್ರೀತಿಸಿದವÀನನ್ನು ಮದುವೆಯಾಗಲು ಹೊರಟಿದ್ದು. ಆಕೆ ಸ್ವತಃ ನ್ಯಾಯಾಧೀಶಳಾಗಲು ಬಯಸಿ ಸಂಬಂಧಿತ ಪರೀಕ್ಷೆ ಕೂಡ ಬರೆದಿದ್ದಳು. ಆಕೆ ಪ್ರೇಮಿಸಿದ್ದು ಸುಪ್ರಿಂ ಕೋರ್ಟಿನಲ್ಲಿ ಪ್ರಾಕ್ಟೀಸ್ ಮಾಡುತ್ತಿರುವ ಸಿದ್ಧಾರ್ಥ್ ಬನ್ಸಲ್ ಎಂಬ ದೆಹಲಿಯ ಯುವ ವಕೀಲನನ್ನು.
ಈ ಮಹಾನುಭಾವ ನ್ಯಾಯಾಧೀಶ ತನ್ನ ಮಗಳು ಐಎಎಸ್ ಅಧಿಕಾರಿ ಅಥವ ನ್ಯಾಯಾಧೀಶ ಹುದ್ದೆಯಲ್ಲಿರುವ ವ್ಯಕ್ತಿಯನ್ನಷ್ಟೇ ಮದುವೆಯಾಗಬೇಕೆಂದು ಹಟ ಹಿಡಿದು ಈ ಘನ ಕಾರ್ಯ ಮಾಡಿದ್ದಾರಂತೆ. ಈ ನ್ಯಾಯಾಧೀಶರ ಮನವೊಲಿಸಲು ಪ್ರಯತ್ನಿಸಿ ವಿಫಲನಾದ ಆ ಪ್ರಿಯಕರ ಬೇರೆ ವಿಧಿಯಿಲ್ಲದೆ ಪಟ್ನಾ ಉಚ್ಚ ನ್ಯಾಯಾಲಯದ ಮೊರೆ ಹೋದ. ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಯಶಸ್ವಿನಿಯನ್ನು ಕರೆತಂದು ತನ್ನ ಮುಂದೆ ನಿಲ್ಲಿಸುವಂತೆ ಆದೇಶ ಹೊರಡಿಸಿದೆ. ಪರಿಣಾಮವಾಗಿ ಎಸ್ಪಿ ನೇತೃತ್ವದಲ್ಲಿ ಒಂದು ಟೀಂ ರಚಿಸಿ ಯಶಸ್ವಿನಿಯನ್ನು ಸುರಕ್ಷಿತವಾಗಿ ಕರೆ ತರುವಂತೆ ನಿರ್ದೇಶನ ನೀಡಿದೆ.
ನ್ಯಾಯಾಧೀಶರೊಬ್ಬರು ತಮ್ಮ ಮಗಳನ್ನು ಗೃಹ ಬಂಧನದಲ್ಲಿಟ್ಟಿದ್ದು ಇದೇ ಮೊದಲೇನಲ್ಲ. 2013 ರಲ್ಲಿ ರಾಜಸ್ಥಾನದ ರಾಠೋಡ್ ಎಂಬ ಜಿಲ್ಲಾ ನ್ಯಾಯಾಧೀಶರೊಬ್ಬರು ಇದನ್ನೇ ಮಾಡಿದ್ದರು. ಆದರೂ ಇಂತಹ ಘಟನೆಗಳು ಮುಂದುವರಿಯುತ್ತಲೇ ಇರುವುದಕ್ಕೆ ಇಂಥವರ ಮೇಲೆ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಇರುವುದೇ ಕಾರಣ.
ಇಲ್ಲಿ ಎರಡು ಪ್ರಮುಖ ಅಂಶಗಳನ್ನು ನಾವು ಗಮನಿಸಬೇಕು. ಒಬ್ಬ ತಂದೆಯಾಗಿ ಈ ನ್ಯಾಯಾಧೀಶ ಅದೇ ಪಿತೃಪ್ರಧಾನ ಕಟ್ಟುಪಾಡುಗಳಿಗೆ ಅಡಿಯಾಳಾಗಿರುವುದು ಒಂದು ಅಂಶವಾದರೆ, ಇಂತಹ ಮೌಲ್ಯಗಳನ್ನು ಹೊಂದಿರುವ ಇವರು ನ್ಯಾಯ ಪ್ರದಾನ ಮಾಡುವ ತಮ್ಮ ಕಾರ್ಯದಲ್ಲಿ ಎಷ್ಟರ ಮಟ್ಟಿಗೆ ಸಂವಿಧಾನ ಮತ್ತು ಕಾನೂನುಗಳಿಗೆ ನಿಷ್ಠರಾಗಿರುತ್ತಾರೆ ಎಂಬುದು ಇನ್ನೊಂದು ಅಂಶ. ಈ ಎರಡನೇ ಅಂಶ ಹೆಚ್ಚು ಅಪಾಯಕಾರಿ. ಏಕೆಂದರೆ ತನ್ನ ಎದುರು ಬರುವ ವ್ಯಾಜ್ಯಗಳನ್ನು ತೀರ್ಮಾನಿಸುವಾಗ ಪ್ರತಿಯೊಬ್ಬ ನ್ಯಾಯಾಧೀಶ ತನ್ನ ವೈಯಕ್ತಿಕ ಜ್ಞಾನ ಹಾಗೂ ಅನುಭವವಗಳ ಆಧಾರದಲ್ಲೇ ತೀರ್ಪು ಕೊಡುತ್ತಾರೆ. ಜಾತಿ ಹಾಗೂ ಅಂತಸ್ತುಗಳ ವ್ಯಸನದಲ್ಲಿರುವ ಇಂತಹ ಕುಂಠಿತ ಮನಸ್ಸಿನ ನ್ಯಾಯಾಧೀಶರಿಂದ ಮೊದಲೇ ಹದಗೆಟ್ಟಿರುವ ದೇಶದ ನ್ಯಾಯ ವ್ಯವಸ್ಥೆ ಇನ್ನೂ ಹೆಚ್ಚಿನ ಅಪಾಯವನ್ನು ಎದುರಿಸುವ ಸಾದ್ಯತೆಗಳಿವೆ.
ಕಾನೂನು ಪದವೀಧರೆಯಾದ ಮಗಳನ್ನೇ ಗೃಹ ಬಂಧನದಲ್ಲಿರಿಸುವ ಈ ವ್ಯಕ್ತಿ, ತಾನು ನ್ಯಾಯಾಧೀಶನಾಗಿರುವುದರಿಂದ ಏನು ಬೇಕಾದರೂ ಮಾಡಬಹುದು ಎಂಬ ದಾಷ್ಟ್ರ್ಯ ಪ್ರದರ್ಶಿಸಿದ್ದಾರೆ. ಇಂಥವರಿಂದ ‘ನ್ಯಾಯ ಪಡೆದ’ ಸಹಸ್ರಾರು ಬಡಪಾಯಿಗಳ ಪರಿಸ್ಥಿತಿಯನ್ನು ಯಾರಾದರೂ ಊಹಿಸಬಹುದು. ಇಲ್ಲಿ ಇನ್ನೂ ದಾರುಣವಾದ ಸಂಗತಿಯೆಂದರೆ, ಪ್ರಿಯಕರ ಸಿದ್ಧಾರ್ಥ್ ಬನ್ಸಲ್ ತನ್ನ ದೂರನ್ನು ಹೇಳಿಕೊಂಡು ಮಹಿಳಾ ಆಯೋಗದಿಂದ ಹಿಡಿದು ಪೊಲೀಸ್ ಠಾಣೆಗಳು ಹಾಗೂ ಓಉಔಗಳ ಬಳಿ ಅಲೆದಾಡಿದರೂ ಪರಿಹಾರ ಸಿಗುವುದಿರಲಿ, ನ್ಯಾಯದ ಭರವಸೆಯೂ ಸಿಗಲಿಲ್ಲವೆಂಬುದು. ಒಬ್ಬ ಸುಶಿಕ್ಷಿತ, ಸುಪ್ರಿಂಕೋರ್ಟ್ ವಕೀಲನ ಪಾಡೇ ಹೀಗಾದರೆ ಈ ನಮ್ಮ ದೇಶದ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಜನಸಾಮಾನ್ಯರ ಗತಿಯೇನು ಎಂಬುದಕ್ಕೆ ಈ ಪ್ರಕರಣ ಕನ್ನಡಿ ಹಿಡಿದಿದೆ. ಇಂತಹ ಅದೆಷ್ಟು ಪ್ರಕರಣಗಳು ಬೆಳಕಿಗೆ ಬಾರದೆ ಕತ್ತಲೆಯಲ್ಲಿ ಮುಚ್ಚಿ ಹೋಗುತ್ತವೆಯೋ ಗೊತ್ತಿಲ್ಲ. ಸಮಾನತೆ ಎಂಬುದು ಮಹಿಳೆಯರ ಪಾಲಿಗೆ ಕೇವಲ ಮರೀಚಿಕೆಯೇ?

– ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...