Homeಅಂಕಣಗಳುನ್ಯಾಯದ ಕೈಯಿಯೇ ಅನ್ಯಾಯವ ಎಸಗಿದಾಗ....

ನ್ಯಾಯದ ಕೈಯಿಯೇ ಅನ್ಯಾಯವ ಎಸಗಿದಾಗ….

- Advertisement -
- Advertisement -

ಜನಸಾಮಾನ್ಯರು ನ್ಯಾಯಕ್ಕಾಗಿ ನ್ಯಾಯಾಧೀಶರ ಮೊರೆ ಹೋಗುವುದು ಸಹಜ. ಆದರೆ ನ್ಯಾಯಾಧೀಶರೇ ಅಪರಾಧಿ ಸ್ಥಾನದಲ್ಲಿ ನಿಂತರೆ…? ಬಿಹಾರದ ಖಗಾರಿಯಾ ಜಿಲ್ಲಾ ಸತ್ರ ನ್ಯಾಯಾಧೀಶ ಸುಭಾಷ್ ಚಂದ್ರ ಚೌರಾಸಿಯಾ ಅಂಥದೊಂದು ಘನಕಾರ್ಯದಲ್ಲಿ ಸಿಕ್ಕಿಬಿದ್ದಿದ್ದಾರೆ. ಕಾನೂನು ಪದವೀಧರೆಯಾಗಿರುವ ತನ್ನ 24 ವರ್ಷದ ಮಗಳು ಯಶಸ್ವಿನಿಯನ್ನು ಗೃಹಬಂಧನದಲ್ಲಿರಿಸಿ, ಹಿಂಸಿಸುವ ಮೂಲಕ. ಆ ಮಗಳು ಮಾಡಿದ ಅಪರಾಧವಾದರೂ ಏನು? ತನ್ನ ಇಚ್ಚೆಗೆ ವಿರುದ್ಧವಾಗಿ ಪ್ರೀತಿಸಿದವÀನನ್ನು ಮದುವೆಯಾಗಲು ಹೊರಟಿದ್ದು. ಆಕೆ ಸ್ವತಃ ನ್ಯಾಯಾಧೀಶಳಾಗಲು ಬಯಸಿ ಸಂಬಂಧಿತ ಪರೀಕ್ಷೆ ಕೂಡ ಬರೆದಿದ್ದಳು. ಆಕೆ ಪ್ರೇಮಿಸಿದ್ದು ಸುಪ್ರಿಂ ಕೋರ್ಟಿನಲ್ಲಿ ಪ್ರಾಕ್ಟೀಸ್ ಮಾಡುತ್ತಿರುವ ಸಿದ್ಧಾರ್ಥ್ ಬನ್ಸಲ್ ಎಂಬ ದೆಹಲಿಯ ಯುವ ವಕೀಲನನ್ನು.
ಈ ಮಹಾನುಭಾವ ನ್ಯಾಯಾಧೀಶ ತನ್ನ ಮಗಳು ಐಎಎಸ್ ಅಧಿಕಾರಿ ಅಥವ ನ್ಯಾಯಾಧೀಶ ಹುದ್ದೆಯಲ್ಲಿರುವ ವ್ಯಕ್ತಿಯನ್ನಷ್ಟೇ ಮದುವೆಯಾಗಬೇಕೆಂದು ಹಟ ಹಿಡಿದು ಈ ಘನ ಕಾರ್ಯ ಮಾಡಿದ್ದಾರಂತೆ. ಈ ನ್ಯಾಯಾಧೀಶರ ಮನವೊಲಿಸಲು ಪ್ರಯತ್ನಿಸಿ ವಿಫಲನಾದ ಆ ಪ್ರಿಯಕರ ಬೇರೆ ವಿಧಿಯಿಲ್ಲದೆ ಪಟ್ನಾ ಉಚ್ಚ ನ್ಯಾಯಾಲಯದ ಮೊರೆ ಹೋದ. ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಯಶಸ್ವಿನಿಯನ್ನು ಕರೆತಂದು ತನ್ನ ಮುಂದೆ ನಿಲ್ಲಿಸುವಂತೆ ಆದೇಶ ಹೊರಡಿಸಿದೆ. ಪರಿಣಾಮವಾಗಿ ಎಸ್ಪಿ ನೇತೃತ್ವದಲ್ಲಿ ಒಂದು ಟೀಂ ರಚಿಸಿ ಯಶಸ್ವಿನಿಯನ್ನು ಸುರಕ್ಷಿತವಾಗಿ ಕರೆ ತರುವಂತೆ ನಿರ್ದೇಶನ ನೀಡಿದೆ.
ನ್ಯಾಯಾಧೀಶರೊಬ್ಬರು ತಮ್ಮ ಮಗಳನ್ನು ಗೃಹ ಬಂಧನದಲ್ಲಿಟ್ಟಿದ್ದು ಇದೇ ಮೊದಲೇನಲ್ಲ. 2013 ರಲ್ಲಿ ರಾಜಸ್ಥಾನದ ರಾಠೋಡ್ ಎಂಬ ಜಿಲ್ಲಾ ನ್ಯಾಯಾಧೀಶರೊಬ್ಬರು ಇದನ್ನೇ ಮಾಡಿದ್ದರು. ಆದರೂ ಇಂತಹ ಘಟನೆಗಳು ಮುಂದುವರಿಯುತ್ತಲೇ ಇರುವುದಕ್ಕೆ ಇಂಥವರ ಮೇಲೆ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಇರುವುದೇ ಕಾರಣ.
ಇಲ್ಲಿ ಎರಡು ಪ್ರಮುಖ ಅಂಶಗಳನ್ನು ನಾವು ಗಮನಿಸಬೇಕು. ಒಬ್ಬ ತಂದೆಯಾಗಿ ಈ ನ್ಯಾಯಾಧೀಶ ಅದೇ ಪಿತೃಪ್ರಧಾನ ಕಟ್ಟುಪಾಡುಗಳಿಗೆ ಅಡಿಯಾಳಾಗಿರುವುದು ಒಂದು ಅಂಶವಾದರೆ, ಇಂತಹ ಮೌಲ್ಯಗಳನ್ನು ಹೊಂದಿರುವ ಇವರು ನ್ಯಾಯ ಪ್ರದಾನ ಮಾಡುವ ತಮ್ಮ ಕಾರ್ಯದಲ್ಲಿ ಎಷ್ಟರ ಮಟ್ಟಿಗೆ ಸಂವಿಧಾನ ಮತ್ತು ಕಾನೂನುಗಳಿಗೆ ನಿಷ್ಠರಾಗಿರುತ್ತಾರೆ ಎಂಬುದು ಇನ್ನೊಂದು ಅಂಶ. ಈ ಎರಡನೇ ಅಂಶ ಹೆಚ್ಚು ಅಪಾಯಕಾರಿ. ಏಕೆಂದರೆ ತನ್ನ ಎದುರು ಬರುವ ವ್ಯಾಜ್ಯಗಳನ್ನು ತೀರ್ಮಾನಿಸುವಾಗ ಪ್ರತಿಯೊಬ್ಬ ನ್ಯಾಯಾಧೀಶ ತನ್ನ ವೈಯಕ್ತಿಕ ಜ್ಞಾನ ಹಾಗೂ ಅನುಭವವಗಳ ಆಧಾರದಲ್ಲೇ ತೀರ್ಪು ಕೊಡುತ್ತಾರೆ. ಜಾತಿ ಹಾಗೂ ಅಂತಸ್ತುಗಳ ವ್ಯಸನದಲ್ಲಿರುವ ಇಂತಹ ಕುಂಠಿತ ಮನಸ್ಸಿನ ನ್ಯಾಯಾಧೀಶರಿಂದ ಮೊದಲೇ ಹದಗೆಟ್ಟಿರುವ ದೇಶದ ನ್ಯಾಯ ವ್ಯವಸ್ಥೆ ಇನ್ನೂ ಹೆಚ್ಚಿನ ಅಪಾಯವನ್ನು ಎದುರಿಸುವ ಸಾದ್ಯತೆಗಳಿವೆ.
ಕಾನೂನು ಪದವೀಧರೆಯಾದ ಮಗಳನ್ನೇ ಗೃಹ ಬಂಧನದಲ್ಲಿರಿಸುವ ಈ ವ್ಯಕ್ತಿ, ತಾನು ನ್ಯಾಯಾಧೀಶನಾಗಿರುವುದರಿಂದ ಏನು ಬೇಕಾದರೂ ಮಾಡಬಹುದು ಎಂಬ ದಾಷ್ಟ್ರ್ಯ ಪ್ರದರ್ಶಿಸಿದ್ದಾರೆ. ಇಂಥವರಿಂದ ‘ನ್ಯಾಯ ಪಡೆದ’ ಸಹಸ್ರಾರು ಬಡಪಾಯಿಗಳ ಪರಿಸ್ಥಿತಿಯನ್ನು ಯಾರಾದರೂ ಊಹಿಸಬಹುದು. ಇಲ್ಲಿ ಇನ್ನೂ ದಾರುಣವಾದ ಸಂಗತಿಯೆಂದರೆ, ಪ್ರಿಯಕರ ಸಿದ್ಧಾರ್ಥ್ ಬನ್ಸಲ್ ತನ್ನ ದೂರನ್ನು ಹೇಳಿಕೊಂಡು ಮಹಿಳಾ ಆಯೋಗದಿಂದ ಹಿಡಿದು ಪೊಲೀಸ್ ಠಾಣೆಗಳು ಹಾಗೂ ಓಉಔಗಳ ಬಳಿ ಅಲೆದಾಡಿದರೂ ಪರಿಹಾರ ಸಿಗುವುದಿರಲಿ, ನ್ಯಾಯದ ಭರವಸೆಯೂ ಸಿಗಲಿಲ್ಲವೆಂಬುದು. ಒಬ್ಬ ಸುಶಿಕ್ಷಿತ, ಸುಪ್ರಿಂಕೋರ್ಟ್ ವಕೀಲನ ಪಾಡೇ ಹೀಗಾದರೆ ಈ ನಮ್ಮ ದೇಶದ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಜನಸಾಮಾನ್ಯರ ಗತಿಯೇನು ಎಂಬುದಕ್ಕೆ ಈ ಪ್ರಕರಣ ಕನ್ನಡಿ ಹಿಡಿದಿದೆ. ಇಂತಹ ಅದೆಷ್ಟು ಪ್ರಕರಣಗಳು ಬೆಳಕಿಗೆ ಬಾರದೆ ಕತ್ತಲೆಯಲ್ಲಿ ಮುಚ್ಚಿ ಹೋಗುತ್ತವೆಯೋ ಗೊತ್ತಿಲ್ಲ. ಸಮಾನತೆ ಎಂಬುದು ಮಹಿಳೆಯರ ಪಾಲಿಗೆ ಕೇವಲ ಮರೀಚಿಕೆಯೇ?

– ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...