Homeಅಂಕಣಗಳುನ್ಯಾಯದ ಕೈಯಿಯೇ ಅನ್ಯಾಯವ ಎಸಗಿದಾಗ....

ನ್ಯಾಯದ ಕೈಯಿಯೇ ಅನ್ಯಾಯವ ಎಸಗಿದಾಗ….

- Advertisement -
- Advertisement -

ಜನಸಾಮಾನ್ಯರು ನ್ಯಾಯಕ್ಕಾಗಿ ನ್ಯಾಯಾಧೀಶರ ಮೊರೆ ಹೋಗುವುದು ಸಹಜ. ಆದರೆ ನ್ಯಾಯಾಧೀಶರೇ ಅಪರಾಧಿ ಸ್ಥಾನದಲ್ಲಿ ನಿಂತರೆ…? ಬಿಹಾರದ ಖಗಾರಿಯಾ ಜಿಲ್ಲಾ ಸತ್ರ ನ್ಯಾಯಾಧೀಶ ಸುಭಾಷ್ ಚಂದ್ರ ಚೌರಾಸಿಯಾ ಅಂಥದೊಂದು ಘನಕಾರ್ಯದಲ್ಲಿ ಸಿಕ್ಕಿಬಿದ್ದಿದ್ದಾರೆ. ಕಾನೂನು ಪದವೀಧರೆಯಾಗಿರುವ ತನ್ನ 24 ವರ್ಷದ ಮಗಳು ಯಶಸ್ವಿನಿಯನ್ನು ಗೃಹಬಂಧನದಲ್ಲಿರಿಸಿ, ಹಿಂಸಿಸುವ ಮೂಲಕ. ಆ ಮಗಳು ಮಾಡಿದ ಅಪರಾಧವಾದರೂ ಏನು? ತನ್ನ ಇಚ್ಚೆಗೆ ವಿರುದ್ಧವಾಗಿ ಪ್ರೀತಿಸಿದವÀನನ್ನು ಮದುವೆಯಾಗಲು ಹೊರಟಿದ್ದು. ಆಕೆ ಸ್ವತಃ ನ್ಯಾಯಾಧೀಶಳಾಗಲು ಬಯಸಿ ಸಂಬಂಧಿತ ಪರೀಕ್ಷೆ ಕೂಡ ಬರೆದಿದ್ದಳು. ಆಕೆ ಪ್ರೇಮಿಸಿದ್ದು ಸುಪ್ರಿಂ ಕೋರ್ಟಿನಲ್ಲಿ ಪ್ರಾಕ್ಟೀಸ್ ಮಾಡುತ್ತಿರುವ ಸಿದ್ಧಾರ್ಥ್ ಬನ್ಸಲ್ ಎಂಬ ದೆಹಲಿಯ ಯುವ ವಕೀಲನನ್ನು.
ಈ ಮಹಾನುಭಾವ ನ್ಯಾಯಾಧೀಶ ತನ್ನ ಮಗಳು ಐಎಎಸ್ ಅಧಿಕಾರಿ ಅಥವ ನ್ಯಾಯಾಧೀಶ ಹುದ್ದೆಯಲ್ಲಿರುವ ವ್ಯಕ್ತಿಯನ್ನಷ್ಟೇ ಮದುವೆಯಾಗಬೇಕೆಂದು ಹಟ ಹಿಡಿದು ಈ ಘನ ಕಾರ್ಯ ಮಾಡಿದ್ದಾರಂತೆ. ಈ ನ್ಯಾಯಾಧೀಶರ ಮನವೊಲಿಸಲು ಪ್ರಯತ್ನಿಸಿ ವಿಫಲನಾದ ಆ ಪ್ರಿಯಕರ ಬೇರೆ ವಿಧಿಯಿಲ್ಲದೆ ಪಟ್ನಾ ಉಚ್ಚ ನ್ಯಾಯಾಲಯದ ಮೊರೆ ಹೋದ. ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಯಶಸ್ವಿನಿಯನ್ನು ಕರೆತಂದು ತನ್ನ ಮುಂದೆ ನಿಲ್ಲಿಸುವಂತೆ ಆದೇಶ ಹೊರಡಿಸಿದೆ. ಪರಿಣಾಮವಾಗಿ ಎಸ್ಪಿ ನೇತೃತ್ವದಲ್ಲಿ ಒಂದು ಟೀಂ ರಚಿಸಿ ಯಶಸ್ವಿನಿಯನ್ನು ಸುರಕ್ಷಿತವಾಗಿ ಕರೆ ತರುವಂತೆ ನಿರ್ದೇಶನ ನೀಡಿದೆ.
ನ್ಯಾಯಾಧೀಶರೊಬ್ಬರು ತಮ್ಮ ಮಗಳನ್ನು ಗೃಹ ಬಂಧನದಲ್ಲಿಟ್ಟಿದ್ದು ಇದೇ ಮೊದಲೇನಲ್ಲ. 2013 ರಲ್ಲಿ ರಾಜಸ್ಥಾನದ ರಾಠೋಡ್ ಎಂಬ ಜಿಲ್ಲಾ ನ್ಯಾಯಾಧೀಶರೊಬ್ಬರು ಇದನ್ನೇ ಮಾಡಿದ್ದರು. ಆದರೂ ಇಂತಹ ಘಟನೆಗಳು ಮುಂದುವರಿಯುತ್ತಲೇ ಇರುವುದಕ್ಕೆ ಇಂಥವರ ಮೇಲೆ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಇರುವುದೇ ಕಾರಣ.
ಇಲ್ಲಿ ಎರಡು ಪ್ರಮುಖ ಅಂಶಗಳನ್ನು ನಾವು ಗಮನಿಸಬೇಕು. ಒಬ್ಬ ತಂದೆಯಾಗಿ ಈ ನ್ಯಾಯಾಧೀಶ ಅದೇ ಪಿತೃಪ್ರಧಾನ ಕಟ್ಟುಪಾಡುಗಳಿಗೆ ಅಡಿಯಾಳಾಗಿರುವುದು ಒಂದು ಅಂಶವಾದರೆ, ಇಂತಹ ಮೌಲ್ಯಗಳನ್ನು ಹೊಂದಿರುವ ಇವರು ನ್ಯಾಯ ಪ್ರದಾನ ಮಾಡುವ ತಮ್ಮ ಕಾರ್ಯದಲ್ಲಿ ಎಷ್ಟರ ಮಟ್ಟಿಗೆ ಸಂವಿಧಾನ ಮತ್ತು ಕಾನೂನುಗಳಿಗೆ ನಿಷ್ಠರಾಗಿರುತ್ತಾರೆ ಎಂಬುದು ಇನ್ನೊಂದು ಅಂಶ. ಈ ಎರಡನೇ ಅಂಶ ಹೆಚ್ಚು ಅಪಾಯಕಾರಿ. ಏಕೆಂದರೆ ತನ್ನ ಎದುರು ಬರುವ ವ್ಯಾಜ್ಯಗಳನ್ನು ತೀರ್ಮಾನಿಸುವಾಗ ಪ್ರತಿಯೊಬ್ಬ ನ್ಯಾಯಾಧೀಶ ತನ್ನ ವೈಯಕ್ತಿಕ ಜ್ಞಾನ ಹಾಗೂ ಅನುಭವವಗಳ ಆಧಾರದಲ್ಲೇ ತೀರ್ಪು ಕೊಡುತ್ತಾರೆ. ಜಾತಿ ಹಾಗೂ ಅಂತಸ್ತುಗಳ ವ್ಯಸನದಲ್ಲಿರುವ ಇಂತಹ ಕುಂಠಿತ ಮನಸ್ಸಿನ ನ್ಯಾಯಾಧೀಶರಿಂದ ಮೊದಲೇ ಹದಗೆಟ್ಟಿರುವ ದೇಶದ ನ್ಯಾಯ ವ್ಯವಸ್ಥೆ ಇನ್ನೂ ಹೆಚ್ಚಿನ ಅಪಾಯವನ್ನು ಎದುರಿಸುವ ಸಾದ್ಯತೆಗಳಿವೆ.
ಕಾನೂನು ಪದವೀಧರೆಯಾದ ಮಗಳನ್ನೇ ಗೃಹ ಬಂಧನದಲ್ಲಿರಿಸುವ ಈ ವ್ಯಕ್ತಿ, ತಾನು ನ್ಯಾಯಾಧೀಶನಾಗಿರುವುದರಿಂದ ಏನು ಬೇಕಾದರೂ ಮಾಡಬಹುದು ಎಂಬ ದಾಷ್ಟ್ರ್ಯ ಪ್ರದರ್ಶಿಸಿದ್ದಾರೆ. ಇಂಥವರಿಂದ ‘ನ್ಯಾಯ ಪಡೆದ’ ಸಹಸ್ರಾರು ಬಡಪಾಯಿಗಳ ಪರಿಸ್ಥಿತಿಯನ್ನು ಯಾರಾದರೂ ಊಹಿಸಬಹುದು. ಇಲ್ಲಿ ಇನ್ನೂ ದಾರುಣವಾದ ಸಂಗತಿಯೆಂದರೆ, ಪ್ರಿಯಕರ ಸಿದ್ಧಾರ್ಥ್ ಬನ್ಸಲ್ ತನ್ನ ದೂರನ್ನು ಹೇಳಿಕೊಂಡು ಮಹಿಳಾ ಆಯೋಗದಿಂದ ಹಿಡಿದು ಪೊಲೀಸ್ ಠಾಣೆಗಳು ಹಾಗೂ ಓಉಔಗಳ ಬಳಿ ಅಲೆದಾಡಿದರೂ ಪರಿಹಾರ ಸಿಗುವುದಿರಲಿ, ನ್ಯಾಯದ ಭರವಸೆಯೂ ಸಿಗಲಿಲ್ಲವೆಂಬುದು. ಒಬ್ಬ ಸುಶಿಕ್ಷಿತ, ಸುಪ್ರಿಂಕೋರ್ಟ್ ವಕೀಲನ ಪಾಡೇ ಹೀಗಾದರೆ ಈ ನಮ್ಮ ದೇಶದ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಜನಸಾಮಾನ್ಯರ ಗತಿಯೇನು ಎಂಬುದಕ್ಕೆ ಈ ಪ್ರಕರಣ ಕನ್ನಡಿ ಹಿಡಿದಿದೆ. ಇಂತಹ ಅದೆಷ್ಟು ಪ್ರಕರಣಗಳು ಬೆಳಕಿಗೆ ಬಾರದೆ ಕತ್ತಲೆಯಲ್ಲಿ ಮುಚ್ಚಿ ಹೋಗುತ್ತವೆಯೋ ಗೊತ್ತಿಲ್ಲ. ಸಮಾನತೆ ಎಂಬುದು ಮಹಿಳೆಯರ ಪಾಲಿಗೆ ಕೇವಲ ಮರೀಚಿಕೆಯೇ?

– ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...