Homeಅಂಕಣಗಳುನ್ಯಾಯದ ಕೈಯಿಯೇ ಅನ್ಯಾಯವ ಎಸಗಿದಾಗ....

ನ್ಯಾಯದ ಕೈಯಿಯೇ ಅನ್ಯಾಯವ ಎಸಗಿದಾಗ….

- Advertisement -
- Advertisement -

ಜನಸಾಮಾನ್ಯರು ನ್ಯಾಯಕ್ಕಾಗಿ ನ್ಯಾಯಾಧೀಶರ ಮೊರೆ ಹೋಗುವುದು ಸಹಜ. ಆದರೆ ನ್ಯಾಯಾಧೀಶರೇ ಅಪರಾಧಿ ಸ್ಥಾನದಲ್ಲಿ ನಿಂತರೆ…? ಬಿಹಾರದ ಖಗಾರಿಯಾ ಜಿಲ್ಲಾ ಸತ್ರ ನ್ಯಾಯಾಧೀಶ ಸುಭಾಷ್ ಚಂದ್ರ ಚೌರಾಸಿಯಾ ಅಂಥದೊಂದು ಘನಕಾರ್ಯದಲ್ಲಿ ಸಿಕ್ಕಿಬಿದ್ದಿದ್ದಾರೆ. ಕಾನೂನು ಪದವೀಧರೆಯಾಗಿರುವ ತನ್ನ 24 ವರ್ಷದ ಮಗಳು ಯಶಸ್ವಿನಿಯನ್ನು ಗೃಹಬಂಧನದಲ್ಲಿರಿಸಿ, ಹಿಂಸಿಸುವ ಮೂಲಕ. ಆ ಮಗಳು ಮಾಡಿದ ಅಪರಾಧವಾದರೂ ಏನು? ತನ್ನ ಇಚ್ಚೆಗೆ ವಿರುದ್ಧವಾಗಿ ಪ್ರೀತಿಸಿದವÀನನ್ನು ಮದುವೆಯಾಗಲು ಹೊರಟಿದ್ದು. ಆಕೆ ಸ್ವತಃ ನ್ಯಾಯಾಧೀಶಳಾಗಲು ಬಯಸಿ ಸಂಬಂಧಿತ ಪರೀಕ್ಷೆ ಕೂಡ ಬರೆದಿದ್ದಳು. ಆಕೆ ಪ್ರೇಮಿಸಿದ್ದು ಸುಪ್ರಿಂ ಕೋರ್ಟಿನಲ್ಲಿ ಪ್ರಾಕ್ಟೀಸ್ ಮಾಡುತ್ತಿರುವ ಸಿದ್ಧಾರ್ಥ್ ಬನ್ಸಲ್ ಎಂಬ ದೆಹಲಿಯ ಯುವ ವಕೀಲನನ್ನು.
ಈ ಮಹಾನುಭಾವ ನ್ಯಾಯಾಧೀಶ ತನ್ನ ಮಗಳು ಐಎಎಸ್ ಅಧಿಕಾರಿ ಅಥವ ನ್ಯಾಯಾಧೀಶ ಹುದ್ದೆಯಲ್ಲಿರುವ ವ್ಯಕ್ತಿಯನ್ನಷ್ಟೇ ಮದುವೆಯಾಗಬೇಕೆಂದು ಹಟ ಹಿಡಿದು ಈ ಘನ ಕಾರ್ಯ ಮಾಡಿದ್ದಾರಂತೆ. ಈ ನ್ಯಾಯಾಧೀಶರ ಮನವೊಲಿಸಲು ಪ್ರಯತ್ನಿಸಿ ವಿಫಲನಾದ ಆ ಪ್ರಿಯಕರ ಬೇರೆ ವಿಧಿಯಿಲ್ಲದೆ ಪಟ್ನಾ ಉಚ್ಚ ನ್ಯಾಯಾಲಯದ ಮೊರೆ ಹೋದ. ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಯಶಸ್ವಿನಿಯನ್ನು ಕರೆತಂದು ತನ್ನ ಮುಂದೆ ನಿಲ್ಲಿಸುವಂತೆ ಆದೇಶ ಹೊರಡಿಸಿದೆ. ಪರಿಣಾಮವಾಗಿ ಎಸ್ಪಿ ನೇತೃತ್ವದಲ್ಲಿ ಒಂದು ಟೀಂ ರಚಿಸಿ ಯಶಸ್ವಿನಿಯನ್ನು ಸುರಕ್ಷಿತವಾಗಿ ಕರೆ ತರುವಂತೆ ನಿರ್ದೇಶನ ನೀಡಿದೆ.
ನ್ಯಾಯಾಧೀಶರೊಬ್ಬರು ತಮ್ಮ ಮಗಳನ್ನು ಗೃಹ ಬಂಧನದಲ್ಲಿಟ್ಟಿದ್ದು ಇದೇ ಮೊದಲೇನಲ್ಲ. 2013 ರಲ್ಲಿ ರಾಜಸ್ಥಾನದ ರಾಠೋಡ್ ಎಂಬ ಜಿಲ್ಲಾ ನ್ಯಾಯಾಧೀಶರೊಬ್ಬರು ಇದನ್ನೇ ಮಾಡಿದ್ದರು. ಆದರೂ ಇಂತಹ ಘಟನೆಗಳು ಮುಂದುವರಿಯುತ್ತಲೇ ಇರುವುದಕ್ಕೆ ಇಂಥವರ ಮೇಲೆ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಇರುವುದೇ ಕಾರಣ.
ಇಲ್ಲಿ ಎರಡು ಪ್ರಮುಖ ಅಂಶಗಳನ್ನು ನಾವು ಗಮನಿಸಬೇಕು. ಒಬ್ಬ ತಂದೆಯಾಗಿ ಈ ನ್ಯಾಯಾಧೀಶ ಅದೇ ಪಿತೃಪ್ರಧಾನ ಕಟ್ಟುಪಾಡುಗಳಿಗೆ ಅಡಿಯಾಳಾಗಿರುವುದು ಒಂದು ಅಂಶವಾದರೆ, ಇಂತಹ ಮೌಲ್ಯಗಳನ್ನು ಹೊಂದಿರುವ ಇವರು ನ್ಯಾಯ ಪ್ರದಾನ ಮಾಡುವ ತಮ್ಮ ಕಾರ್ಯದಲ್ಲಿ ಎಷ್ಟರ ಮಟ್ಟಿಗೆ ಸಂವಿಧಾನ ಮತ್ತು ಕಾನೂನುಗಳಿಗೆ ನಿಷ್ಠರಾಗಿರುತ್ತಾರೆ ಎಂಬುದು ಇನ್ನೊಂದು ಅಂಶ. ಈ ಎರಡನೇ ಅಂಶ ಹೆಚ್ಚು ಅಪಾಯಕಾರಿ. ಏಕೆಂದರೆ ತನ್ನ ಎದುರು ಬರುವ ವ್ಯಾಜ್ಯಗಳನ್ನು ತೀರ್ಮಾನಿಸುವಾಗ ಪ್ರತಿಯೊಬ್ಬ ನ್ಯಾಯಾಧೀಶ ತನ್ನ ವೈಯಕ್ತಿಕ ಜ್ಞಾನ ಹಾಗೂ ಅನುಭವವಗಳ ಆಧಾರದಲ್ಲೇ ತೀರ್ಪು ಕೊಡುತ್ತಾರೆ. ಜಾತಿ ಹಾಗೂ ಅಂತಸ್ತುಗಳ ವ್ಯಸನದಲ್ಲಿರುವ ಇಂತಹ ಕುಂಠಿತ ಮನಸ್ಸಿನ ನ್ಯಾಯಾಧೀಶರಿಂದ ಮೊದಲೇ ಹದಗೆಟ್ಟಿರುವ ದೇಶದ ನ್ಯಾಯ ವ್ಯವಸ್ಥೆ ಇನ್ನೂ ಹೆಚ್ಚಿನ ಅಪಾಯವನ್ನು ಎದುರಿಸುವ ಸಾದ್ಯತೆಗಳಿವೆ.
ಕಾನೂನು ಪದವೀಧರೆಯಾದ ಮಗಳನ್ನೇ ಗೃಹ ಬಂಧನದಲ್ಲಿರಿಸುವ ಈ ವ್ಯಕ್ತಿ, ತಾನು ನ್ಯಾಯಾಧೀಶನಾಗಿರುವುದರಿಂದ ಏನು ಬೇಕಾದರೂ ಮಾಡಬಹುದು ಎಂಬ ದಾಷ್ಟ್ರ್ಯ ಪ್ರದರ್ಶಿಸಿದ್ದಾರೆ. ಇಂಥವರಿಂದ ‘ನ್ಯಾಯ ಪಡೆದ’ ಸಹಸ್ರಾರು ಬಡಪಾಯಿಗಳ ಪರಿಸ್ಥಿತಿಯನ್ನು ಯಾರಾದರೂ ಊಹಿಸಬಹುದು. ಇಲ್ಲಿ ಇನ್ನೂ ದಾರುಣವಾದ ಸಂಗತಿಯೆಂದರೆ, ಪ್ರಿಯಕರ ಸಿದ್ಧಾರ್ಥ್ ಬನ್ಸಲ್ ತನ್ನ ದೂರನ್ನು ಹೇಳಿಕೊಂಡು ಮಹಿಳಾ ಆಯೋಗದಿಂದ ಹಿಡಿದು ಪೊಲೀಸ್ ಠಾಣೆಗಳು ಹಾಗೂ ಓಉಔಗಳ ಬಳಿ ಅಲೆದಾಡಿದರೂ ಪರಿಹಾರ ಸಿಗುವುದಿರಲಿ, ನ್ಯಾಯದ ಭರವಸೆಯೂ ಸಿಗಲಿಲ್ಲವೆಂಬುದು. ಒಬ್ಬ ಸುಶಿಕ್ಷಿತ, ಸುಪ್ರಿಂಕೋರ್ಟ್ ವಕೀಲನ ಪಾಡೇ ಹೀಗಾದರೆ ಈ ನಮ್ಮ ದೇಶದ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಜನಸಾಮಾನ್ಯರ ಗತಿಯೇನು ಎಂಬುದಕ್ಕೆ ಈ ಪ್ರಕರಣ ಕನ್ನಡಿ ಹಿಡಿದಿದೆ. ಇಂತಹ ಅದೆಷ್ಟು ಪ್ರಕರಣಗಳು ಬೆಳಕಿಗೆ ಬಾರದೆ ಕತ್ತಲೆಯಲ್ಲಿ ಮುಚ್ಚಿ ಹೋಗುತ್ತವೆಯೋ ಗೊತ್ತಿಲ್ಲ. ಸಮಾನತೆ ಎಂಬುದು ಮಹಿಳೆಯರ ಪಾಲಿಗೆ ಕೇವಲ ಮರೀಚಿಕೆಯೇ?

– ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...