Homeಅಂಕಣಗಳುನ್ಯಾಯದ ಕೈಯಿಯೇ ಅನ್ಯಾಯವ ಎಸಗಿದಾಗ....

ನ್ಯಾಯದ ಕೈಯಿಯೇ ಅನ್ಯಾಯವ ಎಸಗಿದಾಗ….

- Advertisement -
- Advertisement -

ಜನಸಾಮಾನ್ಯರು ನ್ಯಾಯಕ್ಕಾಗಿ ನ್ಯಾಯಾಧೀಶರ ಮೊರೆ ಹೋಗುವುದು ಸಹಜ. ಆದರೆ ನ್ಯಾಯಾಧೀಶರೇ ಅಪರಾಧಿ ಸ್ಥಾನದಲ್ಲಿ ನಿಂತರೆ…? ಬಿಹಾರದ ಖಗಾರಿಯಾ ಜಿಲ್ಲಾ ಸತ್ರ ನ್ಯಾಯಾಧೀಶ ಸುಭಾಷ್ ಚಂದ್ರ ಚೌರಾಸಿಯಾ ಅಂಥದೊಂದು ಘನಕಾರ್ಯದಲ್ಲಿ ಸಿಕ್ಕಿಬಿದ್ದಿದ್ದಾರೆ. ಕಾನೂನು ಪದವೀಧರೆಯಾಗಿರುವ ತನ್ನ 24 ವರ್ಷದ ಮಗಳು ಯಶಸ್ವಿನಿಯನ್ನು ಗೃಹಬಂಧನದಲ್ಲಿರಿಸಿ, ಹಿಂಸಿಸುವ ಮೂಲಕ. ಆ ಮಗಳು ಮಾಡಿದ ಅಪರಾಧವಾದರೂ ಏನು? ತನ್ನ ಇಚ್ಚೆಗೆ ವಿರುದ್ಧವಾಗಿ ಪ್ರೀತಿಸಿದವÀನನ್ನು ಮದುವೆಯಾಗಲು ಹೊರಟಿದ್ದು. ಆಕೆ ಸ್ವತಃ ನ್ಯಾಯಾಧೀಶಳಾಗಲು ಬಯಸಿ ಸಂಬಂಧಿತ ಪರೀಕ್ಷೆ ಕೂಡ ಬರೆದಿದ್ದಳು. ಆಕೆ ಪ್ರೇಮಿಸಿದ್ದು ಸುಪ್ರಿಂ ಕೋರ್ಟಿನಲ್ಲಿ ಪ್ರಾಕ್ಟೀಸ್ ಮಾಡುತ್ತಿರುವ ಸಿದ್ಧಾರ್ಥ್ ಬನ್ಸಲ್ ಎಂಬ ದೆಹಲಿಯ ಯುವ ವಕೀಲನನ್ನು.
ಈ ಮಹಾನುಭಾವ ನ್ಯಾಯಾಧೀಶ ತನ್ನ ಮಗಳು ಐಎಎಸ್ ಅಧಿಕಾರಿ ಅಥವ ನ್ಯಾಯಾಧೀಶ ಹುದ್ದೆಯಲ್ಲಿರುವ ವ್ಯಕ್ತಿಯನ್ನಷ್ಟೇ ಮದುವೆಯಾಗಬೇಕೆಂದು ಹಟ ಹಿಡಿದು ಈ ಘನ ಕಾರ್ಯ ಮಾಡಿದ್ದಾರಂತೆ. ಈ ನ್ಯಾಯಾಧೀಶರ ಮನವೊಲಿಸಲು ಪ್ರಯತ್ನಿಸಿ ವಿಫಲನಾದ ಆ ಪ್ರಿಯಕರ ಬೇರೆ ವಿಧಿಯಿಲ್ಲದೆ ಪಟ್ನಾ ಉಚ್ಚ ನ್ಯಾಯಾಲಯದ ಮೊರೆ ಹೋದ. ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಯಶಸ್ವಿನಿಯನ್ನು ಕರೆತಂದು ತನ್ನ ಮುಂದೆ ನಿಲ್ಲಿಸುವಂತೆ ಆದೇಶ ಹೊರಡಿಸಿದೆ. ಪರಿಣಾಮವಾಗಿ ಎಸ್ಪಿ ನೇತೃತ್ವದಲ್ಲಿ ಒಂದು ಟೀಂ ರಚಿಸಿ ಯಶಸ್ವಿನಿಯನ್ನು ಸುರಕ್ಷಿತವಾಗಿ ಕರೆ ತರುವಂತೆ ನಿರ್ದೇಶನ ನೀಡಿದೆ.
ನ್ಯಾಯಾಧೀಶರೊಬ್ಬರು ತಮ್ಮ ಮಗಳನ್ನು ಗೃಹ ಬಂಧನದಲ್ಲಿಟ್ಟಿದ್ದು ಇದೇ ಮೊದಲೇನಲ್ಲ. 2013 ರಲ್ಲಿ ರಾಜಸ್ಥಾನದ ರಾಠೋಡ್ ಎಂಬ ಜಿಲ್ಲಾ ನ್ಯಾಯಾಧೀಶರೊಬ್ಬರು ಇದನ್ನೇ ಮಾಡಿದ್ದರು. ಆದರೂ ಇಂತಹ ಘಟನೆಗಳು ಮುಂದುವರಿಯುತ್ತಲೇ ಇರುವುದಕ್ಕೆ ಇಂಥವರ ಮೇಲೆ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಇರುವುದೇ ಕಾರಣ.
ಇಲ್ಲಿ ಎರಡು ಪ್ರಮುಖ ಅಂಶಗಳನ್ನು ನಾವು ಗಮನಿಸಬೇಕು. ಒಬ್ಬ ತಂದೆಯಾಗಿ ಈ ನ್ಯಾಯಾಧೀಶ ಅದೇ ಪಿತೃಪ್ರಧಾನ ಕಟ್ಟುಪಾಡುಗಳಿಗೆ ಅಡಿಯಾಳಾಗಿರುವುದು ಒಂದು ಅಂಶವಾದರೆ, ಇಂತಹ ಮೌಲ್ಯಗಳನ್ನು ಹೊಂದಿರುವ ಇವರು ನ್ಯಾಯ ಪ್ರದಾನ ಮಾಡುವ ತಮ್ಮ ಕಾರ್ಯದಲ್ಲಿ ಎಷ್ಟರ ಮಟ್ಟಿಗೆ ಸಂವಿಧಾನ ಮತ್ತು ಕಾನೂನುಗಳಿಗೆ ನಿಷ್ಠರಾಗಿರುತ್ತಾರೆ ಎಂಬುದು ಇನ್ನೊಂದು ಅಂಶ. ಈ ಎರಡನೇ ಅಂಶ ಹೆಚ್ಚು ಅಪಾಯಕಾರಿ. ಏಕೆಂದರೆ ತನ್ನ ಎದುರು ಬರುವ ವ್ಯಾಜ್ಯಗಳನ್ನು ತೀರ್ಮಾನಿಸುವಾಗ ಪ್ರತಿಯೊಬ್ಬ ನ್ಯಾಯಾಧೀಶ ತನ್ನ ವೈಯಕ್ತಿಕ ಜ್ಞಾನ ಹಾಗೂ ಅನುಭವವಗಳ ಆಧಾರದಲ್ಲೇ ತೀರ್ಪು ಕೊಡುತ್ತಾರೆ. ಜಾತಿ ಹಾಗೂ ಅಂತಸ್ತುಗಳ ವ್ಯಸನದಲ್ಲಿರುವ ಇಂತಹ ಕುಂಠಿತ ಮನಸ್ಸಿನ ನ್ಯಾಯಾಧೀಶರಿಂದ ಮೊದಲೇ ಹದಗೆಟ್ಟಿರುವ ದೇಶದ ನ್ಯಾಯ ವ್ಯವಸ್ಥೆ ಇನ್ನೂ ಹೆಚ್ಚಿನ ಅಪಾಯವನ್ನು ಎದುರಿಸುವ ಸಾದ್ಯತೆಗಳಿವೆ.
ಕಾನೂನು ಪದವೀಧರೆಯಾದ ಮಗಳನ್ನೇ ಗೃಹ ಬಂಧನದಲ್ಲಿರಿಸುವ ಈ ವ್ಯಕ್ತಿ, ತಾನು ನ್ಯಾಯಾಧೀಶನಾಗಿರುವುದರಿಂದ ಏನು ಬೇಕಾದರೂ ಮಾಡಬಹುದು ಎಂಬ ದಾಷ್ಟ್ರ್ಯ ಪ್ರದರ್ಶಿಸಿದ್ದಾರೆ. ಇಂಥವರಿಂದ ‘ನ್ಯಾಯ ಪಡೆದ’ ಸಹಸ್ರಾರು ಬಡಪಾಯಿಗಳ ಪರಿಸ್ಥಿತಿಯನ್ನು ಯಾರಾದರೂ ಊಹಿಸಬಹುದು. ಇಲ್ಲಿ ಇನ್ನೂ ದಾರುಣವಾದ ಸಂಗತಿಯೆಂದರೆ, ಪ್ರಿಯಕರ ಸಿದ್ಧಾರ್ಥ್ ಬನ್ಸಲ್ ತನ್ನ ದೂರನ್ನು ಹೇಳಿಕೊಂಡು ಮಹಿಳಾ ಆಯೋಗದಿಂದ ಹಿಡಿದು ಪೊಲೀಸ್ ಠಾಣೆಗಳು ಹಾಗೂ ಓಉಔಗಳ ಬಳಿ ಅಲೆದಾಡಿದರೂ ಪರಿಹಾರ ಸಿಗುವುದಿರಲಿ, ನ್ಯಾಯದ ಭರವಸೆಯೂ ಸಿಗಲಿಲ್ಲವೆಂಬುದು. ಒಬ್ಬ ಸುಶಿಕ್ಷಿತ, ಸುಪ್ರಿಂಕೋರ್ಟ್ ವಕೀಲನ ಪಾಡೇ ಹೀಗಾದರೆ ಈ ನಮ್ಮ ದೇಶದ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಜನಸಾಮಾನ್ಯರ ಗತಿಯೇನು ಎಂಬುದಕ್ಕೆ ಈ ಪ್ರಕರಣ ಕನ್ನಡಿ ಹಿಡಿದಿದೆ. ಇಂತಹ ಅದೆಷ್ಟು ಪ್ರಕರಣಗಳು ಬೆಳಕಿಗೆ ಬಾರದೆ ಕತ್ತಲೆಯಲ್ಲಿ ಮುಚ್ಚಿ ಹೋಗುತ್ತವೆಯೋ ಗೊತ್ತಿಲ್ಲ. ಸಮಾನತೆ ಎಂಬುದು ಮಹಿಳೆಯರ ಪಾಲಿಗೆ ಕೇವಲ ಮರೀಚಿಕೆಯೇ?

– ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...