Homeಅಂಕಣಗಳುನಮ್ಮ ಮನೋ ಬಯಕೆಗಳೇ ವರದಿಗಳಾದಾಗ....

ನಮ್ಮ ಮನೋ ಬಯಕೆಗಳೇ ವರದಿಗಳಾದಾಗ….

- Advertisement -
- Advertisement -

| ಡಾ. ವಾಸು ಎಚ್.ವಿ |

ಯಾವುದೇ ಪತ್ರಕರ್ತರಿಗೆ ಸುದ್ದಿ ಮಾಡುವಾಗ ಒಂದು ಪ್ರಮುಖ ಸವಾಲು ಇರುತ್ತದೆ. ಅದು ತನ್ನ ಮನಸ್ಸಿನ ಅಪೇಕ್ಷೆಗಿಂತ ಭಿನ್ನವಾಗಿ ಇರುವ ವಸ್ತುಸ್ಥಿತಿಯನ್ನು ವಸ್ತುನಿಷ್ಠವಾಗಿ ವರದಿ ಮಾಡುವುದು. ತನ್ನೊಳಗೆ ನಿರ್ದಿಷ್ಟ ಒಲವು ನಿಲುವುಗಳಿಲ್ಲದ ಪತ್ರಕರ್ತರು ಯಾರೂ ಇರುವುದಿಲ್ಲ. ಅದರಲ್ಲೂ ಸದ್ಯ ದೇಶವನ್ನಾಳುತ್ತಿರುವವರು ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಧಕ್ಕೆ ತರುತ್ತಿದ್ದಾರೆ ಎಂಬುದು ಸ್ಪಷ್ಟವಿದ್ದರೆ, ಪತ್ರಕರ್ತರಾದವರು ಮಾಮೂಲಿಗಿಂತ ಹೆಚ್ಚೇ ವಿರೋಧ ಪಕ್ಷದ ಪಾತ್ರ ವಹಿಸಬೇಕಾಗುತ್ತದೆ. ಆದರೆ, ಹಾಗಾದಾಗ ಕಣ್ಣೆದುರಿಗಿನ ವಾಸ್ತವ ಗ್ರಹಿಸದೇ ಅಥವಾ ಗ್ರಹಿಸಿದರೂ ಅದನ್ನು ಬರಹಕ್ಕಿಳಿಸುವಾಗ ತನ್ನ ಮನೋಬಯಕೆಯನ್ನು ವಿಶ್ಲೇಷಣೆಯನ್ನಾಗಿಸುವ ಕೆಲಸ ನಡೆದುಬಿಡುತ್ತದೆ.

ಇದನ್ನು ಈ ನಿಮ್ಮ ಪತ್ರಿಕೆಯೂ ಎದುರಿಸುತ್ತಿರುವ ಸವಾಲು. ಕಾಂಗ್ರೆಸ್ ಅಥವಾ ಜೆಡಿಎಸ್ ಕುರಿತ ಯಾವ ಒಲವೂ ನಮಗಿಲ್ಲ. ಆದರೆ, ನಿಸ್ಸಂದೇಹವಾಗಿ ಬಿಜೆಪಿಯು ಭಾರತ ದೇಶದ ಮೂಲ ಅಡಿಪಾಯಕ್ಕೇ ಧಕ್ಕೆ ತರುತ್ತಿದೆ ಎಂಬ ಅಪಾಯದ ಅರಿವಿದೆ. ಹೀಗಿರುವಾಗ ಕೆಲವು ಎಡವಟ್ಟುಗಳನ್ನು ನಾವೂ ಮಾಡಿದ್ದೇವೆ. 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಇದ್ದ ಅಲೆಯ ಸಂಪೂರ್ಣ ಗ್ರಹಿಕೆ ಇತ್ತೆಂದು ಹೇಳಲಾಗದಿದ್ದರೂ, ಎನ್‍ಡಿಎ ಸರ್ಕಾರ ರಚನೆ ಮಾಡುವ ಸಾಧ್ಯತೆಯೇ ಹೆಚ್ಚು ಎಂಬುದು ಸ್ಪಷ್ಟವಿತ್ತು. ಇಡೀ ದೇಶದಲ್ಲಿ ಮೋದಿ ಅಲೆ ಅತ್ಯಂತ ಹೆಚ್ಚಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು ಎಂಬುದು ಸ್ಪಷ್ಟವಾಗಿ ಗೋಚರವಾಗುತ್ತಿತ್ತು. ಅದರಲ್ಲೂ ರಾಜ್ಯದ ಮೈತ್ರಿ ಸರ್ಕಾರವು ಜನರಿಗೆ ನಿರಾಶೆ ಮೂಡಿಸಿರುವುದು ಖಚಿತವಿತ್ತು. ಹೀಗಿದ್ದೂ, ನಮ್ಮ ವಿಶ್ಲೇಷಣೆಗಳಲ್ಲಿ ಬಿಜೆಪಿ ಸೋಲಬೇಕೆಂಬ ಬಯಕೆಯು ಎದ್ದು ಕಾಣುತ್ತಿತ್ತು.

ಇಂದು ಈ ಅಪೇಕ್ಷೆಯೇ ತಪ್ಪೆಂದು ಅನಿಸುವುದಿಲ್ಲ. ಅದು ದೇಶದ ನಾಗರಿಕರಾಗಿ ನಮ್ಮ ಕರ್ತವ್ಯವೂ ಆಗಿರಬಹುದು. ಆದರೆ, ಅದು ವಸ್ತುನಿಷ್ಠ ವಿಶ್ಲೇಷಣೆ ಆಗುವುದಿಲ್ಲ. ಹೀಗೆಂದ ಮೇಲೆ ಇನ್ನೊಂದು ಪ್ರಶ್ನೆ ಏಳುತ್ತದೆ. ಹಾಗಾದರೆ, ಪತ್ರಕರ್ತರು ಪ್ರಜಾಪ್ರಭುತ್ವದ ಪರ ನಿಲ್ಲುವ ಮತ್ತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕೇ ಬೇಡವೇ? ಖಂಡಿತವಾಗಿ ಅಂತಹ ಕೆಲಸವನ್ನು ಪತ್ರಕರ್ತರು ಮಾಡಲೇಬೇಕು. ಆದರೆ ಎಂದಿಗೂ ತಮ್ಮ ವರದಿಗಳಲ್ಲಿ ಸುಳ್ಳಿನ ವಾಸನೆ ಇರದಂತೆ ನೋಡಿಕೊಳ್ಳಬೇಕು. ಬಹುಶಃ ಉದ್ದೇಶಪೂರ್ವಕ ಸುಳ್ಳನ್ನು ಈ ಪತ್ರಿಕೆಯಲ್ಲಿ ಬರೆಯುವುದಿಲ್ಲ. ಆದರೆ, ವಿಶ್ಲೇಷಣೆಯಲ್ಲಿ ಮನೋಬಯಕೆಗಳು ತೂರಿಕೊಂಡಿರುವುದು ವಾಸ್ತವ.

ಕಳೆದ ವಾರದ ಸಂಚಿಕೆ ಮುದ್ರಣಕ್ಕೆ ಹೋಗುವ ಮುನ್ನ ಮೂರು ಮೂಲಗಳಿಂದ ನಮಗೆ ಮಾಹಿತಿ ದೊರಕಿತು. ಅದರ ಪ್ರಕಾರ ಖಚಿತವಾಗಿ ಮೂರು ಗುಂಪುಗಳಲ್ಲಿ ಶಾಸಕರು ರಾಜೀನಾಮೆ ಕೊಡುತ್ತಾರೆ. ಎಚ್.ವಿಶ್ವನಾಥ್, ರಮೇಶ್ ಜಾರಕಿಹೊಳಿ ಮತ್ತು ಬೆಂಗಳೂರಿನ ಶಾಸಕರೊಬ್ಬರ ನೇತೃತ್ವ ಇರುತ್ತದೆ ಎಂಬುದು ಗೊತ್ತಾಗಿತ್ತು. 25 ಶಾಸಕರ ಜೊತೆ ಬಿಜೆಪಿಯು ಸಂಪರ್ಕದಲ್ಲಿದ್ದು, ಮೊದಲ 10 ಜನಕ್ಕೆ ವಿಶೇಷ ಆಫರ್ ಕೊಟ್ಟಿದ್ದಾರೆಂಬ ಸುಳಿವು ಸಿಕ್ಕಿತ್ತು. ಆನಂದ್‍ಸಿಂಗ್ ಮತ್ತು ರಮೇಶ್ ಜಾರಕಿಹೊಳಿಯವರ ರಾಜೀನಾಮೆ ಟ್ರೈಲರ್ ಮಾತ್ರ. ಗುಂಪು ಗುಂಪಾಗಿಯೇ ರಾಜೀನಾಮೆ ನೀಡಲಿದ್ದಾರೆ. ಅದು ಇನ್ನಷ್ಟು ಜನರನ್ನು ಹುರಿದುಂಬಿಸಲಿದೆ ಎಂಬುದು ಒಂದು ಮೂಲವಾದರೆ, ಆಶ್ಚರ್ಯಕರ ಮುಖಗಳು ರಾಜೀನಾಮೆ ನೀಡುವ ಗುಂಪಿನಲ್ಲಿರುತ್ತವೆ ಎಂಬುದು ಇನ್ನೊಂದು ಮೂಲವಾಗಿತ್ತು. ಈ ಸಾರಿಯ ಆಪರೇಷನ್ ಕಮಲದಿಂದ ಸಿದ್ದರಾಮಯ್ಯನವರ ಮೇಲೆ ಸಂಶಯಗಳು ದಟ್ಟವಾಗುತ್ತವೆ ಎಂಬುದು ಸಚಿವರೊಬ್ಬರು ನೀಡಿದ ಸುಳಿವಾಗಿತ್ತು.

ಇಷ್ಟು ಖಚಿತ ಸುಳಿವಿದ್ದಾಗಲೂ ನಮ್ಮ ವರದಿಗಳಲ್ಲಿ ಈ ಸಾರಿಯದ್ದೂ ಇನ್ನೊಂದು ಠುಸ್ ಆಪರೇಷನ್ ಎಂದೇ ಬಂದಿತು. ಹಾಗೆಯೇ ಎಚ್.ವಿಶ್ವನಾಥ್‍ರ ಸಂದರ್ಶನ ಮಾಡಲು ಹೋಗುವ ಹೊತ್ತಿಗಾಗಲೇ ಅವರ ಧೋರಣೆಯ ಕುರಿತು ಸಂಶಯವಿತ್ತಾದರೂ, ವರದಿ ಬರೆದಾಗ ರಾಜ್ಯದ ಚಿಂತನಶೀಲ ರಾಜಕಾರಣಿಯ ಕುರಿತ ಭ್ರಮೆಯು ಅದರಲ್ಲಿತ್ತು. ವಿಶ್ವನಾಥ್‍ರಂಥವರು ಹಾಗೆ ಮಾಡಲಾರರು ಎಂಬ ಮನೋಬಯಕೆಯಲ್ಲಿ ಎರಡು ಆಯಾಮಗಳಿದ್ದವು. ಒಂದು, ಅವರ ಕುರಿತ ಸರಿಯಾದ ಅಸೆಸ್‍ಮೆಂಟ್‍ನ ಕೊರತೆ. ಮತ್ತೊಂದು, ಹಾಗೆ ಮಾಡಬಾರದೆಂಬ ನಿರೀಕ್ಷೆ.

ಜೈಲು ಅಥವಾ ದೈಹಿಕ ದಾಳಿಗಳನ್ನೂ ಎದುರಿಸಿಯಾದರೂ ಸತ್ಯವನ್ನು ಹೇಳಬೇಕೆನ್ನುವ ತುಡಿತ ಮತ್ತು ಧೈರ್ಯವಿರುವ ಪತ್ರಕರ್ತರು ಈ ದೇಶದಲ್ಲಿ ಇನ್ನೂ ಸಾಕಷ್ಟು ಉಳಿದುಕೊಂಡಿದ್ದಾರೆ. ಆದರೆ, ಭ್ರಮೆಗಳನ್ನು ಮೀರುವುದು ಸುಲಭದ ಮಾತಲ್ಲ. ಈ ಭ್ರಮೆಗಳೂ ಅವರ ಸದ್ಭಾವನೆಗಳಿಂದಲೇ ಹುಟ್ಟಿರುವಂಥವು. ಓದು ಬಲ್ಲ ವರ್ಗವು ಇಂದು ಸರ್ವರ ಒಳಿತಿನ ದೃಷ್ಟಿಯಿಂದ ಸೂಕ್ತವಾದ ಓರಿಯೆಂಟೇಷನ್ ಬಯಸುತ್ತಿಲ್ಲ; ಬದಲಿಗೆ ತಾನೇ ಓರಿಯೆಂಟ್ ಮಾಡಬಲ್ಲಷ್ಟು ಪ್ರಬಲವಾಗಿದೆ. ಹೀಗಾಗಿ ಪ್ರಜಾಪ್ರಭುತ್ವದ ಸ್ಥಾಪಿತ ಮೌಲ್ಯಗಳ ಆಧಾರದ ಮೇಲಷ್ಟೇ ವಿಶ್ಲೇಷಣೆಯನ್ನು ಮಾಡುತ್ತಾ ಪಕ್ಷಗಳ ಕುರಿತ ಒಲವು-ನಿಲುವುಗಳನ್ನು ಪಕ್ಕಕ್ಕೆ ಸರಿಸುವುದು ಇಂದಿನ ಅಗತ್ಯವಾಗಿದೆ.

ಆ ನಿಟ್ಟಿನಲ್ಲಿ ಈ ಪತ್ರಿಕೆ ತನ್ನ ಭಾಷೆ, ಕಥನ ಮತ್ತು ವಿಶ್ಲೇಷಣಾ ವಿಧಾನವನ್ನು ರೂಪಿಸಿಕೊಳ್ಳಲಿದೆ. ಪತ್ರಿಕೆಯ ಓದುಗರೂ ಇದರ ಕುರಿತು ಚಿಂತಿಸಿ ತಮ್ಮ ಅನಿಸಿಕೆಗಳನ್ನು ಮುಂದಿಡಬೇಕೆಂದು ಕೋರುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...