Homeಅಂಕಣಗಳುನಮ್ಮ ಮನೋ ಬಯಕೆಗಳೇ ವರದಿಗಳಾದಾಗ....

ನಮ್ಮ ಮನೋ ಬಯಕೆಗಳೇ ವರದಿಗಳಾದಾಗ….

- Advertisement -
- Advertisement -

| ಡಾ. ವಾಸು ಎಚ್.ವಿ |

ಯಾವುದೇ ಪತ್ರಕರ್ತರಿಗೆ ಸುದ್ದಿ ಮಾಡುವಾಗ ಒಂದು ಪ್ರಮುಖ ಸವಾಲು ಇರುತ್ತದೆ. ಅದು ತನ್ನ ಮನಸ್ಸಿನ ಅಪೇಕ್ಷೆಗಿಂತ ಭಿನ್ನವಾಗಿ ಇರುವ ವಸ್ತುಸ್ಥಿತಿಯನ್ನು ವಸ್ತುನಿಷ್ಠವಾಗಿ ವರದಿ ಮಾಡುವುದು. ತನ್ನೊಳಗೆ ನಿರ್ದಿಷ್ಟ ಒಲವು ನಿಲುವುಗಳಿಲ್ಲದ ಪತ್ರಕರ್ತರು ಯಾರೂ ಇರುವುದಿಲ್ಲ. ಅದರಲ್ಲೂ ಸದ್ಯ ದೇಶವನ್ನಾಳುತ್ತಿರುವವರು ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಧಕ್ಕೆ ತರುತ್ತಿದ್ದಾರೆ ಎಂಬುದು ಸ್ಪಷ್ಟವಿದ್ದರೆ, ಪತ್ರಕರ್ತರಾದವರು ಮಾಮೂಲಿಗಿಂತ ಹೆಚ್ಚೇ ವಿರೋಧ ಪಕ್ಷದ ಪಾತ್ರ ವಹಿಸಬೇಕಾಗುತ್ತದೆ. ಆದರೆ, ಹಾಗಾದಾಗ ಕಣ್ಣೆದುರಿಗಿನ ವಾಸ್ತವ ಗ್ರಹಿಸದೇ ಅಥವಾ ಗ್ರಹಿಸಿದರೂ ಅದನ್ನು ಬರಹಕ್ಕಿಳಿಸುವಾಗ ತನ್ನ ಮನೋಬಯಕೆಯನ್ನು ವಿಶ್ಲೇಷಣೆಯನ್ನಾಗಿಸುವ ಕೆಲಸ ನಡೆದುಬಿಡುತ್ತದೆ.

ಇದನ್ನು ಈ ನಿಮ್ಮ ಪತ್ರಿಕೆಯೂ ಎದುರಿಸುತ್ತಿರುವ ಸವಾಲು. ಕಾಂಗ್ರೆಸ್ ಅಥವಾ ಜೆಡಿಎಸ್ ಕುರಿತ ಯಾವ ಒಲವೂ ನಮಗಿಲ್ಲ. ಆದರೆ, ನಿಸ್ಸಂದೇಹವಾಗಿ ಬಿಜೆಪಿಯು ಭಾರತ ದೇಶದ ಮೂಲ ಅಡಿಪಾಯಕ್ಕೇ ಧಕ್ಕೆ ತರುತ್ತಿದೆ ಎಂಬ ಅಪಾಯದ ಅರಿವಿದೆ. ಹೀಗಿರುವಾಗ ಕೆಲವು ಎಡವಟ್ಟುಗಳನ್ನು ನಾವೂ ಮಾಡಿದ್ದೇವೆ. 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಇದ್ದ ಅಲೆಯ ಸಂಪೂರ್ಣ ಗ್ರಹಿಕೆ ಇತ್ತೆಂದು ಹೇಳಲಾಗದಿದ್ದರೂ, ಎನ್‍ಡಿಎ ಸರ್ಕಾರ ರಚನೆ ಮಾಡುವ ಸಾಧ್ಯತೆಯೇ ಹೆಚ್ಚು ಎಂಬುದು ಸ್ಪಷ್ಟವಿತ್ತು. ಇಡೀ ದೇಶದಲ್ಲಿ ಮೋದಿ ಅಲೆ ಅತ್ಯಂತ ಹೆಚ್ಚಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು ಎಂಬುದು ಸ್ಪಷ್ಟವಾಗಿ ಗೋಚರವಾಗುತ್ತಿತ್ತು. ಅದರಲ್ಲೂ ರಾಜ್ಯದ ಮೈತ್ರಿ ಸರ್ಕಾರವು ಜನರಿಗೆ ನಿರಾಶೆ ಮೂಡಿಸಿರುವುದು ಖಚಿತವಿತ್ತು. ಹೀಗಿದ್ದೂ, ನಮ್ಮ ವಿಶ್ಲೇಷಣೆಗಳಲ್ಲಿ ಬಿಜೆಪಿ ಸೋಲಬೇಕೆಂಬ ಬಯಕೆಯು ಎದ್ದು ಕಾಣುತ್ತಿತ್ತು.

ಇಂದು ಈ ಅಪೇಕ್ಷೆಯೇ ತಪ್ಪೆಂದು ಅನಿಸುವುದಿಲ್ಲ. ಅದು ದೇಶದ ನಾಗರಿಕರಾಗಿ ನಮ್ಮ ಕರ್ತವ್ಯವೂ ಆಗಿರಬಹುದು. ಆದರೆ, ಅದು ವಸ್ತುನಿಷ್ಠ ವಿಶ್ಲೇಷಣೆ ಆಗುವುದಿಲ್ಲ. ಹೀಗೆಂದ ಮೇಲೆ ಇನ್ನೊಂದು ಪ್ರಶ್ನೆ ಏಳುತ್ತದೆ. ಹಾಗಾದರೆ, ಪತ್ರಕರ್ತರು ಪ್ರಜಾಪ್ರಭುತ್ವದ ಪರ ನಿಲ್ಲುವ ಮತ್ತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕೇ ಬೇಡವೇ? ಖಂಡಿತವಾಗಿ ಅಂತಹ ಕೆಲಸವನ್ನು ಪತ್ರಕರ್ತರು ಮಾಡಲೇಬೇಕು. ಆದರೆ ಎಂದಿಗೂ ತಮ್ಮ ವರದಿಗಳಲ್ಲಿ ಸುಳ್ಳಿನ ವಾಸನೆ ಇರದಂತೆ ನೋಡಿಕೊಳ್ಳಬೇಕು. ಬಹುಶಃ ಉದ್ದೇಶಪೂರ್ವಕ ಸುಳ್ಳನ್ನು ಈ ಪತ್ರಿಕೆಯಲ್ಲಿ ಬರೆಯುವುದಿಲ್ಲ. ಆದರೆ, ವಿಶ್ಲೇಷಣೆಯಲ್ಲಿ ಮನೋಬಯಕೆಗಳು ತೂರಿಕೊಂಡಿರುವುದು ವಾಸ್ತವ.

ಕಳೆದ ವಾರದ ಸಂಚಿಕೆ ಮುದ್ರಣಕ್ಕೆ ಹೋಗುವ ಮುನ್ನ ಮೂರು ಮೂಲಗಳಿಂದ ನಮಗೆ ಮಾಹಿತಿ ದೊರಕಿತು. ಅದರ ಪ್ರಕಾರ ಖಚಿತವಾಗಿ ಮೂರು ಗುಂಪುಗಳಲ್ಲಿ ಶಾಸಕರು ರಾಜೀನಾಮೆ ಕೊಡುತ್ತಾರೆ. ಎಚ್.ವಿಶ್ವನಾಥ್, ರಮೇಶ್ ಜಾರಕಿಹೊಳಿ ಮತ್ತು ಬೆಂಗಳೂರಿನ ಶಾಸಕರೊಬ್ಬರ ನೇತೃತ್ವ ಇರುತ್ತದೆ ಎಂಬುದು ಗೊತ್ತಾಗಿತ್ತು. 25 ಶಾಸಕರ ಜೊತೆ ಬಿಜೆಪಿಯು ಸಂಪರ್ಕದಲ್ಲಿದ್ದು, ಮೊದಲ 10 ಜನಕ್ಕೆ ವಿಶೇಷ ಆಫರ್ ಕೊಟ್ಟಿದ್ದಾರೆಂಬ ಸುಳಿವು ಸಿಕ್ಕಿತ್ತು. ಆನಂದ್‍ಸಿಂಗ್ ಮತ್ತು ರಮೇಶ್ ಜಾರಕಿಹೊಳಿಯವರ ರಾಜೀನಾಮೆ ಟ್ರೈಲರ್ ಮಾತ್ರ. ಗುಂಪು ಗುಂಪಾಗಿಯೇ ರಾಜೀನಾಮೆ ನೀಡಲಿದ್ದಾರೆ. ಅದು ಇನ್ನಷ್ಟು ಜನರನ್ನು ಹುರಿದುಂಬಿಸಲಿದೆ ಎಂಬುದು ಒಂದು ಮೂಲವಾದರೆ, ಆಶ್ಚರ್ಯಕರ ಮುಖಗಳು ರಾಜೀನಾಮೆ ನೀಡುವ ಗುಂಪಿನಲ್ಲಿರುತ್ತವೆ ಎಂಬುದು ಇನ್ನೊಂದು ಮೂಲವಾಗಿತ್ತು. ಈ ಸಾರಿಯ ಆಪರೇಷನ್ ಕಮಲದಿಂದ ಸಿದ್ದರಾಮಯ್ಯನವರ ಮೇಲೆ ಸಂಶಯಗಳು ದಟ್ಟವಾಗುತ್ತವೆ ಎಂಬುದು ಸಚಿವರೊಬ್ಬರು ನೀಡಿದ ಸುಳಿವಾಗಿತ್ತು.

ಇಷ್ಟು ಖಚಿತ ಸುಳಿವಿದ್ದಾಗಲೂ ನಮ್ಮ ವರದಿಗಳಲ್ಲಿ ಈ ಸಾರಿಯದ್ದೂ ಇನ್ನೊಂದು ಠುಸ್ ಆಪರೇಷನ್ ಎಂದೇ ಬಂದಿತು. ಹಾಗೆಯೇ ಎಚ್.ವಿಶ್ವನಾಥ್‍ರ ಸಂದರ್ಶನ ಮಾಡಲು ಹೋಗುವ ಹೊತ್ತಿಗಾಗಲೇ ಅವರ ಧೋರಣೆಯ ಕುರಿತು ಸಂಶಯವಿತ್ತಾದರೂ, ವರದಿ ಬರೆದಾಗ ರಾಜ್ಯದ ಚಿಂತನಶೀಲ ರಾಜಕಾರಣಿಯ ಕುರಿತ ಭ್ರಮೆಯು ಅದರಲ್ಲಿತ್ತು. ವಿಶ್ವನಾಥ್‍ರಂಥವರು ಹಾಗೆ ಮಾಡಲಾರರು ಎಂಬ ಮನೋಬಯಕೆಯಲ್ಲಿ ಎರಡು ಆಯಾಮಗಳಿದ್ದವು. ಒಂದು, ಅವರ ಕುರಿತ ಸರಿಯಾದ ಅಸೆಸ್‍ಮೆಂಟ್‍ನ ಕೊರತೆ. ಮತ್ತೊಂದು, ಹಾಗೆ ಮಾಡಬಾರದೆಂಬ ನಿರೀಕ್ಷೆ.

ಜೈಲು ಅಥವಾ ದೈಹಿಕ ದಾಳಿಗಳನ್ನೂ ಎದುರಿಸಿಯಾದರೂ ಸತ್ಯವನ್ನು ಹೇಳಬೇಕೆನ್ನುವ ತುಡಿತ ಮತ್ತು ಧೈರ್ಯವಿರುವ ಪತ್ರಕರ್ತರು ಈ ದೇಶದಲ್ಲಿ ಇನ್ನೂ ಸಾಕಷ್ಟು ಉಳಿದುಕೊಂಡಿದ್ದಾರೆ. ಆದರೆ, ಭ್ರಮೆಗಳನ್ನು ಮೀರುವುದು ಸುಲಭದ ಮಾತಲ್ಲ. ಈ ಭ್ರಮೆಗಳೂ ಅವರ ಸದ್ಭಾವನೆಗಳಿಂದಲೇ ಹುಟ್ಟಿರುವಂಥವು. ಓದು ಬಲ್ಲ ವರ್ಗವು ಇಂದು ಸರ್ವರ ಒಳಿತಿನ ದೃಷ್ಟಿಯಿಂದ ಸೂಕ್ತವಾದ ಓರಿಯೆಂಟೇಷನ್ ಬಯಸುತ್ತಿಲ್ಲ; ಬದಲಿಗೆ ತಾನೇ ಓರಿಯೆಂಟ್ ಮಾಡಬಲ್ಲಷ್ಟು ಪ್ರಬಲವಾಗಿದೆ. ಹೀಗಾಗಿ ಪ್ರಜಾಪ್ರಭುತ್ವದ ಸ್ಥಾಪಿತ ಮೌಲ್ಯಗಳ ಆಧಾರದ ಮೇಲಷ್ಟೇ ವಿಶ್ಲೇಷಣೆಯನ್ನು ಮಾಡುತ್ತಾ ಪಕ್ಷಗಳ ಕುರಿತ ಒಲವು-ನಿಲುವುಗಳನ್ನು ಪಕ್ಕಕ್ಕೆ ಸರಿಸುವುದು ಇಂದಿನ ಅಗತ್ಯವಾಗಿದೆ.

ಆ ನಿಟ್ಟಿನಲ್ಲಿ ಈ ಪತ್ರಿಕೆ ತನ್ನ ಭಾಷೆ, ಕಥನ ಮತ್ತು ವಿಶ್ಲೇಷಣಾ ವಿಧಾನವನ್ನು ರೂಪಿಸಿಕೊಳ್ಳಲಿದೆ. ಪತ್ರಿಕೆಯ ಓದುಗರೂ ಇದರ ಕುರಿತು ಚಿಂತಿಸಿ ತಮ್ಮ ಅನಿಸಿಕೆಗಳನ್ನು ಮುಂದಿಡಬೇಕೆಂದು ಕೋರುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...