Homeಅಂಕಣಗಳುನಮ್ಮ ಮನೋ ಬಯಕೆಗಳೇ ವರದಿಗಳಾದಾಗ....

ನಮ್ಮ ಮನೋ ಬಯಕೆಗಳೇ ವರದಿಗಳಾದಾಗ….

- Advertisement -
- Advertisement -

| ಡಾ. ವಾಸು ಎಚ್.ವಿ |

ಯಾವುದೇ ಪತ್ರಕರ್ತರಿಗೆ ಸುದ್ದಿ ಮಾಡುವಾಗ ಒಂದು ಪ್ರಮುಖ ಸವಾಲು ಇರುತ್ತದೆ. ಅದು ತನ್ನ ಮನಸ್ಸಿನ ಅಪೇಕ್ಷೆಗಿಂತ ಭಿನ್ನವಾಗಿ ಇರುವ ವಸ್ತುಸ್ಥಿತಿಯನ್ನು ವಸ್ತುನಿಷ್ಠವಾಗಿ ವರದಿ ಮಾಡುವುದು. ತನ್ನೊಳಗೆ ನಿರ್ದಿಷ್ಟ ಒಲವು ನಿಲುವುಗಳಿಲ್ಲದ ಪತ್ರಕರ್ತರು ಯಾರೂ ಇರುವುದಿಲ್ಲ. ಅದರಲ್ಲೂ ಸದ್ಯ ದೇಶವನ್ನಾಳುತ್ತಿರುವವರು ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಧಕ್ಕೆ ತರುತ್ತಿದ್ದಾರೆ ಎಂಬುದು ಸ್ಪಷ್ಟವಿದ್ದರೆ, ಪತ್ರಕರ್ತರಾದವರು ಮಾಮೂಲಿಗಿಂತ ಹೆಚ್ಚೇ ವಿರೋಧ ಪಕ್ಷದ ಪಾತ್ರ ವಹಿಸಬೇಕಾಗುತ್ತದೆ. ಆದರೆ, ಹಾಗಾದಾಗ ಕಣ್ಣೆದುರಿಗಿನ ವಾಸ್ತವ ಗ್ರಹಿಸದೇ ಅಥವಾ ಗ್ರಹಿಸಿದರೂ ಅದನ್ನು ಬರಹಕ್ಕಿಳಿಸುವಾಗ ತನ್ನ ಮನೋಬಯಕೆಯನ್ನು ವಿಶ್ಲೇಷಣೆಯನ್ನಾಗಿಸುವ ಕೆಲಸ ನಡೆದುಬಿಡುತ್ತದೆ.

ಇದನ್ನು ಈ ನಿಮ್ಮ ಪತ್ರಿಕೆಯೂ ಎದುರಿಸುತ್ತಿರುವ ಸವಾಲು. ಕಾಂಗ್ರೆಸ್ ಅಥವಾ ಜೆಡಿಎಸ್ ಕುರಿತ ಯಾವ ಒಲವೂ ನಮಗಿಲ್ಲ. ಆದರೆ, ನಿಸ್ಸಂದೇಹವಾಗಿ ಬಿಜೆಪಿಯು ಭಾರತ ದೇಶದ ಮೂಲ ಅಡಿಪಾಯಕ್ಕೇ ಧಕ್ಕೆ ತರುತ್ತಿದೆ ಎಂಬ ಅಪಾಯದ ಅರಿವಿದೆ. ಹೀಗಿರುವಾಗ ಕೆಲವು ಎಡವಟ್ಟುಗಳನ್ನು ನಾವೂ ಮಾಡಿದ್ದೇವೆ. 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಇದ್ದ ಅಲೆಯ ಸಂಪೂರ್ಣ ಗ್ರಹಿಕೆ ಇತ್ತೆಂದು ಹೇಳಲಾಗದಿದ್ದರೂ, ಎನ್‍ಡಿಎ ಸರ್ಕಾರ ರಚನೆ ಮಾಡುವ ಸಾಧ್ಯತೆಯೇ ಹೆಚ್ಚು ಎಂಬುದು ಸ್ಪಷ್ಟವಿತ್ತು. ಇಡೀ ದೇಶದಲ್ಲಿ ಮೋದಿ ಅಲೆ ಅತ್ಯಂತ ಹೆಚ್ಚಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು ಎಂಬುದು ಸ್ಪಷ್ಟವಾಗಿ ಗೋಚರವಾಗುತ್ತಿತ್ತು. ಅದರಲ್ಲೂ ರಾಜ್ಯದ ಮೈತ್ರಿ ಸರ್ಕಾರವು ಜನರಿಗೆ ನಿರಾಶೆ ಮೂಡಿಸಿರುವುದು ಖಚಿತವಿತ್ತು. ಹೀಗಿದ್ದೂ, ನಮ್ಮ ವಿಶ್ಲೇಷಣೆಗಳಲ್ಲಿ ಬಿಜೆಪಿ ಸೋಲಬೇಕೆಂಬ ಬಯಕೆಯು ಎದ್ದು ಕಾಣುತ್ತಿತ್ತು.

ಇಂದು ಈ ಅಪೇಕ್ಷೆಯೇ ತಪ್ಪೆಂದು ಅನಿಸುವುದಿಲ್ಲ. ಅದು ದೇಶದ ನಾಗರಿಕರಾಗಿ ನಮ್ಮ ಕರ್ತವ್ಯವೂ ಆಗಿರಬಹುದು. ಆದರೆ, ಅದು ವಸ್ತುನಿಷ್ಠ ವಿಶ್ಲೇಷಣೆ ಆಗುವುದಿಲ್ಲ. ಹೀಗೆಂದ ಮೇಲೆ ಇನ್ನೊಂದು ಪ್ರಶ್ನೆ ಏಳುತ್ತದೆ. ಹಾಗಾದರೆ, ಪತ್ರಕರ್ತರು ಪ್ರಜಾಪ್ರಭುತ್ವದ ಪರ ನಿಲ್ಲುವ ಮತ್ತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕೇ ಬೇಡವೇ? ಖಂಡಿತವಾಗಿ ಅಂತಹ ಕೆಲಸವನ್ನು ಪತ್ರಕರ್ತರು ಮಾಡಲೇಬೇಕು. ಆದರೆ ಎಂದಿಗೂ ತಮ್ಮ ವರದಿಗಳಲ್ಲಿ ಸುಳ್ಳಿನ ವಾಸನೆ ಇರದಂತೆ ನೋಡಿಕೊಳ್ಳಬೇಕು. ಬಹುಶಃ ಉದ್ದೇಶಪೂರ್ವಕ ಸುಳ್ಳನ್ನು ಈ ಪತ್ರಿಕೆಯಲ್ಲಿ ಬರೆಯುವುದಿಲ್ಲ. ಆದರೆ, ವಿಶ್ಲೇಷಣೆಯಲ್ಲಿ ಮನೋಬಯಕೆಗಳು ತೂರಿಕೊಂಡಿರುವುದು ವಾಸ್ತವ.

ಕಳೆದ ವಾರದ ಸಂಚಿಕೆ ಮುದ್ರಣಕ್ಕೆ ಹೋಗುವ ಮುನ್ನ ಮೂರು ಮೂಲಗಳಿಂದ ನಮಗೆ ಮಾಹಿತಿ ದೊರಕಿತು. ಅದರ ಪ್ರಕಾರ ಖಚಿತವಾಗಿ ಮೂರು ಗುಂಪುಗಳಲ್ಲಿ ಶಾಸಕರು ರಾಜೀನಾಮೆ ಕೊಡುತ್ತಾರೆ. ಎಚ್.ವಿಶ್ವನಾಥ್, ರಮೇಶ್ ಜಾರಕಿಹೊಳಿ ಮತ್ತು ಬೆಂಗಳೂರಿನ ಶಾಸಕರೊಬ್ಬರ ನೇತೃತ್ವ ಇರುತ್ತದೆ ಎಂಬುದು ಗೊತ್ತಾಗಿತ್ತು. 25 ಶಾಸಕರ ಜೊತೆ ಬಿಜೆಪಿಯು ಸಂಪರ್ಕದಲ್ಲಿದ್ದು, ಮೊದಲ 10 ಜನಕ್ಕೆ ವಿಶೇಷ ಆಫರ್ ಕೊಟ್ಟಿದ್ದಾರೆಂಬ ಸುಳಿವು ಸಿಕ್ಕಿತ್ತು. ಆನಂದ್‍ಸಿಂಗ್ ಮತ್ತು ರಮೇಶ್ ಜಾರಕಿಹೊಳಿಯವರ ರಾಜೀನಾಮೆ ಟ್ರೈಲರ್ ಮಾತ್ರ. ಗುಂಪು ಗುಂಪಾಗಿಯೇ ರಾಜೀನಾಮೆ ನೀಡಲಿದ್ದಾರೆ. ಅದು ಇನ್ನಷ್ಟು ಜನರನ್ನು ಹುರಿದುಂಬಿಸಲಿದೆ ಎಂಬುದು ಒಂದು ಮೂಲವಾದರೆ, ಆಶ್ಚರ್ಯಕರ ಮುಖಗಳು ರಾಜೀನಾಮೆ ನೀಡುವ ಗುಂಪಿನಲ್ಲಿರುತ್ತವೆ ಎಂಬುದು ಇನ್ನೊಂದು ಮೂಲವಾಗಿತ್ತು. ಈ ಸಾರಿಯ ಆಪರೇಷನ್ ಕಮಲದಿಂದ ಸಿದ್ದರಾಮಯ್ಯನವರ ಮೇಲೆ ಸಂಶಯಗಳು ದಟ್ಟವಾಗುತ್ತವೆ ಎಂಬುದು ಸಚಿವರೊಬ್ಬರು ನೀಡಿದ ಸುಳಿವಾಗಿತ್ತು.

ಇಷ್ಟು ಖಚಿತ ಸುಳಿವಿದ್ದಾಗಲೂ ನಮ್ಮ ವರದಿಗಳಲ್ಲಿ ಈ ಸಾರಿಯದ್ದೂ ಇನ್ನೊಂದು ಠುಸ್ ಆಪರೇಷನ್ ಎಂದೇ ಬಂದಿತು. ಹಾಗೆಯೇ ಎಚ್.ವಿಶ್ವನಾಥ್‍ರ ಸಂದರ್ಶನ ಮಾಡಲು ಹೋಗುವ ಹೊತ್ತಿಗಾಗಲೇ ಅವರ ಧೋರಣೆಯ ಕುರಿತು ಸಂಶಯವಿತ್ತಾದರೂ, ವರದಿ ಬರೆದಾಗ ರಾಜ್ಯದ ಚಿಂತನಶೀಲ ರಾಜಕಾರಣಿಯ ಕುರಿತ ಭ್ರಮೆಯು ಅದರಲ್ಲಿತ್ತು. ವಿಶ್ವನಾಥ್‍ರಂಥವರು ಹಾಗೆ ಮಾಡಲಾರರು ಎಂಬ ಮನೋಬಯಕೆಯಲ್ಲಿ ಎರಡು ಆಯಾಮಗಳಿದ್ದವು. ಒಂದು, ಅವರ ಕುರಿತ ಸರಿಯಾದ ಅಸೆಸ್‍ಮೆಂಟ್‍ನ ಕೊರತೆ. ಮತ್ತೊಂದು, ಹಾಗೆ ಮಾಡಬಾರದೆಂಬ ನಿರೀಕ್ಷೆ.

ಜೈಲು ಅಥವಾ ದೈಹಿಕ ದಾಳಿಗಳನ್ನೂ ಎದುರಿಸಿಯಾದರೂ ಸತ್ಯವನ್ನು ಹೇಳಬೇಕೆನ್ನುವ ತುಡಿತ ಮತ್ತು ಧೈರ್ಯವಿರುವ ಪತ್ರಕರ್ತರು ಈ ದೇಶದಲ್ಲಿ ಇನ್ನೂ ಸಾಕಷ್ಟು ಉಳಿದುಕೊಂಡಿದ್ದಾರೆ. ಆದರೆ, ಭ್ರಮೆಗಳನ್ನು ಮೀರುವುದು ಸುಲಭದ ಮಾತಲ್ಲ. ಈ ಭ್ರಮೆಗಳೂ ಅವರ ಸದ್ಭಾವನೆಗಳಿಂದಲೇ ಹುಟ್ಟಿರುವಂಥವು. ಓದು ಬಲ್ಲ ವರ್ಗವು ಇಂದು ಸರ್ವರ ಒಳಿತಿನ ದೃಷ್ಟಿಯಿಂದ ಸೂಕ್ತವಾದ ಓರಿಯೆಂಟೇಷನ್ ಬಯಸುತ್ತಿಲ್ಲ; ಬದಲಿಗೆ ತಾನೇ ಓರಿಯೆಂಟ್ ಮಾಡಬಲ್ಲಷ್ಟು ಪ್ರಬಲವಾಗಿದೆ. ಹೀಗಾಗಿ ಪ್ರಜಾಪ್ರಭುತ್ವದ ಸ್ಥಾಪಿತ ಮೌಲ್ಯಗಳ ಆಧಾರದ ಮೇಲಷ್ಟೇ ವಿಶ್ಲೇಷಣೆಯನ್ನು ಮಾಡುತ್ತಾ ಪಕ್ಷಗಳ ಕುರಿತ ಒಲವು-ನಿಲುವುಗಳನ್ನು ಪಕ್ಕಕ್ಕೆ ಸರಿಸುವುದು ಇಂದಿನ ಅಗತ್ಯವಾಗಿದೆ.

ಆ ನಿಟ್ಟಿನಲ್ಲಿ ಈ ಪತ್ರಿಕೆ ತನ್ನ ಭಾಷೆ, ಕಥನ ಮತ್ತು ವಿಶ್ಲೇಷಣಾ ವಿಧಾನವನ್ನು ರೂಪಿಸಿಕೊಳ್ಳಲಿದೆ. ಪತ್ರಿಕೆಯ ಓದುಗರೂ ಇದರ ಕುರಿತು ಚಿಂತಿಸಿ ತಮ್ಮ ಅನಿಸಿಕೆಗಳನ್ನು ಮುಂದಿಡಬೇಕೆಂದು ಕೋರುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...