Homeಅಂಕಣಗಳುನಮ್ಮ ಮನೋ ಬಯಕೆಗಳೇ ವರದಿಗಳಾದಾಗ....

ನಮ್ಮ ಮನೋ ಬಯಕೆಗಳೇ ವರದಿಗಳಾದಾಗ….

- Advertisement -
- Advertisement -

| ಡಾ. ವಾಸು ಎಚ್.ವಿ |

ಯಾವುದೇ ಪತ್ರಕರ್ತರಿಗೆ ಸುದ್ದಿ ಮಾಡುವಾಗ ಒಂದು ಪ್ರಮುಖ ಸವಾಲು ಇರುತ್ತದೆ. ಅದು ತನ್ನ ಮನಸ್ಸಿನ ಅಪೇಕ್ಷೆಗಿಂತ ಭಿನ್ನವಾಗಿ ಇರುವ ವಸ್ತುಸ್ಥಿತಿಯನ್ನು ವಸ್ತುನಿಷ್ಠವಾಗಿ ವರದಿ ಮಾಡುವುದು. ತನ್ನೊಳಗೆ ನಿರ್ದಿಷ್ಟ ಒಲವು ನಿಲುವುಗಳಿಲ್ಲದ ಪತ್ರಕರ್ತರು ಯಾರೂ ಇರುವುದಿಲ್ಲ. ಅದರಲ್ಲೂ ಸದ್ಯ ದೇಶವನ್ನಾಳುತ್ತಿರುವವರು ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಧಕ್ಕೆ ತರುತ್ತಿದ್ದಾರೆ ಎಂಬುದು ಸ್ಪಷ್ಟವಿದ್ದರೆ, ಪತ್ರಕರ್ತರಾದವರು ಮಾಮೂಲಿಗಿಂತ ಹೆಚ್ಚೇ ವಿರೋಧ ಪಕ್ಷದ ಪಾತ್ರ ವಹಿಸಬೇಕಾಗುತ್ತದೆ. ಆದರೆ, ಹಾಗಾದಾಗ ಕಣ್ಣೆದುರಿಗಿನ ವಾಸ್ತವ ಗ್ರಹಿಸದೇ ಅಥವಾ ಗ್ರಹಿಸಿದರೂ ಅದನ್ನು ಬರಹಕ್ಕಿಳಿಸುವಾಗ ತನ್ನ ಮನೋಬಯಕೆಯನ್ನು ವಿಶ್ಲೇಷಣೆಯನ್ನಾಗಿಸುವ ಕೆಲಸ ನಡೆದುಬಿಡುತ್ತದೆ.

ಇದನ್ನು ಈ ನಿಮ್ಮ ಪತ್ರಿಕೆಯೂ ಎದುರಿಸುತ್ತಿರುವ ಸವಾಲು. ಕಾಂಗ್ರೆಸ್ ಅಥವಾ ಜೆಡಿಎಸ್ ಕುರಿತ ಯಾವ ಒಲವೂ ನಮಗಿಲ್ಲ. ಆದರೆ, ನಿಸ್ಸಂದೇಹವಾಗಿ ಬಿಜೆಪಿಯು ಭಾರತ ದೇಶದ ಮೂಲ ಅಡಿಪಾಯಕ್ಕೇ ಧಕ್ಕೆ ತರುತ್ತಿದೆ ಎಂಬ ಅಪಾಯದ ಅರಿವಿದೆ. ಹೀಗಿರುವಾಗ ಕೆಲವು ಎಡವಟ್ಟುಗಳನ್ನು ನಾವೂ ಮಾಡಿದ್ದೇವೆ. 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಇದ್ದ ಅಲೆಯ ಸಂಪೂರ್ಣ ಗ್ರಹಿಕೆ ಇತ್ತೆಂದು ಹೇಳಲಾಗದಿದ್ದರೂ, ಎನ್‍ಡಿಎ ಸರ್ಕಾರ ರಚನೆ ಮಾಡುವ ಸಾಧ್ಯತೆಯೇ ಹೆಚ್ಚು ಎಂಬುದು ಸ್ಪಷ್ಟವಿತ್ತು. ಇಡೀ ದೇಶದಲ್ಲಿ ಮೋದಿ ಅಲೆ ಅತ್ಯಂತ ಹೆಚ್ಚಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು ಎಂಬುದು ಸ್ಪಷ್ಟವಾಗಿ ಗೋಚರವಾಗುತ್ತಿತ್ತು. ಅದರಲ್ಲೂ ರಾಜ್ಯದ ಮೈತ್ರಿ ಸರ್ಕಾರವು ಜನರಿಗೆ ನಿರಾಶೆ ಮೂಡಿಸಿರುವುದು ಖಚಿತವಿತ್ತು. ಹೀಗಿದ್ದೂ, ನಮ್ಮ ವಿಶ್ಲೇಷಣೆಗಳಲ್ಲಿ ಬಿಜೆಪಿ ಸೋಲಬೇಕೆಂಬ ಬಯಕೆಯು ಎದ್ದು ಕಾಣುತ್ತಿತ್ತು.

ಇಂದು ಈ ಅಪೇಕ್ಷೆಯೇ ತಪ್ಪೆಂದು ಅನಿಸುವುದಿಲ್ಲ. ಅದು ದೇಶದ ನಾಗರಿಕರಾಗಿ ನಮ್ಮ ಕರ್ತವ್ಯವೂ ಆಗಿರಬಹುದು. ಆದರೆ, ಅದು ವಸ್ತುನಿಷ್ಠ ವಿಶ್ಲೇಷಣೆ ಆಗುವುದಿಲ್ಲ. ಹೀಗೆಂದ ಮೇಲೆ ಇನ್ನೊಂದು ಪ್ರಶ್ನೆ ಏಳುತ್ತದೆ. ಹಾಗಾದರೆ, ಪತ್ರಕರ್ತರು ಪ್ರಜಾಪ್ರಭುತ್ವದ ಪರ ನಿಲ್ಲುವ ಮತ್ತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕೇ ಬೇಡವೇ? ಖಂಡಿತವಾಗಿ ಅಂತಹ ಕೆಲಸವನ್ನು ಪತ್ರಕರ್ತರು ಮಾಡಲೇಬೇಕು. ಆದರೆ ಎಂದಿಗೂ ತಮ್ಮ ವರದಿಗಳಲ್ಲಿ ಸುಳ್ಳಿನ ವಾಸನೆ ಇರದಂತೆ ನೋಡಿಕೊಳ್ಳಬೇಕು. ಬಹುಶಃ ಉದ್ದೇಶಪೂರ್ವಕ ಸುಳ್ಳನ್ನು ಈ ಪತ್ರಿಕೆಯಲ್ಲಿ ಬರೆಯುವುದಿಲ್ಲ. ಆದರೆ, ವಿಶ್ಲೇಷಣೆಯಲ್ಲಿ ಮನೋಬಯಕೆಗಳು ತೂರಿಕೊಂಡಿರುವುದು ವಾಸ್ತವ.

ಕಳೆದ ವಾರದ ಸಂಚಿಕೆ ಮುದ್ರಣಕ್ಕೆ ಹೋಗುವ ಮುನ್ನ ಮೂರು ಮೂಲಗಳಿಂದ ನಮಗೆ ಮಾಹಿತಿ ದೊರಕಿತು. ಅದರ ಪ್ರಕಾರ ಖಚಿತವಾಗಿ ಮೂರು ಗುಂಪುಗಳಲ್ಲಿ ಶಾಸಕರು ರಾಜೀನಾಮೆ ಕೊಡುತ್ತಾರೆ. ಎಚ್.ವಿಶ್ವನಾಥ್, ರಮೇಶ್ ಜಾರಕಿಹೊಳಿ ಮತ್ತು ಬೆಂಗಳೂರಿನ ಶಾಸಕರೊಬ್ಬರ ನೇತೃತ್ವ ಇರುತ್ತದೆ ಎಂಬುದು ಗೊತ್ತಾಗಿತ್ತು. 25 ಶಾಸಕರ ಜೊತೆ ಬಿಜೆಪಿಯು ಸಂಪರ್ಕದಲ್ಲಿದ್ದು, ಮೊದಲ 10 ಜನಕ್ಕೆ ವಿಶೇಷ ಆಫರ್ ಕೊಟ್ಟಿದ್ದಾರೆಂಬ ಸುಳಿವು ಸಿಕ್ಕಿತ್ತು. ಆನಂದ್‍ಸಿಂಗ್ ಮತ್ತು ರಮೇಶ್ ಜಾರಕಿಹೊಳಿಯವರ ರಾಜೀನಾಮೆ ಟ್ರೈಲರ್ ಮಾತ್ರ. ಗುಂಪು ಗುಂಪಾಗಿಯೇ ರಾಜೀನಾಮೆ ನೀಡಲಿದ್ದಾರೆ. ಅದು ಇನ್ನಷ್ಟು ಜನರನ್ನು ಹುರಿದುಂಬಿಸಲಿದೆ ಎಂಬುದು ಒಂದು ಮೂಲವಾದರೆ, ಆಶ್ಚರ್ಯಕರ ಮುಖಗಳು ರಾಜೀನಾಮೆ ನೀಡುವ ಗುಂಪಿನಲ್ಲಿರುತ್ತವೆ ಎಂಬುದು ಇನ್ನೊಂದು ಮೂಲವಾಗಿತ್ತು. ಈ ಸಾರಿಯ ಆಪರೇಷನ್ ಕಮಲದಿಂದ ಸಿದ್ದರಾಮಯ್ಯನವರ ಮೇಲೆ ಸಂಶಯಗಳು ದಟ್ಟವಾಗುತ್ತವೆ ಎಂಬುದು ಸಚಿವರೊಬ್ಬರು ನೀಡಿದ ಸುಳಿವಾಗಿತ್ತು.

ಇಷ್ಟು ಖಚಿತ ಸುಳಿವಿದ್ದಾಗಲೂ ನಮ್ಮ ವರದಿಗಳಲ್ಲಿ ಈ ಸಾರಿಯದ್ದೂ ಇನ್ನೊಂದು ಠುಸ್ ಆಪರೇಷನ್ ಎಂದೇ ಬಂದಿತು. ಹಾಗೆಯೇ ಎಚ್.ವಿಶ್ವನಾಥ್‍ರ ಸಂದರ್ಶನ ಮಾಡಲು ಹೋಗುವ ಹೊತ್ತಿಗಾಗಲೇ ಅವರ ಧೋರಣೆಯ ಕುರಿತು ಸಂಶಯವಿತ್ತಾದರೂ, ವರದಿ ಬರೆದಾಗ ರಾಜ್ಯದ ಚಿಂತನಶೀಲ ರಾಜಕಾರಣಿಯ ಕುರಿತ ಭ್ರಮೆಯು ಅದರಲ್ಲಿತ್ತು. ವಿಶ್ವನಾಥ್‍ರಂಥವರು ಹಾಗೆ ಮಾಡಲಾರರು ಎಂಬ ಮನೋಬಯಕೆಯಲ್ಲಿ ಎರಡು ಆಯಾಮಗಳಿದ್ದವು. ಒಂದು, ಅವರ ಕುರಿತ ಸರಿಯಾದ ಅಸೆಸ್‍ಮೆಂಟ್‍ನ ಕೊರತೆ. ಮತ್ತೊಂದು, ಹಾಗೆ ಮಾಡಬಾರದೆಂಬ ನಿರೀಕ್ಷೆ.

ಜೈಲು ಅಥವಾ ದೈಹಿಕ ದಾಳಿಗಳನ್ನೂ ಎದುರಿಸಿಯಾದರೂ ಸತ್ಯವನ್ನು ಹೇಳಬೇಕೆನ್ನುವ ತುಡಿತ ಮತ್ತು ಧೈರ್ಯವಿರುವ ಪತ್ರಕರ್ತರು ಈ ದೇಶದಲ್ಲಿ ಇನ್ನೂ ಸಾಕಷ್ಟು ಉಳಿದುಕೊಂಡಿದ್ದಾರೆ. ಆದರೆ, ಭ್ರಮೆಗಳನ್ನು ಮೀರುವುದು ಸುಲಭದ ಮಾತಲ್ಲ. ಈ ಭ್ರಮೆಗಳೂ ಅವರ ಸದ್ಭಾವನೆಗಳಿಂದಲೇ ಹುಟ್ಟಿರುವಂಥವು. ಓದು ಬಲ್ಲ ವರ್ಗವು ಇಂದು ಸರ್ವರ ಒಳಿತಿನ ದೃಷ್ಟಿಯಿಂದ ಸೂಕ್ತವಾದ ಓರಿಯೆಂಟೇಷನ್ ಬಯಸುತ್ತಿಲ್ಲ; ಬದಲಿಗೆ ತಾನೇ ಓರಿಯೆಂಟ್ ಮಾಡಬಲ್ಲಷ್ಟು ಪ್ರಬಲವಾಗಿದೆ. ಹೀಗಾಗಿ ಪ್ರಜಾಪ್ರಭುತ್ವದ ಸ್ಥಾಪಿತ ಮೌಲ್ಯಗಳ ಆಧಾರದ ಮೇಲಷ್ಟೇ ವಿಶ್ಲೇಷಣೆಯನ್ನು ಮಾಡುತ್ತಾ ಪಕ್ಷಗಳ ಕುರಿತ ಒಲವು-ನಿಲುವುಗಳನ್ನು ಪಕ್ಕಕ್ಕೆ ಸರಿಸುವುದು ಇಂದಿನ ಅಗತ್ಯವಾಗಿದೆ.

ಆ ನಿಟ್ಟಿನಲ್ಲಿ ಈ ಪತ್ರಿಕೆ ತನ್ನ ಭಾಷೆ, ಕಥನ ಮತ್ತು ವಿಶ್ಲೇಷಣಾ ವಿಧಾನವನ್ನು ರೂಪಿಸಿಕೊಳ್ಳಲಿದೆ. ಪತ್ರಿಕೆಯ ಓದುಗರೂ ಇದರ ಕುರಿತು ಚಿಂತಿಸಿ ತಮ್ಮ ಅನಿಸಿಕೆಗಳನ್ನು ಮುಂದಿಡಬೇಕೆಂದು ಕೋರುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...