Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಪಂಗನಾಮ ಹಾಕೋರಿಗೆ ಬ್ಯಾಂಕು ಸಾಲ

ಪಂಗನಾಮ ಹಾಕೋರಿಗೆ ಬ್ಯಾಂಕು ಸಾಲ

- Advertisement -
- Advertisement -

ತಪ್ಪುದಾರಿಯಲ್ಲಿ ಸರ್ಕಾರಿ ಬ್ಯಾಂಕುಗಳಿಂದ ಪಡೆದ ಸಾಲಗಳನ್ನು ಉದ್ದೇಶ ಪೂರ್ವಕವಾಗಿ ತೀರಿಸದೆ ಛದ್ಮವೇಷಧಾರಿ ಕೈಗಾರಿಕೋದ್ಯಮಿಗಳು ಇಂದು ಬ್ಯಾಂಕಿಗ್ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದಾರೆ. ಈ ವ್ಯವಹಾರದಲ್ಲಿ ಹೇರಳ ಭ್ರಷ್ಟಾಚಾರ ನಡೆಯುತ್ತಿದೆ.
2018ರ ಮಾರ್ಚ್ 25ರ ಲೆಕ್ಕದಂತೆ ಭಾರತೀಯ ಬ್ಯಾಂಕುಗಳಲ್ಲಿ ಸಾರ್ವಜನಿಕರು ತೊಡಗಿಸಿದ್ದ ಮೊತ್ತ 110 ಲಕ್ಷ ಕೋಟಿ. ಈ ಹಣದಲ್ಲಿ 80ಲಕ್ಷÀ ಕೋಟಿ ರೂಪಾಯಿಗಳು 21 ಸರ್ಕಾರಿ ಬ್ಯಾಂಕುಗಳಲ್ಲೇ ಇತ್ತು. ಬ್ಯಾಂಕುಗಳು ಸಾರ್ವಜನಿಕರ ಈ ಹಣವನ್ನು ಹೇಗೆ ನಿರ್ವಹಿಸಿದವು ಎಂಬುದನ್ನು ನೋಡೋಣ. 2017-18ರ ಸಾಲಿನಲ್ಲಿ ಈ 21 ರಾಷ್ಟ್ರೀಕೃತ ಬ್ಯಾಂಕುಗಳ ಪೈಕಿ 19 ಬ್ಯಾಂಕುಗಳು ನಷ್ಟದಲ್ಲಿರುವುದಾಗಿ ಸರ್ಕಾರ ಘೋಷಣೆ ಮಾಡಿತು. ನಷ್ಟದ ಮೊತ್ತ ಎಷ್ಟು ಗೊತ್ತೇ? ಬರೋಬ್ಬರಿ 87,351 ಕೋಟಿಗಳು. ಪರಿಣಾಮವಾಗಿ ಈ ವರ್ಷ ಕೇಂದ್ರ ಸರ್ಕಾರ ಪ್ರಧಾನಿಯವರ ಯೋಜನೆಗಳಾದ ನೀರಾವರಿ, ಗ್ರಾಮೀಣ ರಸ್ತೆ, ಕುಡಿಯುವ ನೀರಿನ ಯೋಜನೆ, ಸ್ವಚ್ಛಭಾರತ ಆಂದೋಲನ, ಶಿಕ್ಷಣಗಳಿಗೆ ತೆಗೆದಿಟ್ಟಿರುವ ಹಣವನ್ನು ಈ 19 ರಾಷ್ಟ್ರೀಕೃತ ಬ್ಯಾಂಕುಗಳು ಸಾಲವಾಗಿ ಪಂಗನಾಮ ಹಾಕುವವರಿಗೆ ನೀಡಿವೆ. ಈ 19 ಬ್ಯಾಂಕುಗಳಲ್ಲಿ 9 ಬ್ಯಾಂಕುಗಳು ನೀಡಿರುವ ಒಟ್ಟು ಸಾಲದಲ್ಲಿ ಶೇ.15ರಷ್ಟು ಸಾಲ ಸುಸ್ತಿಯಲ್ಲಿದೆ; ಈ ಸಾಲಗಳು ವಸೂಲಾಗುವುದಿಲ್ಲ ಎಂಬ ತೀರ್ಮಾನಕ್ಕೆ ಬಂದಿವೆ. ಇನ್ನೂ 6 ಬ್ಯಾಂಕುಗಳು ಇನ್ನಷ್ಟು ಹಣ ವಸೂಲಾಗದ ಸಾಲಗಳ ಪಟ್ಟಿಯನ್ನು ಘೋಷಿಸುವುದರಲ್ಲಿವೆ.
ಒಟ್ಟಿನಲ್ಲಿ 21 ರಾಷ್ಟ್ರೀಕೃತ ಬ್ಯಾಂಕುಗಳ ಪೈಕಿ 17 ಬ್ಯಾಂಕುಗಳಲ್ಲಿ ವಸೂಲಾಗದ ಸಾಲ ಏರಿಕೆಯಾಗಿದೆ. ಈ ವಸೂಲಾಗದ ಸಾಲಗಳ ಪಿಡುಗು 2007ರಲ್ಲೇ ಶುರುವಾಗಿತ್ತು. ವಿಶ್ವ ಆರ್ಥಿಕ ಮುಗ್ಗಟ್ಟು, ಕಲ್ಲಿದ್ದಲು ಹಗರಣ, 2ಜಿ ಹಗರಣ ಕೂಡ ಅದೇ ಸಮಯದಲ್ಲೇ ನಡೆದರೂ ಕೂಡ ಬ್ಯಾಂಕುಗಳು ಅಲ್ಲಿಯವರೆಗೆ ತಮ್ಮ ಬಂಡವಾಳವನ್ನು ಖoಟಟouಣ ಮಾಡುತ್ತಿದ್ದವು. 2007ರಿಂದ ನುಂಗಣ್ಣಗಳ ಪಾಲಾಗುತ್ತಾ ಬಂದ ರಾಷ್ಟ್ರೀಕೃತ ಬ್ಯಾಂಕುಗಳ ಬಂಡವಾಳ 2018ರಲ್ಲಿ 9 ಲಕ್ಷ ಕೋಟಿಗಳಿಗೇರಿದೆ.
2017-18ರಲ್ಲಿ ಕಂಪೆನಿಗಳಿಂದ, ವ್ಯಕ್ತಿಗಳಿಂದ ಸಂಗ್ರಹವಾದ ಆದಾಯ ತೆರಿಗೆಗಿಂತಲೂ ಈ ನುಂಗಣ್ಣರ ಪಾಲಾದ ಮೊತ್ತ ಅಧಿಕವಾಗಿತ್ತು. ಬ್ಯಾಂಕಿನಲ್ಲಿ ತೊಡಗಿಸುವ ಠೇವಣಿ ಹಣಕ್ಕೆ ವಿಮೆ ಸೌಲಭ್ಯ ಇತ್ತು. ಅದರ ಪರಿಮಿತಿ ಒಂದುಲಕ್ಷ ಠೇವಣಿಗೆ ಮಾತ್ರ. ಒಂದುಲಕ್ಷ ಮೀರಿದ ಠೇವಣಿಗೆ ಭದ್ರತೆ ಇದೆಯೇ? ಬ್ಯಾಂಕುಗಳು ಈ ಹೊಣೆ ಹೊರುತ್ತವೆಯೇ?
ಆದರೆ ಲಕ್ಷಕ್ಕಿಂತ ಕಡಿಮೆ ಠೇವಣಿಯ ಮೊತ್ತ 30-50 ಲಕ್ಷಕೋಟಿ. ಅಂದರೆ ಉಳಿದ 70% ಇಡುಗಂಟನ್ನಿಟ್ಟವರಿಗೆ ಯಾವ ಭದ್ರತೆಯೂ ಇಲ್ಲ. ಇವರಿಟ್ಟಿರುವ ಠೇವಣಿ 72 ಲಕ್ಷಕೋಟಿ. ಜನರು ತಾವು ಕಷ್ಟಪಟ್ಟು ಗಳಿಸಿದ ಹಣವನ್ನು ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡಿ, ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿರುವುದು ಮಕ್ಕಳ ಶಿಕ್ಷಣ, ಮದುವೆ, ಮನೆಕೊಳ್ಳುವುದು, ನಿವೃತ್ತ ಜೀವನ ಮುಂತಾದ ಕಾರಣಕ್ಕಾಗಿ. ಇವರ ಹಣದ ರಕ್ಷಣೆಗಾಗಿ ಕೇಂದ್ರ ಸರ್ಕಾರ ಮುಂದೆ ಬರಬೇಕು.ಈ 70% ಜನರ ಹಣದ ಭದ್ರತೆಗಾಗಿ ಸರ್ಕಾರ ಜ್ಞಾನಸಂಗಮ, ಇಂದ್ರಧನುಷ್, ಬ್ಯಾಂಕ್‍ಬೋರ್ಡ್ ಬ್ಯೂರೋ ಮುಂತಾದ ಯೋಜನೆಗಳನ್ನು ಅಸ್ತಿತ್ವಕ್ಕೆ ತಂದಿತ್ತು. ಅವುಗಳೆಲ್ಲವೂ ಈಗ ವಿಫಲಗೊಂಡಿವೆ. ಪಾಪರ್ ಚೀಟಿ ಕಾನೂನನ್ನು ಜಾರಿಗೊಳಿಸಲು ಸರ್ಕಾರ ಯೋಚನೆ ಮಾಡುತ್ತಿದೆ. ಇದು ಒಂದು ಸ್ವಾಗತಾರ್ಹ ವಿಚಾರ. ಒಂದು ವರ್ಷ ಕಳೆದ ಮೇಲೆ ಸರ್ಕಾರ ಸಾಲಕೊಟ್ಟು ಹಣ ಕಳೆದುಕೊಂಡಿರುವ 12 ಬ್ಯಾಂಕುಗಳ ಪೈಕಿ 2 ಮಾತ್ರ litigation ನಿಂದ ಪಾರಾಗಿವೆ. ಈಗಾಗಲೇ 2511 ಪಾಪರ್ ಚೀಟಿ ಕೇಸುಗಳು ದಾಖಲಾಗಿದ್ದು ಅವು ಇನ್ನಷ್ಟು ಹೆಚ್ಚಾಗಲಿವೆ. ಈ ವೇಗದಲ್ಲೇ ಕೇಸುಗಳು ದಾಖಲಾಗುವುದಾದರೆ ಬ್ಯಾಂಕುಗಳು ಸಾಲವಸೂಲಿಗೆ ಸುದೀರ್ಘ ಕಾಲ ಕಾಯಬೇಕಾಗಬಹುದು.
ಈಗ ಕೆಲವು ದಿನಗಳ ಹಿಂದೆ ಹಂಗಾಮಿ ಹಣಕಾಸು ಮಂತ್ರಿ ಪೀಯೂಷ್ ಗೋಯಲ್ ಸಾಲವಸೂಲಿಯನ್ನೂ ಸುಗಮಗೊಳಿಸಲು ಬ್ಯಾಂಕುಗಳ meಡಿgeಡಿ ಮಾಡಲಾಗುವುದೆಂದೂ ಕರಡು ಸಾಲದ ಬ್ಯಾಂಕೊಂದನ್ನು ಆರಂಭಿಸಬೇಕೆಂದೂ ವಿಚಾರ ಮಾಡಿ, ಸಮಿತಿಯೊಂದನ್ನು ರಚಿಸಿದ್ದಾರೆ. ಆದರೆ ಸಮಿತಿಗಳನ್ನು ಮಾಡುವ, ವರದಿ ತರಿಸಿಕೊಳ್ಳುವ ಸಮಯ ಈಗ ಮೀರಿಹೋಗಿದೆ. ರಾಷ್ಟ್ರೀಕೃತ ಬ್ಯಾಂಕುಗಳಿಗೆ ಹಣ ತುಂಬಿ ಅವುಗಳ ನಿರ್ವಹಣೆಗೆ ಹೊಸ ರೂಪ ಕೊಡಬೇಕು. ಬ್ಯಾಂಕುಗಳು ಸರ್ಕಾರದ ನೇರ ಹಿಡಿತಕ್ಕೆ ಬರಬಾರದು. ಬ್ಯಾಂಕುಗಳ ಮೇಲ್ವಿಚಾರಣೆಗೆ ಒಂದು ಸ್ವತಂತ್ರ ಆಡಳಿತ ಸಂಸ್ಥೆ ಅಸ್ತಿತ್ವಕ್ಕೆ ಬರಬೇಕು.

 

  • – ಹೆಚ್.ಎಸ್.ದೊರೆಸ್ವಾಮಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...