Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಪಂಗನಾಮ ಹಾಕೋರಿಗೆ ಬ್ಯಾಂಕು ಸಾಲ

ಪಂಗನಾಮ ಹಾಕೋರಿಗೆ ಬ್ಯಾಂಕು ಸಾಲ

- Advertisement -
- Advertisement -

ತಪ್ಪುದಾರಿಯಲ್ಲಿ ಸರ್ಕಾರಿ ಬ್ಯಾಂಕುಗಳಿಂದ ಪಡೆದ ಸಾಲಗಳನ್ನು ಉದ್ದೇಶ ಪೂರ್ವಕವಾಗಿ ತೀರಿಸದೆ ಛದ್ಮವೇಷಧಾರಿ ಕೈಗಾರಿಕೋದ್ಯಮಿಗಳು ಇಂದು ಬ್ಯಾಂಕಿಗ್ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದಾರೆ. ಈ ವ್ಯವಹಾರದಲ್ಲಿ ಹೇರಳ ಭ್ರಷ್ಟಾಚಾರ ನಡೆಯುತ್ತಿದೆ.
2018ರ ಮಾರ್ಚ್ 25ರ ಲೆಕ್ಕದಂತೆ ಭಾರತೀಯ ಬ್ಯಾಂಕುಗಳಲ್ಲಿ ಸಾರ್ವಜನಿಕರು ತೊಡಗಿಸಿದ್ದ ಮೊತ್ತ 110 ಲಕ್ಷ ಕೋಟಿ. ಈ ಹಣದಲ್ಲಿ 80ಲಕ್ಷÀ ಕೋಟಿ ರೂಪಾಯಿಗಳು 21 ಸರ್ಕಾರಿ ಬ್ಯಾಂಕುಗಳಲ್ಲೇ ಇತ್ತು. ಬ್ಯಾಂಕುಗಳು ಸಾರ್ವಜನಿಕರ ಈ ಹಣವನ್ನು ಹೇಗೆ ನಿರ್ವಹಿಸಿದವು ಎಂಬುದನ್ನು ನೋಡೋಣ. 2017-18ರ ಸಾಲಿನಲ್ಲಿ ಈ 21 ರಾಷ್ಟ್ರೀಕೃತ ಬ್ಯಾಂಕುಗಳ ಪೈಕಿ 19 ಬ್ಯಾಂಕುಗಳು ನಷ್ಟದಲ್ಲಿರುವುದಾಗಿ ಸರ್ಕಾರ ಘೋಷಣೆ ಮಾಡಿತು. ನಷ್ಟದ ಮೊತ್ತ ಎಷ್ಟು ಗೊತ್ತೇ? ಬರೋಬ್ಬರಿ 87,351 ಕೋಟಿಗಳು. ಪರಿಣಾಮವಾಗಿ ಈ ವರ್ಷ ಕೇಂದ್ರ ಸರ್ಕಾರ ಪ್ರಧಾನಿಯವರ ಯೋಜನೆಗಳಾದ ನೀರಾವರಿ, ಗ್ರಾಮೀಣ ರಸ್ತೆ, ಕುಡಿಯುವ ನೀರಿನ ಯೋಜನೆ, ಸ್ವಚ್ಛಭಾರತ ಆಂದೋಲನ, ಶಿಕ್ಷಣಗಳಿಗೆ ತೆಗೆದಿಟ್ಟಿರುವ ಹಣವನ್ನು ಈ 19 ರಾಷ್ಟ್ರೀಕೃತ ಬ್ಯಾಂಕುಗಳು ಸಾಲವಾಗಿ ಪಂಗನಾಮ ಹಾಕುವವರಿಗೆ ನೀಡಿವೆ. ಈ 19 ಬ್ಯಾಂಕುಗಳಲ್ಲಿ 9 ಬ್ಯಾಂಕುಗಳು ನೀಡಿರುವ ಒಟ್ಟು ಸಾಲದಲ್ಲಿ ಶೇ.15ರಷ್ಟು ಸಾಲ ಸುಸ್ತಿಯಲ್ಲಿದೆ; ಈ ಸಾಲಗಳು ವಸೂಲಾಗುವುದಿಲ್ಲ ಎಂಬ ತೀರ್ಮಾನಕ್ಕೆ ಬಂದಿವೆ. ಇನ್ನೂ 6 ಬ್ಯಾಂಕುಗಳು ಇನ್ನಷ್ಟು ಹಣ ವಸೂಲಾಗದ ಸಾಲಗಳ ಪಟ್ಟಿಯನ್ನು ಘೋಷಿಸುವುದರಲ್ಲಿವೆ.
ಒಟ್ಟಿನಲ್ಲಿ 21 ರಾಷ್ಟ್ರೀಕೃತ ಬ್ಯಾಂಕುಗಳ ಪೈಕಿ 17 ಬ್ಯಾಂಕುಗಳಲ್ಲಿ ವಸೂಲಾಗದ ಸಾಲ ಏರಿಕೆಯಾಗಿದೆ. ಈ ವಸೂಲಾಗದ ಸಾಲಗಳ ಪಿಡುಗು 2007ರಲ್ಲೇ ಶುರುವಾಗಿತ್ತು. ವಿಶ್ವ ಆರ್ಥಿಕ ಮುಗ್ಗಟ್ಟು, ಕಲ್ಲಿದ್ದಲು ಹಗರಣ, 2ಜಿ ಹಗರಣ ಕೂಡ ಅದೇ ಸಮಯದಲ್ಲೇ ನಡೆದರೂ ಕೂಡ ಬ್ಯಾಂಕುಗಳು ಅಲ್ಲಿಯವರೆಗೆ ತಮ್ಮ ಬಂಡವಾಳವನ್ನು ಖoಟಟouಣ ಮಾಡುತ್ತಿದ್ದವು. 2007ರಿಂದ ನುಂಗಣ್ಣಗಳ ಪಾಲಾಗುತ್ತಾ ಬಂದ ರಾಷ್ಟ್ರೀಕೃತ ಬ್ಯಾಂಕುಗಳ ಬಂಡವಾಳ 2018ರಲ್ಲಿ 9 ಲಕ್ಷ ಕೋಟಿಗಳಿಗೇರಿದೆ.
2017-18ರಲ್ಲಿ ಕಂಪೆನಿಗಳಿಂದ, ವ್ಯಕ್ತಿಗಳಿಂದ ಸಂಗ್ರಹವಾದ ಆದಾಯ ತೆರಿಗೆಗಿಂತಲೂ ಈ ನುಂಗಣ್ಣರ ಪಾಲಾದ ಮೊತ್ತ ಅಧಿಕವಾಗಿತ್ತು. ಬ್ಯಾಂಕಿನಲ್ಲಿ ತೊಡಗಿಸುವ ಠೇವಣಿ ಹಣಕ್ಕೆ ವಿಮೆ ಸೌಲಭ್ಯ ಇತ್ತು. ಅದರ ಪರಿಮಿತಿ ಒಂದುಲಕ್ಷ ಠೇವಣಿಗೆ ಮಾತ್ರ. ಒಂದುಲಕ್ಷ ಮೀರಿದ ಠೇವಣಿಗೆ ಭದ್ರತೆ ಇದೆಯೇ? ಬ್ಯಾಂಕುಗಳು ಈ ಹೊಣೆ ಹೊರುತ್ತವೆಯೇ?
ಆದರೆ ಲಕ್ಷಕ್ಕಿಂತ ಕಡಿಮೆ ಠೇವಣಿಯ ಮೊತ್ತ 30-50 ಲಕ್ಷಕೋಟಿ. ಅಂದರೆ ಉಳಿದ 70% ಇಡುಗಂಟನ್ನಿಟ್ಟವರಿಗೆ ಯಾವ ಭದ್ರತೆಯೂ ಇಲ್ಲ. ಇವರಿಟ್ಟಿರುವ ಠೇವಣಿ 72 ಲಕ್ಷಕೋಟಿ. ಜನರು ತಾವು ಕಷ್ಟಪಟ್ಟು ಗಳಿಸಿದ ಹಣವನ್ನು ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡಿ, ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿರುವುದು ಮಕ್ಕಳ ಶಿಕ್ಷಣ, ಮದುವೆ, ಮನೆಕೊಳ್ಳುವುದು, ನಿವೃತ್ತ ಜೀವನ ಮುಂತಾದ ಕಾರಣಕ್ಕಾಗಿ. ಇವರ ಹಣದ ರಕ್ಷಣೆಗಾಗಿ ಕೇಂದ್ರ ಸರ್ಕಾರ ಮುಂದೆ ಬರಬೇಕು.ಈ 70% ಜನರ ಹಣದ ಭದ್ರತೆಗಾಗಿ ಸರ್ಕಾರ ಜ್ಞಾನಸಂಗಮ, ಇಂದ್ರಧನುಷ್, ಬ್ಯಾಂಕ್‍ಬೋರ್ಡ್ ಬ್ಯೂರೋ ಮುಂತಾದ ಯೋಜನೆಗಳನ್ನು ಅಸ್ತಿತ್ವಕ್ಕೆ ತಂದಿತ್ತು. ಅವುಗಳೆಲ್ಲವೂ ಈಗ ವಿಫಲಗೊಂಡಿವೆ. ಪಾಪರ್ ಚೀಟಿ ಕಾನೂನನ್ನು ಜಾರಿಗೊಳಿಸಲು ಸರ್ಕಾರ ಯೋಚನೆ ಮಾಡುತ್ತಿದೆ. ಇದು ಒಂದು ಸ್ವಾಗತಾರ್ಹ ವಿಚಾರ. ಒಂದು ವರ್ಷ ಕಳೆದ ಮೇಲೆ ಸರ್ಕಾರ ಸಾಲಕೊಟ್ಟು ಹಣ ಕಳೆದುಕೊಂಡಿರುವ 12 ಬ್ಯಾಂಕುಗಳ ಪೈಕಿ 2 ಮಾತ್ರ litigation ನಿಂದ ಪಾರಾಗಿವೆ. ಈಗಾಗಲೇ 2511 ಪಾಪರ್ ಚೀಟಿ ಕೇಸುಗಳು ದಾಖಲಾಗಿದ್ದು ಅವು ಇನ್ನಷ್ಟು ಹೆಚ್ಚಾಗಲಿವೆ. ಈ ವೇಗದಲ್ಲೇ ಕೇಸುಗಳು ದಾಖಲಾಗುವುದಾದರೆ ಬ್ಯಾಂಕುಗಳು ಸಾಲವಸೂಲಿಗೆ ಸುದೀರ್ಘ ಕಾಲ ಕಾಯಬೇಕಾಗಬಹುದು.
ಈಗ ಕೆಲವು ದಿನಗಳ ಹಿಂದೆ ಹಂಗಾಮಿ ಹಣಕಾಸು ಮಂತ್ರಿ ಪೀಯೂಷ್ ಗೋಯಲ್ ಸಾಲವಸೂಲಿಯನ್ನೂ ಸುಗಮಗೊಳಿಸಲು ಬ್ಯಾಂಕುಗಳ meಡಿgeಡಿ ಮಾಡಲಾಗುವುದೆಂದೂ ಕರಡು ಸಾಲದ ಬ್ಯಾಂಕೊಂದನ್ನು ಆರಂಭಿಸಬೇಕೆಂದೂ ವಿಚಾರ ಮಾಡಿ, ಸಮಿತಿಯೊಂದನ್ನು ರಚಿಸಿದ್ದಾರೆ. ಆದರೆ ಸಮಿತಿಗಳನ್ನು ಮಾಡುವ, ವರದಿ ತರಿಸಿಕೊಳ್ಳುವ ಸಮಯ ಈಗ ಮೀರಿಹೋಗಿದೆ. ರಾಷ್ಟ್ರೀಕೃತ ಬ್ಯಾಂಕುಗಳಿಗೆ ಹಣ ತುಂಬಿ ಅವುಗಳ ನಿರ್ವಹಣೆಗೆ ಹೊಸ ರೂಪ ಕೊಡಬೇಕು. ಬ್ಯಾಂಕುಗಳು ಸರ್ಕಾರದ ನೇರ ಹಿಡಿತಕ್ಕೆ ಬರಬಾರದು. ಬ್ಯಾಂಕುಗಳ ಮೇಲ್ವಿಚಾರಣೆಗೆ ಒಂದು ಸ್ವತಂತ್ರ ಆಡಳಿತ ಸಂಸ್ಥೆ ಅಸ್ತಿತ್ವಕ್ಕೆ ಬರಬೇಕು.

 

  • – ಹೆಚ್.ಎಸ್.ದೊರೆಸ್ವಾಮಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....