Homeಅಂಕಣಗಳುಪತ್ರಕರ್ತರೇ ಕಳ್ಳ ಜ್ಯೋತಿಷಿಗಳಾದಾಗ!

ಪತ್ರಕರ್ತರೇ ಕಳ್ಳ ಜ್ಯೋತಿಷಿಗಳಾದಾಗ!

- Advertisement -
- Advertisement -

ಮೂಢನಂಬಿಕೆಗಳೆಂದರೆ ಸಿಡಿಯುತ್ತಿದ್ದ ‘ಮುಂಗಾರು’ ಪತ್ರಿಕೆ ಬಿಟ್ಟ ಮೇಲೆ ನಾನು ಕೆಲವು ಸಂಜೆ ಪತ್ರಿಕೆಗಳಲ್ಲೂ ಕೆಲಸ ಮಾಡಿದ್ದೆ. ಇವೆಲ್ಲವೂ ದಿನ ಭವಿಷ್ಯ ಪ್ರಕಟಿಸುತ್ತಿದ್ದವು. ಆದರೆ, ಲೇವಡಿಯ ಹೊರತು ನಾವೇನೂ ಮಾಡುವಂತಿರಲಿಲ್ಲ!
ಈ ಭವಿಷ್ಯಗಳು ಹಿಂದೆ ಹವಾಮಾನ ಇಲಾಖೆಯ ಭವಿಷ್ಯಗಳಂತೆ ಇರುತ್ತಿದ್ದವು- ‘ರಾಜ್ಯದ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ’. ಒಂದೆರಡು ಹಳ್ಳಿಗಳಲ್ಲಿ ನಾಲ್ಕು ಹನಿ ಬಿದ್ದರೂ ಭವಿಷ್ಯ ನಿಜವಾಗುತ್ತದೆ!
ಮನೆಯಲ್ಲಿ ಮನಸ್ತಾಪ, ಹೆಂಡತಿ ಜೊತೆ ಜಗಳ, ಹಣದ ಮುಗ್ಗಟ್ಟು, ಸಹೋದ್ಯೋಗಿಗಳಿಂದ ಕಿರುಕುಳ, ಮೇಲಧಿಕಾರಿಗಳಿಂದ ದಬ್ಬಾಳಿಕೆ, ಸಾಲಗಾರರಿಂದ ತೊಂದರೆ ಇತ್ಯಾದಿಗಳೂ, ಲಾಟರಿಯಲ್ಲಿ ಅದೃಷ್ಟ, ಮಕ್ಕಳಿಂದ ಮನಸ್ಸಿಗೆ ಉಲ್ಲಾಸ, ಸದ್ಯವೇ ಭಡ್ತಿ ಯೋಗ ಇತ್ಯಾದಿಗಳೂ ಇರುತ್ತಿದ್ದವು! ನಾವು ತಮಾಷೆಗೆ ಮಿತ್ರನಿಂದ ಪುತ್ರಭಾಗ್ಯ ಇತ್ಯಾದಿಯಾಗಿ ಲೇವಡಿಯನ್ನೂ ಮಾಡುತ್ತಿದ್ದೆವು. ಇವೆಲ್ಲಾ ಪ್ರತಿಯೊಬ್ಬರ ಜೀವನದಲ್ಲಿ ಸಾಮಾನ್ಯವಾಗಿರುವುದರಿಂದ ಓದುಗರಿಗೆ ಹೇಗೋ ಒಂದೊಂದು ರೀತಿಯಲ್ಲಿ ಹೊಂದಾಣಿಕೆಯಾಗುತ್ತಿದ್ದವು.
ಒಂದು ಪತ್ರಿಕೆಯಲ್ಲಿ ಒಬ್ಬರು ಜ್ಯೋತಿಷಿ ವಾರಕ್ಕೊಮ್ಮೆ ಬಂದು ಇಡೀ ವಾರದ ಭವಿಷ್ಯ ಬರೆದು ತಂದುಕೊಟ್ಟು ಹೋಗುತ್ತಿದ್ದರು! ಸುಮ್ಮನೇ ಹೋಗುತ್ತಿರಲಿಲ್ಲ- ಜ್ಯೋತಿಷ್ಯದ ಬಗ್ಗೆ ಕೊರೆದೇ ಹೋಗುತ್ತಿದ್ದರು! ಇದರಿಂದ ಈ ಮಹಾನ್ ಬುರುಡೆ ಶಾಸ್ತ್ರದ ನನ್ನ ಜ್ಞಾನ ಅಪಾರ ಅಭಿವೃದ್ಧಿಯಾಯಿತು!
ಒಂದು ಸಲ ಅವರು ಬರಬೇಕಾದ ದಿನ ಬರಲಿಲ್ಲ. ಏನು ಮಾಡುವುದು ಎಂದು ಉಪಸಂಪಾದಕನಿಗೆ ತಲೆಬಿಸಿ! ‘ತಲೆಬಿಸಿ ಎಂತಕ್ಕೆ? ಹಿಂದಿನದ್ದೇ ಒಂದು ಹಾಕು!’ ಎಂದೆ ನಾನು. ಇದು ಓದುಗರಿಗೆ ಮೋಸ ಎಂದು ನನಗೆ ಅನಿಸಲಿಲ್ಲ! ಮೊದಲೇ ಸುಳ್ಳು! ಆ ಸುಳ್ಳಿನಲ್ಲಿ ಮತ್ತೆ ಮೋಸ ಎಂತದ್ದು!? ಅವರು ಮರುದಿನವೂ ಬರಲಿಲ್ಲ! ಈ ಪರಿಪಾಠ ಮುಂದುವರಿಯಿತು. ಕೆಲವು ದಿನಗಳ ನಂತರ ಅತಂಕದಿಂದಲೇ ಬಂದರು- ಬರೆಯುವ ಅವಕಾಶ ತಪ್ಪಿ ಹೋಯಿತೆ ಎಂದು. ಯಾಕೆಂದರೆ, ಪತ್ರಿಕೆಯಲ್ಲಿ ಪ್ರತೀದಿನ ಹೆಸರು ಪ್ರಕಟವಾಗುತ್ತಿದ್ದುದರಿಂದ ಅವರಿಗೆ ಉಚಿತ ಜಾಹೀರಾತು! ಇದರಿಂದ ಕುರಿಗಳ- ಕ್ಷಮಿಸಿ, ಗಿರಾಕಿಗಳ ಸಂಖ್ಯೆ ಹೆಚ್ಚುತ್ತಿತ್ತು!.
ಬಂದವರೇ, ”ನನಗೆ ಹುಷಾರಿರಲಿಲ್ಲ ಮಾರಾಯ್ರೆ! ಮಲೇರಿಯಾ! ನನ್ನ ಬದಲು ಭವಿಷ್ಯ ಯಾರು ಬರೆಯುತ್ತಿದ್ದುದು?” ಎಂದು ಕೇಳಿದರು. ಪಾಪ! ಎಲ್ಲರ ಸಮಸ್ಯೆಗಳನ್ನು ಮುಂಚಿತವಾಗಿ ಹೇಳುವ ಅವರಿಗೆ ತನಗೆ ಮಲೇರಿಯಾ ಬರಲಿದೆ ಎಂದು ಗೊತ್ತಿರಲಿಲ್ಲ! ಗೊತ್ತಿದ್ದರೆ ಮುಂಚಿತವಾಗಿ ಒಂದು ತಿಂಗಳದ್ದು ಬರೆದುಕೊಟ್ಟು ಹೋಗುತ್ತಿರಲಿಲ್ಲವೆ!?
ನಮ್ಮ ಸಂಪಾದಕರು ಸ್ವತಃ ಈ ಜ್ಯೋತಿಷ್ಯದ ಹುಚ್ಚನಾಗಿದ್ದರೂ ಮಹಾ ಕಿಡಿಗೇಡಿ!- (ಈಗ ಅವರಿಲ್ಲ!; ಅವರ ಆತ್ಮಕ್ಕೆ ಶಾಂತಿ ಸಿಗಲಿ!) ಯಾರೋ ಪ್ರಸಿದ್ಧ ಜ್ಯೋತಿಷಿಯ ಹೆಸರು ಹೇಳಿ ಬುರುಡೆಬಿಟ್ಟರು!
“ಹೋ! ಹೌದೆ? ನೋಡುವಾಗಲೇ ಅಂದಾಜಾಯಿತು- ಯಾರೋ ದೊಡ್ಡಜನ ಬರೆದದ್ದು ಅಂತ! ಸರೀಯಾಗಿತ್ತು!” ಎಂದು ಒತ್ತಿಹೇಳಿ, ಮುಂದಿನ ವಾರದ ಭವಿಷ್ಯ ಕೊಟ್ಟು ಹೋದರು. ಒಂದು ವೇಳೆ ಸಂಪಾದಕರು ಯಾವುದೋ ಕಾಂಜಿಪೀಂಜಿ ಹೆಸರು ಹೇಳಿರುತ್ತಿದ್ದರೆ, “ಛೇ! ಏನೇನೂ ಸರಿಯಿರಲಿಲ್ಲ!! ಮೂರನೇ ಮನೆಯಲ್ಲಿ ಕುಜ ಇರುವಾಗ….” ಎಂದೆಲ್ಲಾ ಕೊರೆಯುತ್ತಿದ್ದರು.
ನಂತರ ನಾನು ಸೇರಿದ ಸಂಜೆ ಪತ್ರಿಕೆ ಮಾಲಕರು ಪಕ್ಕಾ ವ್ಯಾಪಾರಿ. ಪತ್ರಿಕೆ ಅರಂಭವಾಗುವ ಮೊದಲೇ ಸೇರಿದ್ದ ನಾನು ಭವಿಷ್ಯ ಬೇಡವೆಂದರೂ ಕೇಳಲಿಲ್ಲ! ‘ಹೇ! ನಿಮಗೆ ಗೊತ್ತಿಲ್ಲ! ಅದಕ್ಕೇ ಓದುಗರಿದ್ದಾರೆ. ಭವಿಷ್ಯ ಬೇಕೇಬೇಕು. ದಿನ ಭವಿಷ್ಯದ ಜೊತೆಗೆ ವಾರಭವಿಷ್ಯವೂ ಬೇಕು’ ಎಂದರು. ಸರಿ ಡೆಸ್ಕಿನಲ್ಲೇ ಒಂದಷ್ಟು ಭವಿಷ್ಯ ಬರೆಯಲಾಯಿತು! ಅದನ್ನು ಡಿಟಿಪಿಯವರ ಕೈಗೆ ಒಪ್ಪಿಸಲಾಯಿತು! ಅವರೇ ಲಾಟರಿ ತೆಗೆದಂತೆ ತಿರುಗಿಸಿ ತಿರುಗಿಸಿ, ಒಂದೊಂದು ರಾಶಿಗೆ ಒಂದೊಂದು ಹಾಕುತ್ತಿದ್ದರು! ಇದರಲ್ಲಿ ಮೋಸವೇನೂ ಇಲ್ಲ! ಭವಿಷ್ಯ ಎಂದರೆ ‘ಅದೃಷ್ಟದ ಆಟ’ವಲ್ಲವೆ!!? ಗಿಣಿಶಾಸ್ತ್ರದಂತೆ ಗಿಣಿಯ ಬದಲು ಮನುಷ್ಯರು ಚೀಟಿ ಹೆಕ್ಕಿದಂತೆ ಆಯಿತಷ್ಟೇ!
ಇದನ್ನು ಓದಿದ ಮೇಲೆ, ನೀವೂ ನಿಮ್ಮ ಪತ್ರಿಕೆಗಳಲ್ಲಿ ಬರುವ ದಿನಭವಿಷ್ಯ ತಪ್ಪದೇ ಓದಿ ಮಾರ್ಗದರ್ಶನ ಪಡೆಯಿರಿ!
ಇದನ್ನು ಬರೆಯಲು ಕಾರಣವೆಂದರೆ, ಈ ರೀತಿ ಮಾಡದ ಪತ್ರಿಕೆಗಳೇ ಕಡಿಮೆ ಎಂದು ಹಳೆಯ ಪತ್ರಕರ್ತರನ್ನು ಕೇಳಿದರೆ ಸಾಕ್ಷಿ ಹೇಳುತ್ತಾರೆ. ನಾವು ಹಿಂದೆ ಮಾಡಿದ್ದು, ಮಹಾ ಅನೈತಿಕ ಅನಿಸಿದರೂ ಮಹಾ ಮೋಸವೆಂದು ನನಗನಿಸಿಲ್ಲ! ಇದರಿಂದ ನಮಗೇನೂ ಲಾಭವಿರಲಿಲ್ಲ! ಆದರೀಗ ಮಹಾಮೋಸಗಾರರ ಕದೀಮ ದಂಡೇ ಪತ್ರಿಕಾ ಮತ್ತು ದೃಶ್ಯ ಮಾಧ್ಯಮಗಳಲ್ಲಿ ವಕ್ಕರಿಸಿ ವಿಜ್ಞಾನದ ಕಪಾಳಕ್ಕೆ ಹೊಡೆಯುವಂತಹ ಸಂಶೋಧನೆಗಳನ್ನು ಯಾವುದೇ ನಾಚಿಕೆ ಅಥವಾ ಹಿಂಜರಿಕೆ ಇಲ್ಲದೇ ಬೊಗಳುತ್ತವೆ.
ಮೂಢನಂಬಿಕೆಗಳನ್ನು ನಿವಾರಿಸಬೇಕಾದ ಮಾಧ್ಯಮಗಳೇ ಅವುಗಳಿಗೆ ಪ್ರೋತ್ಸಾಹ ನೀಡಿ ಧನಲಾಭ ಮಾಡಿಕೊಳ್ಳುತ್ತಿವೆ. ಪತ್ರಿಕೆಗಳಲ್ಲಿ ಕೇವಲ ದಿನ, ವಾರ ಭವಿಷ್ಯಗಳೇ ಅಲ್ಲದೆ, ಮಹಾನ್ ಸಂಶೋಧನಾ ಲೇಖನಗಳೂ ಬರುತ್ತಿವೆ! ಪ್ರಳಯವಾಗುತ್ತದೆ ಎಂದು ಸಾವಿರಾರು ಜನರನ್ನು ಹೆದರಿಸಿದ ದಂಡಪಿಂಡ ಇಂದಿಗೂ ತನ್ನ ಬ್ರಹ್ಮಾಂಡ ಹೊಟ್ಟೆಯನ್ನು ಹೊತ್ತುಕೊಂಡು ಒದರುತ್ತಾ ಹೊಟ್ಟೆಹೊರೆದುಕೊಳ್ಳುತ್ತಿದ್ದಾನೆ!
ಕೇವಲ ಉದಾಹರಣೆಗಾಗಿ ಕೆಲವು ಪ್ರಸಿದ್ಧ ಪತ್ರಿಕೆಗಳಲ್ಲಿ ಬಂದ ಲೇಖನಗಳಿಂದಲೇ ನಾನು ಪಡೆದುಕೊಂಡ ಜ್ಞಾನವನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ.
“ಕೆಲವರಿಗೆ ಎಷ್ಟು ಹುಡುಕಾಡಿದರೂ ಸರಿಯಾದ ಸಂಗಾತಿ ಸಿಗದೆ ಇರುವುದರಿಂದ ಮದುವೆ ವಿಳಂಬವಾಗಿರುತ್ತದೆ. ಇದಕ್ಕೆ ಜ್ಯೋತಿಷ್ಯದ ಪ್ರಕಾರ ಪಿತೃದೋಷ ಅಥವಾ ಸರ್ಪದೋಷವೆಂದು ಕರೆಯಲಾಗುತ್ತದೆ. ಆದರೆ ಈ ದೋಷಗಳನ್ನು ನಿವಾರಣೆ ಮಾಡಲು ಆಧ್ಯಾತ್ಮಿಕ ಪರಿಹಾರಗಳು ಇವೆ! ಇದನ್ನು ಪಾಲಿಸಿಕೊಂಡು ಹೋದರೆ ಮುಂದೆ ಸಂಗಾತಿ ಸಿಗುವುದರಲ್ಲಿ ಯಾವುದೇ ಸಂಶಯವಿಲ್ಲ!” ಇದು ಜೋಯಿಸರುಗಳ ಒಂದು ಸಾಮಾನ್ಯ ಬುರುಡೆ. ಪರಿಹಾರ ಇದೆ! ಲಾಭ ಗ್ಯಾರಂಟಿ- ಜೋಯಿಸರಿಗೆ!
ಎಂತಹ ವಿಚಿತ್ರ ನೋಡಿ! ‘ನನ್ನ ತಂಗಿಗೊಂದು ಗಂಡು ಕೊಡಿ’ ಎಂಬ ನಾಟಕವನ್ನೇ ಪಿ.ಲಂಕೇಶರು ಬರೆದಿದ್ದಾರೆ! ಬಹುತೇಕ ಜನರಿಗೆ ಈ ಸಮಸ್ಯೆ ಇದೆ! ಜಾತಿ, ಉಪಜಾತಿ, ಕುಲ, ಜಾತಕ, ನಕ್ಷತ್ರ, ಐಶ್ವರ್ಯ, ಅಂತಸ್ತು, ರೂಪ, ಬಣ್ಣ, ಗುಣ, ಎತ್ತರ, ವಿದ್ಯೆ…ಮಣ್ಣು ಮಸಣ ಎಂದು ಹೆಣಗಾಡುವುದರಿಂದ ಈ ಸಮಸ್ಯೆ ಉಂಟಾಗುವುದಿಲ್ಲ! ಇದಕ್ಕೆ ಪಿತೃದೋಷ, ಶನಿದೋಷ, ನಾಗದೋಷಗಳೇ ಕಾರಣ!
ಇದಕ್ಕೆ ಪರಿಹಾರ ನೋಡಿ! “ಹಾಲು, ಮೊಸರು, ಎಳನೀರು, ಹೂ, ಜೇನುತುಪ್ಪ, ಕಬ್ಬಿನ ಹಾಲು ಇತ್ಯಾದಿಯಿಂದ ಶಿವನ ಲಿಂಗಕ್ಕೆ ಅಭಿಷೇಕ ಮಾಡಬೇಕು.” (ಇದನ್ನೇ ಮಕ್ಕಳಿಗಾಗಲೀ, ಹಸಿದವರಿಗಾಗಲೀ ಕೊಟ್ಟರೆ ಫಲವಿಲ್ಲ!)
ಸೋಮವಾರ ಅಥವಾ ಶನಿವಾರದಂದೇ ಈ ಕಾರ್ಯಗಳನ್ನು ಮಾಡಬೇಕು. (ಬೇರೆ ದಿನಗಳಲ್ಲಿ ಇವುಗಳನ್ನು ಸೇವಿಸುವುದಿಲ್ಲ ಎಂದು ಟೈಮ್‍ಟೇಬಲ್ ಹಾಕಿರುವ ದೇವರು ಅದನ್ನು ಸೀಕ್ರೆಟಾಗಿ ಈ ಜೋಯಿಸರಿಗೆ ತಿಳಿಸಿರುತ್ತಾನೆ!)
“ಪಿತೃದೋಷ ಅಥವಾ ಶಿಕ್ಷೆಯನ್ನು ನಿವಾರಣೆ ಮಾಡುವ ಸಲುವಾಗಿ ಶನಿದೇವರನ್ನು ಒಲಿಸಿಕೊಳ್ಳಲು ಹನುಮಂತನಿಗೆ ಹರಕೆ ಒಪ್ಪಿಸಬೇಕು! ಅಥವಾ ಓಂ ಶಂ ಶನೈಶ್ಚರಾಯ ನಮಃ ಮಂತ್ರವನ್ನು ಪಠಿಸಬೇಕು.” ಇದೆಂತಹ ಲಾಜಿಕ್ ಎಂದು ಅರ್ಥವಾಗುವುದಿಲ್ಲ. ಈಗ ಬೆಂಗಳೂರು ಮತ್ತಿತರ ನಗರಗಳಲ್ಲಿ ಶನಿದೇವರು ಜೀಪು ರಥದಲ್ಲಿ ಪ್ರದಕ್ಷಿಣೆ ಬಂದು ಕಲೆಕ್ಷನ್ ಮಾಡುವುದರಿಂದ ಮತ್ತು ಹಳ್ಳಿಹಳ್ಳಿಗಳಲ್ಲಿ ಸಾಮೂಹಿಕ ಶನಿಪೂಜೆಗಳು ನಡೆಯುತ್ತಿರುವುದರಿಂದ ಆತನ ವಿಷಯದಲ್ಲಿ ಹನುಮಂತನಿಗೇನು ಕೆಲಸ? ಇದು ಅನ್‍ಫೇರ್ ಟ್ರೇಡ್ ಪ್ರ್ಯಾಕ್ಟೀಸ್ ಆಗುವುದಿಲ್ಲವೇ!?
ಇದೇ ರೀತಿಯಲ್ಲಿ ಪಿತೃದೋಷ, ಶನಿದೋಷ, ನಾಗದೋಷ, ಗ್ರಹದೋಷಗಳಿಂದ ನಿಮಗೆ ಆಗುವ ಅನಾಹುತಗಳನ್ನೂ, ಅದರಿಂದ ಜೋಯಿಸರಿಗೆ ಆಗುವ ಲಾಭಗಳನ್ನು ಮುಂದೆ ನೋಡೋಣ!

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...