Homeಅಂಕಣಗಳುಪತ್ರಕರ್ತರೇ ಕಳ್ಳ ಜ್ಯೋತಿಷಿಗಳಾದಾಗ!

ಪತ್ರಕರ್ತರೇ ಕಳ್ಳ ಜ್ಯೋತಿಷಿಗಳಾದಾಗ!

- Advertisement -
- Advertisement -

ಮೂಢನಂಬಿಕೆಗಳೆಂದರೆ ಸಿಡಿಯುತ್ತಿದ್ದ ‘ಮುಂಗಾರು’ ಪತ್ರಿಕೆ ಬಿಟ್ಟ ಮೇಲೆ ನಾನು ಕೆಲವು ಸಂಜೆ ಪತ್ರಿಕೆಗಳಲ್ಲೂ ಕೆಲಸ ಮಾಡಿದ್ದೆ. ಇವೆಲ್ಲವೂ ದಿನ ಭವಿಷ್ಯ ಪ್ರಕಟಿಸುತ್ತಿದ್ದವು. ಆದರೆ, ಲೇವಡಿಯ ಹೊರತು ನಾವೇನೂ ಮಾಡುವಂತಿರಲಿಲ್ಲ!
ಈ ಭವಿಷ್ಯಗಳು ಹಿಂದೆ ಹವಾಮಾನ ಇಲಾಖೆಯ ಭವಿಷ್ಯಗಳಂತೆ ಇರುತ್ತಿದ್ದವು- ‘ರಾಜ್ಯದ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ’. ಒಂದೆರಡು ಹಳ್ಳಿಗಳಲ್ಲಿ ನಾಲ್ಕು ಹನಿ ಬಿದ್ದರೂ ಭವಿಷ್ಯ ನಿಜವಾಗುತ್ತದೆ!
ಮನೆಯಲ್ಲಿ ಮನಸ್ತಾಪ, ಹೆಂಡತಿ ಜೊತೆ ಜಗಳ, ಹಣದ ಮುಗ್ಗಟ್ಟು, ಸಹೋದ್ಯೋಗಿಗಳಿಂದ ಕಿರುಕುಳ, ಮೇಲಧಿಕಾರಿಗಳಿಂದ ದಬ್ಬಾಳಿಕೆ, ಸಾಲಗಾರರಿಂದ ತೊಂದರೆ ಇತ್ಯಾದಿಗಳೂ, ಲಾಟರಿಯಲ್ಲಿ ಅದೃಷ್ಟ, ಮಕ್ಕಳಿಂದ ಮನಸ್ಸಿಗೆ ಉಲ್ಲಾಸ, ಸದ್ಯವೇ ಭಡ್ತಿ ಯೋಗ ಇತ್ಯಾದಿಗಳೂ ಇರುತ್ತಿದ್ದವು! ನಾವು ತಮಾಷೆಗೆ ಮಿತ್ರನಿಂದ ಪುತ್ರಭಾಗ್ಯ ಇತ್ಯಾದಿಯಾಗಿ ಲೇವಡಿಯನ್ನೂ ಮಾಡುತ್ತಿದ್ದೆವು. ಇವೆಲ್ಲಾ ಪ್ರತಿಯೊಬ್ಬರ ಜೀವನದಲ್ಲಿ ಸಾಮಾನ್ಯವಾಗಿರುವುದರಿಂದ ಓದುಗರಿಗೆ ಹೇಗೋ ಒಂದೊಂದು ರೀತಿಯಲ್ಲಿ ಹೊಂದಾಣಿಕೆಯಾಗುತ್ತಿದ್ದವು.
ಒಂದು ಪತ್ರಿಕೆಯಲ್ಲಿ ಒಬ್ಬರು ಜ್ಯೋತಿಷಿ ವಾರಕ್ಕೊಮ್ಮೆ ಬಂದು ಇಡೀ ವಾರದ ಭವಿಷ್ಯ ಬರೆದು ತಂದುಕೊಟ್ಟು ಹೋಗುತ್ತಿದ್ದರು! ಸುಮ್ಮನೇ ಹೋಗುತ್ತಿರಲಿಲ್ಲ- ಜ್ಯೋತಿಷ್ಯದ ಬಗ್ಗೆ ಕೊರೆದೇ ಹೋಗುತ್ತಿದ್ದರು! ಇದರಿಂದ ಈ ಮಹಾನ್ ಬುರುಡೆ ಶಾಸ್ತ್ರದ ನನ್ನ ಜ್ಞಾನ ಅಪಾರ ಅಭಿವೃದ್ಧಿಯಾಯಿತು!
ಒಂದು ಸಲ ಅವರು ಬರಬೇಕಾದ ದಿನ ಬರಲಿಲ್ಲ. ಏನು ಮಾಡುವುದು ಎಂದು ಉಪಸಂಪಾದಕನಿಗೆ ತಲೆಬಿಸಿ! ‘ತಲೆಬಿಸಿ ಎಂತಕ್ಕೆ? ಹಿಂದಿನದ್ದೇ ಒಂದು ಹಾಕು!’ ಎಂದೆ ನಾನು. ಇದು ಓದುಗರಿಗೆ ಮೋಸ ಎಂದು ನನಗೆ ಅನಿಸಲಿಲ್ಲ! ಮೊದಲೇ ಸುಳ್ಳು! ಆ ಸುಳ್ಳಿನಲ್ಲಿ ಮತ್ತೆ ಮೋಸ ಎಂತದ್ದು!? ಅವರು ಮರುದಿನವೂ ಬರಲಿಲ್ಲ! ಈ ಪರಿಪಾಠ ಮುಂದುವರಿಯಿತು. ಕೆಲವು ದಿನಗಳ ನಂತರ ಅತಂಕದಿಂದಲೇ ಬಂದರು- ಬರೆಯುವ ಅವಕಾಶ ತಪ್ಪಿ ಹೋಯಿತೆ ಎಂದು. ಯಾಕೆಂದರೆ, ಪತ್ರಿಕೆಯಲ್ಲಿ ಪ್ರತೀದಿನ ಹೆಸರು ಪ್ರಕಟವಾಗುತ್ತಿದ್ದುದರಿಂದ ಅವರಿಗೆ ಉಚಿತ ಜಾಹೀರಾತು! ಇದರಿಂದ ಕುರಿಗಳ- ಕ್ಷಮಿಸಿ, ಗಿರಾಕಿಗಳ ಸಂಖ್ಯೆ ಹೆಚ್ಚುತ್ತಿತ್ತು!.
ಬಂದವರೇ, ”ನನಗೆ ಹುಷಾರಿರಲಿಲ್ಲ ಮಾರಾಯ್ರೆ! ಮಲೇರಿಯಾ! ನನ್ನ ಬದಲು ಭವಿಷ್ಯ ಯಾರು ಬರೆಯುತ್ತಿದ್ದುದು?” ಎಂದು ಕೇಳಿದರು. ಪಾಪ! ಎಲ್ಲರ ಸಮಸ್ಯೆಗಳನ್ನು ಮುಂಚಿತವಾಗಿ ಹೇಳುವ ಅವರಿಗೆ ತನಗೆ ಮಲೇರಿಯಾ ಬರಲಿದೆ ಎಂದು ಗೊತ್ತಿರಲಿಲ್ಲ! ಗೊತ್ತಿದ್ದರೆ ಮುಂಚಿತವಾಗಿ ಒಂದು ತಿಂಗಳದ್ದು ಬರೆದುಕೊಟ್ಟು ಹೋಗುತ್ತಿರಲಿಲ್ಲವೆ!?
ನಮ್ಮ ಸಂಪಾದಕರು ಸ್ವತಃ ಈ ಜ್ಯೋತಿಷ್ಯದ ಹುಚ್ಚನಾಗಿದ್ದರೂ ಮಹಾ ಕಿಡಿಗೇಡಿ!- (ಈಗ ಅವರಿಲ್ಲ!; ಅವರ ಆತ್ಮಕ್ಕೆ ಶಾಂತಿ ಸಿಗಲಿ!) ಯಾರೋ ಪ್ರಸಿದ್ಧ ಜ್ಯೋತಿಷಿಯ ಹೆಸರು ಹೇಳಿ ಬುರುಡೆಬಿಟ್ಟರು!
“ಹೋ! ಹೌದೆ? ನೋಡುವಾಗಲೇ ಅಂದಾಜಾಯಿತು- ಯಾರೋ ದೊಡ್ಡಜನ ಬರೆದದ್ದು ಅಂತ! ಸರೀಯಾಗಿತ್ತು!” ಎಂದು ಒತ್ತಿಹೇಳಿ, ಮುಂದಿನ ವಾರದ ಭವಿಷ್ಯ ಕೊಟ್ಟು ಹೋದರು. ಒಂದು ವೇಳೆ ಸಂಪಾದಕರು ಯಾವುದೋ ಕಾಂಜಿಪೀಂಜಿ ಹೆಸರು ಹೇಳಿರುತ್ತಿದ್ದರೆ, “ಛೇ! ಏನೇನೂ ಸರಿಯಿರಲಿಲ್ಲ!! ಮೂರನೇ ಮನೆಯಲ್ಲಿ ಕುಜ ಇರುವಾಗ….” ಎಂದೆಲ್ಲಾ ಕೊರೆಯುತ್ತಿದ್ದರು.
ನಂತರ ನಾನು ಸೇರಿದ ಸಂಜೆ ಪತ್ರಿಕೆ ಮಾಲಕರು ಪಕ್ಕಾ ವ್ಯಾಪಾರಿ. ಪತ್ರಿಕೆ ಅರಂಭವಾಗುವ ಮೊದಲೇ ಸೇರಿದ್ದ ನಾನು ಭವಿಷ್ಯ ಬೇಡವೆಂದರೂ ಕೇಳಲಿಲ್ಲ! ‘ಹೇ! ನಿಮಗೆ ಗೊತ್ತಿಲ್ಲ! ಅದಕ್ಕೇ ಓದುಗರಿದ್ದಾರೆ. ಭವಿಷ್ಯ ಬೇಕೇಬೇಕು. ದಿನ ಭವಿಷ್ಯದ ಜೊತೆಗೆ ವಾರಭವಿಷ್ಯವೂ ಬೇಕು’ ಎಂದರು. ಸರಿ ಡೆಸ್ಕಿನಲ್ಲೇ ಒಂದಷ್ಟು ಭವಿಷ್ಯ ಬರೆಯಲಾಯಿತು! ಅದನ್ನು ಡಿಟಿಪಿಯವರ ಕೈಗೆ ಒಪ್ಪಿಸಲಾಯಿತು! ಅವರೇ ಲಾಟರಿ ತೆಗೆದಂತೆ ತಿರುಗಿಸಿ ತಿರುಗಿಸಿ, ಒಂದೊಂದು ರಾಶಿಗೆ ಒಂದೊಂದು ಹಾಕುತ್ತಿದ್ದರು! ಇದರಲ್ಲಿ ಮೋಸವೇನೂ ಇಲ್ಲ! ಭವಿಷ್ಯ ಎಂದರೆ ‘ಅದೃಷ್ಟದ ಆಟ’ವಲ್ಲವೆ!!? ಗಿಣಿಶಾಸ್ತ್ರದಂತೆ ಗಿಣಿಯ ಬದಲು ಮನುಷ್ಯರು ಚೀಟಿ ಹೆಕ್ಕಿದಂತೆ ಆಯಿತಷ್ಟೇ!
ಇದನ್ನು ಓದಿದ ಮೇಲೆ, ನೀವೂ ನಿಮ್ಮ ಪತ್ರಿಕೆಗಳಲ್ಲಿ ಬರುವ ದಿನಭವಿಷ್ಯ ತಪ್ಪದೇ ಓದಿ ಮಾರ್ಗದರ್ಶನ ಪಡೆಯಿರಿ!
ಇದನ್ನು ಬರೆಯಲು ಕಾರಣವೆಂದರೆ, ಈ ರೀತಿ ಮಾಡದ ಪತ್ರಿಕೆಗಳೇ ಕಡಿಮೆ ಎಂದು ಹಳೆಯ ಪತ್ರಕರ್ತರನ್ನು ಕೇಳಿದರೆ ಸಾಕ್ಷಿ ಹೇಳುತ್ತಾರೆ. ನಾವು ಹಿಂದೆ ಮಾಡಿದ್ದು, ಮಹಾ ಅನೈತಿಕ ಅನಿಸಿದರೂ ಮಹಾ ಮೋಸವೆಂದು ನನಗನಿಸಿಲ್ಲ! ಇದರಿಂದ ನಮಗೇನೂ ಲಾಭವಿರಲಿಲ್ಲ! ಆದರೀಗ ಮಹಾಮೋಸಗಾರರ ಕದೀಮ ದಂಡೇ ಪತ್ರಿಕಾ ಮತ್ತು ದೃಶ್ಯ ಮಾಧ್ಯಮಗಳಲ್ಲಿ ವಕ್ಕರಿಸಿ ವಿಜ್ಞಾನದ ಕಪಾಳಕ್ಕೆ ಹೊಡೆಯುವಂತಹ ಸಂಶೋಧನೆಗಳನ್ನು ಯಾವುದೇ ನಾಚಿಕೆ ಅಥವಾ ಹಿಂಜರಿಕೆ ಇಲ್ಲದೇ ಬೊಗಳುತ್ತವೆ.
ಮೂಢನಂಬಿಕೆಗಳನ್ನು ನಿವಾರಿಸಬೇಕಾದ ಮಾಧ್ಯಮಗಳೇ ಅವುಗಳಿಗೆ ಪ್ರೋತ್ಸಾಹ ನೀಡಿ ಧನಲಾಭ ಮಾಡಿಕೊಳ್ಳುತ್ತಿವೆ. ಪತ್ರಿಕೆಗಳಲ್ಲಿ ಕೇವಲ ದಿನ, ವಾರ ಭವಿಷ್ಯಗಳೇ ಅಲ್ಲದೆ, ಮಹಾನ್ ಸಂಶೋಧನಾ ಲೇಖನಗಳೂ ಬರುತ್ತಿವೆ! ಪ್ರಳಯವಾಗುತ್ತದೆ ಎಂದು ಸಾವಿರಾರು ಜನರನ್ನು ಹೆದರಿಸಿದ ದಂಡಪಿಂಡ ಇಂದಿಗೂ ತನ್ನ ಬ್ರಹ್ಮಾಂಡ ಹೊಟ್ಟೆಯನ್ನು ಹೊತ್ತುಕೊಂಡು ಒದರುತ್ತಾ ಹೊಟ್ಟೆಹೊರೆದುಕೊಳ್ಳುತ್ತಿದ್ದಾನೆ!
ಕೇವಲ ಉದಾಹರಣೆಗಾಗಿ ಕೆಲವು ಪ್ರಸಿದ್ಧ ಪತ್ರಿಕೆಗಳಲ್ಲಿ ಬಂದ ಲೇಖನಗಳಿಂದಲೇ ನಾನು ಪಡೆದುಕೊಂಡ ಜ್ಞಾನವನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ.
“ಕೆಲವರಿಗೆ ಎಷ್ಟು ಹುಡುಕಾಡಿದರೂ ಸರಿಯಾದ ಸಂಗಾತಿ ಸಿಗದೆ ಇರುವುದರಿಂದ ಮದುವೆ ವಿಳಂಬವಾಗಿರುತ್ತದೆ. ಇದಕ್ಕೆ ಜ್ಯೋತಿಷ್ಯದ ಪ್ರಕಾರ ಪಿತೃದೋಷ ಅಥವಾ ಸರ್ಪದೋಷವೆಂದು ಕರೆಯಲಾಗುತ್ತದೆ. ಆದರೆ ಈ ದೋಷಗಳನ್ನು ನಿವಾರಣೆ ಮಾಡಲು ಆಧ್ಯಾತ್ಮಿಕ ಪರಿಹಾರಗಳು ಇವೆ! ಇದನ್ನು ಪಾಲಿಸಿಕೊಂಡು ಹೋದರೆ ಮುಂದೆ ಸಂಗಾತಿ ಸಿಗುವುದರಲ್ಲಿ ಯಾವುದೇ ಸಂಶಯವಿಲ್ಲ!” ಇದು ಜೋಯಿಸರುಗಳ ಒಂದು ಸಾಮಾನ್ಯ ಬುರುಡೆ. ಪರಿಹಾರ ಇದೆ! ಲಾಭ ಗ್ಯಾರಂಟಿ- ಜೋಯಿಸರಿಗೆ!
ಎಂತಹ ವಿಚಿತ್ರ ನೋಡಿ! ‘ನನ್ನ ತಂಗಿಗೊಂದು ಗಂಡು ಕೊಡಿ’ ಎಂಬ ನಾಟಕವನ್ನೇ ಪಿ.ಲಂಕೇಶರು ಬರೆದಿದ್ದಾರೆ! ಬಹುತೇಕ ಜನರಿಗೆ ಈ ಸಮಸ್ಯೆ ಇದೆ! ಜಾತಿ, ಉಪಜಾತಿ, ಕುಲ, ಜಾತಕ, ನಕ್ಷತ್ರ, ಐಶ್ವರ್ಯ, ಅಂತಸ್ತು, ರೂಪ, ಬಣ್ಣ, ಗುಣ, ಎತ್ತರ, ವಿದ್ಯೆ…ಮಣ್ಣು ಮಸಣ ಎಂದು ಹೆಣಗಾಡುವುದರಿಂದ ಈ ಸಮಸ್ಯೆ ಉಂಟಾಗುವುದಿಲ್ಲ! ಇದಕ್ಕೆ ಪಿತೃದೋಷ, ಶನಿದೋಷ, ನಾಗದೋಷಗಳೇ ಕಾರಣ!
ಇದಕ್ಕೆ ಪರಿಹಾರ ನೋಡಿ! “ಹಾಲು, ಮೊಸರು, ಎಳನೀರು, ಹೂ, ಜೇನುತುಪ್ಪ, ಕಬ್ಬಿನ ಹಾಲು ಇತ್ಯಾದಿಯಿಂದ ಶಿವನ ಲಿಂಗಕ್ಕೆ ಅಭಿಷೇಕ ಮಾಡಬೇಕು.” (ಇದನ್ನೇ ಮಕ್ಕಳಿಗಾಗಲೀ, ಹಸಿದವರಿಗಾಗಲೀ ಕೊಟ್ಟರೆ ಫಲವಿಲ್ಲ!)
ಸೋಮವಾರ ಅಥವಾ ಶನಿವಾರದಂದೇ ಈ ಕಾರ್ಯಗಳನ್ನು ಮಾಡಬೇಕು. (ಬೇರೆ ದಿನಗಳಲ್ಲಿ ಇವುಗಳನ್ನು ಸೇವಿಸುವುದಿಲ್ಲ ಎಂದು ಟೈಮ್‍ಟೇಬಲ್ ಹಾಕಿರುವ ದೇವರು ಅದನ್ನು ಸೀಕ್ರೆಟಾಗಿ ಈ ಜೋಯಿಸರಿಗೆ ತಿಳಿಸಿರುತ್ತಾನೆ!)
“ಪಿತೃದೋಷ ಅಥವಾ ಶಿಕ್ಷೆಯನ್ನು ನಿವಾರಣೆ ಮಾಡುವ ಸಲುವಾಗಿ ಶನಿದೇವರನ್ನು ಒಲಿಸಿಕೊಳ್ಳಲು ಹನುಮಂತನಿಗೆ ಹರಕೆ ಒಪ್ಪಿಸಬೇಕು! ಅಥವಾ ಓಂ ಶಂ ಶನೈಶ್ಚರಾಯ ನಮಃ ಮಂತ್ರವನ್ನು ಪಠಿಸಬೇಕು.” ಇದೆಂತಹ ಲಾಜಿಕ್ ಎಂದು ಅರ್ಥವಾಗುವುದಿಲ್ಲ. ಈಗ ಬೆಂಗಳೂರು ಮತ್ತಿತರ ನಗರಗಳಲ್ಲಿ ಶನಿದೇವರು ಜೀಪು ರಥದಲ್ಲಿ ಪ್ರದಕ್ಷಿಣೆ ಬಂದು ಕಲೆಕ್ಷನ್ ಮಾಡುವುದರಿಂದ ಮತ್ತು ಹಳ್ಳಿಹಳ್ಳಿಗಳಲ್ಲಿ ಸಾಮೂಹಿಕ ಶನಿಪೂಜೆಗಳು ನಡೆಯುತ್ತಿರುವುದರಿಂದ ಆತನ ವಿಷಯದಲ್ಲಿ ಹನುಮಂತನಿಗೇನು ಕೆಲಸ? ಇದು ಅನ್‍ಫೇರ್ ಟ್ರೇಡ್ ಪ್ರ್ಯಾಕ್ಟೀಸ್ ಆಗುವುದಿಲ್ಲವೇ!?
ಇದೇ ರೀತಿಯಲ್ಲಿ ಪಿತೃದೋಷ, ಶನಿದೋಷ, ನಾಗದೋಷ, ಗ್ರಹದೋಷಗಳಿಂದ ನಿಮಗೆ ಆಗುವ ಅನಾಹುತಗಳನ್ನೂ, ಅದರಿಂದ ಜೋಯಿಸರಿಗೆ ಆಗುವ ಲಾಭಗಳನ್ನು ಮುಂದೆ ನೋಡೋಣ!

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...