ನಂ
ಪಬ್ಲಿಕ್ ರಂಗಣ್ಣ
ಹ್ಯೇಳಿದ್ರಲ್ಲಿ
ತ್ಯೆಪ್ಪೇನೈತಿ?
ನೆಪ್ತಿ ಇರುಲಿ
ಈ ದ್ಯೇಸದ
ಶತಮಾನುದ ಸತ್ಯುವ
ಮೊದ್ಲು ನುಡುದುದ್ದೆ
ನಂ ರಂಗಣ್ಣ!
ಅತ್ತ ಮೋದಿ ಮಹಾತ್ಮ
ನೋಟು ಬ್ಯಾನು
ಮಾಡುತ್ತಿದ್ದಂಗೆ
ಇತ್ತ ರೊಚ್ಚಿಗೆದ್ದ
ನಂ ರಂಗಣ್ಣ
ಪಬ್ಲಿಕ್ ಮಠದ
ಪೀಠವನೇರಿ,
ಮಾತು ಬಾರದ
ಮುದ್ದು ಸಾದ್ವಿಯ
ಮಗ್ಗುಲಿಗೆ ಎಳಕೊಂಡು
ಮಾಡಿದ್ದೇ ಮಾಡಿದ್ದು….
ಮಾಡಿದ್ದೇ ಮಾಡಿದ್ದು….
….. ಇಶ್ಲೇಷಣೆಯ ಕ್ಲಾಸು!
ಕೈಯಲ್ಲಿ ಪುಡುಗಾಸು
ಹಿಡುದ ಭಾರತ
ಬ್ಯಾಂಕು, ಪೋಸ್ಟಾಪೀಸುಗಳ
ಮುಂದೆ ನಿಂತು
ಟೇಮು ವೇಸ್ಟು
ಮಾಡುವಾಗ,
ಕೋಳ್ಟಿನ ಅಮೀನಣ್ಣ
ಕೂಗಿಕ್ವಂಡಂಗೆ
ನಂ ರಂಗಣ್ಣ
ಮತ್ತೆಮತ್ತೆ
ಅರಚಿಕ್ವಂಡದ್ದು ನೆನಪಿದ್ಯಾ?
`ಎಲ್ಡು ಸಾವುರದ ನೋಟು
ಚಿಪ್ಪು…..!
ಎಲ್ಡು ಸಾವುರದ ನೋಟು
ಚಿಪ್ಪು…..!!
ಎಲ್ಡು ಸಾವುರದ ನೋಟು
ಚಿಪ್ಪು……..!!!
ಅವತ್ತು ನಂ
ರಂಗಣ್ಣುನ್ನ ನೋಡಿ
ಸುಖಾಸುಮ್ಕೆ
ನಗಬಾರದ ಜಾಗದಿಂದೆಲ್ಲ
ಕಿಸಿಕಿಸಿ ಕಿಸಾಡಿದ
ಪುಣ್ಯಾತ್ಮುರೇ,
ಇವತ್ತು
ಮೋದಿ ಮಹಾತ್ಮುನೇ
ಆ ಮಾತುನ್ನ ನಿಜ ಮಾಡ್ಯಿಲ್ವಾ?
`ಎಲ್ಡು ಸಾವುರದ ನೋಟು
ಜನರ ಕೈಗೆ
ತೆಂಗಿನಕಾಯಿ ಚಿಪ್ಪು!!!!!!’
ಇದ್ಕೇನಂತೀರಾ?
ನಂ ರಂಗಣ್ಣ
ಹ್ಯೇಳಿದ್ರಲ್ಲಿ
ತ್ಯೆಪ್ಪೇನೈತಿ…….
ಹೇಳಿದ ಸತ್ಯುವ
ಅರ್ತ
ಮಾಡ್ಕಣಕ್ಕಾಗುದ
ನಿಜಗೇಡಿಗಳೆ,
ಇನ್ಮೇಕಾದ್ರು
ಸತ್ಯವಂಸುದ
ನಂ ರಂಗಣ್ಣುನ್ನ
ಆಡ್ಕಳಕ್ಕೂ ಮೊದ್ಲು
ಮೈ ಮ್ಯಾಲೆ
ಒಸಿ ಖಬರ್ ಇರುಲಿ
ಹುಸಾರು…..!!!
– ತರ್ಲೆ ನನ್ಮಗ