Homeಸಾಹಿತ್ಯ-ಸಂಸ್ಕೃತಿಕವನಪಬ್ಲಿಕ್ ರಂಗಣ್ಣ ಒಂದು `ಕಂಡ' ಕಾವ್ಯ

ಪಬ್ಲಿಕ್ ರಂಗಣ್ಣ ಒಂದು `ಕಂಡ’ ಕಾವ್ಯ

- Advertisement -
- Advertisement -

ನಂ
ಪಬ್ಲಿಕ್ ರಂಗಣ್ಣ
ಹ್ಯೇಳಿದ್ರಲ್ಲಿ
ತ್ಯೆಪ್ಪೇನೈತಿ?
ನೆಪ್ತಿ ಇರುಲಿ
ಈ ದ್ಯೇಸದ
ಶತಮಾನುದ ಸತ್ಯುವ
ಮೊದ್ಲು ನುಡುದುದ್ದೆ
ನಂ ರಂಗಣ್ಣ!

ಅತ್ತ ಮೋದಿ ಮಹಾತ್ಮ
ನೋಟು ಬ್ಯಾನು
ಮಾಡುತ್ತಿದ್ದಂಗೆ
ಇತ್ತ ರೊಚ್ಚಿಗೆದ್ದ
ನಂ ರಂಗಣ್ಣ
ಪಬ್ಲಿಕ್ ಮಠದ
ಪೀಠವನೇರಿ,
ಮಾತು ಬಾರದ
ಮುದ್ದು ಸಾದ್ವಿಯ
ಮಗ್ಗುಲಿಗೆ ಎಳಕೊಂಡು
ಮಾಡಿದ್ದೇ ಮಾಡಿದ್ದು….
ಮಾಡಿದ್ದೇ ಮಾಡಿದ್ದು….
….. ಇಶ್ಲೇಷಣೆಯ ಕ್ಲಾಸು!

ಕೈಯಲ್ಲಿ ಪುಡುಗಾಸು
ಹಿಡುದ ಭಾರತ
ಬ್ಯಾಂಕು, ಪೋಸ್ಟಾಪೀಸುಗಳ
ಮುಂದೆ ನಿಂತು
ಟೇಮು ವೇಸ್ಟು
ಮಾಡುವಾಗ,
ಕೋಳ್ಟಿನ ಅಮೀನಣ್ಣ
ಕೂಗಿಕ್ವಂಡಂಗೆ
ನಂ ರಂಗಣ್ಣ
ಮತ್ತೆಮತ್ತೆ
ಅರಚಿಕ್ವಂಡದ್ದು ನೆನಪಿದ್ಯಾ?

`ಎಲ್ಡು ಸಾವುರದ ನೋಟು
ಚಿಪ್ಪು…..!
ಎಲ್ಡು ಸಾವುರದ ನೋಟು
ಚಿಪ್ಪು…..!!
ಎಲ್ಡು ಸಾವುರದ ನೋಟು
ಚಿಪ್ಪು……..!!!

ಅವತ್ತು ನಂ
ರಂಗಣ್ಣುನ್ನ ನೋಡಿ
ಸುಖಾಸುಮ್ಕೆ
ನಗಬಾರದ ಜಾಗದಿಂದೆಲ್ಲ
ಕಿಸಿಕಿಸಿ ಕಿಸಾಡಿದ
ಪುಣ್ಯಾತ್ಮುರೇ,
ಇವತ್ತು
ಮೋದಿ ಮಹಾತ್ಮುನೇ
ಆ ಮಾತುನ್ನ ನಿಜ ಮಾಡ್ಯಿಲ್ವಾ?
`ಎಲ್ಡು ಸಾವುರದ ನೋಟು
ಜನರ ಕೈಗೆ
ತೆಂಗಿನಕಾಯಿ ಚಿಪ್ಪು!!!!!!’

ಇದ್ಕೇನಂತೀರಾ?
ನಂ ರಂಗಣ್ಣ
ಹ್ಯೇಳಿದ್ರಲ್ಲಿ
ತ್ಯೆಪ್ಪೇನೈತಿ…….

ಹೇಳಿದ ಸತ್ಯುವ
ಅರ್ತ
ಮಾಡ್ಕಣಕ್ಕಾಗುದ
ನಿಜಗೇಡಿಗಳೆ,
ಇನ್ಮೇಕಾದ್ರು
ಸತ್ಯವಂಸುದ
ನಂ ರಂಗಣ್ಣುನ್ನ
ಆಡ್ಕಳಕ್ಕೂ ಮೊದ್ಲು
ಮೈ ಮ್ಯಾಲೆ
ಒಸಿ ಖಬರ್ ಇರುಲಿ
ಹುಸಾರು…..!!!

– ತರ್ಲೆ ನನ್ಮಗ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...