Homeರಾಜಕೀಯಪರಮಪಾಪಿ ಪೋಸ್ಟ್‍ಕಾರ್ಡ್ ಪೋರ್ಟಲ್

ಪರಮಪಾಪಿ ಪೋಸ್ಟ್‍ಕಾರ್ಡ್ ಪೋರ್ಟಲ್

- Advertisement -
- Advertisement -

ಮಲ್ಲಿ |

ಕರ್ನಾಟಕದ ಮಟ್ಟಿಗೆ ಹೇಳುವುದಾದರೆ, ಇಲ್ಲಿ ಸುಳ್ ಸುದ್ದಿಗಳನ್ನು ಯಥೇಚ್ಛವಾಗಿ ಹರಡುತ್ತಿರುವುದು ಪೋಸ್ಟ್‍ಕಾರ್ಡ್ ಪೋರ್ಟಲ್. ಕುಳಿತರೆ ಸುಳ್ಳು, ನಿಂತರೆ ಸುಳ್ಳು, ಉಸಿರಾಡಿದರೆ ಸುಳ್ಳು, ಹೂಸಿದರೆ ಸುಳ್ಳು-ಇದು ಪೋಸ್ಟ್‍ಕಾರ್ಡ್ ಸಂಸ್ಥಾಪಕ ಚೆಡ್ಡಿ ಮಹೇಶ ಹೆಗಡೆಯ ಧ್ಯೇಯವಾಕ್ಯ. ಆತ ಪದವಿ ಓದಿದವರನ್ನೂ ಯಾಮಾರಿಸುವಂತೆ ಸುಳ್ ಸುದ್ದಿ ಹರಡುತ್ತಾನೆ. ಈಗಷ್ಟೇ ಕೇಂದ್ರ ಸರ್ಕಾರ ‘ಕಾಂಗ್ರೆಸ್’ನ ಪ್ರಣಬ್ ಮುಖರ್ಜಿಗೆ ಭಾರತರತ್ನ ನೀಡಿದೆ. ಅದಿರಲಿ, ಈಗ ನಾವು ಪ್ರಸ್ತಾಪಿಸುತ್ತಿರುವ ವಿಷಯ ಎಂದರೆ, ಪ್ರಣಬ್ ಮುಖರ್ಜಿ ಸೋನಿಯಾ ಗಾಂಧಿ ವಿರುದ್ಧ ತಮ್ಮ ನಾಲ್ಕನೇ ಪುಸ್ತಕದಲ್ಲಿ ಕಿಡಿ ಕಾರಿದ್ದಾರೆ ಎಂದು ಪೋಸ್ಟ್‍ಕಾರ್ಡ್ ಹೇಳುತ್ತ ಬಂದ ಸುಳ್ ಸುದ್ದಿಯ ಕುರಿತು. ಐದು ತಿಂಗಳ ಹಿಂದೆಯೇ ಈ ಕೆಲಸವನ್ನು ಅದು ಶುರು ಮಾಡಿತ್ತು.
ಇನ್ನೂ ಪುಸ್ತಕವೇ ಪ್ರಕಟವಾಗಿಲ್ಲ. ಅದರ ಒಂದು ಸಣ್ಣ ಭಾಗವನ್ನು ಸುಳ್ಳನ್ನೇ ಉಸಿರಾಡುವ ಪೋಸ್ಟ್‍ಕಾರ್ಡ್ ಡಾಟ್ ನ್ಯೂಸ್ ಪ್ರಕಟಿಸಿತ್ತು ಮತ್ತು ಅದು ಆಗಾಗ ವೈರಲ್ ಆಗುತ್ತಲೇ ಇದೆ, ಚುನಾವಣೆ ಬಂತಲ್ಲ, ಮತ್ತಷ್ಟು ಜೋರಾಗಿಯೇ ಹರಡಲಿದೆ.
ಮಿಥ್ಯ: ಪೋಸ್ಟ್‍ಕಾರ್ಡ್ ಪ್ರಕಾರ, ಮಾಜಿ ರಾಷ್ಟ್ರÀಪತಿ ಪ್ರಣಬ್ ಮುಖರ್ಜಿ ಅವರ ಪುಸ್ತಕದಿಂದ ಆಯ್ದ ಭಾಗ ಹೀಗಿದೆ:
“ನರೆಂದ್ರ ಮೋದಿಯವರ ಒಂದನೇ ವರ್ಷದ ಆಡಳಿತ ಮುಗಿದಾಗ, ಅವರು ಅಲ್ಲಿವರೆಗೆ ಮಾಡಿದ್ದ ಕೆಲಸಗಳನ್ನು ಮೆಚ್ಚಿ ನಾನು ಅವರನ್ನು ಹೊಗಳಿದ್ದೆ. ಸೋನಿಯಾ ಗಾಂಧಿಯವರಿಗೆ ಇದು ಸಿಟ್ಟು ಬರಿಸಿತು.

ರಾಷ್ಟಪತಿಯವರ ಪುಸ್ತಕದಿಂದ ಆಯ್ದ ಭಾಗ ಎಂದು ಪುಟ್ಟಾಪೂರಾ ಸುಳ್ ಬರೆದ ಪೋಸ್ಟ್‍ಕಾರ್ಡ್.

ಒಮ್ಮೆ ಸಂಸತ್ತಿನಲ್ಲಿ ಭಾಷಣ ಮುಗಿಸಿ ಹೊರಬರುವಾಗ ಸೋನಿಯಾ ನನಗೆ ಎದುರಾದರು. ಅವರ ಜೊತೆಗಿದ್ದ ಗುಲಾಮ್ ನಬಿ ಅಜಾದ್ ಮತ್ತು ಮಣಶಂಕರ್ ಅಯ್ಯರ್ ನನಗೆ ಗೌರವದಿಂದ ಹಾರೈಸಿದರು. ಆದರೆ ಸೋನಿಯಾ ಸುಮ್ಮನೆ ನಿಂತಿದ್ದರು. ನಾನೇ ಮೊದಲು ಅವರಿಗೆ ಹಾರೈಸಬೇಕೆಂದು ಅವರು ಬಯಸಿದ್ದರು. ಅವರ ಎದುರು ಈ ದೇಶದ ಪ್ರಥಮ ಪ್ರಜೆ ನಿಂತಿದ್ದಾರೆ ಎಂಬುದನ್ನೇ ಅವರು ಮರೆತಿದ್ದರು.
ಪ್ರಣಬ್ ಮುಖರ್ಜಿಯಾಗಿ ಅಲ್ಲ, ಈ ದೇಶದ ರಾಷ್ಟ್ರಪತಿ ನಾನು ಎಂಂಬುದನ್ನು ಅವರು ಒಪ್ಪಿಕೊಳ್ಳಬೇಕಿತ್ತು.
ಸೋನಿಯಾರ ಈ ವರ್ತನೆ ನನ್ನೊಳಗೆ ತೀವ್ರ ನೋವನ್ನು ಉಂಟು ಮಾಡಿತು…”
ಮೇಲಿನ ಘಟನೆ 2015ರ ಮೇನಲ್ಲಿ ನಡೆಯಿತು ಎಂದು ಉಲ್ಲೇಖಿಸಲಾಗಿದೆ. ಪೋಸ್ಟ್‍ಕಾರ್ಡ್ ಪ್ರಕಾರ ಇದು ಪ್ರಣಬ್ ಮುಖರ್ಜಿ ಅವರ ಪುಸ್ತಕದ ಒಂದು ಭಾಗ. ಇದನ್ನು ನಂಬಿದ ಅಮಾಯಕರು ಮತ್ತು ಸುಳ್ಳೆಂದು ಗೊತ್ತಿರುವ ಸಾವಿರಾರು ಕಿರಾತಕರು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತ ಅನಗತ್ಯವಾಗಿ ಸೋನಿಯಾ ಗಾಂಧಿಯವರ ಮೇಲೆ ಆಕ್ರಮಣ ನಡೆಸುತ್ತಲೇ ಬಂದಿದ್ದಾರೆ.
ಸತ್ಯ: ಪ್ರಣಬ್ ಅವರ ಉದ್ದೇಶಿತ ಪುಸ್ತಕ 2018ರ ಡಿಸೆಂಬರ್‍ನಲ್ಲಿ ಪ್ರಕಟನೆಯಾಗಲಿದೆ ಎಂದು ಅದರ ಪ್ರಕಟಣಾ ಹಕ್ಕು ಪಡೆದಿರುವ ರೂಪಾ ಪ್ರಕಾಶನ ಸಂಸ್ಥೆ ಹೇಳಿತ್ತು. (ಈಗಲೂ ದು ಪ್ರಕಟವಾಗಿಲ್ಲ) ಅಂದರೆ ಪ್ರಣಬ್‍ರವರು ಈಗಾಗಲೇ ಕಾಗದದಲ್ಲಿ ಬರೆದಿರಬಹುದಾದ ಅಥವಾ ಕಂಪ್ಯೂಟರ್‍ನಲ್ಲಿ ಕೀ-ಇನ್ ಮಾಡಿರಬಹುದಾದ ಕಾಪಿಯನ್ನು ಪೋಸ್ಟ್‍ಕಾರ್ಡ್ ಕದ್ದಿರಬಹುದು ಅಂತಾ ಭಾವಿಸೋಕೂ ಆಸ್ಪದವಿಲ್ಲ. ಏಕೆಂದರೆ ಆಗ ಪ್ರಕಾಶಕರು ಮತ್ತು ಪ್ರಣಬ್ ಮುಖರ್ಜಿ ಕಚೇರಿ ಪ್ರಕಾರ ಅವರಿನ್ನೂ ಬರೆಯಲು ಶುರೂನೇ ಮಾಡಿರಲಿಲ್ಲ!

ಸೋನಿಯಾ ಗಾಂಧಿಯವರ ಜೊತೆ ಪ್ರಣಬ್ ಮುಖರ್ಜಿ

ಈ ಮೊದಲು ಪ್ರಣಬ್ ಬರೆದ ದ ಡೆಮಾಕ್ರಟಿಕ್ ಡಿಕೇಡ್, ದ ಟರ್ಬುಲೆಂಟ್ ಇಯರ್ಸ್ ಮತ್ತು ದ ಕೊಅಲಾಯನ್ಸ್ ಇಯರ್ಸ್- ಪುಸ್ತಕಗಳಲ್ಲಿ ಪ್ರಣಬ್ ಮೇಲಿನ ವಿಷಯ ಬರೆದಿಲ್ಲ, ಬರೆಯಲು ಸಾಧ್ಯವೂ ಇಲ್ಲ. ಏಕೆಂದರೆ ಇವು ಯಾವುವು 2004ರ ನಂತರದ ವಿಷಯ ಒಳಗೊಂಡಿಲ್ಲ. ಹಾಗಾದರೆ ಬರಲಿರುವ ನಾಲ್ಕನೇ ಪುಸ್ತಕ ‘ದ ಪ್ರೆಸಿಡೆನ್ಸಿಯಲ್ ಇಯರ್ಸ್’ ಪುಸ್ತಕದಲ್ಲಿ ಮೇಲಿನಂತೆ ಬರೆಯಬಹುದೇನೋ ಎಂದು ಗೆಸ್ ಮಾಡಲೂ ಆಗಲ್ಲ. ಏಕೆಂದರೆ ಪ್ರಣಬ್ ಎಂದೂ ಸಾರ್ವಜನಿಕವಾಗಿ ಸೋನಿಯಾರ ಬಗ್ಗೆ ಆಕ್ಷೇಪದ ಮಾತು ಆಡಿಲ್ಲ.
ಆಗ ಸ್ಪಷ್ಟೀಕರಣ ನೀಡಿದ್ದ ಪ್ರಣಬ್ ಕಚೇರಿ, ‘ಉದ್ದೇಶಿತ ಪುಸ್ತಕ ಪ್ರಣಬ್ ಮುಖರ್ಜಿಯವರನ್ನು ರಾಷ್ಟ್ರಪತಿ ಎಂದು ಘೋಷಿಸುವಲ್ಲಿಗೆ ಮುಗಿಯುತ್ತದೆ. ರಾಷ್ಟ್ರಪತಿಯಾದ ನಂತರದ ಘಟನೆಗಳು ಇದರಲ್ಲಿ ಬರುವುದೇ ಇಲ್ಲ. ಈ ಪುಸ್ತಕವು 2004-2012ರವರೆಗಿನ ಅವಧಿಗೆ ಸಿಮೀತ. ಇನ್ನು ಮೇ, 2015ರ ವಿಷಯ (ಅಂದರೆ ಪೋಸ್ಟ್‍ಕಾರ್ಡ್‍ನ ಸುಳ್ಳು) ಇದರಲ್ಲಿ ಹೇಗೆ ಬರಲು ಸಾಧ್ಯ?’ ಎಂದು ಪ್ರಕಟಣೆ ನೀಡುವ ಮೂಲಕ ಪೋಸ್ಟ್‍ಕಾರ್ಡ್ ಕುತಂತ್ರವನ್ನು ಬಯಲು ಮಾಡಿತ್ತು.

(ಕೃಪೆ:Altnews.com)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...