Homeರಾಜಕೀಯಪರಮಪಾಪಿ ಪೋಸ್ಟ್‍ಕಾರ್ಡ್ ಪೋರ್ಟಲ್

ಪರಮಪಾಪಿ ಪೋಸ್ಟ್‍ಕಾರ್ಡ್ ಪೋರ್ಟಲ್

- Advertisement -
- Advertisement -

ಮಲ್ಲಿ |

ಕರ್ನಾಟಕದ ಮಟ್ಟಿಗೆ ಹೇಳುವುದಾದರೆ, ಇಲ್ಲಿ ಸುಳ್ ಸುದ್ದಿಗಳನ್ನು ಯಥೇಚ್ಛವಾಗಿ ಹರಡುತ್ತಿರುವುದು ಪೋಸ್ಟ್‍ಕಾರ್ಡ್ ಪೋರ್ಟಲ್. ಕುಳಿತರೆ ಸುಳ್ಳು, ನಿಂತರೆ ಸುಳ್ಳು, ಉಸಿರಾಡಿದರೆ ಸುಳ್ಳು, ಹೂಸಿದರೆ ಸುಳ್ಳು-ಇದು ಪೋಸ್ಟ್‍ಕಾರ್ಡ್ ಸಂಸ್ಥಾಪಕ ಚೆಡ್ಡಿ ಮಹೇಶ ಹೆಗಡೆಯ ಧ್ಯೇಯವಾಕ್ಯ. ಆತ ಪದವಿ ಓದಿದವರನ್ನೂ ಯಾಮಾರಿಸುವಂತೆ ಸುಳ್ ಸುದ್ದಿ ಹರಡುತ್ತಾನೆ. ಈಗಷ್ಟೇ ಕೇಂದ್ರ ಸರ್ಕಾರ ‘ಕಾಂಗ್ರೆಸ್’ನ ಪ್ರಣಬ್ ಮುಖರ್ಜಿಗೆ ಭಾರತರತ್ನ ನೀಡಿದೆ. ಅದಿರಲಿ, ಈಗ ನಾವು ಪ್ರಸ್ತಾಪಿಸುತ್ತಿರುವ ವಿಷಯ ಎಂದರೆ, ಪ್ರಣಬ್ ಮುಖರ್ಜಿ ಸೋನಿಯಾ ಗಾಂಧಿ ವಿರುದ್ಧ ತಮ್ಮ ನಾಲ್ಕನೇ ಪುಸ್ತಕದಲ್ಲಿ ಕಿಡಿ ಕಾರಿದ್ದಾರೆ ಎಂದು ಪೋಸ್ಟ್‍ಕಾರ್ಡ್ ಹೇಳುತ್ತ ಬಂದ ಸುಳ್ ಸುದ್ದಿಯ ಕುರಿತು. ಐದು ತಿಂಗಳ ಹಿಂದೆಯೇ ಈ ಕೆಲಸವನ್ನು ಅದು ಶುರು ಮಾಡಿತ್ತು.
ಇನ್ನೂ ಪುಸ್ತಕವೇ ಪ್ರಕಟವಾಗಿಲ್ಲ. ಅದರ ಒಂದು ಸಣ್ಣ ಭಾಗವನ್ನು ಸುಳ್ಳನ್ನೇ ಉಸಿರಾಡುವ ಪೋಸ್ಟ್‍ಕಾರ್ಡ್ ಡಾಟ್ ನ್ಯೂಸ್ ಪ್ರಕಟಿಸಿತ್ತು ಮತ್ತು ಅದು ಆಗಾಗ ವೈರಲ್ ಆಗುತ್ತಲೇ ಇದೆ, ಚುನಾವಣೆ ಬಂತಲ್ಲ, ಮತ್ತಷ್ಟು ಜೋರಾಗಿಯೇ ಹರಡಲಿದೆ.
ಮಿಥ್ಯ: ಪೋಸ್ಟ್‍ಕಾರ್ಡ್ ಪ್ರಕಾರ, ಮಾಜಿ ರಾಷ್ಟ್ರÀಪತಿ ಪ್ರಣಬ್ ಮುಖರ್ಜಿ ಅವರ ಪುಸ್ತಕದಿಂದ ಆಯ್ದ ಭಾಗ ಹೀಗಿದೆ:
“ನರೆಂದ್ರ ಮೋದಿಯವರ ಒಂದನೇ ವರ್ಷದ ಆಡಳಿತ ಮುಗಿದಾಗ, ಅವರು ಅಲ್ಲಿವರೆಗೆ ಮಾಡಿದ್ದ ಕೆಲಸಗಳನ್ನು ಮೆಚ್ಚಿ ನಾನು ಅವರನ್ನು ಹೊಗಳಿದ್ದೆ. ಸೋನಿಯಾ ಗಾಂಧಿಯವರಿಗೆ ಇದು ಸಿಟ್ಟು ಬರಿಸಿತು.

ರಾಷ್ಟಪತಿಯವರ ಪುಸ್ತಕದಿಂದ ಆಯ್ದ ಭಾಗ ಎಂದು ಪುಟ್ಟಾಪೂರಾ ಸುಳ್ ಬರೆದ ಪೋಸ್ಟ್‍ಕಾರ್ಡ್.

ಒಮ್ಮೆ ಸಂಸತ್ತಿನಲ್ಲಿ ಭಾಷಣ ಮುಗಿಸಿ ಹೊರಬರುವಾಗ ಸೋನಿಯಾ ನನಗೆ ಎದುರಾದರು. ಅವರ ಜೊತೆಗಿದ್ದ ಗುಲಾಮ್ ನಬಿ ಅಜಾದ್ ಮತ್ತು ಮಣಶಂಕರ್ ಅಯ್ಯರ್ ನನಗೆ ಗೌರವದಿಂದ ಹಾರೈಸಿದರು. ಆದರೆ ಸೋನಿಯಾ ಸುಮ್ಮನೆ ನಿಂತಿದ್ದರು. ನಾನೇ ಮೊದಲು ಅವರಿಗೆ ಹಾರೈಸಬೇಕೆಂದು ಅವರು ಬಯಸಿದ್ದರು. ಅವರ ಎದುರು ಈ ದೇಶದ ಪ್ರಥಮ ಪ್ರಜೆ ನಿಂತಿದ್ದಾರೆ ಎಂಬುದನ್ನೇ ಅವರು ಮರೆತಿದ್ದರು.
ಪ್ರಣಬ್ ಮುಖರ್ಜಿಯಾಗಿ ಅಲ್ಲ, ಈ ದೇಶದ ರಾಷ್ಟ್ರಪತಿ ನಾನು ಎಂಂಬುದನ್ನು ಅವರು ಒಪ್ಪಿಕೊಳ್ಳಬೇಕಿತ್ತು.
ಸೋನಿಯಾರ ಈ ವರ್ತನೆ ನನ್ನೊಳಗೆ ತೀವ್ರ ನೋವನ್ನು ಉಂಟು ಮಾಡಿತು…”
ಮೇಲಿನ ಘಟನೆ 2015ರ ಮೇನಲ್ಲಿ ನಡೆಯಿತು ಎಂದು ಉಲ್ಲೇಖಿಸಲಾಗಿದೆ. ಪೋಸ್ಟ್‍ಕಾರ್ಡ್ ಪ್ರಕಾರ ಇದು ಪ್ರಣಬ್ ಮುಖರ್ಜಿ ಅವರ ಪುಸ್ತಕದ ಒಂದು ಭಾಗ. ಇದನ್ನು ನಂಬಿದ ಅಮಾಯಕರು ಮತ್ತು ಸುಳ್ಳೆಂದು ಗೊತ್ತಿರುವ ಸಾವಿರಾರು ಕಿರಾತಕರು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತ ಅನಗತ್ಯವಾಗಿ ಸೋನಿಯಾ ಗಾಂಧಿಯವರ ಮೇಲೆ ಆಕ್ರಮಣ ನಡೆಸುತ್ತಲೇ ಬಂದಿದ್ದಾರೆ.
ಸತ್ಯ: ಪ್ರಣಬ್ ಅವರ ಉದ್ದೇಶಿತ ಪುಸ್ತಕ 2018ರ ಡಿಸೆಂಬರ್‍ನಲ್ಲಿ ಪ್ರಕಟನೆಯಾಗಲಿದೆ ಎಂದು ಅದರ ಪ್ರಕಟಣಾ ಹಕ್ಕು ಪಡೆದಿರುವ ರೂಪಾ ಪ್ರಕಾಶನ ಸಂಸ್ಥೆ ಹೇಳಿತ್ತು. (ಈಗಲೂ ದು ಪ್ರಕಟವಾಗಿಲ್ಲ) ಅಂದರೆ ಪ್ರಣಬ್‍ರವರು ಈಗಾಗಲೇ ಕಾಗದದಲ್ಲಿ ಬರೆದಿರಬಹುದಾದ ಅಥವಾ ಕಂಪ್ಯೂಟರ್‍ನಲ್ಲಿ ಕೀ-ಇನ್ ಮಾಡಿರಬಹುದಾದ ಕಾಪಿಯನ್ನು ಪೋಸ್ಟ್‍ಕಾರ್ಡ್ ಕದ್ದಿರಬಹುದು ಅಂತಾ ಭಾವಿಸೋಕೂ ಆಸ್ಪದವಿಲ್ಲ. ಏಕೆಂದರೆ ಆಗ ಪ್ರಕಾಶಕರು ಮತ್ತು ಪ್ರಣಬ್ ಮುಖರ್ಜಿ ಕಚೇರಿ ಪ್ರಕಾರ ಅವರಿನ್ನೂ ಬರೆಯಲು ಶುರೂನೇ ಮಾಡಿರಲಿಲ್ಲ!

ಸೋನಿಯಾ ಗಾಂಧಿಯವರ ಜೊತೆ ಪ್ರಣಬ್ ಮುಖರ್ಜಿ

ಈ ಮೊದಲು ಪ್ರಣಬ್ ಬರೆದ ದ ಡೆಮಾಕ್ರಟಿಕ್ ಡಿಕೇಡ್, ದ ಟರ್ಬುಲೆಂಟ್ ಇಯರ್ಸ್ ಮತ್ತು ದ ಕೊಅಲಾಯನ್ಸ್ ಇಯರ್ಸ್- ಪುಸ್ತಕಗಳಲ್ಲಿ ಪ್ರಣಬ್ ಮೇಲಿನ ವಿಷಯ ಬರೆದಿಲ್ಲ, ಬರೆಯಲು ಸಾಧ್ಯವೂ ಇಲ್ಲ. ಏಕೆಂದರೆ ಇವು ಯಾವುವು 2004ರ ನಂತರದ ವಿಷಯ ಒಳಗೊಂಡಿಲ್ಲ. ಹಾಗಾದರೆ ಬರಲಿರುವ ನಾಲ್ಕನೇ ಪುಸ್ತಕ ‘ದ ಪ್ರೆಸಿಡೆನ್ಸಿಯಲ್ ಇಯರ್ಸ್’ ಪುಸ್ತಕದಲ್ಲಿ ಮೇಲಿನಂತೆ ಬರೆಯಬಹುದೇನೋ ಎಂದು ಗೆಸ್ ಮಾಡಲೂ ಆಗಲ್ಲ. ಏಕೆಂದರೆ ಪ್ರಣಬ್ ಎಂದೂ ಸಾರ್ವಜನಿಕವಾಗಿ ಸೋನಿಯಾರ ಬಗ್ಗೆ ಆಕ್ಷೇಪದ ಮಾತು ಆಡಿಲ್ಲ.
ಆಗ ಸ್ಪಷ್ಟೀಕರಣ ನೀಡಿದ್ದ ಪ್ರಣಬ್ ಕಚೇರಿ, ‘ಉದ್ದೇಶಿತ ಪುಸ್ತಕ ಪ್ರಣಬ್ ಮುಖರ್ಜಿಯವರನ್ನು ರಾಷ್ಟ್ರಪತಿ ಎಂದು ಘೋಷಿಸುವಲ್ಲಿಗೆ ಮುಗಿಯುತ್ತದೆ. ರಾಷ್ಟ್ರಪತಿಯಾದ ನಂತರದ ಘಟನೆಗಳು ಇದರಲ್ಲಿ ಬರುವುದೇ ಇಲ್ಲ. ಈ ಪುಸ್ತಕವು 2004-2012ರವರೆಗಿನ ಅವಧಿಗೆ ಸಿಮೀತ. ಇನ್ನು ಮೇ, 2015ರ ವಿಷಯ (ಅಂದರೆ ಪೋಸ್ಟ್‍ಕಾರ್ಡ್‍ನ ಸುಳ್ಳು) ಇದರಲ್ಲಿ ಹೇಗೆ ಬರಲು ಸಾಧ್ಯ?’ ಎಂದು ಪ್ರಕಟಣೆ ನೀಡುವ ಮೂಲಕ ಪೋಸ್ಟ್‍ಕಾರ್ಡ್ ಕುತಂತ್ರವನ್ನು ಬಯಲು ಮಾಡಿತ್ತು.

(ಕೃಪೆ:Altnews.com)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...