Homeರಾಜಕೀಯಪರಮಪಾಪಿ ಪೋಸ್ಟ್‍ಕಾರ್ಡ್ ಪೋರ್ಟಲ್

ಪರಮಪಾಪಿ ಪೋಸ್ಟ್‍ಕಾರ್ಡ್ ಪೋರ್ಟಲ್

- Advertisement -
- Advertisement -

ಮಲ್ಲಿ |

ಕರ್ನಾಟಕದ ಮಟ್ಟಿಗೆ ಹೇಳುವುದಾದರೆ, ಇಲ್ಲಿ ಸುಳ್ ಸುದ್ದಿಗಳನ್ನು ಯಥೇಚ್ಛವಾಗಿ ಹರಡುತ್ತಿರುವುದು ಪೋಸ್ಟ್‍ಕಾರ್ಡ್ ಪೋರ್ಟಲ್. ಕುಳಿತರೆ ಸುಳ್ಳು, ನಿಂತರೆ ಸುಳ್ಳು, ಉಸಿರಾಡಿದರೆ ಸುಳ್ಳು, ಹೂಸಿದರೆ ಸುಳ್ಳು-ಇದು ಪೋಸ್ಟ್‍ಕಾರ್ಡ್ ಸಂಸ್ಥಾಪಕ ಚೆಡ್ಡಿ ಮಹೇಶ ಹೆಗಡೆಯ ಧ್ಯೇಯವಾಕ್ಯ. ಆತ ಪದವಿ ಓದಿದವರನ್ನೂ ಯಾಮಾರಿಸುವಂತೆ ಸುಳ್ ಸುದ್ದಿ ಹರಡುತ್ತಾನೆ. ಈಗಷ್ಟೇ ಕೇಂದ್ರ ಸರ್ಕಾರ ‘ಕಾಂಗ್ರೆಸ್’ನ ಪ್ರಣಬ್ ಮುಖರ್ಜಿಗೆ ಭಾರತರತ್ನ ನೀಡಿದೆ. ಅದಿರಲಿ, ಈಗ ನಾವು ಪ್ರಸ್ತಾಪಿಸುತ್ತಿರುವ ವಿಷಯ ಎಂದರೆ, ಪ್ರಣಬ್ ಮುಖರ್ಜಿ ಸೋನಿಯಾ ಗಾಂಧಿ ವಿರುದ್ಧ ತಮ್ಮ ನಾಲ್ಕನೇ ಪುಸ್ತಕದಲ್ಲಿ ಕಿಡಿ ಕಾರಿದ್ದಾರೆ ಎಂದು ಪೋಸ್ಟ್‍ಕಾರ್ಡ್ ಹೇಳುತ್ತ ಬಂದ ಸುಳ್ ಸುದ್ದಿಯ ಕುರಿತು. ಐದು ತಿಂಗಳ ಹಿಂದೆಯೇ ಈ ಕೆಲಸವನ್ನು ಅದು ಶುರು ಮಾಡಿತ್ತು.
ಇನ್ನೂ ಪುಸ್ತಕವೇ ಪ್ರಕಟವಾಗಿಲ್ಲ. ಅದರ ಒಂದು ಸಣ್ಣ ಭಾಗವನ್ನು ಸುಳ್ಳನ್ನೇ ಉಸಿರಾಡುವ ಪೋಸ್ಟ್‍ಕಾರ್ಡ್ ಡಾಟ್ ನ್ಯೂಸ್ ಪ್ರಕಟಿಸಿತ್ತು ಮತ್ತು ಅದು ಆಗಾಗ ವೈರಲ್ ಆಗುತ್ತಲೇ ಇದೆ, ಚುನಾವಣೆ ಬಂತಲ್ಲ, ಮತ್ತಷ್ಟು ಜೋರಾಗಿಯೇ ಹರಡಲಿದೆ.
ಮಿಥ್ಯ: ಪೋಸ್ಟ್‍ಕಾರ್ಡ್ ಪ್ರಕಾರ, ಮಾಜಿ ರಾಷ್ಟ್ರÀಪತಿ ಪ್ರಣಬ್ ಮುಖರ್ಜಿ ಅವರ ಪುಸ್ತಕದಿಂದ ಆಯ್ದ ಭಾಗ ಹೀಗಿದೆ:
“ನರೆಂದ್ರ ಮೋದಿಯವರ ಒಂದನೇ ವರ್ಷದ ಆಡಳಿತ ಮುಗಿದಾಗ, ಅವರು ಅಲ್ಲಿವರೆಗೆ ಮಾಡಿದ್ದ ಕೆಲಸಗಳನ್ನು ಮೆಚ್ಚಿ ನಾನು ಅವರನ್ನು ಹೊಗಳಿದ್ದೆ. ಸೋನಿಯಾ ಗಾಂಧಿಯವರಿಗೆ ಇದು ಸಿಟ್ಟು ಬರಿಸಿತು.

ರಾಷ್ಟಪತಿಯವರ ಪುಸ್ತಕದಿಂದ ಆಯ್ದ ಭಾಗ ಎಂದು ಪುಟ್ಟಾಪೂರಾ ಸುಳ್ ಬರೆದ ಪೋಸ್ಟ್‍ಕಾರ್ಡ್.

ಒಮ್ಮೆ ಸಂಸತ್ತಿನಲ್ಲಿ ಭಾಷಣ ಮುಗಿಸಿ ಹೊರಬರುವಾಗ ಸೋನಿಯಾ ನನಗೆ ಎದುರಾದರು. ಅವರ ಜೊತೆಗಿದ್ದ ಗುಲಾಮ್ ನಬಿ ಅಜಾದ್ ಮತ್ತು ಮಣಶಂಕರ್ ಅಯ್ಯರ್ ನನಗೆ ಗೌರವದಿಂದ ಹಾರೈಸಿದರು. ಆದರೆ ಸೋನಿಯಾ ಸುಮ್ಮನೆ ನಿಂತಿದ್ದರು. ನಾನೇ ಮೊದಲು ಅವರಿಗೆ ಹಾರೈಸಬೇಕೆಂದು ಅವರು ಬಯಸಿದ್ದರು. ಅವರ ಎದುರು ಈ ದೇಶದ ಪ್ರಥಮ ಪ್ರಜೆ ನಿಂತಿದ್ದಾರೆ ಎಂಬುದನ್ನೇ ಅವರು ಮರೆತಿದ್ದರು.
ಪ್ರಣಬ್ ಮುಖರ್ಜಿಯಾಗಿ ಅಲ್ಲ, ಈ ದೇಶದ ರಾಷ್ಟ್ರಪತಿ ನಾನು ಎಂಂಬುದನ್ನು ಅವರು ಒಪ್ಪಿಕೊಳ್ಳಬೇಕಿತ್ತು.
ಸೋನಿಯಾರ ಈ ವರ್ತನೆ ನನ್ನೊಳಗೆ ತೀವ್ರ ನೋವನ್ನು ಉಂಟು ಮಾಡಿತು…”
ಮೇಲಿನ ಘಟನೆ 2015ರ ಮೇನಲ್ಲಿ ನಡೆಯಿತು ಎಂದು ಉಲ್ಲೇಖಿಸಲಾಗಿದೆ. ಪೋಸ್ಟ್‍ಕಾರ್ಡ್ ಪ್ರಕಾರ ಇದು ಪ್ರಣಬ್ ಮುಖರ್ಜಿ ಅವರ ಪುಸ್ತಕದ ಒಂದು ಭಾಗ. ಇದನ್ನು ನಂಬಿದ ಅಮಾಯಕರು ಮತ್ತು ಸುಳ್ಳೆಂದು ಗೊತ್ತಿರುವ ಸಾವಿರಾರು ಕಿರಾತಕರು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತ ಅನಗತ್ಯವಾಗಿ ಸೋನಿಯಾ ಗಾಂಧಿಯವರ ಮೇಲೆ ಆಕ್ರಮಣ ನಡೆಸುತ್ತಲೇ ಬಂದಿದ್ದಾರೆ.
ಸತ್ಯ: ಪ್ರಣಬ್ ಅವರ ಉದ್ದೇಶಿತ ಪುಸ್ತಕ 2018ರ ಡಿಸೆಂಬರ್‍ನಲ್ಲಿ ಪ್ರಕಟನೆಯಾಗಲಿದೆ ಎಂದು ಅದರ ಪ್ರಕಟಣಾ ಹಕ್ಕು ಪಡೆದಿರುವ ರೂಪಾ ಪ್ರಕಾಶನ ಸಂಸ್ಥೆ ಹೇಳಿತ್ತು. (ಈಗಲೂ ದು ಪ್ರಕಟವಾಗಿಲ್ಲ) ಅಂದರೆ ಪ್ರಣಬ್‍ರವರು ಈಗಾಗಲೇ ಕಾಗದದಲ್ಲಿ ಬರೆದಿರಬಹುದಾದ ಅಥವಾ ಕಂಪ್ಯೂಟರ್‍ನಲ್ಲಿ ಕೀ-ಇನ್ ಮಾಡಿರಬಹುದಾದ ಕಾಪಿಯನ್ನು ಪೋಸ್ಟ್‍ಕಾರ್ಡ್ ಕದ್ದಿರಬಹುದು ಅಂತಾ ಭಾವಿಸೋಕೂ ಆಸ್ಪದವಿಲ್ಲ. ಏಕೆಂದರೆ ಆಗ ಪ್ರಕಾಶಕರು ಮತ್ತು ಪ್ರಣಬ್ ಮುಖರ್ಜಿ ಕಚೇರಿ ಪ್ರಕಾರ ಅವರಿನ್ನೂ ಬರೆಯಲು ಶುರೂನೇ ಮಾಡಿರಲಿಲ್ಲ!

ಸೋನಿಯಾ ಗಾಂಧಿಯವರ ಜೊತೆ ಪ್ರಣಬ್ ಮುಖರ್ಜಿ

ಈ ಮೊದಲು ಪ್ರಣಬ್ ಬರೆದ ದ ಡೆಮಾಕ್ರಟಿಕ್ ಡಿಕೇಡ್, ದ ಟರ್ಬುಲೆಂಟ್ ಇಯರ್ಸ್ ಮತ್ತು ದ ಕೊಅಲಾಯನ್ಸ್ ಇಯರ್ಸ್- ಪುಸ್ತಕಗಳಲ್ಲಿ ಪ್ರಣಬ್ ಮೇಲಿನ ವಿಷಯ ಬರೆದಿಲ್ಲ, ಬರೆಯಲು ಸಾಧ್ಯವೂ ಇಲ್ಲ. ಏಕೆಂದರೆ ಇವು ಯಾವುವು 2004ರ ನಂತರದ ವಿಷಯ ಒಳಗೊಂಡಿಲ್ಲ. ಹಾಗಾದರೆ ಬರಲಿರುವ ನಾಲ್ಕನೇ ಪುಸ್ತಕ ‘ದ ಪ್ರೆಸಿಡೆನ್ಸಿಯಲ್ ಇಯರ್ಸ್’ ಪುಸ್ತಕದಲ್ಲಿ ಮೇಲಿನಂತೆ ಬರೆಯಬಹುದೇನೋ ಎಂದು ಗೆಸ್ ಮಾಡಲೂ ಆಗಲ್ಲ. ಏಕೆಂದರೆ ಪ್ರಣಬ್ ಎಂದೂ ಸಾರ್ವಜನಿಕವಾಗಿ ಸೋನಿಯಾರ ಬಗ್ಗೆ ಆಕ್ಷೇಪದ ಮಾತು ಆಡಿಲ್ಲ.
ಆಗ ಸ್ಪಷ್ಟೀಕರಣ ನೀಡಿದ್ದ ಪ್ರಣಬ್ ಕಚೇರಿ, ‘ಉದ್ದೇಶಿತ ಪುಸ್ತಕ ಪ್ರಣಬ್ ಮುಖರ್ಜಿಯವರನ್ನು ರಾಷ್ಟ್ರಪತಿ ಎಂದು ಘೋಷಿಸುವಲ್ಲಿಗೆ ಮುಗಿಯುತ್ತದೆ. ರಾಷ್ಟ್ರಪತಿಯಾದ ನಂತರದ ಘಟನೆಗಳು ಇದರಲ್ಲಿ ಬರುವುದೇ ಇಲ್ಲ. ಈ ಪುಸ್ತಕವು 2004-2012ರವರೆಗಿನ ಅವಧಿಗೆ ಸಿಮೀತ. ಇನ್ನು ಮೇ, 2015ರ ವಿಷಯ (ಅಂದರೆ ಪೋಸ್ಟ್‍ಕಾರ್ಡ್‍ನ ಸುಳ್ಳು) ಇದರಲ್ಲಿ ಹೇಗೆ ಬರಲು ಸಾಧ್ಯ?’ ಎಂದು ಪ್ರಕಟಣೆ ನೀಡುವ ಮೂಲಕ ಪೋಸ್ಟ್‍ಕಾರ್ಡ್ ಕುತಂತ್ರವನ್ನು ಬಯಲು ಮಾಡಿತ್ತು.

(ಕೃಪೆ:Altnews.com)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....