Homeಅಂಕಣಗಳುಸಂಪಾದಕೀಯ | ಕಂಡದ್ದು ಕಂಡಹಾಗೆಬೇಯುವ ಭೂಮಿಯನ್ನು ಉಳಿಸುವುದು ಎಲ್ಲರ ಕರ್ತವ್ಯ

ಬೇಯುವ ಭೂಮಿಯನ್ನು ಉಳಿಸುವುದು ಎಲ್ಲರ ಕರ್ತವ್ಯ

- Advertisement -
- Advertisement -

ನಿನ್ನೆ ದೆಹಲಿಯಲ್ಲಿ ಅತ್ಯಂತ ಹೆಚ್ಚು ಮಾಲಿನ್ಯವಿತ್ತೆಂದು ಇಂದಿನ ದಿನಪತ್ರಿಕೆಗಳು ಬರೆದಿವೆ. ಇದರಿಂದ ಜನರು ಕಂಗಾಲಾಗಿದ್ದಾರೆಂದೂ ವರದಿಯಲ್ಲಿ ಹೇಳಲಾಗಿದೆ. ವಾಸ್ತವದಲ್ಲಿ ಜನರೇನೂ ಕಂಗಾಲಾಗಿಲ್ಲ. ಏಕೆಂದರೆ, ಇದು ಇದ್ದಕ್ಕಿದ್ದಂತೆ ಒಂದು ದಿನ ಸಂಭವಿಸಿದ ವಿಕೋಪವಲ್ಲ. ಪ್ರವಾಹ, ಸುನಾಮಿ, ಭೂಕಂಪದಂತಹ ಕೆಲವು ಪ್ರಾಕೃತಿಕ ವಿಕೋಪಗಳು ಉಂಟುಮಾಡುವ ಪರಿಣಾಮದ ಸ್ವರೂಪ ಬೇರೆ. ಒಳಗೊಳಗೇ ಶಿಥಿಲಗೊಳಿಸುವ ಬರ, ಪರಿಸರ ಮಾಲಿನ್ಯಗಳ ಪರಿಣಾಮದ ಸ್ವರೂಪ ಬೇರೆ. ನಿಧಾನಕ್ಕೆ ಹೆಚ್ಚಾಗುತ್ತಾ ಹೋಗುವ ಎರಡನೆಯ ಬಗೆಯ ಸಮಸ್ಯೆಗಳಿಗೆ ಜನರು ಹೊಂದಿ ಕೊಳ್ಳುತ್ತಾ ಹೋಗುತ್ತಾರೆ. ಅವರಲ್ಲಿ ಅಂತಹ ‘ಕಂಗಾಲು’ ಉಂಟಾ ಗುವುದಿಲ್ಲ. ಸದರಿ ವರದಿಯನ್ನು ಬರೆದ ವರದಿಗಾರರಿಗೂ ಕಂಗಾಲು ಉಂಟಾಗಿರುವುದಿಲ್ಲ; ತನ್ನ ಕರ್ತವ್ಯದ ಭಾಗವಾಗಿ ಬರೆದ ವರದಿಯಾಗಿರುತ್ತದೆ. ಇಲ್ಲವೇ ಗಮನ ಸೆಳೆಯುವ ದೃಷ್ಟಿಯಿಂದ ಪರಿಣಾಮ ಬೀರುವ ಪದಗಳನ್ನು ಬಳಸಬೇಕೆಂಬ ಉದ್ದೇಶ ಅವರದ್ದಾಗಿರುತ್ತದೆ.
ಇದಕ್ಕೆ ಕಾರಣವಿದೆ. ಈಗಾಗಲೇ ಚಾಲ್ತಿಯಲ್ಲಿರುವ ಉದಾಹರಣೆಯೊಂದರ ಮೂಲಕ ಅದನ್ನು ವಿವರಿಸಬಹುದು. ನೀವು ಕಪ್ಪೆಯೊಂದನ್ನು ಬಿಸಿ ನೀರಿಗೆ ಹಾಕಿದಲ್ಲಿ ಅದು ಕೂಡಲೇ ನೆಗೆದು ಅಲ್ಲಿಂದ ತಪ್ಪಿಸಿಕೊಳ್ಳುತ್ತದೆ. ಆದರೆ, ತಣ್ಣೀರಿನ ಪಾತ್ರೆಯಲ್ಲಿ ಅದನ್ನು ಇಟ್ಟು ತಳವನ್ನು ನಿಧಾನಕ್ಕೆ ಬಿಸಿ ಮಾಡುತ್ತಾ ಹೋದಲ್ಲಿ, ತಾನು ಬೆಂದು ಹೋಗುವವರೆಗೂ ಅದು ಸುಮ್ಮನೇ ಇರುತ್ತದೆ.
ಈ ರೀತಿ ಬೇಯುವ ಸ್ಥಿತಿಗೆ ಭೂಮಿ ಬರುತ್ತಿದೆ ಎಂದು ಹಲವು ತಜ್ಞರು ಹೇಳುತ್ತಿದ್ದಾರೆ. ಅದನ್ನು ಸೂಚಿಸುತ್ತಿರುವ ಹಲವು ಸಂಗತಿಗಳನ್ನೂ ಅವರು ಪ್ರಸ್ತಾಪಿಸುತ್ತಿದ್ದಾರೆ. ಆದರೆ, ಇನ್ನೂ ಎಲ್ಲವೂ ಮುಗಿದು ಹೋಗಿಲ್ಲ ಎಂಬ ಸಮಜಾಯಿಷಿಯನ್ನು ನೀಡುತ್ತಾ, ಭೂಮಿಯನ್ನು ಮತ್ತಷ್ಟು ಸಂಕಷ್ಟಕ್ಕೆ ಒಡ್ಡುವ ಕೆಲಸ ನಡೆಯುತ್ತಲೇ ಇದೆ. ಉದಾಹರಣೆಗೆ ಕಾವೇರಿಗೆ ಅಡ್ಡಲಾಗಿರುವ ಕಟ್ಟಿರುವ ಕೆಆರ್‍ಎಸ್ ಪ್ರದೇಶದಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆಯಿಂದ ಉಂಟಾದ ಕಂಪನಗಳು, ಅಣೆಕಟ್ಟೆಯ ಪಕ್ಕದಲ್ಲೇ ಸ್ಥಾಪನೆಯಾಗಿರುವ ಕಂಪನ ಮಾಪನ ಕೇಂದ್ರದವರೆಗೂ ಹೋಗಿ ಅಲ್ಲಿ ದಾಖಲಾಗಿವೆ. ಆದರೆ, ಆ ಕಂಪನದಿಂದ ಅಣೆಕಟ್ಟೆಗೆ ಯಾವುದೇ ಧಕ್ಕೆಯಾಗಿಲ್ಲವೆಂಬ ವರದಿಯನ್ನು ಇಟ್ಟುಕೊಂಡು ಗಣಿಗಾರಿಕೆ ಮುಂದುವರೆಸುವ ಸನ್ನಾಹಗಳು ಜಾರಿಯಲ್ಲಿವೆ. ಹಾಗಾದರೆ, ಒಮ್ಮೆ ಅಣೆಕಟ್ಟೆಗೆ ಧಕ್ಕೆಯಾದ ಮೇಲೆಯೇ ನಾವು ಎಚ್ಚೆತ್ತುಕೊಳ್ಳಬೇಕೆಂಬುದು ಅದರ ಅರ್ಥವೇ?
ಇಂತಹ ಅದೆಷ್ಟೋ ಉದಾಹರಣೆಗಳನ್ನು ನೀಡುತ್ತಾ ಹೋಗಬಹುದು. ಒಟ್ಟಿನಲ್ಲಿ ಮನುಷ್ಯರು ಸಾಂದ್ರವಾಗಿ ಜೀವನ ನಡೆಸುವ ಎಲ್ಲೆಡೆ ಪ್ರಕೃತಿಯಲ್ಲಿ ಭಾರೀ ಪ್ರಮಾಣದ ಏರುಪೇರುಗಳುಂಟಾಗುತ್ತವೆ. ಅವರು ಬಳಸಿ ಎಸೆಯುವ ತ್ಯಾಜ್ಯದ ನಿರ್ವಹಣೆಯೇ ದೊಡ್ಡ ಸಮಸ್ಯೆಯಾಗುತ್ತದೆ. ಆದರೆ, ಅದನ್ನೂ ದಾಟಿ ನೋಡಿದರೆ, ಇದು ‘ಜೀವನ’ದ ಪ್ರಶ್ನೆ ಅಷ್ಟೇ ಅಲ್ಲ. ಈ ರೀತಿಯ ನಗರೀಕರಣ ಹೆಚ್ಚಾದರೆ, ಭೂಮಿಯನ್ನು ಬೇಯಿಸುತ್ತಲೇ ಹೋಗುವ ಅಭಿವೃದ್ಧಿ ಹೆಚ್ಚಾಗುತ್ತಾ ಹೋದರೆ ಜಿಡಿಪಿ ಹೆಚ್ಚಾಗುತ್ತದೆ. ಹಾಗಾಗಿ ಜಿಡಿಪಿ ಹೆಚ್ಚಳದ ಹಿಂದೆ ಬಿದ್ದಿರುವ, ಕೆಲವು ಕಂಪೆನಿಗಳ ಲಾಭ ಹೆಚ್ಚಿಸುವ ಅಭಿವೃದ್ಧಿಯನ್ನು ರಾಜಕಾರಣಿಗಳು ಮತ್ತು ಅಧಿಕಾರಿಗಳ ಕೂಟ ಬೆಂಬಲಿಸುತ್ತಾ ಹೋಗುತ್ತದೆ. ಅಂತಿಮವಾಗಿ ಇನ್ನು ತಡೆದುಕೊಳ್ಳುವುದು ಸಾಧ್ಯವೇ ಇಲ್ಲ ಎನಿಸಿದಾಗ, ದೂರದ ಕಾಡಿನಲ್ಲಿರುವ ಜನರಿಗೆ ಕಾಡನ್ನು ರಕ್ಷಿಸುವ ಹೊಣೆ ವಹಿಸಲಾಗುತ್ತದೆ. ಅಲ್ಲಿ ಉಳಿದುಕೊಳ್ಳುವ ಕಾಡು, ಇನ್ನೆಲ್ಲೋ ನಡೆಯುತ್ತಿರುವ ಉತ್ಪಾತವನ್ನು ತಡೆಗಟ್ಟುವ ವಿಪರೀತದ ಪರಿಸರ ಸಮತೋಲನದ ಯೋಜನೆಗಾಗಿ ವರದಿಗಳು ತಯಾರಾಗುತ್ತವೆ.
ಒಂದಲ್ಲಾ ಒಂದು ರೀತಿಯಲ್ಲಿ ಕಸ್ತೂರಿ ರಂಗನ್ ವರದಿ ಅದೇ ಆಗಿದೆ. ಪಶ್ಚಿಮಘಟ್ಟ ಏನು ಮಾಡಬೇಕು ಎಂದು ನೀಡಲಾಗುತ್ತಿರುವ ವರದಿಗಿಂತ, ಈ ನಗರಗಳಲ್ಲಿ ಏನು ಮಾಡಬೇಕು ಎಂಬ ವರದಿಗಳು ಬರಬೇಕು ಮತ್ತು ಅವನ್ನು ಉಲ್ಲಂಘಿಸಲೇಬಾರದು ಎಂಬ ನಿಯಮಗಳನ್ನು ಹಾಕಿಕೊಳ್ಳಬೇಕು. ಅದು ನಡೆಯುತ್ತಿಲ್ಲ.
ನಮ್ಮ ನಗರಗಳ ಜನರ ಬದುಕನ್ನು ಸಹನೀಯಗೊಳಿಸಲು ಪ್ರತ್ಯೇಕ ಬಿಡಿ ಯೋಜನೆಗಳನ್ನು ತಯಾರಿಸುವುದನ್ನೇ ಬಿಡಬೇಕು. ಇಡೀ ಭೂಮಿಯ ಎಲ್ಲಾ ಭಾಗಗಳಲ್ಲೂ ಸಮತೋಲನದ ಅಗತ್ಯವಿದೆ ಎಂಬುದನ್ನು ಒಪ್ಪಿಕೊಳ್ಳಲು ಹೆಚ್ಚಿನ ತಜ್ಞತೆಯೇನೂ ಬೇಕಿಲ್ಲ. ದೆಹಲಿಯ ವಿಚಾರವನ್ನೇ ನೋಡಿ. ದೆಹಲಿ ಕೇಂದ್ರಿತವಾದ ಅಭಿವೃದ್ಧಿಯ ಭಾಗವಾಗಿ ಜಾರಿಗೆ ಬಂದ ಹಸಿರುಕ್ರಾಂತಿಯನ್ನು ಪಂಜಾಬಿನವರು ಅನುಸರಿಸಬೇಕಾಯಿತು. ಈಗ ಅಲ್ಲಿನ ಹೊಲಗದ್ದೆಗಳಲ್ಲಿ ಬೆಳೆ ಬೆಳೆದ ನಂತರ ಉಳಿಯುವ ಹುಲ್ಲಿನ ವಿಲೇವಾರಿ ಸಾಧ್ಯವಾಗದೇ ಬೆಂಕಿ ಹಾಕಲಾಗುತ್ತದೆ. ಆಗ ಅಲ್ಲಿಂದ ಏಳುವ ಹೊಗೆಯು ದೆಹಲಿಯವರೆಗೆ ಬಂದು ಮಾಲಿನ್ಯ ಹೆಚ್ಚಾಗುತ್ತಿದೆ ಎಂಬ ವರದಿಯೊಂದಿದೆ. ಅದೇ ಪಂಜಾಬಿನವರೂ, ಹರಿಯಾಣದವರು ತಮ್ಮ ಹಳ್ಳಿಗಳಲ್ಲಿ ಬದುಕಲಾರದೇ ದೆಹಲಿಗೆ ಬಂದು ದುಡಿಯುತ್ತಾರೆ. ದೆಹಲಿಯನ್ನು ಜೀವಂತವಾಗಿಡಲು ಅವರೂ ಬೆವರು ಸುರಿಸುತ್ತಾರೆ ಮತ್ತು ದೆಹಲಿಯ ಕೊಳೆಗೆ ಅವರೂ ಕಾರಣರಾಗುತ್ತಾರೆ.
ಅಂದರೆ ಎಲ್ಲವೂ ಪರಸ್ಪರ ಹೆಣೆದುಕೊಂಡಿರುವ ಸಂಗತಿಗಳಿವು ಮತ್ತು ದೆಹಲಿಗೋ ಬೆಂಗಳೂರಿಗೋ ವಾಷಿಂಗ್ಟನ್ನಿಗೋ ಸೀಮಿತವಾದ ಸಂಗತಿಗಳೂ ಅಲ್ಲ. ಹಾಗೆಯೇ ಇದನ್ನು ಉಳಿಸಿಕೊಳ್ಳುವ ಕರ್ಮವನ್ನು ಅಂಚಿನಲ್ಲಿರುವವರ ಮೇಲೆ ಹೇರುವುದಕ್ಕಿಂತ ಆಷಾಢಭೂತಿತನ ಹಾಗೂ ಕ್ರೌರ್ಯ ಇನ್ನೊಂದಿಲ್ಲ. ಯಾರು ಶುರು ಮಾಡಬೇಕೆಂದು ಯಾದಿ ತಯಾರಿಸುವುದಾದರೆ, ಇದು ಮೊದಲು ಮೇಲಿನವರಿಂದ ಶುರುವಾಗಬೇಕಾದ ಕೆಲಸ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...