Homeಕರ್ನಾಟಕಪಾಕ್‌ಗೆ ಆಹಾರವಾದ ಯಡಿಯೂರಪ್ಪ : ಆ ಮಾತು ಬಿಜೆಪಿಯ ಒಳ ಆಶಯವೇ?

ಪಾಕ್‌ಗೆ ಆಹಾರವಾದ ಯಡಿಯೂರಪ್ಪ : ಆ ಮಾತು ಬಿಜೆಪಿಯ ಒಳ ಆಶಯವೇ?

- Advertisement -
ಭಾರತೀಯ ವಾಯುಸೇನೆ ಬಾಲಕೋಟ್ ಮೇಲೆ ನಡೆಸಿದ ದಾಳಿಯಿಂದಾಗಿ ಬಿಜೆಪಿ ಕರ್ನಾಟಕದಲ್ಲಿ 22 ಸ್ಥಾನ ಗೆಲ್ಲೋದು ಗ್ಯಾರಂಟಿ ಅನ್ನೋ ಸ್ಟೇಟ್‌ಮೆಂಟ್ ಕೊಟ್ಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ಇಡೀ ದೇಶದ ಮಾನವನ್ನೇ ಹರಾಜು ಹಾಕಿದ್ದಾರೆ. ಸೇನೆಯನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಲು ಬಿಜೆಪಿ ಯೋಜಿಸಿದೆಯಾ? ಅನ್ನೋ ಪ್ರಶ್ನೆ ಇದೀಗ ಲೋಕಸಭಾ ಚುನಾವಣಾ ಹೊಸ್ತಿಲಲ್ಲಿರುವ ದೇಶದ ನಾಗರೀಕರನ್ನು ಕಾಡಲು ಶುರು ಮಾಡಿರುವ ಹೊತ್ತಿನಲ್ಲೇ, ಅತ್ತ ಪಾಕಿಸ್ತಾನವು ಕೂಡಾ ಯಡಿಯೂರಪ್ಪನವರ ಈ ಹೇಳಿಕೆಯನ್ನೇ ಆಧಾರವಾಗಿಟ್ಟುಕೊಂಡು ಜಾಗತಿಕ ವೇದಿಕೆಗಳಲ್ಲಿ ಭಾರತವನ್ನು ಏಕಾಂಗಿಯಾಗಿಸುವ ಯತ್ನದಲ್ಲಿದೆ!
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರಿಕ್-ಇ-ಇನ್ಸಾಪ್ (ಪಿಟಿಐ) ಪಕ್ಷದ ನಾಯಕರುಗಳು ಯಡಿಯೂರಪ್ಪನವರ ಹೇಳಿಕೆ ಇರುವ ವೀಡಿಯೋವನ್ನು ಟ್ಯಾಗ್ ಮಾಡಿ “ಎಲೆಕ್ಷನ್‌ನಲ್ಲಿ ಗೆಲ್ಲಲು ಹತಾಶೆಗೊಂಡಿರುವ ಜನರ ಹುನ್ನಾರದಿಂದಾಗಿ ಭಾರತೀಯರು ಯುದ್ಧೋನ್ಮಾದಕ್ಕೆ ಬಲಿಯಾಗಿದ್ದಾರೆ” ಎಂದು ಹೀಗಳೆದಿದ್ದಾರೆ. ಪತ್ರಕರ್ತೆ ಬರ್ಖಾ ದತ್ ಅವರು ಯಡಿಯೂರಪ್ಪನವರ ಹೇಳಿಕೆಯನ್ನು ಖಂಡಿಸಿದ್ದ ಟ್ವೀಟ್ ಅನ್ನು ಉಲ್ಲೇಖಿಸುತ್ತಾ ಪಾರ್ಟಿಯ ಅಧಿಕೃತ ಅಕೌಂಟ್‌ನಲ್ಲಿ ಇವತ್ತು (ಫೆಬ್ರವರಿ 28, ಗುರುವಾರ) ಹೀಗೆ ಟ್ವೀಟ್ ಮಾಡಲಾಗಿದೆ.
- Advertisement -

ಇದು ಹೊರಬಿದ್ದ ಅರ್ಧಗಂಟೆಯಲ್ಲೇ, ಪಿಟಿಐ ಮತ್ತೊಂದು ಟ್ವೀಟ್ ಅನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ ಯುದ್ಧವನ್ನು ಎಲೆಕ್ಷನ್ ತಂತ್ರವಾಗಿ ಬಳಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಪಿಟಿಐನ ಟ್ವೀಟ್‌ಗಳಿಗೆ ಎರಡು ಉದ್ದೇಶಗಳಿರುವಂತಿದೆ:
  • ಎಲೆಕ್ಷನ್ ಗೆಲ್ಲಲು ಹತಾಶೆಗೊಂಡಿರುವ ಒಬ್ಬ ವ್ಯಕ್ತಿಯ (ಪ್ರಧಾನಿ ನರೇಂದ್ರ ಮೋದಿ ಎಂದು ಪರೋಕ್ಷವಾಗಿ ಸೂಚಿಸುತ್ತದೆ) ಅನರ್ಥ ಯತ್ನದಿಂದಾಗಿ ‘ಪಾಕಿಸ್ತಾನದ ವಿರುದ್ಧ ಸಿಡಿದು ನಿಲ್ಲುವಿಕೆಯು’ ಭಾರತ ಸರ್ಕಾರವನ್ನು ಜನರೊಂದಿಗೆ ಬೆಸೆಯುವ ಯತ್ನವೆಂದು ತೋರಿಸುವುದು.
  • ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹ್ಮದ್‌ನಿಂದ ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಬಾಲಕೋಟ್ ವಾಯುದಾಳಿ ನಡೆದಿದೆ ಎಂಬ ವಾಸ್ತವವನ್ನು ಮರೆಮಾಚುವುದು.
ಪುಲ್ವಾಮಾ ಮತ್ತು ಬಾಲಕೋಟ್ ಎರಡೂ ದಾಳಿಗಳ ಕುರಿತಂತೆ ಉಭಯ ರಾಷ್ಟ್ರಗಳ ವಿರೋಧ ಪಕ್ಷಗಳು ಯಾವ ವಿವಾದಕ್ಕೂ ಆಸ್ಪದಕೊಡದಂತೆ ಆಯಾ ಸರ್ಕಾರಗಳ ಪರವಾಗಿ ನಿಂತಿವೆ. ಆದರೆ ನಿಜಕ್ಕೂ ಇರುವ ಸಮಸ್ಯೆ ಏನೆಂದರೆ, ಯಡಿಯೂರಪ್ಪನವರ ಈ ಹೇಳಿಕೆಯಿಂದಾಗಿ ’ಬಿಜೆಪಿಯ ಚುನಾವಣೆಯ ಹುನ್ನಾರದ ಭಾಗವಾಗಿ ಇಂಡಿಯಾ-ಪಾಕಿಸ್ತಾನಗಳು ಯುದ್ಧ ಸನ್ನದ್ಧವಾಗಬೇಕಾಗಿ ಬಂದಿದೆಯೇ ವಿನಾಃ ಪುಲ್ವಾಮಾ ದಾಳಿಯಿಂದಾಗಿ ಅಲ್ಲ’ ಎಂದು ಜಗತ್ತಿನ ಇತರೆ ರಾಷ್ಟ್ರಗಳ ಮುಂದೆ ವಾದ ಮಂಡಿಸಲು ಪಾಕಿಸ್ತಾನಕ್ಕೆ ಒಂದು ಅವಕಾಶ ಸಿಕ್ಕಂತಾಗಿದೆ.
ಯಡಿಯೂರಪ್ಪ ಇದೀಗ ಎಚ್ಚೆತ್ತುಕೊಂಡು ತನ್ನ ಹೇಳಿಕೆಯನ್ನು ತಪ್ಪಾಗಿ ತಿರುಚಲಾಗಿದೆ ಅಂತ ಹೇಳುತ್ತಿರಬಹುದು. ಆದರೆ ಇದರಿಂದ ದೇಶಕ್ಕೆ ಆಗಬೇಕಾದ ಲುಕ್ಸಾನು ಆಗಿಹೋಗಿದೆ. ಅವರದೇ ಪಕ್ಷದ ಕೇಂದ್ರ ವಿದೇಶಾಂಗ ರಾಜ್ಯ ಖಾತೆ ಸಚಿವ ಹಾಗೂ ಸೇನೆಯ ಮಾಜಿ ಜನರಲ್ ಕೂಡಾ ಆದ ವಿ.ಕೆ.ಸಿಂಗ್ ಅವರು “ಬಿಎಸ್‌ವೈಜೀ, ನಾನು ನಿಮ್ಮ ಮಾತನ್ನು ಒಪ್ಪುವುದಿಲ್ಲ. ನಾವು ಒಂದು ರಾಷ್ಟ್ರವಾಗಿ ನಿಲ್ಲುತ್ತೇವೆ. ನಮ್ಮ ದೇಶದ ರಕ್ಷಣೆ ಮತ್ತು ನಾಗರೀಕರ ಸುರಕ್ಷತೆಗಾಗಿ ಸರ್ಕಾರ ಈ ಕಾರ್ಯಾಚರಣೆ ನಡೆಸಿದೆಯೇ ವಿನಾಃ ಕೆಲ ಹೆಚ್ಚುವರಿ ಸೀಟುಗಳನ್ನು ಗೆಲ್ಲುವುದಕ್ಕಲ್ಲ” ಎಂದು ಟ್ವೀಟಿಸಿದ್ದಾರೆ.

ಪಾಕಿಸ್ತಾನದಲ್ಲಿ ಯಡಿಯೂರಪ್ಪನವರ ಹೇಳಿಕೆ ವೈರಲ್ ಆಗುವ ಒಂದು ದಿನದ ಹಿಂದಷ್ಟೇ, ಅಂದರೆ ಫೆಬ್ರವರಿ 27ರಂದು ಕೇಂದ್ರ ಹಣಕಾಸು ಮಂತ್ರಿ ಅರುಣ್ ಜೇಟ್ಲಿಯವರು “ವಿರೋಧ ಪಕ್ಷಗಳು ಪಾಕಿಸ್ತಾನದ ಕೈಗೊಂಬೆಯಂತೆ ವರ್ತಿಸಿ ಸೇನಾ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿವೆ” ಎಂದು ಹರಿಹಾಯ್ದಿದ್ದರು. ಆದರೆ ಈಗ ವಿರೋಧ ಪಕ್ಷಗಳ ಅವರದೇ ಪಾರ್ಟಿಯ ಯಡಿಯೂರಪ್ಪನವರ ಹೇಳಿಕೆಯೇ ಪಾಕಿಸ್ತಾನಕ್ಕೆ ಆಯುಧವಾಗಿ ಬಳಕೆಗೊಳ್ಳುತ್ತಿದೆ.
ದುರಂತವೆಂದರೆ, ಗೋ.ಮಧುಸೂದನ್ ಥರದ ಸ್ಥಳೀಯ ಬಿಜೆಪಿ ನಾಯಕರು ದೇಶಕ್ಕೆ ಮುಜುಗರ ಉಂಟು ಮಾಡುತ್ತಿರುವ ಈ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸುವುದರ ಬದಲು ತಮ್ಮ ಪಕ್ಷದ ನಾಯಕನ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಭರಾಟೆಯಲ್ಲಿ ‘ದೇಶಭಕ್ತಿ’ಯಲ್ಲೂ ರಾಜಕಾರಣ ಬೆರೆಸುತ್ತಿದ್ದಾರೆ. ಟೀವಿ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಹೌದು, ಯಡಿಯೂರಪ್ಪನವರು ಹೇಳಿದ್ದು ಸರಿ, ನಾವು ಇಪ್ಪತ್ತೆರಡಲ್ಲ, ಈಗ ಇಪ್ಪತ್ತೆಂಟು ಸೀಟು ಗೆಲ್ತೀವಿ ನೋಡ್ಕಳಿ. ದೇಶದ್ರೋಹಿ ’ಕಾಂಗ್ರೆಸ್’ ಜನ ತಕ್ಕ ಪಾಠ ಕಲಿಸ್ತಾರೆ ನೋಡ್ತಾ ಇರಿ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಪುಲ್ವಾಮಾದಲ್ಲಿ ಸೈನಿಕರು ಸತ್ತಾಗ ದೇಶದೆಲ್ಲೆಡೆ ಜನರು ಮರುಗಿದರೆ, ಅದರಿಂದ ರಾಜಕೀಯ ಲಾಭ ಪಡೆದುಕೊಳ್ಳುವವರು ಹಿಗ್ಗುತ್ತಾರೆನ್ನುವುದು ವಿಪರ್ಯಾಸ. ದೇಶಕ್ಕಿಂತ, ಸೈನಿಕರ ಜೀವಕ್ಕಿಂತ ತಮ್ಮ ಸೀಟು ಗಳಿಕೆಯೇ ಹೆಚ್ಚಾಯಿತೇ ಎಂಬ ಪ್ರಶ್ನೆ ಉದ್ಭವಿಸಿದೆ. ಕವಿಯೊಬ್ಬರು ಹೇಳಿದಂತೆ ’ಬೀದಿಯಲ್ಲಿಂದು ಶವಗಳ ಮಳೆ, ಮುಂದಿನ ಚುನಾವಣೆಯಲ್ಲಿ ಅವರಿಗೆ ಹುಲುಸಾದ ಬೆಳೆ’ ಎಂಬಂತೆ ಆದರೆ, ದೇಶದ ನೈತಿಕ ಪ್ರಜ್ಞೆಯು ನಾಶದ ಹಾದಿ ಹಿಡಿದಂತೆ. ಇದನ್ನು ಈ ರಾಜಕಾರಣಿಗಳಿಗೆ ತಿಳಿಸಿ ಹೇಳುವ ಕೆಲಸ ತುರ್ತಾಗಿ ಆಗಬೇಕಿದೆ.
ಆಧಾರ: ದಿ ಕ್ವಿಂಟ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...