Homeಕರ್ನಾಟಕಪಾಕ್‌ಗೆ ಆಹಾರವಾದ ಯಡಿಯೂರಪ್ಪ : ಆ ಮಾತು ಬಿಜೆಪಿಯ ಒಳ ಆಶಯವೇ?

ಪಾಕ್‌ಗೆ ಆಹಾರವಾದ ಯಡಿಯೂರಪ್ಪ : ಆ ಮಾತು ಬಿಜೆಪಿಯ ಒಳ ಆಶಯವೇ?

- Advertisement -
ಭಾರತೀಯ ವಾಯುಸೇನೆ ಬಾಲಕೋಟ್ ಮೇಲೆ ನಡೆಸಿದ ದಾಳಿಯಿಂದಾಗಿ ಬಿಜೆಪಿ ಕರ್ನಾಟಕದಲ್ಲಿ 22 ಸ್ಥಾನ ಗೆಲ್ಲೋದು ಗ್ಯಾರಂಟಿ ಅನ್ನೋ ಸ್ಟೇಟ್‌ಮೆಂಟ್ ಕೊಟ್ಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ಇಡೀ ದೇಶದ ಮಾನವನ್ನೇ ಹರಾಜು ಹಾಕಿದ್ದಾರೆ. ಸೇನೆಯನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಲು ಬಿಜೆಪಿ ಯೋಜಿಸಿದೆಯಾ? ಅನ್ನೋ ಪ್ರಶ್ನೆ ಇದೀಗ ಲೋಕಸಭಾ ಚುನಾವಣಾ ಹೊಸ್ತಿಲಲ್ಲಿರುವ ದೇಶದ ನಾಗರೀಕರನ್ನು ಕಾಡಲು ಶುರು ಮಾಡಿರುವ ಹೊತ್ತಿನಲ್ಲೇ, ಅತ್ತ ಪಾಕಿಸ್ತಾನವು ಕೂಡಾ ಯಡಿಯೂರಪ್ಪನವರ ಈ ಹೇಳಿಕೆಯನ್ನೇ ಆಧಾರವಾಗಿಟ್ಟುಕೊಂಡು ಜಾಗತಿಕ ವೇದಿಕೆಗಳಲ್ಲಿ ಭಾರತವನ್ನು ಏಕಾಂಗಿಯಾಗಿಸುವ ಯತ್ನದಲ್ಲಿದೆ!
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರಿಕ್-ಇ-ಇನ್ಸಾಪ್ (ಪಿಟಿಐ) ಪಕ್ಷದ ನಾಯಕರುಗಳು ಯಡಿಯೂರಪ್ಪನವರ ಹೇಳಿಕೆ ಇರುವ ವೀಡಿಯೋವನ್ನು ಟ್ಯಾಗ್ ಮಾಡಿ “ಎಲೆಕ್ಷನ್‌ನಲ್ಲಿ ಗೆಲ್ಲಲು ಹತಾಶೆಗೊಂಡಿರುವ ಜನರ ಹುನ್ನಾರದಿಂದಾಗಿ ಭಾರತೀಯರು ಯುದ್ಧೋನ್ಮಾದಕ್ಕೆ ಬಲಿಯಾಗಿದ್ದಾರೆ” ಎಂದು ಹೀಗಳೆದಿದ್ದಾರೆ. ಪತ್ರಕರ್ತೆ ಬರ್ಖಾ ದತ್ ಅವರು ಯಡಿಯೂರಪ್ಪನವರ ಹೇಳಿಕೆಯನ್ನು ಖಂಡಿಸಿದ್ದ ಟ್ವೀಟ್ ಅನ್ನು ಉಲ್ಲೇಖಿಸುತ್ತಾ ಪಾರ್ಟಿಯ ಅಧಿಕೃತ ಅಕೌಂಟ್‌ನಲ್ಲಿ ಇವತ್ತು (ಫೆಬ್ರವರಿ 28, ಗುರುವಾರ) ಹೀಗೆ ಟ್ವೀಟ್ ಮಾಡಲಾಗಿದೆ.
- Advertisement -

ಇದು ಹೊರಬಿದ್ದ ಅರ್ಧಗಂಟೆಯಲ್ಲೇ, ಪಿಟಿಐ ಮತ್ತೊಂದು ಟ್ವೀಟ್ ಅನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ ಯುದ್ಧವನ್ನು ಎಲೆಕ್ಷನ್ ತಂತ್ರವಾಗಿ ಬಳಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಪಿಟಿಐನ ಟ್ವೀಟ್‌ಗಳಿಗೆ ಎರಡು ಉದ್ದೇಶಗಳಿರುವಂತಿದೆ:
  • ಎಲೆಕ್ಷನ್ ಗೆಲ್ಲಲು ಹತಾಶೆಗೊಂಡಿರುವ ಒಬ್ಬ ವ್ಯಕ್ತಿಯ (ಪ್ರಧಾನಿ ನರೇಂದ್ರ ಮೋದಿ ಎಂದು ಪರೋಕ್ಷವಾಗಿ ಸೂಚಿಸುತ್ತದೆ) ಅನರ್ಥ ಯತ್ನದಿಂದಾಗಿ ‘ಪಾಕಿಸ್ತಾನದ ವಿರುದ್ಧ ಸಿಡಿದು ನಿಲ್ಲುವಿಕೆಯು’ ಭಾರತ ಸರ್ಕಾರವನ್ನು ಜನರೊಂದಿಗೆ ಬೆಸೆಯುವ ಯತ್ನವೆಂದು ತೋರಿಸುವುದು.
  • ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹ್ಮದ್‌ನಿಂದ ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಬಾಲಕೋಟ್ ವಾಯುದಾಳಿ ನಡೆದಿದೆ ಎಂಬ ವಾಸ್ತವವನ್ನು ಮರೆಮಾಚುವುದು.
ಪುಲ್ವಾಮಾ ಮತ್ತು ಬಾಲಕೋಟ್ ಎರಡೂ ದಾಳಿಗಳ ಕುರಿತಂತೆ ಉಭಯ ರಾಷ್ಟ್ರಗಳ ವಿರೋಧ ಪಕ್ಷಗಳು ಯಾವ ವಿವಾದಕ್ಕೂ ಆಸ್ಪದಕೊಡದಂತೆ ಆಯಾ ಸರ್ಕಾರಗಳ ಪರವಾಗಿ ನಿಂತಿವೆ. ಆದರೆ ನಿಜಕ್ಕೂ ಇರುವ ಸಮಸ್ಯೆ ಏನೆಂದರೆ, ಯಡಿಯೂರಪ್ಪನವರ ಈ ಹೇಳಿಕೆಯಿಂದಾಗಿ ’ಬಿಜೆಪಿಯ ಚುನಾವಣೆಯ ಹುನ್ನಾರದ ಭಾಗವಾಗಿ ಇಂಡಿಯಾ-ಪಾಕಿಸ್ತಾನಗಳು ಯುದ್ಧ ಸನ್ನದ್ಧವಾಗಬೇಕಾಗಿ ಬಂದಿದೆಯೇ ವಿನಾಃ ಪುಲ್ವಾಮಾ ದಾಳಿಯಿಂದಾಗಿ ಅಲ್ಲ’ ಎಂದು ಜಗತ್ತಿನ ಇತರೆ ರಾಷ್ಟ್ರಗಳ ಮುಂದೆ ವಾದ ಮಂಡಿಸಲು ಪಾಕಿಸ್ತಾನಕ್ಕೆ ಒಂದು ಅವಕಾಶ ಸಿಕ್ಕಂತಾಗಿದೆ.
ಯಡಿಯೂರಪ್ಪ ಇದೀಗ ಎಚ್ಚೆತ್ತುಕೊಂಡು ತನ್ನ ಹೇಳಿಕೆಯನ್ನು ತಪ್ಪಾಗಿ ತಿರುಚಲಾಗಿದೆ ಅಂತ ಹೇಳುತ್ತಿರಬಹುದು. ಆದರೆ ಇದರಿಂದ ದೇಶಕ್ಕೆ ಆಗಬೇಕಾದ ಲುಕ್ಸಾನು ಆಗಿಹೋಗಿದೆ. ಅವರದೇ ಪಕ್ಷದ ಕೇಂದ್ರ ವಿದೇಶಾಂಗ ರಾಜ್ಯ ಖಾತೆ ಸಚಿವ ಹಾಗೂ ಸೇನೆಯ ಮಾಜಿ ಜನರಲ್ ಕೂಡಾ ಆದ ವಿ.ಕೆ.ಸಿಂಗ್ ಅವರು “ಬಿಎಸ್‌ವೈಜೀ, ನಾನು ನಿಮ್ಮ ಮಾತನ್ನು ಒಪ್ಪುವುದಿಲ್ಲ. ನಾವು ಒಂದು ರಾಷ್ಟ್ರವಾಗಿ ನಿಲ್ಲುತ್ತೇವೆ. ನಮ್ಮ ದೇಶದ ರಕ್ಷಣೆ ಮತ್ತು ನಾಗರೀಕರ ಸುರಕ್ಷತೆಗಾಗಿ ಸರ್ಕಾರ ಈ ಕಾರ್ಯಾಚರಣೆ ನಡೆಸಿದೆಯೇ ವಿನಾಃ ಕೆಲ ಹೆಚ್ಚುವರಿ ಸೀಟುಗಳನ್ನು ಗೆಲ್ಲುವುದಕ್ಕಲ್ಲ” ಎಂದು ಟ್ವೀಟಿಸಿದ್ದಾರೆ.

ಪಾಕಿಸ್ತಾನದಲ್ಲಿ ಯಡಿಯೂರಪ್ಪನವರ ಹೇಳಿಕೆ ವೈರಲ್ ಆಗುವ ಒಂದು ದಿನದ ಹಿಂದಷ್ಟೇ, ಅಂದರೆ ಫೆಬ್ರವರಿ 27ರಂದು ಕೇಂದ್ರ ಹಣಕಾಸು ಮಂತ್ರಿ ಅರುಣ್ ಜೇಟ್ಲಿಯವರು “ವಿರೋಧ ಪಕ್ಷಗಳು ಪಾಕಿಸ್ತಾನದ ಕೈಗೊಂಬೆಯಂತೆ ವರ್ತಿಸಿ ಸೇನಾ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿವೆ” ಎಂದು ಹರಿಹಾಯ್ದಿದ್ದರು. ಆದರೆ ಈಗ ವಿರೋಧ ಪಕ್ಷಗಳ ಅವರದೇ ಪಾರ್ಟಿಯ ಯಡಿಯೂರಪ್ಪನವರ ಹೇಳಿಕೆಯೇ ಪಾಕಿಸ್ತಾನಕ್ಕೆ ಆಯುಧವಾಗಿ ಬಳಕೆಗೊಳ್ಳುತ್ತಿದೆ.
ದುರಂತವೆಂದರೆ, ಗೋ.ಮಧುಸೂದನ್ ಥರದ ಸ್ಥಳೀಯ ಬಿಜೆಪಿ ನಾಯಕರು ದೇಶಕ್ಕೆ ಮುಜುಗರ ಉಂಟು ಮಾಡುತ್ತಿರುವ ಈ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸುವುದರ ಬದಲು ತಮ್ಮ ಪಕ್ಷದ ನಾಯಕನ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಭರಾಟೆಯಲ್ಲಿ ‘ದೇಶಭಕ್ತಿ’ಯಲ್ಲೂ ರಾಜಕಾರಣ ಬೆರೆಸುತ್ತಿದ್ದಾರೆ. ಟೀವಿ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಹೌದು, ಯಡಿಯೂರಪ್ಪನವರು ಹೇಳಿದ್ದು ಸರಿ, ನಾವು ಇಪ್ಪತ್ತೆರಡಲ್ಲ, ಈಗ ಇಪ್ಪತ್ತೆಂಟು ಸೀಟು ಗೆಲ್ತೀವಿ ನೋಡ್ಕಳಿ. ದೇಶದ್ರೋಹಿ ’ಕಾಂಗ್ರೆಸ್’ ಜನ ತಕ್ಕ ಪಾಠ ಕಲಿಸ್ತಾರೆ ನೋಡ್ತಾ ಇರಿ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಪುಲ್ವಾಮಾದಲ್ಲಿ ಸೈನಿಕರು ಸತ್ತಾಗ ದೇಶದೆಲ್ಲೆಡೆ ಜನರು ಮರುಗಿದರೆ, ಅದರಿಂದ ರಾಜಕೀಯ ಲಾಭ ಪಡೆದುಕೊಳ್ಳುವವರು ಹಿಗ್ಗುತ್ತಾರೆನ್ನುವುದು ವಿಪರ್ಯಾಸ. ದೇಶಕ್ಕಿಂತ, ಸೈನಿಕರ ಜೀವಕ್ಕಿಂತ ತಮ್ಮ ಸೀಟು ಗಳಿಕೆಯೇ ಹೆಚ್ಚಾಯಿತೇ ಎಂಬ ಪ್ರಶ್ನೆ ಉದ್ಭವಿಸಿದೆ. ಕವಿಯೊಬ್ಬರು ಹೇಳಿದಂತೆ ’ಬೀದಿಯಲ್ಲಿಂದು ಶವಗಳ ಮಳೆ, ಮುಂದಿನ ಚುನಾವಣೆಯಲ್ಲಿ ಅವರಿಗೆ ಹುಲುಸಾದ ಬೆಳೆ’ ಎಂಬಂತೆ ಆದರೆ, ದೇಶದ ನೈತಿಕ ಪ್ರಜ್ಞೆಯು ನಾಶದ ಹಾದಿ ಹಿಡಿದಂತೆ. ಇದನ್ನು ಈ ರಾಜಕಾರಣಿಗಳಿಗೆ ತಿಳಿಸಿ ಹೇಳುವ ಕೆಲಸ ತುರ್ತಾಗಿ ಆಗಬೇಕಿದೆ.
ಆಧಾರ: ದಿ ಕ್ವಿಂಟ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...