Homeಚಳವಳಿಪಾಯಲ್ ತಾಡ್ವಿ ಆತ್ಮಹತ್ಯೆ : ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯದ ಮುಂದುವರಿಕೆ

ಪಾಯಲ್ ತಾಡ್ವಿ ಆತ್ಮಹತ್ಯೆ : ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯದ ಮುಂದುವರಿಕೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಜಾತಿ ಆದಾರಿತ ದೌರ್ಜನ್ಯಗಳನ್ನ ಪತ್ತೆಹಚ್ಚಲು ಈ ಥೋರೋಟ್ ಸಮಿತಿಯ ವರದಿಯನ್ನ ಒಂದು ಮೈಲಿಗಲ್ಲು ಎಂದು ಪರಿಗಣಿಸಲಾಗುತ್ತದೆ.

- Advertisement -
- Advertisement -

| ಮೂಲ : ಶಾ ಅಲಂ ಖಾನ್ |
| ಕನ್ನಡಕ್ಕೆ: ಶ್ರೀ ಪಾದ್ ಭಟ್ |

ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಅಬೂತಪೂರ್ವ ಗೆಲುವಿನ ನಂತರ ಪ್ರದಾನ ಮಂತ್ರಿ ಮೋದಿ ಅವರು ಬಿಜೆಪಿ ಕೇಂದ್ರ ಕಾರ್ಯಾಲಯದಲ್ಲಿ ಮಾತನಾಡುತ್ತ ‘ ಇಂಡಿಯಾದಲ್ಲಿ ಈಗ ಕೇವಲ ಎರಡು ಜಾತಿಗಳಿವೆ – ಒಂದು ಬಡವರು ಮತ್ತೊಂದು ಈ ಬಡತನವನ್ನ ಉಪಶಮನಗೊಳಿಸುವವರು’ ಎಂದು ಹೇಳಿದರು. ಅವರ ಮಾತುಗಳ ಪ್ರತಿದ್ವನಿ ಕಮರಿಹೋಗುವುದಕ್ಕೂ ಮೊದಲೆ ಮುಂಬೈನ ಬಿವೈಎಲ್ ನಾಯರ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯವ ವೈದ್ಯೆ ‘ಪಾಯಲ್ ತಾಡ್ವಿ’ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೂ ಮೊದಲು ತಾಡ್ವಿಯವರು ಆ ಆಸ್ಪತ್ರೆಯಲ್ಲಿ ತಮ್ಮ ಹಿರಿಯ ವೈದ್ಯೆಯರಿಂದ ನಿರಂತರವಾಗಿ ಜಾತಿ ಅಪಮಾನ ಮತ್ತು ತಾರತಮ್ಯದ ಹಿಂಸೆಗೆ ಒಳಗಾಗಿದ್ದರು. ಆದಿವಾಸಿ ಭಿಲ್ ಮುಸ್ಲಿಂ ಸಮುದಾಯದ ತಾಡ್ವಿ ಅವರು ಮೇ 2018ರಿಂದ ಆ ಸಂಸ್ಥೆಯಲ್ಲಿ ಎಂ.ಡಿ. ಗೈನಕಾಲಜಿ ವಿಶಯದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರು. ಪ್ರದಾನಿ ಏನೇ ಹೇಳಿದರೂ ಇಂದಿಗೂ ಜಾತಿಯು ಇಂಡಿಯಾ ಸಮಾಜದಲ್ಲಿ ಭಯಾನಕ ವಾಸ್ತವವಾಗಿದೆ

ನಮ್ಮ ಕಚೇರಿಗಳಲ್ಲಿ, ಆಸ್ಪತ್ರೆಗಳಲ್ಲಿ, ಫ್ಯಾಕ್ಟರಿಗಳಲ್ಲಿ, ವ್ಯಾಪಾರದಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ಇಂದಿಗೂ ಜಾತೀಯತೆಯು ವಿಶದಂತೆ ಹಬ್ಬಿಕೊಂಡಿದೆ. ಈ ಜಾತಿ ತಾರತಮ್ಯದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ತಳಸಮುದಾಯಗಳ ವಿದ್ಯಾರ್ಥಿಗಳು, ವಿದ್ವಾಂಸರಾದ ಮಾದಾರಿ ವೆಂಕಟೇಶ್, ರೋಹಿತ್ ವೇಮುಲ, ಸೆಂತಿಲ್ ಕುಮಾರ್ ಮತ್ತು ಪುಲ್ಯಾಲ ರಾಜು ಅವರೊಂದಿಗೆ ಈಗ ತಾಡ್ವಿಯವರೂ ಕೂಡಿಕೊಂಡಿದ್ದಾರೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಆದಾರಿತ ಪ್ರತ್ಯೇಕತೆಯನ್ನ ಇಂದು ತ್ವರಿತವಾಗಿ ಬಗೆಹರಿಸಬೇಕಾಗಿದೆ. ಉತ್ತರ ಪ್ರದೇಶದ ದಲಿತ ಕುಟುಂಬದಿಂದ ಬಂದ ಏಮ್ಸ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಬಾಲ ಮುಕುಂದ್ ಭಾರತಿ ಈ ಜಾತಿ ಹಿಂಸೆಯ ಕಾರಣಕ್ಕಾಗಿ ಮಾರ್ಚ 2010ರಲ್ಲಿ ಆತ್ಮಹತ್ಯೆ ಮಾಡಿಕೊಂಡರು. ಕಳೆದ 50 ವರ್ಶಗಳಲ್ಲಿ ಭಾರತಿ ಅವರು ತಮ್ಮ ಗ್ರಾಮದಿಂದ ವೈದ್ಯಕೀಯ ವ್ಯಾಸಂಗಕ್ಕೆ ಪ್ರವೇಶ ಪಡೆದ ಮೊದಲ ದಲಿತ ವಿದ್ಯಾರ್ಥಿಯಾಗಿದ್ದರು. ಏಮ್ಸ್‍ನಲ್ಲಿ ಓದುತ್ತಿದ್ದ ಮತ್ತೊಬ್ಬ ವೈದ್ಯಕೀಯ ವಿದ್ಯಾರ್ಥಿ ಅನಿಲ್ ಕುಮಾರ್ ಮೀನಾ ಮಾರ್ಚ 2012ರಲ್ಲಿ ತಮ್ಮ ಹಿಂದುಳಿದ ಜಾತಿಯ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡರು. ಏಮ್ಸ್‍ನಲ್ಲಿ ಜಾತಿ ಆಧಾರಿತ ತಾರತಮ್ಮ ಎಶ್ಟು ಗಂಬೀರವಾಗಿದೆಯೆಂದರೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮೇಲೆ ನಡೆಯುತ್ತಿರುವ ದೌರ್ಜನ್ಯದ ಸತ್ಯಶೋದನೆಗಾಗಿ 2007ರಲ್ಲಿ ಸುಖದೇವ ಥೋರೊಟ್ ಅವರ ಅದ್ಯಕ್ಷತೆಯಲ್ಲಿ ಸಮಿತಿಯನ್ನ ರಚಿಸಲಾಯಿತು.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಜಾತಿ ಆದಾರಿತ ದೌರ್ಜನ್ಯಗಳನ್ನ ಪತ್ತೆಹಚ್ಚಲು ಈ ಥೋರೋಟ್ ಸಮಿತಿಯ ವರದಿಯನ್ನ ಒಂದು ಮೈಲಿಗಲ್ಲು ಎಂದು ಪರಿಗಣಿಸಲಾಗುತ್ತದೆ. ಈ ವರದಿಯ ಪ್ರಮುಖಾಂಶಗಳು : ಶೇಕಡಾ 69 ಪ್ರಮಾಣದ ಪ.ಜಾತಿ/ ಪ.ಪಂಗಡದ ವಿದ್ಯಾರ್ಥಿಗಳು ತಮಗೆ ಪ್ರಾದ್ಯಾಪಕರಿಂದ ಯಾವುದೆ ಪ್ರೋತ್ಸಾಹ ದೊರಕುವುದಿಲ್ಲ, ಈ ಪ್ರಾದ್ಯಾಪಕರ ತಾತ್ಸಾರ ಮತ್ತು ಅನುಪಸ್ಥಿತಿಯಿಂದಾಗಿ ಅವರೊಂದಿಗೆ ಸಂಪರ್ಕ ಸಾದಿಸಲು ಸಾದ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಶೇಕಡಾ 72 ಪ್ರಮಾಣದ ವಿದ್ಯಾರ್ಥಿಗಳು ತಮ್ಮ ಜಾತಿಯ ಹಿನ್ನೆಲೆ ಕಾರಣಕ್ಕೆ ಈ ಪ್ರಾದ್ಯಾಪಕರು ತಮ್ಮಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದರು ಮತ್ತು ತರಗತಿಗಳಲ್ಲಿ ಪಾಠ ಮಾಡುವಾಗ ತಾರತಮ್ಯದಿಂದ ನೋಡುತ್ತಿದ್ದರು ಎಂದು ಹೇಳಿದ್ದಾರೆ. ಶೇಕಡಾ 76 ಪ್ರಮಾಣದ ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಗಳನ್ನ ನ್ಯಾಯವಾದ ರೀತಿಯಲ್ಲಿ ಮೌಲ್ಯಮಾಪನ ಮಾಡಲೆ ಇಲ್ಲ ಎಂದು ಹೇಳಿದ್ದಾರೆ.

ಶೇಕಡಾ 88 ಪ್ರಮಾಣದ ವಿದ್ಯಾರ್ಥಿಗಳು ತಾವು ನಿರೀಕ್ಷಿಸಿದಕ್ಕಿಂತಲೂ ಕಡಿಮೆ ಅಂಕಗಳನ್ನ ನೀಡಿದ್ದಾರೆ ಎಂದು ಹೇಳಿದ್ದಾರೆ. ಶೇಕಡಾ 84 ಪ್ರಮಾಣದ ವಿದ್ಯಾರ್ಥಿಗಳು ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳಲ್ಲಿ ಪಕ್ಷಪಾತ ಮಾಡಿದರು ಎಂದು ಹೇಳಿದ್ದಾರೆ. ಶೇಕಡಾ 86 ಪ್ರಮಾಣದ ವಿದ್ಯಾರ್ಥಿಗಳು ಮೇಲ್ಜಾತಿಯವರಿಗೆ ಹೋಲಿಸಿದಾಗ ಈ ಪ್ರಾದ್ಯಾಪಕರು ಪರೀಕ್ಷೆಯಲ್ಲಿ ತಮಗೆ ಸಾಕಶ್ಟು ಸಮಯವನ್ನೆ ಕೊಡಲಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಏಮ್ಸ್ ಹಾಸ್ಟೆಲ್‍ಗಳಲ್ಲಿ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ಸಾಮಾಜಿಕ ಪ್ರತ್ಯೇಕತೆ ಮತ್ತು ತಾರತಮ್ಯದ ಹಿಂಸೆಯನ್ನ ಅನುಬವಿಸಬೇಕಾಯಿತು. ದೆಹಲಿಯ ಏಮ್ಸ್‍ನಲ್ಲಿ ಕೆಲಸ ಮಾಡುತ್ತಿರುವ ಪ.ಜಾತಿ/ಪ.ಪಂಗಡದ ಪ್ರಾದ್ಯಾಪಕರೂ ಸಹ ಈ ತಾರತಮ್ಯಕ್ಕೆ ಒಳಗಾಗಿದ್ದರು ಎಂದು ಆ ವರದಿಯಲ್ಲಿ ವಿವರಿಸಲಾಗಿದೆ

ದೆಹಲಿಯ ಏಮ್ಸ್‍ನ ಪಕ್ಕದಲ್ಲಿರುವ ಮತ್ತೊಂದು ಪ್ರಮುಖ ವೈದ್ಯ ಶಿಕ್ಷಣ ಬೋದಿಸುವ ವರ್ದಮಾನ ಮಹಾವೀರ ವೈದ್ಯಕೀಯ ಕಾಲೇಜ್‍ನಲ್ಲಿ ಶೇಕಡಾ 25 ಪ್ರಮಾಣದ ದಲಿತ ವಿದ್ಯಾರ್ಥಿಗಳನ್ನ ಜಾತಿ ತಾರತಮ್ಯದ ಕಾರಣಕ್ಕೆ ಶರೀರ ವಿಜ್ಞಾನ (physiology) ಪರೀಕ್ಷೆಯಲ್ಲಿ ಸಾಮೂಹಿವಾಗಿ ಅನುತ್ತೀರ್ಣಗೊಳಿಸಲಾಯಿತು. ಈ ಹಗರಣಕ್ಕೆ ಸಂಬಂದಸಿದಂತೆ 2012ರಲ್ಲಿ ಮುಂಗೇಕರ್ ಸಮಿತಿಯು ತನಿಖೆ ನಡೆಸಿತು. ಈ ಸಮಿತಿಯು ಪರಿಶಿಷ್ಟ ಜಾತಿಗಳ ರಾಶ್ಟ್ರೀಯ ಆಯೋಗಕ್ಕೆ (NCSC) ನೀಡಿದ ವರದಿಯಲ್ಲಿ ‘ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳ ವಿರುದ್ದ ಕಾಲೇಜ್‍ನ ಆಡಳಿತ ಮಂಡಳಿಯ ದ್ವೇಶ ಯಾವ ಮಟ್ಟದಲ್ಲಿದೆಯೆಂದರೆ ದಲಿತರು ಮಾಹಿತಿ ಹಕ್ಕು ಕಾಯಿದೆಯ ಅಡಿಯಲ್ಲಿ ಮಾಹಿತಿ ಆಯೋಗಕ್ಕೆ ಪ್ರತಿನಿತ್ಯ ಅರ್ಜಿಗಳನ್ನ ಸಲ್ಲಿಸುತ್ತಿದ್ದರು’ ಎಂದು ಉಲ್ಲೇಖಿಸಲಾಗಿದೆ. ಕಿರುಕುಳಕ್ಕೆ ಒಳಗಾದ ದಲಿತ ವಿದ್ಯಾರ್ಥಿಗಳಿಗೆ 10 ಲಕ್ಷ ಮೊತ್ತದ ಪರಿಹಾರ ಕೊಡಬೇಕೆಂದು ಮತ್ತು ಆ ಕಾಲೇಜ್‍ನ ಬೋದಕ ಮತ್ತು ಆಡಳಿತ ಸಿಬ್ಬಂದಿಯನ್ನ ಅಮಾನತ್ತು ಮಾಡಬೇಕೆಂದು ಸಮಿತಿಯು ಶಿಫಾರಸ್ಸು ಮಾಡಿತ್ತು.

ಶಿಕ್ಷಣ ಸಂಸ್ಥೆಗಳನ್ನ ಮೇಲ್ಜಾತಿಗಳು ಮತ್ತು ಶ್ರೀಮಂತ ವರ್ಗದವರಿಗೆ ಕಾಯ್ದಿರಿಸಲಾಗುತ್ತದೆ. ಆದರೆ ಜಾತಿ ಆದಾರಿತ ಮೀಸಲಾತಿಯ ಸಾಮಾಜಿಕ ನ್ಯಾಯದ ಮೂಲಕ ಈ ಯಾಜಮಾನಕೀಯಕ್ಕೆ ಒಡ್ಡಲಾಗುವ ಸವಾಲನ್ನ ಮೀರಲು ಈ ಕಿರುಕುಳ, ಅಪಮಾನ, ಪ್ರತ್ಯೇಕತೆ, ತಾರತಮ್ಯವನ್ನ ತುರ್ತಾಗಿ ಜಾರಿಗೊಳಿಲಾಗುತ್ತದೆ. ಈ ಅಪರಾದಿಗಳಿಗೆ ದಂಡನೆಯ ಕ್ರಮ ಮತ್ತು ಶಾಸನಬದ್ದ ಆದೇಶವಿದ್ದರೂ ಸಹ ದೀರ್ಘಾವದಿ ಪರಿಹಾರವನ್ನ ಕಂಡುಕೊಳ್ಳುವುದು ಅವಶ್ಯಕವಾಗಿದೆ.
( ಕೃಪೆ : ಇಂಡಿಯನ್ ಎಕ್ಸ್‍ಪ್ರೆಸ್ 29, ಮೇ, 2019)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...