Homeಚಳವಳಿಪಾಯಲ್ ತಾಡ್ವಿ ಆತ್ಮಹತ್ಯೆ : ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯದ ಮುಂದುವರಿಕೆ

ಪಾಯಲ್ ತಾಡ್ವಿ ಆತ್ಮಹತ್ಯೆ : ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯದ ಮುಂದುವರಿಕೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಜಾತಿ ಆದಾರಿತ ದೌರ್ಜನ್ಯಗಳನ್ನ ಪತ್ತೆಹಚ್ಚಲು ಈ ಥೋರೋಟ್ ಸಮಿತಿಯ ವರದಿಯನ್ನ ಒಂದು ಮೈಲಿಗಲ್ಲು ಎಂದು ಪರಿಗಣಿಸಲಾಗುತ್ತದೆ.

- Advertisement -
- Advertisement -

| ಮೂಲ : ಶಾ ಅಲಂ ಖಾನ್ |
| ಕನ್ನಡಕ್ಕೆ: ಶ್ರೀ ಪಾದ್ ಭಟ್ |

ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಅಬೂತಪೂರ್ವ ಗೆಲುವಿನ ನಂತರ ಪ್ರದಾನ ಮಂತ್ರಿ ಮೋದಿ ಅವರು ಬಿಜೆಪಿ ಕೇಂದ್ರ ಕಾರ್ಯಾಲಯದಲ್ಲಿ ಮಾತನಾಡುತ್ತ ‘ ಇಂಡಿಯಾದಲ್ಲಿ ಈಗ ಕೇವಲ ಎರಡು ಜಾತಿಗಳಿವೆ – ಒಂದು ಬಡವರು ಮತ್ತೊಂದು ಈ ಬಡತನವನ್ನ ಉಪಶಮನಗೊಳಿಸುವವರು’ ಎಂದು ಹೇಳಿದರು. ಅವರ ಮಾತುಗಳ ಪ್ರತಿದ್ವನಿ ಕಮರಿಹೋಗುವುದಕ್ಕೂ ಮೊದಲೆ ಮುಂಬೈನ ಬಿವೈಎಲ್ ನಾಯರ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯವ ವೈದ್ಯೆ ‘ಪಾಯಲ್ ತಾಡ್ವಿ’ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೂ ಮೊದಲು ತಾಡ್ವಿಯವರು ಆ ಆಸ್ಪತ್ರೆಯಲ್ಲಿ ತಮ್ಮ ಹಿರಿಯ ವೈದ್ಯೆಯರಿಂದ ನಿರಂತರವಾಗಿ ಜಾತಿ ಅಪಮಾನ ಮತ್ತು ತಾರತಮ್ಯದ ಹಿಂಸೆಗೆ ಒಳಗಾಗಿದ್ದರು. ಆದಿವಾಸಿ ಭಿಲ್ ಮುಸ್ಲಿಂ ಸಮುದಾಯದ ತಾಡ್ವಿ ಅವರು ಮೇ 2018ರಿಂದ ಆ ಸಂಸ್ಥೆಯಲ್ಲಿ ಎಂ.ಡಿ. ಗೈನಕಾಲಜಿ ವಿಶಯದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರು. ಪ್ರದಾನಿ ಏನೇ ಹೇಳಿದರೂ ಇಂದಿಗೂ ಜಾತಿಯು ಇಂಡಿಯಾ ಸಮಾಜದಲ್ಲಿ ಭಯಾನಕ ವಾಸ್ತವವಾಗಿದೆ

ನಮ್ಮ ಕಚೇರಿಗಳಲ್ಲಿ, ಆಸ್ಪತ್ರೆಗಳಲ್ಲಿ, ಫ್ಯಾಕ್ಟರಿಗಳಲ್ಲಿ, ವ್ಯಾಪಾರದಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ಇಂದಿಗೂ ಜಾತೀಯತೆಯು ವಿಶದಂತೆ ಹಬ್ಬಿಕೊಂಡಿದೆ. ಈ ಜಾತಿ ತಾರತಮ್ಯದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ತಳಸಮುದಾಯಗಳ ವಿದ್ಯಾರ್ಥಿಗಳು, ವಿದ್ವಾಂಸರಾದ ಮಾದಾರಿ ವೆಂಕಟೇಶ್, ರೋಹಿತ್ ವೇಮುಲ, ಸೆಂತಿಲ್ ಕುಮಾರ್ ಮತ್ತು ಪುಲ್ಯಾಲ ರಾಜು ಅವರೊಂದಿಗೆ ಈಗ ತಾಡ್ವಿಯವರೂ ಕೂಡಿಕೊಂಡಿದ್ದಾರೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಆದಾರಿತ ಪ್ರತ್ಯೇಕತೆಯನ್ನ ಇಂದು ತ್ವರಿತವಾಗಿ ಬಗೆಹರಿಸಬೇಕಾಗಿದೆ. ಉತ್ತರ ಪ್ರದೇಶದ ದಲಿತ ಕುಟುಂಬದಿಂದ ಬಂದ ಏಮ್ಸ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಬಾಲ ಮುಕುಂದ್ ಭಾರತಿ ಈ ಜಾತಿ ಹಿಂಸೆಯ ಕಾರಣಕ್ಕಾಗಿ ಮಾರ್ಚ 2010ರಲ್ಲಿ ಆತ್ಮಹತ್ಯೆ ಮಾಡಿಕೊಂಡರು. ಕಳೆದ 50 ವರ್ಶಗಳಲ್ಲಿ ಭಾರತಿ ಅವರು ತಮ್ಮ ಗ್ರಾಮದಿಂದ ವೈದ್ಯಕೀಯ ವ್ಯಾಸಂಗಕ್ಕೆ ಪ್ರವೇಶ ಪಡೆದ ಮೊದಲ ದಲಿತ ವಿದ್ಯಾರ್ಥಿಯಾಗಿದ್ದರು. ಏಮ್ಸ್‍ನಲ್ಲಿ ಓದುತ್ತಿದ್ದ ಮತ್ತೊಬ್ಬ ವೈದ್ಯಕೀಯ ವಿದ್ಯಾರ್ಥಿ ಅನಿಲ್ ಕುಮಾರ್ ಮೀನಾ ಮಾರ್ಚ 2012ರಲ್ಲಿ ತಮ್ಮ ಹಿಂದುಳಿದ ಜಾತಿಯ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡರು. ಏಮ್ಸ್‍ನಲ್ಲಿ ಜಾತಿ ಆಧಾರಿತ ತಾರತಮ್ಮ ಎಶ್ಟು ಗಂಬೀರವಾಗಿದೆಯೆಂದರೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮೇಲೆ ನಡೆಯುತ್ತಿರುವ ದೌರ್ಜನ್ಯದ ಸತ್ಯಶೋದನೆಗಾಗಿ 2007ರಲ್ಲಿ ಸುಖದೇವ ಥೋರೊಟ್ ಅವರ ಅದ್ಯಕ್ಷತೆಯಲ್ಲಿ ಸಮಿತಿಯನ್ನ ರಚಿಸಲಾಯಿತು.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಜಾತಿ ಆದಾರಿತ ದೌರ್ಜನ್ಯಗಳನ್ನ ಪತ್ತೆಹಚ್ಚಲು ಈ ಥೋರೋಟ್ ಸಮಿತಿಯ ವರದಿಯನ್ನ ಒಂದು ಮೈಲಿಗಲ್ಲು ಎಂದು ಪರಿಗಣಿಸಲಾಗುತ್ತದೆ. ಈ ವರದಿಯ ಪ್ರಮುಖಾಂಶಗಳು : ಶೇಕಡಾ 69 ಪ್ರಮಾಣದ ಪ.ಜಾತಿ/ ಪ.ಪಂಗಡದ ವಿದ್ಯಾರ್ಥಿಗಳು ತಮಗೆ ಪ್ರಾದ್ಯಾಪಕರಿಂದ ಯಾವುದೆ ಪ್ರೋತ್ಸಾಹ ದೊರಕುವುದಿಲ್ಲ, ಈ ಪ್ರಾದ್ಯಾಪಕರ ತಾತ್ಸಾರ ಮತ್ತು ಅನುಪಸ್ಥಿತಿಯಿಂದಾಗಿ ಅವರೊಂದಿಗೆ ಸಂಪರ್ಕ ಸಾದಿಸಲು ಸಾದ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಶೇಕಡಾ 72 ಪ್ರಮಾಣದ ವಿದ್ಯಾರ್ಥಿಗಳು ತಮ್ಮ ಜಾತಿಯ ಹಿನ್ನೆಲೆ ಕಾರಣಕ್ಕೆ ಈ ಪ್ರಾದ್ಯಾಪಕರು ತಮ್ಮಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದರು ಮತ್ತು ತರಗತಿಗಳಲ್ಲಿ ಪಾಠ ಮಾಡುವಾಗ ತಾರತಮ್ಯದಿಂದ ನೋಡುತ್ತಿದ್ದರು ಎಂದು ಹೇಳಿದ್ದಾರೆ. ಶೇಕಡಾ 76 ಪ್ರಮಾಣದ ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಗಳನ್ನ ನ್ಯಾಯವಾದ ರೀತಿಯಲ್ಲಿ ಮೌಲ್ಯಮಾಪನ ಮಾಡಲೆ ಇಲ್ಲ ಎಂದು ಹೇಳಿದ್ದಾರೆ.

ಶೇಕಡಾ 88 ಪ್ರಮಾಣದ ವಿದ್ಯಾರ್ಥಿಗಳು ತಾವು ನಿರೀಕ್ಷಿಸಿದಕ್ಕಿಂತಲೂ ಕಡಿಮೆ ಅಂಕಗಳನ್ನ ನೀಡಿದ್ದಾರೆ ಎಂದು ಹೇಳಿದ್ದಾರೆ. ಶೇಕಡಾ 84 ಪ್ರಮಾಣದ ವಿದ್ಯಾರ್ಥಿಗಳು ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳಲ್ಲಿ ಪಕ್ಷಪಾತ ಮಾಡಿದರು ಎಂದು ಹೇಳಿದ್ದಾರೆ. ಶೇಕಡಾ 86 ಪ್ರಮಾಣದ ವಿದ್ಯಾರ್ಥಿಗಳು ಮೇಲ್ಜಾತಿಯವರಿಗೆ ಹೋಲಿಸಿದಾಗ ಈ ಪ್ರಾದ್ಯಾಪಕರು ಪರೀಕ್ಷೆಯಲ್ಲಿ ತಮಗೆ ಸಾಕಶ್ಟು ಸಮಯವನ್ನೆ ಕೊಡಲಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಏಮ್ಸ್ ಹಾಸ್ಟೆಲ್‍ಗಳಲ್ಲಿ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ಸಾಮಾಜಿಕ ಪ್ರತ್ಯೇಕತೆ ಮತ್ತು ತಾರತಮ್ಯದ ಹಿಂಸೆಯನ್ನ ಅನುಬವಿಸಬೇಕಾಯಿತು. ದೆಹಲಿಯ ಏಮ್ಸ್‍ನಲ್ಲಿ ಕೆಲಸ ಮಾಡುತ್ತಿರುವ ಪ.ಜಾತಿ/ಪ.ಪಂಗಡದ ಪ್ರಾದ್ಯಾಪಕರೂ ಸಹ ಈ ತಾರತಮ್ಯಕ್ಕೆ ಒಳಗಾಗಿದ್ದರು ಎಂದು ಆ ವರದಿಯಲ್ಲಿ ವಿವರಿಸಲಾಗಿದೆ

ದೆಹಲಿಯ ಏಮ್ಸ್‍ನ ಪಕ್ಕದಲ್ಲಿರುವ ಮತ್ತೊಂದು ಪ್ರಮುಖ ವೈದ್ಯ ಶಿಕ್ಷಣ ಬೋದಿಸುವ ವರ್ದಮಾನ ಮಹಾವೀರ ವೈದ್ಯಕೀಯ ಕಾಲೇಜ್‍ನಲ್ಲಿ ಶೇಕಡಾ 25 ಪ್ರಮಾಣದ ದಲಿತ ವಿದ್ಯಾರ್ಥಿಗಳನ್ನ ಜಾತಿ ತಾರತಮ್ಯದ ಕಾರಣಕ್ಕೆ ಶರೀರ ವಿಜ್ಞಾನ (physiology) ಪರೀಕ್ಷೆಯಲ್ಲಿ ಸಾಮೂಹಿವಾಗಿ ಅನುತ್ತೀರ್ಣಗೊಳಿಸಲಾಯಿತು. ಈ ಹಗರಣಕ್ಕೆ ಸಂಬಂದಸಿದಂತೆ 2012ರಲ್ಲಿ ಮುಂಗೇಕರ್ ಸಮಿತಿಯು ತನಿಖೆ ನಡೆಸಿತು. ಈ ಸಮಿತಿಯು ಪರಿಶಿಷ್ಟ ಜಾತಿಗಳ ರಾಶ್ಟ್ರೀಯ ಆಯೋಗಕ್ಕೆ (NCSC) ನೀಡಿದ ವರದಿಯಲ್ಲಿ ‘ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳ ವಿರುದ್ದ ಕಾಲೇಜ್‍ನ ಆಡಳಿತ ಮಂಡಳಿಯ ದ್ವೇಶ ಯಾವ ಮಟ್ಟದಲ್ಲಿದೆಯೆಂದರೆ ದಲಿತರು ಮಾಹಿತಿ ಹಕ್ಕು ಕಾಯಿದೆಯ ಅಡಿಯಲ್ಲಿ ಮಾಹಿತಿ ಆಯೋಗಕ್ಕೆ ಪ್ರತಿನಿತ್ಯ ಅರ್ಜಿಗಳನ್ನ ಸಲ್ಲಿಸುತ್ತಿದ್ದರು’ ಎಂದು ಉಲ್ಲೇಖಿಸಲಾಗಿದೆ. ಕಿರುಕುಳಕ್ಕೆ ಒಳಗಾದ ದಲಿತ ವಿದ್ಯಾರ್ಥಿಗಳಿಗೆ 10 ಲಕ್ಷ ಮೊತ್ತದ ಪರಿಹಾರ ಕೊಡಬೇಕೆಂದು ಮತ್ತು ಆ ಕಾಲೇಜ್‍ನ ಬೋದಕ ಮತ್ತು ಆಡಳಿತ ಸಿಬ್ಬಂದಿಯನ್ನ ಅಮಾನತ್ತು ಮಾಡಬೇಕೆಂದು ಸಮಿತಿಯು ಶಿಫಾರಸ್ಸು ಮಾಡಿತ್ತು.

ಶಿಕ್ಷಣ ಸಂಸ್ಥೆಗಳನ್ನ ಮೇಲ್ಜಾತಿಗಳು ಮತ್ತು ಶ್ರೀಮಂತ ವರ್ಗದವರಿಗೆ ಕಾಯ್ದಿರಿಸಲಾಗುತ್ತದೆ. ಆದರೆ ಜಾತಿ ಆದಾರಿತ ಮೀಸಲಾತಿಯ ಸಾಮಾಜಿಕ ನ್ಯಾಯದ ಮೂಲಕ ಈ ಯಾಜಮಾನಕೀಯಕ್ಕೆ ಒಡ್ಡಲಾಗುವ ಸವಾಲನ್ನ ಮೀರಲು ಈ ಕಿರುಕುಳ, ಅಪಮಾನ, ಪ್ರತ್ಯೇಕತೆ, ತಾರತಮ್ಯವನ್ನ ತುರ್ತಾಗಿ ಜಾರಿಗೊಳಿಲಾಗುತ್ತದೆ. ಈ ಅಪರಾದಿಗಳಿಗೆ ದಂಡನೆಯ ಕ್ರಮ ಮತ್ತು ಶಾಸನಬದ್ದ ಆದೇಶವಿದ್ದರೂ ಸಹ ದೀರ್ಘಾವದಿ ಪರಿಹಾರವನ್ನ ಕಂಡುಕೊಳ್ಳುವುದು ಅವಶ್ಯಕವಾಗಿದೆ.
( ಕೃಪೆ : ಇಂಡಿಯನ್ ಎಕ್ಸ್‍ಪ್ರೆಸ್ 29, ಮೇ, 2019)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...