Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಪಾರ್ಲಿಮೆಂಟ್ ಚುನಾವಣೆಯ ಅಸಲಿ ಸವಾಲುಗಳು

ಪಾರ್ಲಿಮೆಂಟ್ ಚುನಾವಣೆಯ ಅಸಲಿ ಸವಾಲುಗಳು

- Advertisement -
- Advertisement -

ಮುಬೈನಿಂದ ಪ್ರಕಟವಾಗುವ ‘ಫೈನಾನ್ಷಿಯಲ್ ಟೈಮ್ಸ್’ ಪತ್ರಿಕೆಯ ಮಾಜಿ ಮುಖ್ಯಸ್ಥರಾದ ಜೇಮ್ಸ್ ಕ್ರಾಬ್‍ಟ್ರೀ ಅವರು ‘ದಿ ಬಿಲಿಯನೇರ್ ರಾಜ್’ ಎಂಬ ಗ್ರಂಥವೊಂದನ್ನು ಪ್ರಕಟಿಸಿದ್ದಾರೆ. ಹಳೇ 1000, 500ರೂಗಳ ನೋಟನ್ನು ಅಪಮೌಲ್ಯ ಮಾಡಿದ್ದು ಒಂದು ತಪ್ಪು ಹೆಜ್ಜೆ ಎಂಬುದು ಈಗ ಸಾಬೀತಾಗಿದೆ. ನೋಟು ಅಪಮೌಲ್ಯದ ಮೂಲಕ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳುತ್ತದೆ ಎಂದು ಅಬ್ಬರದ ಪ್ರಚಾರ ಮಾಡಿದ್ದ ಪ್ರಧಾನಿ ಮೋದಿಗೆ ಭಾರಿ ಹಿನ್ನಡೆಯಾಗಿದೆ ಎಂದು ಪ್ರಸ್ತಾಪಿಸಿದ್ದಾರೆ. ನೋಟುಗಳ ಅಪಮೌಲ್ಯದಿಂದ ಜನ ಜೀವನ ಅಸ್ತವ್ಯಸ್ತವಾಯಿತು. ಅನುಕೂಲಕ್ಕಿಂತಲೂ ಅದರಿಂದ ಆದ ತೊಂದರೆಯೇ ಜಾಸ್ತಿ. ನೋಟುಗಳ ಅಪಮೌಲ್ಯ ತಪ್ಪು ಗ್ರಹಿಕೆಯಿಂದ ಆದ ಪ್ರಮಾದ, ಜನಪ್ರಿಯತೆ ಗಿಟ್ಟಿಸಲಿಕ್ಕಾಗಿ ಮೋದಿಯವರು ತೆಗೆದುಕೊಂಡ ಈ ಕ್ರಮದಿಂದ ಜನಸಾಮಾನ್ಯರ ಸಂಕಷ್ಟಗಳಿಗೆ ಈಡಾದರು. ಕರೆನ್ಸಿ ನೋಟುಗಳ ಅಭಾವದಿಂದ ಅನೇಕ ಸಣ್ಣ ವರ್ತಕರು ತಮ್ಮ ಅಂಗಡಿಗಳನ್ನು ಮುಚ್ಚಬೇಕಾಯಿತು. ಜನ ತಮ್ಮ ಹಣವನ್ನು ತಾವು ಪಡೆಯಲು ಬಿಸಿಲಿನಲ್ಲಿ ಬ್ಯಾಂಕುಗಳ ಮುಂದೆ ಗಂಟೆಗಟ್ಟಲೆ ಕ್ಯೂಗಳಲ್ಲಿ ನಿಲ್ಲಬೇಕಾಯಿತು. ಅದೆಷ್ಟೋ ರಸ್ತೆಬದಿ ವ್ಯಾಪಾರಿಗಳು ಚಿಲ್ಲರೆಗೆ ಪರದಾಡಿ ತಮ್ಮ ಕಸುಬನ್ನೇ ಬಿಡಬೇಕಾಯಿತು. ಕಾಳಧನ ಹೊಂದಿದ್ದವರು ಹಳೇ ನೋಟುಗಳನ್ನು ಕೊಟ್ಟು ಹೊಸ ನೋಟನ್ನು ಪಡೆದುಕೊಳ್ಳಲು ಕೋ-ಆಪರೇಟಿವ್ ಬ್ಯಾಂಕುಗಳ ಮೂಲಕ ರಾಷ್ಟ್ರೀಯ ಅಂತಾರಾಷ್ಟ್ರೀಯ ಬ್ಯಾಂಕುಗಳನ್ನು ದುರ್ಬಳಕೆ ಮಾಡಿಕೊಂಡು ತಮ್ಮ ಕಪ್ಪುಹಣವನ್ನು ಬಿಳಿ ಹಣವನ್ನಾಗಿ ಪರಿವರ್ತಿಸಿಕೊಂಡರು. ಹೀಗೆ ನೋಟು ಬ್ಯಾನ್ ಎಂಬುದು ಶ್ರೀಮಂತರಿಗೆ, ಪಟ್ಟಭದ್ರರಿಗೆ ಶಾಪವಾಗುವ ಬದಲು ವರವಾಗಿ ಪರಿಣಮಿಸಿದ್ದು ಈಗ ಇತಿಹಾಸ.
ಮೋದಿ ಅನುಸರಿಸುತ್ತಿರುವ ನೀತಿಯಿಂದಾಗಿ ದೇಶದ ಆರ್ಥಿಕತೆಯ ಉನ್ನತ ಸ್ತರದಲ್ಲಿರುವ ಆಯ್ದ ಕೆಲವೇ ಶ್ರೀಮಂತರ ಅಭಿವೃದ್ಧಿ ಮಾತ್ರ ಆಗುತ್ತಿದೆ. ವಸ್ತುಸ್ಥಿತಿ ಹೀಗಿದ್ದರೂ ಬುದ್ಧಿಜೀವಿಗಳ ಒಂದು ಬಣ ಮೋದಿಯವರ ಘಾತುಕ ಆರ್ಥಿಕ ನೀತಿಗಳನ್ನು, ಮುಖ್ಯವಾಗಿ ನೋಟ್ ಬ್ಯಾನ್‍ನಿಂದ ಉಂಟಾದ ದುಷ್ಪರಿಣಾಮಗಳನ್ನು ಹಗುರವಾಗಿ ಪರಿಗಣಿಸಿ ವ್ಯಾಖ್ಯಾನ ಮಾಡುತ್ತಿದ್ದಾರೆ. ಉದಾರೀಕರಣವನ್ನು ಸರ್ಕಾರ ಜಾರಿಗೆ ತಂದ ನಂತರದ ದಿನಗಳಲ್ಲಿ, ಅಭಿವೃದ್ಧಿಯ ಫಲ ಎಲ್ಲರಿಗೂ ಹಂಚಿಕೆಯಾಗಬೇಕು ಎನ್ನುವುದಕ್ಕಿಂತಲೂ ‘ಕ್ಷಿಪ್ರಗತಿಯ ಅಭಿವೃದ್ಧಿ’ ಮುಖ್ಯ ಎಂಬುದು ಇಂತಹ ಬುದ್ಧಿಜೀವಿಗಳ ನಿಲುವು. ದೇಶದ ಸಂಪತ್ತು ಕೆಲವೇ ಬಂಡವಾಳಿಗರಲ್ಲಿ ಹೆಚ್ಚೆಚ್ಚು ಕ್ರೋಢೀಕರಣವಾಗುತ್ತಿದ್ದು, ಬಡವ ಬಲ್ಲಿದರ ಕಂದರ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆಯಾದರೂ ಸರ್ಕಾರದ ಬಳಿ ಈ ಕಂದರ ಮುಚ್ಚುವ ಯಾವ ಯೋಜನೆಯೂ ಇಲ್ಲ. ರಾಷ್ಟ್ರವನ್ನು ಕಾಡುತ್ತಿರುವ ಈ ಜ್ವಲಂತ ಸಮಸ್ಯೆಯನ್ನು ಬಗೆಹರಿಸಬೇಕೆಂಬ ಅಭಿಲಾಷೆ ಯಾವೊಂದು ರಾಜಕೀಯ ಪಕ್ಷಕ್ಕೂ ಇಲ್ಲ. ರಾಜಕೀಯ ಪಕ್ಷಗಳ ಒಳಗೇ ಪ್ರಭಾವಶಾಲಿಗಳಾದ ಧನಾಡ್ಯರು ಇರುವುದರಿಂದ ಅವರು ಆರ್ಥಿಕ ಅಸಮಾನತೆಯ ವಿಚಾರವನ್ನು ಬಗೆಹರಿಸಲು ಅಡಚಣೆಗಳನ್ನು ತಂದೊಡ್ಡುತ್ತಾರೆ.
1991ರ ನಂತರ ಭಾರತದ ಅಭಿವೃದ್ಧಿಯ ದರ ಹೆಚ್ಚಾದುದರ ಫಲವಾಗಿ ಬಡವರ ಸಂಖ್ಯೆ ಇಳಿಮುಖವಾಗಿದೆ ಎಂದೂ, ಬಡವರ ಕೊಳ್ಳುವ ಶಕ್ತಿ ಹೆಚ್ಚಾಗಿದೆಯೆಂದೂ ಹೇಳಲಾಗುತ್ತಿದೆ. ಬಡವರು ಮೊದಲಿಗಿಂತ ಹೆಚ್ಚಿನ ಆಹಾರ ಸೇವಿಸುತ್ತಿದ್ದು, ಹಸಿವು ಇಂಗಿದೆಯೆಂದು ಹೇಳಲಾಗುತ್ತಿದೆ. ಆದರೆ ದೇಶದಲ್ಲಿ ಒಂದೆಡೆ ಶತಕೋಟ್ಯಾಧಿಪತಿಗಳ ಸಂಖ್ಯೆ ಏರುತ್ತಿದೆ. ಮತ್ತೊಂದೆಡೆ ದಿನಕ್ಕೆ ಎರಡು ಹೊತ್ತಿನ ಊಟವೂ ಇಲ್ಲದ ಬಡವರ ಸಂಖ್ಯೆ 7 ಕೋಟಿಗಿಂತಲೂ ಹೆಚ್ಚಿದೆ ಎಂಬುದನ್ನು ನಾವು ಮರೆಮಾಚಕೂಡದು. ನಮ್ಮ ಕಣ್ಣೆದುರಿನಲ್ಲೇ ಕೋಟ್ಯಾಂತರ ಜನರು ತಲೆಮೇಲೆ ಕನಿಷ್ಟ ಸೂರೂ ಇಲ್ಲದೆ ಬೀದಿಗಳಲ್ಲಿರುವುದನ್ನು ಮರೆಯುವಂತಿಲ್ಲ. ಆರ್ಥಿಕವಾಗಿ ದೇಶ ಬೆಳೆಯಬೇಕಾದರೆ, ಇಡೀ ರಾಷ್ಟ್ರಕ್ಕೆ ಅಭಿವೃದ್ಧಿಯ ಫಲ ಸಿಗುವಂತಹ ಆರ್ಥಿಕ ಸುಧಾರಣೆಗಳನ್ನು ನಾವು ಮೊದಲು ತಂದುಕೊಳ್ಳಬೇಕು. ಇಂತಹ ಸಮಾಜಮುಖಿ ಸುಧಾರಣೆಗಳಿಗೆ ಪಟ್ಟ ಭದ್ರರಿಂದ ಅಡ್ಡಿ ಅಡಚಣೆಗಳಾಗದಂತೆ ನೋಡಿಕೊಂಡಾಗ ಮಾತ್ರ ಬಡವ ಬಲ್ಲಿದರ ನಡುವಿನ ಕಂದರವನ್ನು ನಾವು ಮುಚ್ಚಬಹುದು. ಆದರೆ ಆಸ್ಥಾನದ ಆರ್ಥಿಕ ಪಂಡಿತರು ಜಿಡಿಪಿ ವೃದ್ಧಿಯನ್ನೇ ದೇಶದ ಅಭಿವೃದ್ಧಿಯೆಂಬ ಭ್ರಮೆ ಬಿತ್ತುತ್ತಿದ್ದಾರೆ.
ಮುಂಬರುವ ಪಾರ್ಲಿಮೆಂಟ್ ಚುನಾವಣೆಯಲ್ಲಿ ಈ ಜ್ವಲಂತ ಸಮಸ್ಯೆಯನ್ನು ಮುನ್ನೆಲೆಗೆ ತರಬೇಕಾದ ಅಗತ್ಯವಿದೆ. ಈ ಚುನಾವಣೆಯಲ್ಲಿ ಸರ್ಕಾರದ ಭ್ರಷ್ಟಾಚಾರ ಪ್ರಮುಖವಾದ ವಿಷಯವಾಗುವ ಲಕ್ಷಣ ಕಾಣುತ್ತಿದೆ. ಮೋದಿಯವರು ತಾವು ಭ್ರಷ್ಟಾಚಾರವನ್ನು ಮಟ್ಟ ಹಾಕಿರುವುದಾಗಿ ಪ್ರಚಾರ ಭಾಷಣ ಮಾಡಬಹುದು. ಹಿಂದೆ ಆಡಳಿತ ನಡೆಸಿದವರ ಕಾಲದಲ್ಲಿ ನಡೆದಿರುವ ಹಗರಣಗಳ ಬಗೆಗೆ ಪುಂಖಾನುಪುಂಖವಾಗಿ ಬೊಬ್ಬೆ ಹೊಡೆಯಬಹುದು. ಅದರಂತೆಯೇ ವಿರೋಧ ಪಕ್ಷಗಳೂ ಕೂಡ ಮೋದಿ ಅವರ ಕಾಲದಲ್ಲಾದ ಡಸ್ಸಾಲ್ಟ್ ರಫೈಲ್ ಫೈಟರ್ ಜೆಟ್ಸ್ ಖರೀದಿಯಲ್ಲಿ ಆಗಿರುವ ಭ್ರಷ್ಟಾಚಾರ ಮತ್ತು ವಜ್ರದ ವ್ಯಾಪಾರಿ ನೀರವ್ ಮೋದಿ ನಮ್ಮ ಬ್ಯಾಂಕುಗಳಿಂದ ಸಾವಿರಾರು ಕೋಟಿಗಳ ಸಾಲ ಗುಳುಂ ಮಾಡಿ, ಕದ್ದು ಪರದೇಶಕ್ಕೆ ಹೋಗಲು ಅವಕಾಶ ಕಲ್ಪಿಸಿದ ಮೋದಿ ಸರ್ಕಾರದ ವಿರುದ್ಧ ದನಿಯೆತ್ತಬಹುದು. ಕ್ರೋನೀ ಕ್ಯಾಪಿಟಲಿಸಂ ಬಗೆಗೆ ಈಗಾಗಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿ ಒಂದು ಪರಿಣಾಮಕಾರಿ ಭಾಷಣ ಮಾಡಿ ಮೋದಿಯವರನ್ನು ಜರ್ಝರಿತಗೊಳಿಸಿದ್ದಾರೆ. ಹೀಗೆ ಈ ಸಾರಿಯ ಚುನಾವಣೆಯಲ್ಲಿ ಸರ್ಕಾರದ ಭ್ರಷ್ಟಾಚಾರ ಪ್ರಮುಖ ವಿಷಯವಾಗುತ್ತದೆ ಎನಿಸುತ್ತದೆ. ಬ್ಯಾಂಕಿನ ಹಣ ನುಂಗಿ ಪಲಾಯನ ಗೈದವರು ನಮ್ಮ ಬ್ಯಾಂಕುಗಳನ್ನು ಬರಿದು ಮಾಡಿ ಓಡಿ ಹೋಗಿದ್ದಾರೆ. ಬ್ಯಾಂಕುಗಳ ಸಮಸ್ಯೆ ಕಗ್ಗಂಟಾಗಿದೆ. ಭ್ರಷ್ಟಾಚಾರದಲ್ಲಿ ಭಾರತ ಇಂದಿಗೂ ಎತ್ತಿದ ಕೈ ಎಂಬುದು ಜಗಜ್ಜಾಹೀರಾಗಿದೆ.
ದೇಶ ಇಂತಹ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿದೆ. ಇದೇ ಸಂದರ್ಭದಲ್ಲಿ ಹಿಂದುತ್ವದ ಮುಸುಕಿನಲ್ಲಿ ಮತಾಂಧ ಸಂಚಿನ ಸಂಘಟನೆಗಳ ಹಾವಳಿಯೂ ಹೆಚ್ಚುತ್ತಿದೆ. ಜಾತಿ ಕಲಹಗಳೂ, ಕೋಮು ಘರ್ಷಣೆಗಳೂ ದಿನಬೆಳಗಾದರೆ ಉಲ್ಬಣವಾಗುತ್ತಿರುವುದರಿಂದ ಅಶಾಂತಿ, ಅಸ್ಥಿರತೆ ವ್ಯಾಪಕವಾಗಿ ಬೆಳೆಯುತ್ತಿದೆ. ಸಂಪದ್ಭರಿತವೂ, ಉದ್ಯಮಗಳ ಕೇಂದ್ರವೂ ಆಗಿದ್ದ ಗುಜರಾತ್ ರಾಜ್ಯದಲ್ಲಿ ಇಂತಹ ವಿದ್ಯಮಾನ ಹೆಚ್ಚಾಗಿ ಕಂಡುಬಂದಿತ್ತು. ಈ ಗುಜರಾತ್ ಮಾದರಿ ಈಗ ಇಡೀ ದೇಶಾದ್ಯಂತ ಹರಡಿಕೊಂಡಿದೆ. ಈ ಕಠಿಣ ಸಂದರ್ಭದಲ್ಲಿ ದೇಶದ ನಿಜವಾದ ಅಭಿವೃದ್ಧಿಯ ಪ್ರಶ್ನೆಗಳನ್ನು ನಾವು ಮುನ್ನೆಲೆಗೆ ತರುವಂತಾಗಬೇಕು. ಆಶಾದಾಯಕ ಸಂಗತಿಯೆಂದರೆ, ಕ್ರಮೇಣ ಗುಜರಾತ್‍ನ ಜನತೆ ಎಚ್ಚೆತ್ತುಕೊಳ್ಳುತ್ತಿದ್ದಾರೆ; ಈ ಸಮಾಜಘಾತುಕ ಅಭಿವೃದ್ಧಿ ಮಾದರಿಯ ವಿರುದ್ಧ ದನಿಯೆತ್ತುತ್ತಿದ್ದಾರೆ. ಮೋದಿಯವರ ಹಿನ್ನಡೆ ಗುಜರಾತಿನಿಂದಲೇ ಅರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...