Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಪಾರ್ಲಿಮೆಂಟ್ ಚುನಾವಣೆಯ ಅಸಲಿ ಸವಾಲುಗಳು

ಪಾರ್ಲಿಮೆಂಟ್ ಚುನಾವಣೆಯ ಅಸಲಿ ಸವಾಲುಗಳು

- Advertisement -
- Advertisement -

ಮುಬೈನಿಂದ ಪ್ರಕಟವಾಗುವ ‘ಫೈನಾನ್ಷಿಯಲ್ ಟೈಮ್ಸ್’ ಪತ್ರಿಕೆಯ ಮಾಜಿ ಮುಖ್ಯಸ್ಥರಾದ ಜೇಮ್ಸ್ ಕ್ರಾಬ್‍ಟ್ರೀ ಅವರು ‘ದಿ ಬಿಲಿಯನೇರ್ ರಾಜ್’ ಎಂಬ ಗ್ರಂಥವೊಂದನ್ನು ಪ್ರಕಟಿಸಿದ್ದಾರೆ. ಹಳೇ 1000, 500ರೂಗಳ ನೋಟನ್ನು ಅಪಮೌಲ್ಯ ಮಾಡಿದ್ದು ಒಂದು ತಪ್ಪು ಹೆಜ್ಜೆ ಎಂಬುದು ಈಗ ಸಾಬೀತಾಗಿದೆ. ನೋಟು ಅಪಮೌಲ್ಯದ ಮೂಲಕ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳುತ್ತದೆ ಎಂದು ಅಬ್ಬರದ ಪ್ರಚಾರ ಮಾಡಿದ್ದ ಪ್ರಧಾನಿ ಮೋದಿಗೆ ಭಾರಿ ಹಿನ್ನಡೆಯಾಗಿದೆ ಎಂದು ಪ್ರಸ್ತಾಪಿಸಿದ್ದಾರೆ. ನೋಟುಗಳ ಅಪಮೌಲ್ಯದಿಂದ ಜನ ಜೀವನ ಅಸ್ತವ್ಯಸ್ತವಾಯಿತು. ಅನುಕೂಲಕ್ಕಿಂತಲೂ ಅದರಿಂದ ಆದ ತೊಂದರೆಯೇ ಜಾಸ್ತಿ. ನೋಟುಗಳ ಅಪಮೌಲ್ಯ ತಪ್ಪು ಗ್ರಹಿಕೆಯಿಂದ ಆದ ಪ್ರಮಾದ, ಜನಪ್ರಿಯತೆ ಗಿಟ್ಟಿಸಲಿಕ್ಕಾಗಿ ಮೋದಿಯವರು ತೆಗೆದುಕೊಂಡ ಈ ಕ್ರಮದಿಂದ ಜನಸಾಮಾನ್ಯರ ಸಂಕಷ್ಟಗಳಿಗೆ ಈಡಾದರು. ಕರೆನ್ಸಿ ನೋಟುಗಳ ಅಭಾವದಿಂದ ಅನೇಕ ಸಣ್ಣ ವರ್ತಕರು ತಮ್ಮ ಅಂಗಡಿಗಳನ್ನು ಮುಚ್ಚಬೇಕಾಯಿತು. ಜನ ತಮ್ಮ ಹಣವನ್ನು ತಾವು ಪಡೆಯಲು ಬಿಸಿಲಿನಲ್ಲಿ ಬ್ಯಾಂಕುಗಳ ಮುಂದೆ ಗಂಟೆಗಟ್ಟಲೆ ಕ್ಯೂಗಳಲ್ಲಿ ನಿಲ್ಲಬೇಕಾಯಿತು. ಅದೆಷ್ಟೋ ರಸ್ತೆಬದಿ ವ್ಯಾಪಾರಿಗಳು ಚಿಲ್ಲರೆಗೆ ಪರದಾಡಿ ತಮ್ಮ ಕಸುಬನ್ನೇ ಬಿಡಬೇಕಾಯಿತು. ಕಾಳಧನ ಹೊಂದಿದ್ದವರು ಹಳೇ ನೋಟುಗಳನ್ನು ಕೊಟ್ಟು ಹೊಸ ನೋಟನ್ನು ಪಡೆದುಕೊಳ್ಳಲು ಕೋ-ಆಪರೇಟಿವ್ ಬ್ಯಾಂಕುಗಳ ಮೂಲಕ ರಾಷ್ಟ್ರೀಯ ಅಂತಾರಾಷ್ಟ್ರೀಯ ಬ್ಯಾಂಕುಗಳನ್ನು ದುರ್ಬಳಕೆ ಮಾಡಿಕೊಂಡು ತಮ್ಮ ಕಪ್ಪುಹಣವನ್ನು ಬಿಳಿ ಹಣವನ್ನಾಗಿ ಪರಿವರ್ತಿಸಿಕೊಂಡರು. ಹೀಗೆ ನೋಟು ಬ್ಯಾನ್ ಎಂಬುದು ಶ್ರೀಮಂತರಿಗೆ, ಪಟ್ಟಭದ್ರರಿಗೆ ಶಾಪವಾಗುವ ಬದಲು ವರವಾಗಿ ಪರಿಣಮಿಸಿದ್ದು ಈಗ ಇತಿಹಾಸ.
ಮೋದಿ ಅನುಸರಿಸುತ್ತಿರುವ ನೀತಿಯಿಂದಾಗಿ ದೇಶದ ಆರ್ಥಿಕತೆಯ ಉನ್ನತ ಸ್ತರದಲ್ಲಿರುವ ಆಯ್ದ ಕೆಲವೇ ಶ್ರೀಮಂತರ ಅಭಿವೃದ್ಧಿ ಮಾತ್ರ ಆಗುತ್ತಿದೆ. ವಸ್ತುಸ್ಥಿತಿ ಹೀಗಿದ್ದರೂ ಬುದ್ಧಿಜೀವಿಗಳ ಒಂದು ಬಣ ಮೋದಿಯವರ ಘಾತುಕ ಆರ್ಥಿಕ ನೀತಿಗಳನ್ನು, ಮುಖ್ಯವಾಗಿ ನೋಟ್ ಬ್ಯಾನ್‍ನಿಂದ ಉಂಟಾದ ದುಷ್ಪರಿಣಾಮಗಳನ್ನು ಹಗುರವಾಗಿ ಪರಿಗಣಿಸಿ ವ್ಯಾಖ್ಯಾನ ಮಾಡುತ್ತಿದ್ದಾರೆ. ಉದಾರೀಕರಣವನ್ನು ಸರ್ಕಾರ ಜಾರಿಗೆ ತಂದ ನಂತರದ ದಿನಗಳಲ್ಲಿ, ಅಭಿವೃದ್ಧಿಯ ಫಲ ಎಲ್ಲರಿಗೂ ಹಂಚಿಕೆಯಾಗಬೇಕು ಎನ್ನುವುದಕ್ಕಿಂತಲೂ ‘ಕ್ಷಿಪ್ರಗತಿಯ ಅಭಿವೃದ್ಧಿ’ ಮುಖ್ಯ ಎಂಬುದು ಇಂತಹ ಬುದ್ಧಿಜೀವಿಗಳ ನಿಲುವು. ದೇಶದ ಸಂಪತ್ತು ಕೆಲವೇ ಬಂಡವಾಳಿಗರಲ್ಲಿ ಹೆಚ್ಚೆಚ್ಚು ಕ್ರೋಢೀಕರಣವಾಗುತ್ತಿದ್ದು, ಬಡವ ಬಲ್ಲಿದರ ಕಂದರ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆಯಾದರೂ ಸರ್ಕಾರದ ಬಳಿ ಈ ಕಂದರ ಮುಚ್ಚುವ ಯಾವ ಯೋಜನೆಯೂ ಇಲ್ಲ. ರಾಷ್ಟ್ರವನ್ನು ಕಾಡುತ್ತಿರುವ ಈ ಜ್ವಲಂತ ಸಮಸ್ಯೆಯನ್ನು ಬಗೆಹರಿಸಬೇಕೆಂಬ ಅಭಿಲಾಷೆ ಯಾವೊಂದು ರಾಜಕೀಯ ಪಕ್ಷಕ್ಕೂ ಇಲ್ಲ. ರಾಜಕೀಯ ಪಕ್ಷಗಳ ಒಳಗೇ ಪ್ರಭಾವಶಾಲಿಗಳಾದ ಧನಾಡ್ಯರು ಇರುವುದರಿಂದ ಅವರು ಆರ್ಥಿಕ ಅಸಮಾನತೆಯ ವಿಚಾರವನ್ನು ಬಗೆಹರಿಸಲು ಅಡಚಣೆಗಳನ್ನು ತಂದೊಡ್ಡುತ್ತಾರೆ.
1991ರ ನಂತರ ಭಾರತದ ಅಭಿವೃದ್ಧಿಯ ದರ ಹೆಚ್ಚಾದುದರ ಫಲವಾಗಿ ಬಡವರ ಸಂಖ್ಯೆ ಇಳಿಮುಖವಾಗಿದೆ ಎಂದೂ, ಬಡವರ ಕೊಳ್ಳುವ ಶಕ್ತಿ ಹೆಚ್ಚಾಗಿದೆಯೆಂದೂ ಹೇಳಲಾಗುತ್ತಿದೆ. ಬಡವರು ಮೊದಲಿಗಿಂತ ಹೆಚ್ಚಿನ ಆಹಾರ ಸೇವಿಸುತ್ತಿದ್ದು, ಹಸಿವು ಇಂಗಿದೆಯೆಂದು ಹೇಳಲಾಗುತ್ತಿದೆ. ಆದರೆ ದೇಶದಲ್ಲಿ ಒಂದೆಡೆ ಶತಕೋಟ್ಯಾಧಿಪತಿಗಳ ಸಂಖ್ಯೆ ಏರುತ್ತಿದೆ. ಮತ್ತೊಂದೆಡೆ ದಿನಕ್ಕೆ ಎರಡು ಹೊತ್ತಿನ ಊಟವೂ ಇಲ್ಲದ ಬಡವರ ಸಂಖ್ಯೆ 7 ಕೋಟಿಗಿಂತಲೂ ಹೆಚ್ಚಿದೆ ಎಂಬುದನ್ನು ನಾವು ಮರೆಮಾಚಕೂಡದು. ನಮ್ಮ ಕಣ್ಣೆದುರಿನಲ್ಲೇ ಕೋಟ್ಯಾಂತರ ಜನರು ತಲೆಮೇಲೆ ಕನಿಷ್ಟ ಸೂರೂ ಇಲ್ಲದೆ ಬೀದಿಗಳಲ್ಲಿರುವುದನ್ನು ಮರೆಯುವಂತಿಲ್ಲ. ಆರ್ಥಿಕವಾಗಿ ದೇಶ ಬೆಳೆಯಬೇಕಾದರೆ, ಇಡೀ ರಾಷ್ಟ್ರಕ್ಕೆ ಅಭಿವೃದ್ಧಿಯ ಫಲ ಸಿಗುವಂತಹ ಆರ್ಥಿಕ ಸುಧಾರಣೆಗಳನ್ನು ನಾವು ಮೊದಲು ತಂದುಕೊಳ್ಳಬೇಕು. ಇಂತಹ ಸಮಾಜಮುಖಿ ಸುಧಾರಣೆಗಳಿಗೆ ಪಟ್ಟ ಭದ್ರರಿಂದ ಅಡ್ಡಿ ಅಡಚಣೆಗಳಾಗದಂತೆ ನೋಡಿಕೊಂಡಾಗ ಮಾತ್ರ ಬಡವ ಬಲ್ಲಿದರ ನಡುವಿನ ಕಂದರವನ್ನು ನಾವು ಮುಚ್ಚಬಹುದು. ಆದರೆ ಆಸ್ಥಾನದ ಆರ್ಥಿಕ ಪಂಡಿತರು ಜಿಡಿಪಿ ವೃದ್ಧಿಯನ್ನೇ ದೇಶದ ಅಭಿವೃದ್ಧಿಯೆಂಬ ಭ್ರಮೆ ಬಿತ್ತುತ್ತಿದ್ದಾರೆ.
ಮುಂಬರುವ ಪಾರ್ಲಿಮೆಂಟ್ ಚುನಾವಣೆಯಲ್ಲಿ ಈ ಜ್ವಲಂತ ಸಮಸ್ಯೆಯನ್ನು ಮುನ್ನೆಲೆಗೆ ತರಬೇಕಾದ ಅಗತ್ಯವಿದೆ. ಈ ಚುನಾವಣೆಯಲ್ಲಿ ಸರ್ಕಾರದ ಭ್ರಷ್ಟಾಚಾರ ಪ್ರಮುಖವಾದ ವಿಷಯವಾಗುವ ಲಕ್ಷಣ ಕಾಣುತ್ತಿದೆ. ಮೋದಿಯವರು ತಾವು ಭ್ರಷ್ಟಾಚಾರವನ್ನು ಮಟ್ಟ ಹಾಕಿರುವುದಾಗಿ ಪ್ರಚಾರ ಭಾಷಣ ಮಾಡಬಹುದು. ಹಿಂದೆ ಆಡಳಿತ ನಡೆಸಿದವರ ಕಾಲದಲ್ಲಿ ನಡೆದಿರುವ ಹಗರಣಗಳ ಬಗೆಗೆ ಪುಂಖಾನುಪುಂಖವಾಗಿ ಬೊಬ್ಬೆ ಹೊಡೆಯಬಹುದು. ಅದರಂತೆಯೇ ವಿರೋಧ ಪಕ್ಷಗಳೂ ಕೂಡ ಮೋದಿ ಅವರ ಕಾಲದಲ್ಲಾದ ಡಸ್ಸಾಲ್ಟ್ ರಫೈಲ್ ಫೈಟರ್ ಜೆಟ್ಸ್ ಖರೀದಿಯಲ್ಲಿ ಆಗಿರುವ ಭ್ರಷ್ಟಾಚಾರ ಮತ್ತು ವಜ್ರದ ವ್ಯಾಪಾರಿ ನೀರವ್ ಮೋದಿ ನಮ್ಮ ಬ್ಯಾಂಕುಗಳಿಂದ ಸಾವಿರಾರು ಕೋಟಿಗಳ ಸಾಲ ಗುಳುಂ ಮಾಡಿ, ಕದ್ದು ಪರದೇಶಕ್ಕೆ ಹೋಗಲು ಅವಕಾಶ ಕಲ್ಪಿಸಿದ ಮೋದಿ ಸರ್ಕಾರದ ವಿರುದ್ಧ ದನಿಯೆತ್ತಬಹುದು. ಕ್ರೋನೀ ಕ್ಯಾಪಿಟಲಿಸಂ ಬಗೆಗೆ ಈಗಾಗಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿ ಒಂದು ಪರಿಣಾಮಕಾರಿ ಭಾಷಣ ಮಾಡಿ ಮೋದಿಯವರನ್ನು ಜರ್ಝರಿತಗೊಳಿಸಿದ್ದಾರೆ. ಹೀಗೆ ಈ ಸಾರಿಯ ಚುನಾವಣೆಯಲ್ಲಿ ಸರ್ಕಾರದ ಭ್ರಷ್ಟಾಚಾರ ಪ್ರಮುಖ ವಿಷಯವಾಗುತ್ತದೆ ಎನಿಸುತ್ತದೆ. ಬ್ಯಾಂಕಿನ ಹಣ ನುಂಗಿ ಪಲಾಯನ ಗೈದವರು ನಮ್ಮ ಬ್ಯಾಂಕುಗಳನ್ನು ಬರಿದು ಮಾಡಿ ಓಡಿ ಹೋಗಿದ್ದಾರೆ. ಬ್ಯಾಂಕುಗಳ ಸಮಸ್ಯೆ ಕಗ್ಗಂಟಾಗಿದೆ. ಭ್ರಷ್ಟಾಚಾರದಲ್ಲಿ ಭಾರತ ಇಂದಿಗೂ ಎತ್ತಿದ ಕೈ ಎಂಬುದು ಜಗಜ್ಜಾಹೀರಾಗಿದೆ.
ದೇಶ ಇಂತಹ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿದೆ. ಇದೇ ಸಂದರ್ಭದಲ್ಲಿ ಹಿಂದುತ್ವದ ಮುಸುಕಿನಲ್ಲಿ ಮತಾಂಧ ಸಂಚಿನ ಸಂಘಟನೆಗಳ ಹಾವಳಿಯೂ ಹೆಚ್ಚುತ್ತಿದೆ. ಜಾತಿ ಕಲಹಗಳೂ, ಕೋಮು ಘರ್ಷಣೆಗಳೂ ದಿನಬೆಳಗಾದರೆ ಉಲ್ಬಣವಾಗುತ್ತಿರುವುದರಿಂದ ಅಶಾಂತಿ, ಅಸ್ಥಿರತೆ ವ್ಯಾಪಕವಾಗಿ ಬೆಳೆಯುತ್ತಿದೆ. ಸಂಪದ್ಭರಿತವೂ, ಉದ್ಯಮಗಳ ಕೇಂದ್ರವೂ ಆಗಿದ್ದ ಗುಜರಾತ್ ರಾಜ್ಯದಲ್ಲಿ ಇಂತಹ ವಿದ್ಯಮಾನ ಹೆಚ್ಚಾಗಿ ಕಂಡುಬಂದಿತ್ತು. ಈ ಗುಜರಾತ್ ಮಾದರಿ ಈಗ ಇಡೀ ದೇಶಾದ್ಯಂತ ಹರಡಿಕೊಂಡಿದೆ. ಈ ಕಠಿಣ ಸಂದರ್ಭದಲ್ಲಿ ದೇಶದ ನಿಜವಾದ ಅಭಿವೃದ್ಧಿಯ ಪ್ರಶ್ನೆಗಳನ್ನು ನಾವು ಮುನ್ನೆಲೆಗೆ ತರುವಂತಾಗಬೇಕು. ಆಶಾದಾಯಕ ಸಂಗತಿಯೆಂದರೆ, ಕ್ರಮೇಣ ಗುಜರಾತ್‍ನ ಜನತೆ ಎಚ್ಚೆತ್ತುಕೊಳ್ಳುತ್ತಿದ್ದಾರೆ; ಈ ಸಮಾಜಘಾತುಕ ಅಭಿವೃದ್ಧಿ ಮಾದರಿಯ ವಿರುದ್ಧ ದನಿಯೆತ್ತುತ್ತಿದ್ದಾರೆ. ಮೋದಿಯವರ ಹಿನ್ನಡೆ ಗುಜರಾತಿನಿಂದಲೇ ಅರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...