Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಪಾರ್ಲಿಮೆಂಟ್ ಚುನಾವಣೆಯ ಅಸಲಿ ಸವಾಲುಗಳು

ಪಾರ್ಲಿಮೆಂಟ್ ಚುನಾವಣೆಯ ಅಸಲಿ ಸವಾಲುಗಳು

- Advertisement -
- Advertisement -

ಮುಬೈನಿಂದ ಪ್ರಕಟವಾಗುವ ‘ಫೈನಾನ್ಷಿಯಲ್ ಟೈಮ್ಸ್’ ಪತ್ರಿಕೆಯ ಮಾಜಿ ಮುಖ್ಯಸ್ಥರಾದ ಜೇಮ್ಸ್ ಕ್ರಾಬ್‍ಟ್ರೀ ಅವರು ‘ದಿ ಬಿಲಿಯನೇರ್ ರಾಜ್’ ಎಂಬ ಗ್ರಂಥವೊಂದನ್ನು ಪ್ರಕಟಿಸಿದ್ದಾರೆ. ಹಳೇ 1000, 500ರೂಗಳ ನೋಟನ್ನು ಅಪಮೌಲ್ಯ ಮಾಡಿದ್ದು ಒಂದು ತಪ್ಪು ಹೆಜ್ಜೆ ಎಂಬುದು ಈಗ ಸಾಬೀತಾಗಿದೆ. ನೋಟು ಅಪಮೌಲ್ಯದ ಮೂಲಕ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳುತ್ತದೆ ಎಂದು ಅಬ್ಬರದ ಪ್ರಚಾರ ಮಾಡಿದ್ದ ಪ್ರಧಾನಿ ಮೋದಿಗೆ ಭಾರಿ ಹಿನ್ನಡೆಯಾಗಿದೆ ಎಂದು ಪ್ರಸ್ತಾಪಿಸಿದ್ದಾರೆ. ನೋಟುಗಳ ಅಪಮೌಲ್ಯದಿಂದ ಜನ ಜೀವನ ಅಸ್ತವ್ಯಸ್ತವಾಯಿತು. ಅನುಕೂಲಕ್ಕಿಂತಲೂ ಅದರಿಂದ ಆದ ತೊಂದರೆಯೇ ಜಾಸ್ತಿ. ನೋಟುಗಳ ಅಪಮೌಲ್ಯ ತಪ್ಪು ಗ್ರಹಿಕೆಯಿಂದ ಆದ ಪ್ರಮಾದ, ಜನಪ್ರಿಯತೆ ಗಿಟ್ಟಿಸಲಿಕ್ಕಾಗಿ ಮೋದಿಯವರು ತೆಗೆದುಕೊಂಡ ಈ ಕ್ರಮದಿಂದ ಜನಸಾಮಾನ್ಯರ ಸಂಕಷ್ಟಗಳಿಗೆ ಈಡಾದರು. ಕರೆನ್ಸಿ ನೋಟುಗಳ ಅಭಾವದಿಂದ ಅನೇಕ ಸಣ್ಣ ವರ್ತಕರು ತಮ್ಮ ಅಂಗಡಿಗಳನ್ನು ಮುಚ್ಚಬೇಕಾಯಿತು. ಜನ ತಮ್ಮ ಹಣವನ್ನು ತಾವು ಪಡೆಯಲು ಬಿಸಿಲಿನಲ್ಲಿ ಬ್ಯಾಂಕುಗಳ ಮುಂದೆ ಗಂಟೆಗಟ್ಟಲೆ ಕ್ಯೂಗಳಲ್ಲಿ ನಿಲ್ಲಬೇಕಾಯಿತು. ಅದೆಷ್ಟೋ ರಸ್ತೆಬದಿ ವ್ಯಾಪಾರಿಗಳು ಚಿಲ್ಲರೆಗೆ ಪರದಾಡಿ ತಮ್ಮ ಕಸುಬನ್ನೇ ಬಿಡಬೇಕಾಯಿತು. ಕಾಳಧನ ಹೊಂದಿದ್ದವರು ಹಳೇ ನೋಟುಗಳನ್ನು ಕೊಟ್ಟು ಹೊಸ ನೋಟನ್ನು ಪಡೆದುಕೊಳ್ಳಲು ಕೋ-ಆಪರೇಟಿವ್ ಬ್ಯಾಂಕುಗಳ ಮೂಲಕ ರಾಷ್ಟ್ರೀಯ ಅಂತಾರಾಷ್ಟ್ರೀಯ ಬ್ಯಾಂಕುಗಳನ್ನು ದುರ್ಬಳಕೆ ಮಾಡಿಕೊಂಡು ತಮ್ಮ ಕಪ್ಪುಹಣವನ್ನು ಬಿಳಿ ಹಣವನ್ನಾಗಿ ಪರಿವರ್ತಿಸಿಕೊಂಡರು. ಹೀಗೆ ನೋಟು ಬ್ಯಾನ್ ಎಂಬುದು ಶ್ರೀಮಂತರಿಗೆ, ಪಟ್ಟಭದ್ರರಿಗೆ ಶಾಪವಾಗುವ ಬದಲು ವರವಾಗಿ ಪರಿಣಮಿಸಿದ್ದು ಈಗ ಇತಿಹಾಸ.
ಮೋದಿ ಅನುಸರಿಸುತ್ತಿರುವ ನೀತಿಯಿಂದಾಗಿ ದೇಶದ ಆರ್ಥಿಕತೆಯ ಉನ್ನತ ಸ್ತರದಲ್ಲಿರುವ ಆಯ್ದ ಕೆಲವೇ ಶ್ರೀಮಂತರ ಅಭಿವೃದ್ಧಿ ಮಾತ್ರ ಆಗುತ್ತಿದೆ. ವಸ್ತುಸ್ಥಿತಿ ಹೀಗಿದ್ದರೂ ಬುದ್ಧಿಜೀವಿಗಳ ಒಂದು ಬಣ ಮೋದಿಯವರ ಘಾತುಕ ಆರ್ಥಿಕ ನೀತಿಗಳನ್ನು, ಮುಖ್ಯವಾಗಿ ನೋಟ್ ಬ್ಯಾನ್‍ನಿಂದ ಉಂಟಾದ ದುಷ್ಪರಿಣಾಮಗಳನ್ನು ಹಗುರವಾಗಿ ಪರಿಗಣಿಸಿ ವ್ಯಾಖ್ಯಾನ ಮಾಡುತ್ತಿದ್ದಾರೆ. ಉದಾರೀಕರಣವನ್ನು ಸರ್ಕಾರ ಜಾರಿಗೆ ತಂದ ನಂತರದ ದಿನಗಳಲ್ಲಿ, ಅಭಿವೃದ್ಧಿಯ ಫಲ ಎಲ್ಲರಿಗೂ ಹಂಚಿಕೆಯಾಗಬೇಕು ಎನ್ನುವುದಕ್ಕಿಂತಲೂ ‘ಕ್ಷಿಪ್ರಗತಿಯ ಅಭಿವೃದ್ಧಿ’ ಮುಖ್ಯ ಎಂಬುದು ಇಂತಹ ಬುದ್ಧಿಜೀವಿಗಳ ನಿಲುವು. ದೇಶದ ಸಂಪತ್ತು ಕೆಲವೇ ಬಂಡವಾಳಿಗರಲ್ಲಿ ಹೆಚ್ಚೆಚ್ಚು ಕ್ರೋಢೀಕರಣವಾಗುತ್ತಿದ್ದು, ಬಡವ ಬಲ್ಲಿದರ ಕಂದರ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆಯಾದರೂ ಸರ್ಕಾರದ ಬಳಿ ಈ ಕಂದರ ಮುಚ್ಚುವ ಯಾವ ಯೋಜನೆಯೂ ಇಲ್ಲ. ರಾಷ್ಟ್ರವನ್ನು ಕಾಡುತ್ತಿರುವ ಈ ಜ್ವಲಂತ ಸಮಸ್ಯೆಯನ್ನು ಬಗೆಹರಿಸಬೇಕೆಂಬ ಅಭಿಲಾಷೆ ಯಾವೊಂದು ರಾಜಕೀಯ ಪಕ್ಷಕ್ಕೂ ಇಲ್ಲ. ರಾಜಕೀಯ ಪಕ್ಷಗಳ ಒಳಗೇ ಪ್ರಭಾವಶಾಲಿಗಳಾದ ಧನಾಡ್ಯರು ಇರುವುದರಿಂದ ಅವರು ಆರ್ಥಿಕ ಅಸಮಾನತೆಯ ವಿಚಾರವನ್ನು ಬಗೆಹರಿಸಲು ಅಡಚಣೆಗಳನ್ನು ತಂದೊಡ್ಡುತ್ತಾರೆ.
1991ರ ನಂತರ ಭಾರತದ ಅಭಿವೃದ್ಧಿಯ ದರ ಹೆಚ್ಚಾದುದರ ಫಲವಾಗಿ ಬಡವರ ಸಂಖ್ಯೆ ಇಳಿಮುಖವಾಗಿದೆ ಎಂದೂ, ಬಡವರ ಕೊಳ್ಳುವ ಶಕ್ತಿ ಹೆಚ್ಚಾಗಿದೆಯೆಂದೂ ಹೇಳಲಾಗುತ್ತಿದೆ. ಬಡವರು ಮೊದಲಿಗಿಂತ ಹೆಚ್ಚಿನ ಆಹಾರ ಸೇವಿಸುತ್ತಿದ್ದು, ಹಸಿವು ಇಂಗಿದೆಯೆಂದು ಹೇಳಲಾಗುತ್ತಿದೆ. ಆದರೆ ದೇಶದಲ್ಲಿ ಒಂದೆಡೆ ಶತಕೋಟ್ಯಾಧಿಪತಿಗಳ ಸಂಖ್ಯೆ ಏರುತ್ತಿದೆ. ಮತ್ತೊಂದೆಡೆ ದಿನಕ್ಕೆ ಎರಡು ಹೊತ್ತಿನ ಊಟವೂ ಇಲ್ಲದ ಬಡವರ ಸಂಖ್ಯೆ 7 ಕೋಟಿಗಿಂತಲೂ ಹೆಚ್ಚಿದೆ ಎಂಬುದನ್ನು ನಾವು ಮರೆಮಾಚಕೂಡದು. ನಮ್ಮ ಕಣ್ಣೆದುರಿನಲ್ಲೇ ಕೋಟ್ಯಾಂತರ ಜನರು ತಲೆಮೇಲೆ ಕನಿಷ್ಟ ಸೂರೂ ಇಲ್ಲದೆ ಬೀದಿಗಳಲ್ಲಿರುವುದನ್ನು ಮರೆಯುವಂತಿಲ್ಲ. ಆರ್ಥಿಕವಾಗಿ ದೇಶ ಬೆಳೆಯಬೇಕಾದರೆ, ಇಡೀ ರಾಷ್ಟ್ರಕ್ಕೆ ಅಭಿವೃದ್ಧಿಯ ಫಲ ಸಿಗುವಂತಹ ಆರ್ಥಿಕ ಸುಧಾರಣೆಗಳನ್ನು ನಾವು ಮೊದಲು ತಂದುಕೊಳ್ಳಬೇಕು. ಇಂತಹ ಸಮಾಜಮುಖಿ ಸುಧಾರಣೆಗಳಿಗೆ ಪಟ್ಟ ಭದ್ರರಿಂದ ಅಡ್ಡಿ ಅಡಚಣೆಗಳಾಗದಂತೆ ನೋಡಿಕೊಂಡಾಗ ಮಾತ್ರ ಬಡವ ಬಲ್ಲಿದರ ನಡುವಿನ ಕಂದರವನ್ನು ನಾವು ಮುಚ್ಚಬಹುದು. ಆದರೆ ಆಸ್ಥಾನದ ಆರ್ಥಿಕ ಪಂಡಿತರು ಜಿಡಿಪಿ ವೃದ್ಧಿಯನ್ನೇ ದೇಶದ ಅಭಿವೃದ್ಧಿಯೆಂಬ ಭ್ರಮೆ ಬಿತ್ತುತ್ತಿದ್ದಾರೆ.
ಮುಂಬರುವ ಪಾರ್ಲಿಮೆಂಟ್ ಚುನಾವಣೆಯಲ್ಲಿ ಈ ಜ್ವಲಂತ ಸಮಸ್ಯೆಯನ್ನು ಮುನ್ನೆಲೆಗೆ ತರಬೇಕಾದ ಅಗತ್ಯವಿದೆ. ಈ ಚುನಾವಣೆಯಲ್ಲಿ ಸರ್ಕಾರದ ಭ್ರಷ್ಟಾಚಾರ ಪ್ರಮುಖವಾದ ವಿಷಯವಾಗುವ ಲಕ್ಷಣ ಕಾಣುತ್ತಿದೆ. ಮೋದಿಯವರು ತಾವು ಭ್ರಷ್ಟಾಚಾರವನ್ನು ಮಟ್ಟ ಹಾಕಿರುವುದಾಗಿ ಪ್ರಚಾರ ಭಾಷಣ ಮಾಡಬಹುದು. ಹಿಂದೆ ಆಡಳಿತ ನಡೆಸಿದವರ ಕಾಲದಲ್ಲಿ ನಡೆದಿರುವ ಹಗರಣಗಳ ಬಗೆಗೆ ಪುಂಖಾನುಪುಂಖವಾಗಿ ಬೊಬ್ಬೆ ಹೊಡೆಯಬಹುದು. ಅದರಂತೆಯೇ ವಿರೋಧ ಪಕ್ಷಗಳೂ ಕೂಡ ಮೋದಿ ಅವರ ಕಾಲದಲ್ಲಾದ ಡಸ್ಸಾಲ್ಟ್ ರಫೈಲ್ ಫೈಟರ್ ಜೆಟ್ಸ್ ಖರೀದಿಯಲ್ಲಿ ಆಗಿರುವ ಭ್ರಷ್ಟಾಚಾರ ಮತ್ತು ವಜ್ರದ ವ್ಯಾಪಾರಿ ನೀರವ್ ಮೋದಿ ನಮ್ಮ ಬ್ಯಾಂಕುಗಳಿಂದ ಸಾವಿರಾರು ಕೋಟಿಗಳ ಸಾಲ ಗುಳುಂ ಮಾಡಿ, ಕದ್ದು ಪರದೇಶಕ್ಕೆ ಹೋಗಲು ಅವಕಾಶ ಕಲ್ಪಿಸಿದ ಮೋದಿ ಸರ್ಕಾರದ ವಿರುದ್ಧ ದನಿಯೆತ್ತಬಹುದು. ಕ್ರೋನೀ ಕ್ಯಾಪಿಟಲಿಸಂ ಬಗೆಗೆ ಈಗಾಗಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿ ಒಂದು ಪರಿಣಾಮಕಾರಿ ಭಾಷಣ ಮಾಡಿ ಮೋದಿಯವರನ್ನು ಜರ್ಝರಿತಗೊಳಿಸಿದ್ದಾರೆ. ಹೀಗೆ ಈ ಸಾರಿಯ ಚುನಾವಣೆಯಲ್ಲಿ ಸರ್ಕಾರದ ಭ್ರಷ್ಟಾಚಾರ ಪ್ರಮುಖ ವಿಷಯವಾಗುತ್ತದೆ ಎನಿಸುತ್ತದೆ. ಬ್ಯಾಂಕಿನ ಹಣ ನುಂಗಿ ಪಲಾಯನ ಗೈದವರು ನಮ್ಮ ಬ್ಯಾಂಕುಗಳನ್ನು ಬರಿದು ಮಾಡಿ ಓಡಿ ಹೋಗಿದ್ದಾರೆ. ಬ್ಯಾಂಕುಗಳ ಸಮಸ್ಯೆ ಕಗ್ಗಂಟಾಗಿದೆ. ಭ್ರಷ್ಟಾಚಾರದಲ್ಲಿ ಭಾರತ ಇಂದಿಗೂ ಎತ್ತಿದ ಕೈ ಎಂಬುದು ಜಗಜ್ಜಾಹೀರಾಗಿದೆ.
ದೇಶ ಇಂತಹ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿದೆ. ಇದೇ ಸಂದರ್ಭದಲ್ಲಿ ಹಿಂದುತ್ವದ ಮುಸುಕಿನಲ್ಲಿ ಮತಾಂಧ ಸಂಚಿನ ಸಂಘಟನೆಗಳ ಹಾವಳಿಯೂ ಹೆಚ್ಚುತ್ತಿದೆ. ಜಾತಿ ಕಲಹಗಳೂ, ಕೋಮು ಘರ್ಷಣೆಗಳೂ ದಿನಬೆಳಗಾದರೆ ಉಲ್ಬಣವಾಗುತ್ತಿರುವುದರಿಂದ ಅಶಾಂತಿ, ಅಸ್ಥಿರತೆ ವ್ಯಾಪಕವಾಗಿ ಬೆಳೆಯುತ್ತಿದೆ. ಸಂಪದ್ಭರಿತವೂ, ಉದ್ಯಮಗಳ ಕೇಂದ್ರವೂ ಆಗಿದ್ದ ಗುಜರಾತ್ ರಾಜ್ಯದಲ್ಲಿ ಇಂತಹ ವಿದ್ಯಮಾನ ಹೆಚ್ಚಾಗಿ ಕಂಡುಬಂದಿತ್ತು. ಈ ಗುಜರಾತ್ ಮಾದರಿ ಈಗ ಇಡೀ ದೇಶಾದ್ಯಂತ ಹರಡಿಕೊಂಡಿದೆ. ಈ ಕಠಿಣ ಸಂದರ್ಭದಲ್ಲಿ ದೇಶದ ನಿಜವಾದ ಅಭಿವೃದ್ಧಿಯ ಪ್ರಶ್ನೆಗಳನ್ನು ನಾವು ಮುನ್ನೆಲೆಗೆ ತರುವಂತಾಗಬೇಕು. ಆಶಾದಾಯಕ ಸಂಗತಿಯೆಂದರೆ, ಕ್ರಮೇಣ ಗುಜರಾತ್‍ನ ಜನತೆ ಎಚ್ಚೆತ್ತುಕೊಳ್ಳುತ್ತಿದ್ದಾರೆ; ಈ ಸಮಾಜಘಾತುಕ ಅಭಿವೃದ್ಧಿ ಮಾದರಿಯ ವಿರುದ್ಧ ದನಿಯೆತ್ತುತ್ತಿದ್ದಾರೆ. ಮೋದಿಯವರ ಹಿನ್ನಡೆ ಗುಜರಾತಿನಿಂದಲೇ ಅರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...