Homeಸಿನಿಮಾಸಿನಿ ಸುದ್ದಿಸಾಮಾಜಿಕ ದುರಂತದ ವಿಡಂಬನೆಯಸಿನಿಕಾರ ಪೀಟರ್ ಬಾಷೋ.

ಸಾಮಾಜಿಕ ದುರಂತದ ವಿಡಂಬನೆಯಸಿನಿಕಾರ ಪೀಟರ್ ಬಾಷೋ.

- Advertisement -
- Advertisement -

ರಾಜಶೇಖರ್ ಅಕ್ಕಿ |

ರಷಿಯಾದ ಒಂದು ಗ್ರಾಮ, ಆಗತಾನೆ ಕ್ರಾಂತಿಯಾಗಿದೆ. ಮಹಾಯುದ್ಧದ ಪರಿಣಾಮಗಳು ಇನ್ನೂ ಕಾಣಿಸಿಕೊಳ್ಳುತ್ತಿವೆ. ಅಂತಹದ್ದರಲ್ಲಿ ಒಂದು ಗೂಡ್ಸ್ ರೈಲಿನಿಂದ ಪರಾನ್ಯಾ ಎನ್ನುವ ಹೆಣ್ಣುಮಗಳು ಬಂದಿಳಿಯುತ್ತಾಳೆ. ಗೋಣಿಚೀಲವನ್ನೇ ಉಡುಪಾಗಿ ಧರಿಸಿದ ಅವಳು ಮಾನಸಿಕವಾಗಿ ಅಸ್ವಸ್ಥ ಎನ್ನುವುದು ಅವಳ ವರ್ತನೆಗಳಿಂದ ಸ್ಪಷ್ಟವಾಗುತ್ತದೆ. ಜೋಕ್ರ್ಯಾ ಎನ್ನುವ ವ್ಯಕ್ತಿ ತನ್ನ ಕುದುರೆಯನ್ನು ಕಳೆದುಕೊಂಡು, ಹೊಸ ಸೋಷಲಿಸ್ಟ್ ಆಳ್ವಕೆಗೆ ಹೊಂದಿಕೊಳ್ಳದೇ ಸ್ಥಳೀಯ ಕೆಫೆಯಲ್ಲಿ ಕಾಲಹರಣ ಮಾಡುತ್ತಿರುತ್ತಾನೆ. ಪರಾನ್ಯಾ ಹೇಗೋ ಆ ಹಳ್ಳಿಯವಳಾಗುತ್ತಾಳೆ. ಅಲ್ಲಿಯ ಪಡ್ಡೆ ಹುಡುಗರಿಗೆ ಅವಳನ್ನು ಪೀಡಿಸುವುದೇ ಒಂದು ಕೆಲಸ. ಒಂದು ದಿನ ಕಿರುಕುಳದಿಂದ ಪಾರಾಗಲು ಓಡುತ್ತ ಹೋಗಿ ಸ್ಟ್ಯಾಲಿನ್‍ನ ಪ್ರತಿಮೆಯೊಂದರ ಪಕ್ಕಕ್ಕೆ ನಿಂತುಕೊಳ್ಳುತ್ತಾಳೆ. ಜನರ ಒಂದು ಗುಂಪೇ ಬಂದು ತಮಾಷೆ ನೋಡುತ್ತಿದೆ. ಅಷ್ಟರಲ್ಲಿ ಪುಟ್ಟಹುಡುಗಿಯೊಬ್ಬಳು ಅವಳನ್ನು ‘ಸ್ಟಾಲಿನ್‍ನ ಹೆಂಡತಿ’ ಎಂದು ಕರೆದುಬಿಡುತ್ತಾಳೆ. ಅಲ್ಲಿಂದ ಪ್ರಾರಂಭವಾಗುವುದು ಅವಳ ನರಕಯಾತನೆ. ಅಧಿಕಾರಿಗಳು ಅವಳೊಬ್ಬ ಗೂಢಚಾರಿ ಎನ್ನುವ ಸಂಶಯದ ಮೇಲೆ ಬಂಧಿಸಿ ಚಿತ್ರಹಿಂಸೆ ನೀಡುತ್ತಾರೆ. ಆದರೆ ಅವಳಿಂದ ಯಾವ ಮಾಹಿತಿಯೂ ಹೊರಬರುವುದಿಲ್ಲ ಆಗ ಅವಳನ್ನು ಬಿಡುಗಡೆ ಮಾಡಿ, ಅವಳ ಚಲನವಲನಗಳಿಂದ ಮಾಹಿತಿ ಸಿಗಬಹುದು ಎನ್ನುವ ಲೆಕ್ಕಾಚಾರದ ಮೇಲೆ ಅವಳ ಮೇಲೆ ಕಣ್ಣಿಟ್ಟಿರುತ್ತಾರೆ. ಹಿತ್ರಹಿಂಸೆಯನ್ನು ಅನುಭವಿಸಿದ ಪರಾನ್ಯಾಳ ಮಾನಸಿಕ ಸ್ಥಿಮಿತ ಇನ್ನಷ್ಟು ಹದಗೆಟ್ಟಿ, ತನಗೆ ಚಿತ್ರಹಿಂಸೆ ನೀಡಿದಾಗ ಪದೇ ಪದೇ ಕೇಳಿದ ಪದಗಳಾದ ‘ಗೂಢಚಾರ’ ‘ದೇಶದ್ರೋಹಿ’ ಎಂದು ಕಂಡಕಂಡವರನ್ನು ನೋಡಿ ಕರೆಯತೊಡಗುತ್ತಾಳೆ. ಅವಳು ಹೆಸರಿಸಿದ ವ್ಯಕ್ತಿಗಳನ್ನು ಪೊಲೀಸರು ಬಂಧಿಸತೊಡಗಿದಾಗ ಇಡೀ ಊರೇ ಪ್ರಕ್ಷುಬ್ದಗೊಳ್ಳುತ್ತದೆ. ಆಗ ಏನಾದರೂ ಮಾಡಲೇಬೇಕು ಎನ್ನುವ ಸ್ಥಿತಿಗೆ ಬಂದುನಿಂತ ಊರಲ್ಲಿ ಜೋಕ್ರ್ಯಾ ಮಾತ್ರ ಈ ಸಮಸ್ಯೆಯನ್ನು ಪರಿಹರಿಸಬಲ್ಲ.

ಇದು ಹಂಗೇರಿಯದ ಚಿತ್ರನಿರ್ದೇಶಕ ಪೀಟರ್ ಬಾಷೋ 1990 ರಲ್ಲಿ ನಿರ್ದೇಶಿಸಿದ ‘ಸ್ಟ್ಯಾಲಿನ್’ಸ್ ಬ್ರೈಡ್’ ಎನ್ನುವ ಚಿತ್ರದ ಸಾರಾಂಶ.

ಒಂದು ಕಛೇರಿಯಲ್ಲಿ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬಳ ನರ್ವಸ್ ಬ್ರೆಕ್‍ಡೌನ್ ಆಗಿ, ತನ್ನೆಲ್ಲ ಬಟ್ಟೆಗಳನ್ನು ಕಳಚಿ ಬೆತ್ತಲೆಯಾಗಿ ರಸ್ತೆಯಲ್ಲಿ ನಡೆಯತೊಡುತ್ತಾಳೆ. ತನ್ನಪಾಡಿಗೆ ತಾನು ಆಸ್ಪತ್ರೆಗೆ ಹೋಗುತ್ತಿದ್ದ ಯುವವೈದ್ಯನೊಬ್ಬ ಇವಳನ್ನು ನೋಡಿ ತನ್ನ ಓವರ್‍ಕೋಟನ್ನು ಅವಳಿಗೆ ಧರಿಸುತ್ತಾನೆ. ತಾನು ಮಾಡಿದ ಈ ಪುಟ್ಟ ಕ್ರಿಯೆಯಿಂದ ಆಗುವ ಪರಿಣಾಮಗಳ ಯಾವುದೇ ಅರಿವಿಲ್ಲದೇ ಆ ವೈದ್ಯ ಮುಂದೆ ಸಾಗುತ್ತಾನೆ. ಆದರೆ ಅವನು ತನ್ನ ಓವರ್‍ಕೋಟನ್ನು ಆ ಬಡಪಾಯಿ ಹೆಣ್ಣುಮಗಳಿಗೆ ಕೊಟ್ಟ ಸ್ಥಳ ಆ ದೇಶದ ಆಳ್ವಿಕೆಯ ವಿರುದ್ಧ ಪ್ರತಿಭಟನೆ ಮಾಡುವವರ ತಾಣ. ಯುವವೈದ್ಯನ ಈ ಒಂದು ಪುಟ್ಟ ಕ್ರಿಯೆಯನ್ನೂ ಪ್ರತಿಭಟನೆಯ ಸಂಕೇತವೆಂದೇ ಅರ್ಥೈಸಿಕೊಳ್ಳುವ ಅಲ್ಲಿಯ ಅಧಿಕಾರಿಗಳು ಆ ವೈದ್ಯನನ್ನು ಬಂಧಿಸಿ, ತನಿಖೆಗೆ ಒಳಪಡಿಸುತ್ತಾರೆ. ಅಲ್ಲಿಂದ ಆ ವೈದ್ಯ ತನ್ನ ಜೀವನವನ್ನು ಹೊಸದಾಗಿ ಕಂಡಿಕೊಳ್ಳಬೇಕಾಗುತ್ತದೆ.

ಇದು ಪೀಟರ್ ಬಾಷೋ ಅವರ ‘ಬನಾನಾ ಸ್ಕಿನ್ ವಾಲ್ಟ್ಜ್’ (1987) ಚಿತ್ರದ ಸಾರಾಂಶ.

1928ರಲ್ಲಿ ಆಗಿನ ಚೆಕೊಸ್ಲೋವೇಕಿಯಾದಲ್ಲಿ ಹುಟ್ಟಿದ ಪೀಟರ್ ಬಾಷೋ, ಹಂಗರಿಯಾದ ಸಿನೆಮಾ ಮತ್ತು ನಾಟಕದ ಶಾಲೆಯಲ್ಲಿ ಪದವಿ ಪಡೆದುಕೊಂಡರು. ಎರಡನೇ ಮಹಾಯುದ್ಧದಲ್ಲಿ ಆದ ಸಾವು ನೋವುಗಳು, ಮಹಾಯುದ್ಧದ ನಂತರ ಹಂಗರಿ ದೇಶ ರಷಿಯಾದ ಸೆಟಲೈಟ್ ಸ್ಟೇಟ್ ಆಗಿ ಮುಂದುವರೆದದ್ದು, ಹೊಸ ಸಮಾಜವಾದಿ ವ್ಯವಸ್ಥೆಯ ಕಟ್ಟುನಿಟ್ಟುಗಳಿಗೆ ಸಾಕ್ಷಿಯಾಗಿದ್ದ ಪೀಟರ್ ಬಾಷೊ ಜೀವನದುದ್ದಕ್ಕೂ ಹೆಚ್ಚಾಗಿ ರಾಜಕೀಯ ಸಿನೆಮಾಗಳನ್ನೇ ಮಾಡಿದರು. 1969 ರಲ್ಲಿ ಅವರು ಮಾಡಿದ ಚಿತ್ರ ‘ದಿ ವಿಟ್ನೆಸ್’ನಲ್ಲಿ ಹಂಗರಿಯ ಕಮ್ಯುನಿಸ್ಟ್ ಕ್ರಾಂತಿಯಲ್ಲಿ ಭಾಗವಹಿಸಿದ್ದ ಒಬ್ಬ ವ್ಯಕ್ತಿ ತನ್ನ ಊರಿನ ಚರಂಡಿ, ನೀರಿನ ಹರಿವುಗಳ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾನೆ. ಅವನು ತನ್ನ ಮನೆಯಲ್ಲಿ ಅಡುಗೆಗಾಗಿ ಹಂದಿಯೊಂದನ್ನು ಕೊಯ್ಯುತ್ತಾನೆ. ಹಂಗರಿಯಲ್ಲಿ ಆಗ ಅದು ನಿಷಿದ್ಧ. ಯಾರಿಗೂ ಗೊತ್ತಾಗಬಾರದು ಎಂದು ಎಷ್ಟೇ ಲಕ್ಷ ವಹಿಸಿದ್ದರೂ ಅಧಿಕಾರಿಗಳ ಕೈಗೆ ಸಿಕ್ಕಿಹಾಕಿಕೊಳ್ಳುತ್ತಾನೆ. ಅವನನ್ನು ಬಂಧಿಸಿದ ನಂತರ ಶಿಕ್ಷೆಯಾಗುವ ಬದಲು ಬೇರೊಂದು ಊರಲ್ಲಿ ಉನ್ನತ ಕೆಲಸಕ್ಕೆ ನೇಮಿಸಲಾಗುತ್ತದೆ. ಏಕೆ ಎಂದು ಅವನಿಗೆ ತಿಳಿಯದು, ಒಂದು ಸಲ ನ್ಯಾಯಧೀಶನ ಮುಂದೆ ಬಂದು ನಿಲ್ಲಬೇಕಾದಲ್ಲಿ ತನ್ನ ಎಲ್ಲ ಸತ್ಯಗಳನ್ನು ಹೇಳಿಬಿಡುತ್ತಾನೆ. ಅದರಿಂದ ಅವನಿಗೆ ಮರಣದಂಡನೆ

ವಿಧಿಸಬೇಕೆಂದು ತೀರ್ಪು ಬರುತ್ತದೆ ಆದರೆ ಮರಣೆದಂಡನೆ ಜಾರಿಗೊಳ್ಳಬೇಕಾದ ಸಮಯದಲ್ಲಿಯೇ ರಾಜಕೀಯ ಪರಿಸ್ಥಿತಿ ಬದಲಾಯಿಸುತ್ತವೆ. ‘ದಿ ವಿಟ್ನೆಸ್’ ಎನ್ನುವ ಈ ಚಿತ್ರವನ್ನು ಆ ದೇಶದ ಸರಕಾರವೇ ನಿರ್ಮಿಸಿತ್ತು ಆದರೆ ಬಿಡುಗಡೆಯ ಮುಂಚೆಯೇ ಚಿತ್ರವನ್ನು ನಿಷೇಧಿಸಿತು. ಈ ಚಿತ್ರ ವಿದೇಶಗಳಲ್ಲಿ ಬಿಡುಗಡೆಯಾಗಿ ಪ್ರಸಿದ್ಧಿ ಮಾಡಿದ ನಂತರವೇ ಹಂಗೇರಿಯ ಕಮ್ಯನಿಸ್ಟ್ ಸರಕಾರ ನಿಷೇಧವನ್ನು ವಾಪಸ್ ತೆಗೆದುಕೊಂಡಿತು. ಬಾಷೋ ಅವರ ಚಿತ್ರಗಳಲ್ಲಿ ಕಮ್ಯನಿಸ್ಟ್ ಆಡಳಿತದ ಕೊರತೆಗಳನ್ನು ಪ್ರಶ್ನಿಸುತ್ತಾರೆಯೇ ಹೊರತು ಕಮ್ಯೂನಿಸಂ ಅನ್ನು ಅಲ್ಲ. ಹಾಗೂ ಅವರೆಲ್ಲ ಚಿತ್ರಗಳು ಎಷ್ಟೇ ಗಂಭೀರ ವಿಷಯಗಳನ್ನೆತ್ತಿಕೊಂಡರೂ ಚಿತ್ರದುದ್ದಕ್ಕೂ ಹಾಸ್ಯ, ದುರಂತದ ವಿಡಂಬನೆಯೇ ಎದ್ದುಕಾಣುತ್ತವೆ. ಕಮ್ಯನಿಸಂ ಬಗ್ಗೆ, ಅದರ ಇತಿಹಾಸದ ಬಗ್ಗೆ ಅನೇಕ ಅಧ್ಯಯನಗಳು ನಮಗೆ ಲಭ್ಯವಿವೆ ಆದರೆ ಕ್ರಾಂತಿಯ ನಂತರ ಅಲ್ಲಿಯ ಸಬ್‍ಆಲ್ಟರ್ನ್ ಇತಿಹಾಸದ ಬಗ್ಗೆ ತಿಳಿಯಬೇಕಾದರೆ ನಾವು ಸಾಹಿತ್ಯ, ಸಿನೆಮಾಗಳನ್ನೇ ನೆಚ್ಚಬೇಕಾಗುತ್ತದೆ. ಆ ನಿಟ್ಟಿನಲ್ಲಿ ಪೀಟರ್ ಬಾಷೋ ಮಹತ್ವದ ಚಿತ್ರ ಬರಹಗಾರ ಮತ್ತು ನಿರ್ದೇಶಕ.

ಸಿನೆಮಾ ನಿರ್ದೇಶನದ ಕೌಶಲ್ಯದ ಪ್ರಶ್ನೆ ಬಂದಾಗಲೂ ಪೀಟರ್ ಬಾಷೋ ನಂತಹ ನಿರ್ದೇಶಕರು ಗೆಲ್ಲುತ್ತಾರೆ ಎಂದು ನನಗನಿಸುತ್ತದೆ. ಏಕೆಂದರೆ ಅವರ ಚಿತ್ರಗಳಲ್ಲಿ ನಮಗೆ ಕಾಣಿಸುವುದು, ಮನಕ್ಕೆ ತಟ್ಟುವುದು ಆಯಾ ಕಥೆಗಳು, ಪಾತ್ರಗಳು, ಪಾತ್ರಗಳು ನೋವು ನಲಿವು ಅದರೊಂದಿಗೆ ಆಯಾ ಸಾಮಾಜಿಕ ಪರಿಸರದ ಚಿತ್ರಣ ಮತ್ತು ಅವರು ಕೇಳುವ ಪ್ರಶ್ನೆಗಳೇ ಹೊರತು ಎಲ್ಲಿಯೂ ನಮಗೆ ನಿರ್ದೇಶಕÀ ಅಥವಾ ಛಾಯಗ್ರಹಕÀ ಕಾಣಿಸಿಕೊಳ್ಳುವುದಿಲ್ಲ. ಒಂದು ಉತ್ತಮ ಚಿತ್ರದ ಕರುಹು ಇದೇ ತಾನೇ?

ವಿಶ್ವದ ಅಂಡರ್‍ರೇಟೆಡ್ ನಿರ್ದೇಶಕರಲ್ಲಿ ಒಬ್ಬರು ಎನ್ನಲಾಗುವ ಪೀಟರ್ ಬಾಷೋ ತಮ್ಮ ಚಲನಚಿತ್ರ ನಿರ್ದೇಶನದ ಸುಧೀರ್ಘ ಜೀವನವನ್ನು ಮುಗಿಸಿ 2009ರಲ್ಲಿ ತಮ್ಮ 81ನೇ ವಯಸ್ಸಿನಲ್ಲಿ ತೀರಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...