Homeಸಾಹಿತ್ಯ-ಸಂಸ್ಕೃತಿಕಥೆಪುರಾಣ ಮತ್ತು ವರ್ತಮಾನದ ಭೀಷ್ಮಂದಿರ ಹೋಲಿಕೆಗಳು !!!

ಪುರಾಣ ಮತ್ತು ವರ್ತಮಾನದ ಭೀಷ್ಮಂದಿರ ಹೋಲಿಕೆಗಳು !!!

- Advertisement -
- Advertisement -

| ಇಸ್ಮತ್ ಪಜೀರ್ |

ಭೀಷ್ಮ ಒಮ್ಮೆ ನಡೆದುಕೊಂಡು ಹೋಗುತ್ತಿರುವಾಗ ಆತನ ಊರುಗೋಲಿನಡಿಗೆ ಸಿಲುಕಿದ ಓತಿಕ್ಯಾತವೊಂದು ಅಪ್ಪಚ್ಚಿಯಾಗುತ್ತದೆ. ಹಾಗೆ ವಿಲವಿಲನೆ ಒದ್ದಾಡುತ್ತಿರುವ ಓತಿಕ್ಯಾತನ ಮೇಲೆ ಕಿಂಚಿತ್ತೂ ಕರುಣೆ ತೋರದೇ ಭೀಷ್ಮ ಅದನ್ನು ತನ್ನ ಊರಿಗೋಲಿನ ತುದಿಯಲ್ಲೇ ಎತ್ತಿ ಮುಳ್ಳಿನ ಗಿಡವೊಂದರ ಮೇಲೆ ಎಸೆಯುತ್ತಾನೆ. ಅಸಹಾಯಕ ಓತಿಕ್ಯಾತ ಭೀಷ್ಮ ನಿಗೆ ನೀನು ಶರಶಯ್ಯೆಯಲ್ಲೇ ಒದ್ದಾಡಿ ಪ್ರಾಣ ಬಿಡುವಂತಾಗಲಿ ಎಂದು ಶಾಪ ಹಾಕುತ್ತದೆ. ಓತಿಕ್ಯಾತನ ಶಾಪವೇ ಭೀಷ್ಮನಿಗೆ ಶರಶಯ್ಯೆಯ ಮರಣ ತಂದಿದೆ ಎಂಬುವುದೂ ಕನ್ನಡದ ಜನಪದರ ನಂಬುಗೆ.

ಮಹಾಭಾರತದ ಭೀಷ್ಮ ತನ್ನ ಶಿಷ್ಯಂದಿರ ಪಟ್ಟವನ್ನು ಖಾಯಂಗೊಳಿಸುವ ಕನಸ ಹೊತ್ತವನಾಗಿದ್ದರೆ…
ಬಿಜೆಪಿಯ ಭೀಷ್ಮ ಸ್ವತಃ ತಾನೇ ರಾಜನಾಗುವ ಕನಸು ಹೊತ್ತಿದ್ದವರು. ಮಹಾಭಾರತದ ಭೀಷ್ಮ ಹೇಗೆ ಕೊನೆಗೂ ತನ್ನ ಶಿಷ್ಯಂದಿರ ಪಟ್ಟ ಉಳಿಸಲು ಸಾಧ್ಯವಾಗಲಿಲ್ಲವೋ… ಹಾಗೆಯೇ ಬಿಜೆಪಿಯ ಭೀಷ್ಮನೂ ತನ್ನ ಕನಸನ್ನು ಸಾಕಾರಗೊಳಿಸಿ ಪಟ್ಟವೇರಲು ಸಾಧ್ಯವಾಗದಿದ್ದುದು ಪುರಾಣ ಮತ್ತು ವರ್ತಮಾನದ ಕ್ರೂರ ವ್ಯಂಗ್ಯವೇ ಸರಿ.

ಇದೀಗ‌ ಬಿಜೆಪಿಯ ಭೀಷ್ಮ ‌ಅಡ್ವಾಣಿಯದ್ದೂ‌ ಮಹಾಭಾರತದ ಭೀಷ್ಮನದ್ದೇ ಸ್ಥಿತಿ. ಇಂದು ಅಡ್ವಾಣಿ ಎಷ್ಟೇ‌‌ ಸುಭಗನಂತೆ ನಟಿಸಲಿ. ಅಡ್ವಾಣಿಗೆ ಅವರ ಪಾಪದ ಫಲ ದೊರೆಯುತ್ತಿದೆ ಎಂದಷ್ಟೇ ಇಂದಿನ‌ ಅವರ ದಯನೀಯ ಸ್ಥಿತಿಯನ್ನು ವಿಶ್ಲೇಷಿಸುವುದು ಹೆಚ್ಚು ಸೂಕ್ತ.

ಅಡ್ವಾಣಿ ತನ್ನ ರಾಜಕೀಯ ಏಳಿಗೆಗಾಗಿ ಮಾಡಿದ ಕೃತ್ಯಗಳು ಕಡಿಮೆ ಕ್ರೌರ್ಯಯದ್ದೇನಲ್ಲ. ಸ್ವತಃ ತಾನು ಕ್ರೌರ್ಯ ಮಾಡಿಸಿದ್ದಲ್ಲದೇ, ತನ್ನ ಶಿಷ್ಯಂದಿರಾದ ಕೌರವರು ಮಾಡಿದ ಕ್ರೌರ್ಯಕ್ಕೆ ಬೀಷ್ಮ ಮೌನಸಮ್ಮತಿ ನೀಡಿ ಒಳಗೊಳಗೇ ನಕ್ಕಂತೆ… ತನ್ನ ಶಿಷ್ಯಂದಿರಾದ ಮೋದಿ- ಶಾ ಜೋಡಿ ಗುಜರಾತಿನಲ್ಲಿ ಮಾಡಿದ ಅಮಾನವೀಯ ಬರ್ಬರ ಕೃತ್ಯಕ್ಕೆ ಇಂದು ತನ್ನ ರಾಜಕೀಯ ಬದುಕಿನ ಶರಶಯ್ಯೆಯಲ್ಲಿ ಮಲಗಿರುವ ಬಿಜೆಪಿಯ ಬೀಷ್ಮ ಪಿತಾಮಹ ಅಡ್ವಾಣಿ ಒಳಗೊಳಗೇ ನಗುತ್ತಾ ಮೌನ ಸಮ್ಮತಿ ನೀಡಿದ್ದು ಇತಿಹಾಸದ ಪುಟ ಸೇರುವಷ್ಟು ಹಳತಾಗಿಲ್ಲ.

ಮಹಾಭಾರತದ ಬೀಷ್ಮನಿಗೆ ಓತಿಕ್ಯಾತನ ಶಾಪವೆಂದು ಜನಪದರು ನಂಬಿದರೆ, ನಮ್ಮ ಕಾಲದ ರಾಜಕೀಯ ಬೀಷ್ಮನಿಗೆ ಎರಡೆರಡು ಶಾಪವಿದೆ. ಒಂದನೆಯದಾಗಿ ರಾಮ ಜನ್ಮ ಭೂಮಿಯ ಹೆಸರಲ್ಲಿ ದೇಶದ ಉದ್ದಗಲದ ಚರಂಡಿಗಳಲ್ಲಿ ಮಾನವ ರಕ್ತದ ಕೋಡಿ ಹರಿಸಿದ್ದರ ಶಾಪ. ಎರಡನೆಯದಾಗಿ ತನ್ನ ಶಿಷ್ಯಂದಿರ ಬರ್ಬರತೆಗೆ ಮೌನ ಸಮ್ಮತಿ ಸೂಚಿಸುತ್ತಾ, ಮಹಾಭಾರತದ ಭೀಷ್ಮ ಓತಿಕ್ಯಾತನ ಸಾವನ್ನು ಆನಂದಿಸಿದಂತೆ ಗುಜರಾತಿನ ಅಮಾಯಕ ಮುಸ್ಲಿಮರ ಸಾವನ್ನು ಆನಂದಿಸಿದುದರ ಶಾಪ.

ಮೊದಲನೆಯದಾಗಿ ನಮ್ಮ ತುಳನಾಡಿನ ಜನಪದರ ನಂಬಿಕೆಯಂತೆ ತಲೆಗೆ ಹಾಕಿದ ನೀರು ಕಾಲಿಗೆ ಬರಲೇಬೇಕು…
ಎರಡನೆಯದಾಗಿ ನಮ್ಮ ಕನ್ನಡದ ಗಾದೆಯಂತೆ ಮಾಡಿದ್ದುಣ್ಣೋ ಮಹರಾಯ.

ಬಿಜೆಪಿಯ ಭೀಷ್ಮನ ಈ ಸ್ಥಿತಿಗೆ ಇದಕ್ಕಿಂತ ಬೇರೆ ಕಾರಣ ಬೇಕೇ….?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...