Homeಸಾಹಿತ್ಯ-ಸಂಸ್ಕೃತಿಕಥೆಪುರಾಣ ಮತ್ತು ವರ್ತಮಾನದ ಭೀಷ್ಮಂದಿರ ಹೋಲಿಕೆಗಳು !!!

ಪುರಾಣ ಮತ್ತು ವರ್ತಮಾನದ ಭೀಷ್ಮಂದಿರ ಹೋಲಿಕೆಗಳು !!!

- Advertisement -
- Advertisement -

| ಇಸ್ಮತ್ ಪಜೀರ್ |

ಭೀಷ್ಮ ಒಮ್ಮೆ ನಡೆದುಕೊಂಡು ಹೋಗುತ್ತಿರುವಾಗ ಆತನ ಊರುಗೋಲಿನಡಿಗೆ ಸಿಲುಕಿದ ಓತಿಕ್ಯಾತವೊಂದು ಅಪ್ಪಚ್ಚಿಯಾಗುತ್ತದೆ. ಹಾಗೆ ವಿಲವಿಲನೆ ಒದ್ದಾಡುತ್ತಿರುವ ಓತಿಕ್ಯಾತನ ಮೇಲೆ ಕಿಂಚಿತ್ತೂ ಕರುಣೆ ತೋರದೇ ಭೀಷ್ಮ ಅದನ್ನು ತನ್ನ ಊರಿಗೋಲಿನ ತುದಿಯಲ್ಲೇ ಎತ್ತಿ ಮುಳ್ಳಿನ ಗಿಡವೊಂದರ ಮೇಲೆ ಎಸೆಯುತ್ತಾನೆ. ಅಸಹಾಯಕ ಓತಿಕ್ಯಾತ ಭೀಷ್ಮ ನಿಗೆ ನೀನು ಶರಶಯ್ಯೆಯಲ್ಲೇ ಒದ್ದಾಡಿ ಪ್ರಾಣ ಬಿಡುವಂತಾಗಲಿ ಎಂದು ಶಾಪ ಹಾಕುತ್ತದೆ. ಓತಿಕ್ಯಾತನ ಶಾಪವೇ ಭೀಷ್ಮನಿಗೆ ಶರಶಯ್ಯೆಯ ಮರಣ ತಂದಿದೆ ಎಂಬುವುದೂ ಕನ್ನಡದ ಜನಪದರ ನಂಬುಗೆ.

ಮಹಾಭಾರತದ ಭೀಷ್ಮ ತನ್ನ ಶಿಷ್ಯಂದಿರ ಪಟ್ಟವನ್ನು ಖಾಯಂಗೊಳಿಸುವ ಕನಸ ಹೊತ್ತವನಾಗಿದ್ದರೆ…
ಬಿಜೆಪಿಯ ಭೀಷ್ಮ ಸ್ವತಃ ತಾನೇ ರಾಜನಾಗುವ ಕನಸು ಹೊತ್ತಿದ್ದವರು. ಮಹಾಭಾರತದ ಭೀಷ್ಮ ಹೇಗೆ ಕೊನೆಗೂ ತನ್ನ ಶಿಷ್ಯಂದಿರ ಪಟ್ಟ ಉಳಿಸಲು ಸಾಧ್ಯವಾಗಲಿಲ್ಲವೋ… ಹಾಗೆಯೇ ಬಿಜೆಪಿಯ ಭೀಷ್ಮನೂ ತನ್ನ ಕನಸನ್ನು ಸಾಕಾರಗೊಳಿಸಿ ಪಟ್ಟವೇರಲು ಸಾಧ್ಯವಾಗದಿದ್ದುದು ಪುರಾಣ ಮತ್ತು ವರ್ತಮಾನದ ಕ್ರೂರ ವ್ಯಂಗ್ಯವೇ ಸರಿ.

ಇದೀಗ‌ ಬಿಜೆಪಿಯ ಭೀಷ್ಮ ‌ಅಡ್ವಾಣಿಯದ್ದೂ‌ ಮಹಾಭಾರತದ ಭೀಷ್ಮನದ್ದೇ ಸ್ಥಿತಿ. ಇಂದು ಅಡ್ವಾಣಿ ಎಷ್ಟೇ‌‌ ಸುಭಗನಂತೆ ನಟಿಸಲಿ. ಅಡ್ವಾಣಿಗೆ ಅವರ ಪಾಪದ ಫಲ ದೊರೆಯುತ್ತಿದೆ ಎಂದಷ್ಟೇ ಇಂದಿನ‌ ಅವರ ದಯನೀಯ ಸ್ಥಿತಿಯನ್ನು ವಿಶ್ಲೇಷಿಸುವುದು ಹೆಚ್ಚು ಸೂಕ್ತ.

ಅಡ್ವಾಣಿ ತನ್ನ ರಾಜಕೀಯ ಏಳಿಗೆಗಾಗಿ ಮಾಡಿದ ಕೃತ್ಯಗಳು ಕಡಿಮೆ ಕ್ರೌರ್ಯಯದ್ದೇನಲ್ಲ. ಸ್ವತಃ ತಾನು ಕ್ರೌರ್ಯ ಮಾಡಿಸಿದ್ದಲ್ಲದೇ, ತನ್ನ ಶಿಷ್ಯಂದಿರಾದ ಕೌರವರು ಮಾಡಿದ ಕ್ರೌರ್ಯಕ್ಕೆ ಬೀಷ್ಮ ಮೌನಸಮ್ಮತಿ ನೀಡಿ ಒಳಗೊಳಗೇ ನಕ್ಕಂತೆ… ತನ್ನ ಶಿಷ್ಯಂದಿರಾದ ಮೋದಿ- ಶಾ ಜೋಡಿ ಗುಜರಾತಿನಲ್ಲಿ ಮಾಡಿದ ಅಮಾನವೀಯ ಬರ್ಬರ ಕೃತ್ಯಕ್ಕೆ ಇಂದು ತನ್ನ ರಾಜಕೀಯ ಬದುಕಿನ ಶರಶಯ್ಯೆಯಲ್ಲಿ ಮಲಗಿರುವ ಬಿಜೆಪಿಯ ಬೀಷ್ಮ ಪಿತಾಮಹ ಅಡ್ವಾಣಿ ಒಳಗೊಳಗೇ ನಗುತ್ತಾ ಮೌನ ಸಮ್ಮತಿ ನೀಡಿದ್ದು ಇತಿಹಾಸದ ಪುಟ ಸೇರುವಷ್ಟು ಹಳತಾಗಿಲ್ಲ.

ಮಹಾಭಾರತದ ಬೀಷ್ಮನಿಗೆ ಓತಿಕ್ಯಾತನ ಶಾಪವೆಂದು ಜನಪದರು ನಂಬಿದರೆ, ನಮ್ಮ ಕಾಲದ ರಾಜಕೀಯ ಬೀಷ್ಮನಿಗೆ ಎರಡೆರಡು ಶಾಪವಿದೆ. ಒಂದನೆಯದಾಗಿ ರಾಮ ಜನ್ಮ ಭೂಮಿಯ ಹೆಸರಲ್ಲಿ ದೇಶದ ಉದ್ದಗಲದ ಚರಂಡಿಗಳಲ್ಲಿ ಮಾನವ ರಕ್ತದ ಕೋಡಿ ಹರಿಸಿದ್ದರ ಶಾಪ. ಎರಡನೆಯದಾಗಿ ತನ್ನ ಶಿಷ್ಯಂದಿರ ಬರ್ಬರತೆಗೆ ಮೌನ ಸಮ್ಮತಿ ಸೂಚಿಸುತ್ತಾ, ಮಹಾಭಾರತದ ಭೀಷ್ಮ ಓತಿಕ್ಯಾತನ ಸಾವನ್ನು ಆನಂದಿಸಿದಂತೆ ಗುಜರಾತಿನ ಅಮಾಯಕ ಮುಸ್ಲಿಮರ ಸಾವನ್ನು ಆನಂದಿಸಿದುದರ ಶಾಪ.

ಮೊದಲನೆಯದಾಗಿ ನಮ್ಮ ತುಳನಾಡಿನ ಜನಪದರ ನಂಬಿಕೆಯಂತೆ ತಲೆಗೆ ಹಾಕಿದ ನೀರು ಕಾಲಿಗೆ ಬರಲೇಬೇಕು…
ಎರಡನೆಯದಾಗಿ ನಮ್ಮ ಕನ್ನಡದ ಗಾದೆಯಂತೆ ಮಾಡಿದ್ದುಣ್ಣೋ ಮಹರಾಯ.

ಬಿಜೆಪಿಯ ಭೀಷ್ಮನ ಈ ಸ್ಥಿತಿಗೆ ಇದಕ್ಕಿಂತ ಬೇರೆ ಕಾರಣ ಬೇಕೇ….?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...