Homeಅಂಕಣಗಳುಪುಲ್ವಾಮಾ ಹತ್ಯಾಕಾಂಡಕ್ಕೆ ಮೋದಿಯ 'ಪಾಲಿಸಿ'ಯೇ ಕಾರಣ....

ಪುಲ್ವಾಮಾ ಹತ್ಯಾಕಾಂಡಕ್ಕೆ ಮೋದಿಯ ‘ಪಾಲಿಸಿ’ಯೇ ಕಾರಣ….

- Advertisement -
- Advertisement -

ಪಿ.ಕೆ. ಮಲ್ಲನಗೌಡರ್ |

ಪುಲ್ವಾಮಾ ಹತ್ಯಾಕಾಂಡ ಸಂಭವಿಸಲು ಮೂಲ ಕಾರಣ ಕಾಶ್ಮೀರದಲ್ಲಿ ಈ 5 ವರ್ಷಗಳಲ್ಲಿ ಬಿಕ್ಕಟ್ಟಿನ ಪರಿಸ್ಥಿತಿ ಉಲ್ಬಣವಾಗಿರುವುದು. ಇದಕ್ಕೆ ಮೋದಿ ಸರ್ಕಾರದ ನೀತಿಗಳೇ ಕಾರಣ. ಕಾಶ್ಮೀರ ಸಮಸ್ಯೆಗೆ ಮಿಲಿಟರಿ ಪರಿಹಾರವೊಂದೇ ಮಾರ್ಗ ಎಂಬ ಅದರ ಧೋರಣೆಯಿಂದಾಗಿ ಕಾಶೀರದಲ್ಲಿ ಇಂದು ಜನಜೀವನವೂ ಕಷ್ಟವಾಗಿದೆ.
ಫೆಬ್ರುವರಿ 5ರಂದು ಲೋಕಸಭೆಯಲ್ಲಿ ಮತ್ತು ಫೆಬ್ರುವರಿ 7ರಂದು ರಾಜ್ಯಸಭೆಯಲ್ಲಿ ಗೃಹ ಸಚಿವಾಲ ನೀಡಿದ ಅಂಕಿಅಂಶಗಳ ಪ್ರಕಾರ, 2014-18ರ ಅವಧಿಯಲ್ಲಿ ಸೈನಿಕರ ಹತ್ಯೆ, ನಾಗರಿಕರ ಹತ್ಯೆ ಪ್ರಮಾಣ ಏರಿಕೆಯಾಗಿದೆ. ಹಾಗೆಯೇ ಉಗ್ರ ನುಸುಳುವಿಕೆ ಪ್ರಮಾಣವೂ ಗೆಚ್ಚಿದೆ.

ಸೈನಿಕರ ಹತ್ಯೆ: ಶೇ. 93ರಷ್ಟು ಹೆಚ್ಚಳ!

ಮೋದಿ ಅವಧಿಯಲ್ಲಿ ಹೆಚ್ಚುತ್ತಿರುವ ಉಗ್ರರ ದಾಳಿಗಳು

ಕಳೆದ ಐದು ವರ್ಷಗಳ (2014-18) ಮೋದಿ ಅವಧಿಯಲ್ಲಿ ಕಾಶ್ಮೀರದಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಮೋದಿಯ ‘ಬಲಿಷ್ಠ ಸರ್ಕಾರ’ದ ಅವಧಿಯಲ್ಲಿ ಅಲ್ಲಿ ಸೈನಿಕರ ಹತ್ಯೆಯ ಪ್ರಮಾಣ ಶೇ. 93ರಷ್ಟು ಹೆಚ್ಚಿದೆ. ಉಗ್ರ ದಾಳಿಯ ಪ್ರಕರಣಗಳು ಶೇ. 173ರಷ್ಟು ಹೆಚ್ಚಿವೆ. ಆದರೆ ಇವತ್ತು ಪುಲ್ವಾಮಾದ ಬಗ್ಗೆ ತಲೆ ಕೆಡಿಸಿಕೊಂಡಿರುವ ಬಿಜೆಪಿಗರು ಮತ್ತು ಸೋಷಿಯಲ್ ಮೀಡಿಯಾದ ‘ಭಕ್ತರ’ ಕಣ್ಣಿಗೆ ದಿನವೂ ಕಾಶ್ಮೀರದಲ್ಲಿ ಹುತಾತ್ಮರಾಗುತ್ತಲೇ ಇರುವ ಒಬ್ಬಿಬ್ಬರು ಸೈನಿಕರ ಬಗ್ಗೆ ಎಂದೂ ತಲೆ ಕೆಡಿಸಿಕೊಂಡಿಲ್ಲ. ಈಗ ಚುನಾವಣೆ ಹತ್ತಿರ ಬಂದಿರುವುದರಿಂದ, ಪುಲ್ವಾಮಾ ಘಟನೆಯನ್ನು ಮುಂದು ಮಾಡಿ, ಕಾಶ್ಮೀರ ಸಮಸ್ಯೆಗೆ ಬಿಜೆಪಿ ಮಾತ್ರ, ಅದರಲ್ಲೂ ಮೋದಿ ಮಾತ್ರ ಉತ್ತರ ನೀಡಬಲ್ಲರು ಎಂಬಂತೆ ಬಿಂಬಿಸಲಾಗುತ್ತಿದೆ. ಆದರೆ ಇದೇ ಮೋದಿಯ ಅವಧಿಯಲ್ಲಿ ಕಾಶ್ಮೀರದಲ್ಲಿ ಸೈನಿಕರು ಮತ್ತು ನಾಗರಿಕರ ಹತ್ಯೆ ಸಂಖ್ಯೆ ಏರುತ್ತಲೇ ಬಂದಿದೆ.

ಇದೇ ಫೆಬ್ರುವರಿ 5ರಂದು ಲೋಕಸಭೆಯಲ್ಲಿ ಸರ್ಕಾರವೇ ನೀಡಿದ ಮಾಹಿತಿ-ಅಂಕಿಸಂಖ್ಯೆಯ ಪ್ರಕಾರ, 2014-18ರ ಅವಧಿಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಒಟ್ಟು 1,708 ಭಯೋತ್ಪಾದನಾ ಕೃತ್ಯಗಳು ನಡೆದಿವೆ. ಅಂದರೆ ತಿಂಗಳಿಗೆ ಸರಾಸರಿ 28 ಕೃತ್ಯಗಳು! ಆಗ ಮೋದಿಗೆ ಮತ್ತು ಅವರ ಭಕ್ತರಿಗೆ ಕಾಶ್ಮೀರ ನೆನಪೇ ಆಗಲಿಲ್ಲ! ಅಲ್ಲಿ ಮಿಲಿಟರಿಯನ್ನು ಇನ್ನಷ್ಟು ಹೆಚ್ಚಿಸಿ ಪರಿಸ್ಥಿತಿಯನ್ನು ಕೇಂದ್ರ ಇನ್ನಷ್ಟು ಹದಗೆಡಿಸಿತು.

ಮೋದಿ ಅವಧಿಯಲ್ಲಿ ಕಾಶ್ಮೀರದಲ್ಲಿ ಹತರಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳ

2018ರಲ್ಲಂತೂ ಅಲ್ಲಿ ಪ್ರತಿ ತಿಂಗಳು ಸರಾಸರಿ 15 ಭಯೋತ್ಪಾದನಾ ಕೃತ್ಯಗಳು ನಡೆದಿವೆ. ಸೈನಿಕರು ಹುತಾತ್ಮರಾಗುತ್ತಲೇ ಇದ್ದಾರೆ. ನಾಗರಿಕರೂ ಬಲಿಯಾಗುತ್ತಿದ್ದಾರೆ. ಭಯೋತ್ಪಾದಕರ ದಾಳಿ ಮತ್ತು ಸೇನೆಯ ಅಟ್ಟಹಾಸ ಎರಡರ ನಡುವೆ ಸಿಕ್ಕಿರುವ ಅಲ್ಲಿಯ ಸಾಮಾನ್ಯ ನಾಗರಿಕರ ಬಗ್ಗೆ ವೇಷಭಕ್ತರು ಎಂದೂ ಯೋಚಿಸಲೇ ಇಲ್ಲವಲ್ಲ? ಮೋದಿ ಅವಧಿಯಲ್ಲಿ ಭಯೋತ್ಪಾದನಾ ಕೃತ್ಯ ಮತ್ತು ಸೇನೆಯ ಕ್ರಮಗಳಿಂದ ಪ್ರತಿವರ್ಷವೂ ನೂರಾರು ನಾಗರಿಕರು ಜೀವ ಕಳೆದುಕೊಂಡಿದ್ದಾರೆ. ಈ ಅಮಾಯಕರ ಸಾವುಗಳ ಬಗ್ಗೆ ಸಂತಾಪ ಇರದವನಿಗೆ ಮೊನ್ನೆ ಹುತಾತ್ಮರಾದ ಸೈನಿಕರ ಬಗ್ಗೆ ಸಂತಾಪ ಮಿಡಿಯುವ ಯಾವ ಹಕ್ಕೂ ಇಲ್ಲ. ಅಷ್ಟಕ್ಕೂ ಈಗ ಸೈನಿಕರ ಹೆಸರಲ್ಲಿ ಇವರೆಲ್ಲ ಮೊಸಳೆ ಕಣ್ಣೀರು ಹಾಕುತ್ತಲೇ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟವರು. ಮೋದಿ ಅವಧಿಯಲ್ಲಿ (2014-18) ಕಾಶ್ಮೀರದಲ್ಲಿ ಒಟ್ಟು 339 ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಅಂದರೆ ಸೈನಿಕರ ಹತ್ಯೆಯ ಪ್ರಮಾಣ ಶೇ. 93ರಷ್ಟು ಹೆಚ್ಚಿದೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ.
ಹಾಗಾದರೆ ಈ ಅವಧಿಯಲ್ಲಿ ಮೋದಿ ಏನೂ ಕ್ರಮ ಕೈಗೊಳ್ಳಲಿಲ್ಲವೇಕೆ? ರಾಜಕೀಯ ಸಮಸ್ಯೆಗೆ ಮಿಲಿಟರಿ ಪರಿಹಾರವೊಂದೇ ದಾರಿ ಎಂದು ಹೊರಟಾಗ ಇಂಥದ್ದೆಲ್ಲ ಸಂಭವಿಸುತ್ತದೆ ಎಂಬುದು ಜಗತ್ತಿನ ಹಲವಾರು ಕಡೆ ಪ್ರೂವ್ ಆಗಿದೆ. ಹಾಗಿದ್ದೂ ಇವತ್ತು ಮತ್ತೆ ಮಿಲಿಟರಿ ಕ್ರಮ ಮಾತ್ರದಿಂದಲೇ ಪರಿಹಾರ ಎಂಬಂತೆ ಕೆಲವು ಮೂರ್ಖ ಆ್ಯಂಕರ್‌ಗಳು, ಸಾವಿರಾರು ನೆಟ್ಟಿಗರು ಅರಚುತ್ತಿದ್ದಾರೆ. ಇವರೆಲ್ಲರಿಗೆ ದೇಶಭಕ್ತಿ ಎಂದರೇನೇ ಕೊಲ್ಲುವ ಆಟ, ಆದರೆ ತಾವು ಮಾತ್ರ ಸೇಫ್ ಆಗಿರಬೇಕು.

ಉಗ್ರರ ನುಸುಳುವಿಕೆಯಲ್ಲೂ ಹೆಚ್ಚಳ

2016-18 ಅವಧಿಯಲ್ಲಿ ಹೆಚ್ಚಿರುವ ಉಗ್ರರ ನುಸುಳುವಿಕೆ ಪ್ರಮಾಣ

ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ಇದೇ ನರೇಂದ್ರ ಮೋದಿಯವರು ಭಯೋತ್ಪಾದನಾ ಕೃತ್ಯ ಖಂಡಿಸುತ್ತ, “ದೇಶದ ಪ್ರಧಾನಿ ಏನು ಮಾಡುತ್ತಿದ್ದಾರೆ? ಅವರ ಬಳಿ ಬಿಎಸ್‌ಎಫ್ ಇದೆ, ಸಿಆರ್‌ಪಿಎಫ್ ಇದೆ….ಹೀಗಿರುವಾಗ ಉಗ್ರು ಗಡಿ ದಾಟಿ ನುಸುಳಿ ಬರಲು ಹೇಗೆ ಸಾಧ್ಯವಾಯಿತು” ಎಂದೆಲ್ಲ ಧೀರೋದ್ಧಾತ ಭಾಷಣ ಮಾಡುತ್ತಿದ್ದರು. ಈಗ ಲೋಕಸಭೆ ಮತ್ತು ರಾಜ್ಯಸಭೆಗೆ ಗೃಹ ಇಲಾಖೆಯೇ ನೀಡಿದ ಅಂಕಿಅಂಶಗಳ ಪ್ರಕಾರ ಉಗ್ರ ನುಸುಳುವಿಕೆ ಈಗ ಹಿಂದೆಂದಿಗಿಂತ ಹೆಚ್ಚಾಗಿದೆ. ಪುಲ್ವಾಮಾ ದುರಂತ ನಡೆಯುವ ವಾರ ಮೊದಲಷ್ಟೇ ಈ ಅಂಕಿಅಂಶಗಳು ಹೊರಬಿದ್ದಿವೆ. ಹಾಗಾದರೆ 5 ವರ್ಷ ಈ 56 ಇಂಚಿನ ಮೋದಿ ಏನು ಮಾಡುತ್ತಿದ್ದರು? ಗೃಹ ಇಲಾಖೆಯ ಮಾಹಿತಿ ಪ್ರಕಾರ, 2016-18ರ ಅವಧಿಯಲ್ಲಿ 400ಕ್ಕೂ ಹೆಚ್ಚು ಭಯೋತ್ಪಾದಕರು ಪಾಕಿಸ್ತಾನದಿಂದ ಕಾಶ್ಮೀರಕ್ಕೆ ನುಸುಳಿದ್ದಾರೆ ಎಂಬ ಶಂಖೆಗಳಿವೆ. ಅಂದರೆ ಈ ಮೂರು ವರ್ಷದ ಅವಧಿಯಲ್ಲಿ ತಿಂಗಳಿಗೆ ಸರಾಸರಿ 11 ಉಗ್ರರು ಕಾಶ್ಮೀರದೊಳಕ್ಕೆ ನುಸುಳುತ್ತಿದ್ದಾರೆ. ರಕ್ಷಣಾ ಸಚಿವರನ್ನು ಡಮ್ಮಿ ಮಾಡಿ, ವಿದೇಶಾಂಗ ಸಚಿವಾಲಯವನ್ನು ಮೂಕಪ್ರೇಕ್ಷಕನಂತೆ ಕೂಡಿಸಿ, ಎಲ್ಲವನ್ನೂ ಪ್ರಧಾನಿ ಕಾರ್ಯಾಲಯವೇ ನಿಯಂತ್ರಿಸಲು ಹೋದದ್ದರ ಫಲವಿದು. ಇದರ ಪರಿಣಾಮವಾಗಿ ನಮ್ಮ ಸೈನಿಕರು ಜೀವ ಕಳೆದುಕೊಳ್ಳುತ್ತಲೇ ಇದ್ದಾರೆ. ದಿನವೂ ಹುತಾತ್ಮರಾಗುವ ಸೈನಿಕರ ಬಗ್ಗೆ ಎಂದೂ ಸಂತಾಪ ವ್ಯಕ್ತಪಡಿಸಿದವರು ಈಗ ಚುನಾವಣೆ ಹತ್ತಿರ ಬಂದ ಪರಿಣಾಮವಾಗಿ ಸೈನಿಕರ ಪರವಾಗಿ ಶೋಕಿಸುವ ನಾಟಕ ಆಡುತ್ತಿದ್ದಾರೆ.
ನೋಟು ಅಮಾನ್ಯೀ ನಂತರ ಉಗ್ರರ ಬೆನ್ನೆಲುಬು ಮುರಿಯಲಾಗಿದೆ ಎಂದು ಆಗಾಗ ಪ್ರಧಾನಿ ಮತ್ತು ಅವರ ಸಚಿವ ಸಂಪುಟದ ಸಹೋದ್ಯೋಗಿಗಳು ಸುಳ್ಳನ್ನು ಹೇಳುತ್ತಲೇ ಬಂದಿದ್ದಾರೆ. ಸರ್ಕಾರವೇ ಹೇಳಿದ ಪ್ರಕಾರ, 2018 ಜೂನ್ ತಿಂಗಳು ಒಂದರಲ್ಲೇ 38 ಉಗ್ರರು ಕಾಶ್ಮೀರದೊಳಕ್ಕೆ ನುಸುಳಿದ್ದಾರೆ ಎಂಬ ಸಂಶಯ ಇದೆ. ಇದೆಲ್ಲ ಗೊತ್ತಿದ್ದೂ ಕ್ರಮ ಕೈಗೊಳ್ಳದ ಮೋದಿ ಮತ್ತು ಅವರ ಸರ್ಕಾರವೇ ಈಗ ಪುಲ್ವಾಮಾ ಸಾವುಗಳಿಗೆ ನೇರ ಕಾರಣವಾಗಿದೆ.

Stratergical, policy ವಿಷಯವನ್ನು ಕೇವಲ ಮಿಲಿಟರಿ ನೆಲೆಯಲ್ಲಿ ಯೋಚಿಸುವ ಹುಂಬತನಕ್ಕೆ ಬಡ ಕುಟುಂಬಗಳಿಂದ ನಮ್ಮ ಸೈನಿಕರು ಪ್ರಾಣ ತೆರುತ್ತಿದ್ದಾರೆ. ಅರ್ನಾಬ್‌ಗಳು, ರಂಗ-ಇತ್ಯಾದಿಗಳು ಯುದ್ಧ ಎಂದು ಅರಚುತ್ತಿದ್ದರೆ, ಜಾಲತಾಣಗಳಲ್ಲಿ ಇತಿಹಾಸದ ಅರಿವೇ ಇಲ್ಲದವರು ಬಿಜೆಪಿಗೆ ಲಾಭ ಆಗುವಂತೆ ತಮ್ಮ ನಕಲಿ ದೇಶಪ್ರೇಮವನ್ನು ಹರಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...