Homeಸಾಹಿತ್ಯ-ಸಂಸ್ಕೃತಿಪುಸ್ತಕ ವಿಮರ್ಶೆಓಡಿ ಹೋದ ಹುಡುಗ ಮರಳಿ ಬಂದ ಕಥೆ

ಓಡಿ ಹೋದ ಹುಡುಗ ಮರಳಿ ಬಂದ ಕಥೆ

‘ಓಡಿ ಹೋದ ಹುಡುಗ’ ಇದು ಅಭಿನವ ಪ್ರಕಾಶನ ಪ್ರಕಟಿಸಿರುವ ಕತೆಗಾರ ಬಸು ಬೇವಿನಗಿಡದ ಅವರ ಮಕ್ಕಳ ಕಾದಂಬರಿ.

- Advertisement -
| ಡಾ.ಎಸ್.ಬಿ.ಜೋಗುರ |
‘ಓಡಿ ಹೋದ ಹುಡುಗ’ ಇದು ಅಭಿನವ ಪ್ರಕಾಶನ ಪ್ರಕಟಿಸಿರುವ ಕತೆಗಾರ ಬಸು ಬೇವಿನಗಿಡದ ಅವರ  ಮಕ್ಕಳ ಕಾದಂಬರಿ. ಈ ಕಾದಂಬರಿಯ ಬಹುತೇಕ ಪಾತ್ರಗಳು ಮಲ್ಲೂರಲ್ಲಿ ಸುತ್ತಿ ಸುಳಿಯುತ್ತವೆ. ಈ ಕಾದಂಬರಿಯನ್ನು ಓದತೊಡಗಿದಾಗ ಓದುಗರಿಗೆ ತಮ್ಮ ತಮ್ಮ ಬಾಲ್ಯದ ಸ್ವಚ್ಚಂದ ಮನದ ಸುಳಿದಾಟವನ್ನು ನೆನಪಿಸಿಕೊಡುವ ಜೊತೆಗೆ, ಗಜ್ಯಾ ಎಂಬ ಬಾಲಕನ ಮೂಲಕ ಇಡೀ ಊರನ್ನು ನಿದ್ದೆಯಿಂದೆಬ್ಬಿಸಿ ಚಟುವಟಿಕೆಗೆ ನೂಕುವ ಕ್ರಿಯಾಶೀಲತೆಯಂತೆ ಕಾದಂಬರಿಕಾರರು ಗಜ್ಯಾ ಪಾತ್ರವನ್ನು ಸೃಷ್ಟಿಸಿದ್ದಾರೆ. ಹಾಗೆ ನೋಡಿದರೆ ಈ ಕಾದಂಬರಿಯಲ್ಲಿ ಹೊಸತೇನೂ ಮಹತ್ತರವಾಗಿ ಚಿತ್ರಿಸಲಾಗದಿದ್ದರೂ ಮಕ್ಕಳ ಕಾದಂಬರಿಗೆ ತಕ್ಕುದಾದ ಸಕಲ ಸಾಮಗ್ರಿಯನ್ನು ಮೈಗೂಡಿಸಿಕೊಂಡು ಕಾದಂಬರಿ ಮುಂದೆ ಸಾಗುತ್ತದೆ. ಕಾದಂಬರಿಯ ಆರಂಭದಲ್ಲಿ ಕೊಂಚ ಸಾವಧಾನ ಮತ್ತು ಜಡವೆನಿಸುವ ವಿವರಗಳಿವೆಯಾದರೂ ಕ್ರಮೇಣವಾಗಿ ತನ್ನದೇಯಾದ ವಿಶಿಷ್ಟ ಜಾಡಿನಲ್ಲಿ ಮುಂದೆ ಸಾಗುತ್ತದೆ. ಗಜ್ಯಾ ಈ ಕಾದಂಬರಿಯ ನಾಯಕ. ಚಿಕ್ಕ ವಯಸ್ಸಿನಲ್ಲಿಯೇ ಕುಳಿತುಂಡು ಕೆಡಬಾರದು ಎನ್ನುವ ಧೋರಣೆಯನ್ನು ಮೈಗೂಡಿಸಿಕೊಂಡಂತೆ ಬದುಕಿದ ಈ ಗಜ್ಯಾ ಊರಿನ ಅನೇಕರಿಗೆ ಮಾದರಿಯಾಗಿರುವಂತೆ ಉಡಾಳನಾಗಿಯೂ ಗುರುತಿಸಿಕೊಂಡವನು. ಗಜ್ಯಾ ಮತ್ತು ಅವನ ಸ್ನೇಹಿತರಲ್ಲಿ ಆ ವಯಸ್ಸಿಗೆ ತಕ್ಕಂತ ಸಹಜವಾಗಿರಬಹುದಾದ ಹುಡುಗ ಬುದ್ಧ್ಢಿಯ ಗುಣಗಳೂ ಇವೆ. ಎಲ್ಲ ಕಾಲಗಳಲ್ಲಿ ಎಲ್ಲ ಮಕ್ಕಳಲ್ಲಿ ವ್ಯಾಪಕವಾಗಿ ಕಾಣಬಹುದಾದ ಗುಣಗಳವು.
ಒಬ್ಬರನ್ನೊಬ್ಬರು ದೂರುವ ದ್ವೇಷಿಸುವ, ಮತ್ತೆ ಒಂದುಗೂಡುವ, ಕೂಡಿ ಕದಿಯುವ, ತಿನ್ನುವ, ಸೇಡಿಗಾಗಿ ಹೂಂಕರಿಸುವ ಇಂಥಾ ಹತ್ತಾರು ವಕ್ರಗುಣಂಗಣ ಪಟಾಲಮ್ಮಿನಂತಿರುವ ಆ ಹುಡುಗರು ಹಾಗಾಗಲು ಕಾರಣ ಆ ಆಲದ ಮರದ ಕೆಳಗೆ ವಾಸವಾಗಿರುವ ಅಜ್ಜ ಎನ್ನುವುದು ಹೆತ್ತವರ ದೂರುವಿಕೆ. ಗಜ್ಯಾ ಆಟವಾಡುವ ವಯಸ್ಸಿನಲ್ಲಿಯೇ ಹೊಣೆಗಾರಿಕೆಯನ್ನು ಹೆಗಲಿಗೇರಿಸಿಕೊಂಡು ತಾನು ಶಾಲೆ ಕಲಿಯದಿದ್ದರೂ ತನ್ನ ತಂಗಿಯನ್ನು ಓದಿಸಬೇಕೆಂದು ದುಡಿಯುವ ಅವನ ಗುಣವನ್ನು ಊರಿನ ಅನೇಕರು ಕೊಂಡಾಡುವ ಜೊತೆಗೆ ದಾರಿ ತಪ್ಪಿದ ಮಕ್ಕಳಿಗೆ ಗಜ್ಯಾನನ್ನು ಉದಾಹರಣೆಯಾಗಿ ಕೊಡುವಷ್ಟರ ಮಟ್ಟಿಗೆ ಮಲ್ಲೂರಿನ ಅನೇಕರಿಗೆ ಗಜ್ಯಾ ಇಷ್ಟವಾಗುತ್ತಿದ್ದ. ಗಜ್ಯಾ ಮತ್ತು ಅವನ ಸೈಕಲ್ ಇಡೀ ಮಲ್ಲೂರಿನ ಚಟುವಟಿಕೆಯ ಸಂಕೇತಗಳಾಗಿದ್ದವು. ಆತನ ಸೈಕಲ್ ಬೆಲ್ ಜಾಗೃತಿಯ ಸಂಕೇತದಂತೆ ಬಳಕೆಯಾಗುವದಿತ್ತು. ಕಾದಂಬರಿಕಾರ ಕಾಲನ ಓಟವನ್ನು ಸೈಕಲ್ ಜೊತೆಗೆ ಮತ್ತು ಅದರ ಗಂಟೆಯನ್ನು ಕಾಲ ಸರಿಯುವ ಎಚ್ಚರದ ನಾದವಾಗಿ ಬಳಸಿರುವುದು ಗಮನಾರ್ಹವಾದುದು. ಓಡಿ ಹೋದ ಹುಡುಗ ಇಲ್ಲಿ ಬೇರೆ ಯಾರೂ ಅಲ್ಲ ಆ ಸೈಕಲ್ ಸವಾರ ಗಜ್ಯಾ. ಆತ ದಿಕ್ಕು ದೆಸೆಯಿಲ್ಲದೇ ಓಡಿ ಹೋದವನಲ್ಲ, ಬದುಕನ್ನು ರೂಪಿಸಿಕೊಳ್ಳಲು ಹೋದವನು. ಸಿನೇಮಾ ಒಂದರಲ್ಲಿ ನಟಿಸುವ ಅವಕಾಶ ಸಿಕ್ಕ ಕಾರಣದಿಂದ ಕರೀಕಟ್ಟೆ ಮಾಸ್ತರರ ಜೊತೆಗೆ ಹೋಗಿ ಸಿನೇಮಾದಲ್ಲಿ ಪಾತ್ರ ನಿರ್ವಹಿಸಿ ಮರಳಿ ಬರುವಷ್ಟರಲ್ಲಿ ಮಲ್ಲೂರಿನ ಪಾಲಿಗೆ, ಗಜ್ಯಾನ ಜೊತೆಗಾರರಿಗೆ ಆತ ಓಡಿ ಹೋದ ಹುಡುಗನಾಗಿರುತ್ತಾನೆ. ಗಜ್ಯಾ ದಿನಾಲು ಊರಲ್ಲಿ ಸುತ್ತಿ ಸುಳಿಯುವಾಗ ಕಾಣದ ಅವನ ಹರಕತ್ತು ಒಂದೆರಡು ದಿನ ಅವನಿಲ್ಲದಿರುವಾಗ ಎದ್ದು ತೋರುವ ಜೊತೆಗೆ, ಅವನಿಗಾಗಿ ಇಡೀ ಊರಿನ ಬೆಟ್ಟ ಗುಡ್ಡಗಳನ್ನು ಹತ್ತಿ ಹುಡುಕುವ ರೀತಿಯಲ್ಲಿಯೇ ಓಡಿ ಹೋದ ಹುಡುಗನ ಪಾತ್ರದ ಹಿಕಮತ್ತು ಓದುಗನಿಗೆ ಮನದಟ್ಟಾಗುತ್ತದೆ.
ಇದು ಹೇಳೀ ಕೇಳೀ ಮಕ್ಕಳ ಕಾದಂಬರಿ. ಹೀಗಾಗಿ ಕಾದಂಬರಿಕಾರ ತಕ್ಕ ಮಟ್ಟಿಗೆ ಭಾಷೆಯನ್ನು ಸಡಿಲುಗೊಳಿಸಿ ಕತೆ ಹೇಳುತ್ತಾ ಹೋಗಿರುವದಿದೆ. ಜೊತೆಗೆ ಕತೆಯ ಹಂದರ ಜಾಳುಜಾಳಾಗದಂತೆ ಎಚ್ಚರವಹಿಸುವ ಜೊತೆಗೆ ಒಂದು ಮಕ್ಕಳ ಕಾದಂಬರಿಯ ಸೊಗಸಿಗೆ ಏನು ಸಾಮಗ್ರಿ ಬೇಕೋ ಅದೆಲ್ಲವನ್ನು ಒದಗಿಸಿಕೊಟ್ಟು ಕಾದಂಬರಿಗೆ ಪೂರಕವಾಗಿ ಸಲ್ಲಬಹುದಾದ ಹಿತಕರ ಪರಿಸರವನ್ನು ಕಾದಂಬರಿಕಾರ ಕಟ್ಟಿಕೊಟ್ಟಿದ್ದಾರೆ. ಈ ಕಾದಂಬರಿಯ ಭಾಷೆ, ವಸ್ತು, ತಂತ್ರ, ವಿನ್ಯಾಸ, ನಿರೂಪಣೆ ಎಲ್ಲವೂ ಮಕ್ಕಳ ಕಾದಂಬರಿಗೆ ಸಲ್ಲುವಂತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...