Homeಸಾಹಿತ್ಯ-ಸಂಸ್ಕೃತಿಪುಸ್ತಕ ವಿಮರ್ಶೆಓಡಿ ಹೋದ ಹುಡುಗ ಮರಳಿ ಬಂದ ಕಥೆ

ಓಡಿ ಹೋದ ಹುಡುಗ ಮರಳಿ ಬಂದ ಕಥೆ

‘ಓಡಿ ಹೋದ ಹುಡುಗ’ ಇದು ಅಭಿನವ ಪ್ರಕಾಶನ ಪ್ರಕಟಿಸಿರುವ ಕತೆಗಾರ ಬಸು ಬೇವಿನಗಿಡದ ಅವರ ಮಕ್ಕಳ ಕಾದಂಬರಿ.

- Advertisement -
| ಡಾ.ಎಸ್.ಬಿ.ಜೋಗುರ |
‘ಓಡಿ ಹೋದ ಹುಡುಗ’ ಇದು ಅಭಿನವ ಪ್ರಕಾಶನ ಪ್ರಕಟಿಸಿರುವ ಕತೆಗಾರ ಬಸು ಬೇವಿನಗಿಡದ ಅವರ  ಮಕ್ಕಳ ಕಾದಂಬರಿ. ಈ ಕಾದಂಬರಿಯ ಬಹುತೇಕ ಪಾತ್ರಗಳು ಮಲ್ಲೂರಲ್ಲಿ ಸುತ್ತಿ ಸುಳಿಯುತ್ತವೆ. ಈ ಕಾದಂಬರಿಯನ್ನು ಓದತೊಡಗಿದಾಗ ಓದುಗರಿಗೆ ತಮ್ಮ ತಮ್ಮ ಬಾಲ್ಯದ ಸ್ವಚ್ಚಂದ ಮನದ ಸುಳಿದಾಟವನ್ನು ನೆನಪಿಸಿಕೊಡುವ ಜೊತೆಗೆ, ಗಜ್ಯಾ ಎಂಬ ಬಾಲಕನ ಮೂಲಕ ಇಡೀ ಊರನ್ನು ನಿದ್ದೆಯಿಂದೆಬ್ಬಿಸಿ ಚಟುವಟಿಕೆಗೆ ನೂಕುವ ಕ್ರಿಯಾಶೀಲತೆಯಂತೆ ಕಾದಂಬರಿಕಾರರು ಗಜ್ಯಾ ಪಾತ್ರವನ್ನು ಸೃಷ್ಟಿಸಿದ್ದಾರೆ. ಹಾಗೆ ನೋಡಿದರೆ ಈ ಕಾದಂಬರಿಯಲ್ಲಿ ಹೊಸತೇನೂ ಮಹತ್ತರವಾಗಿ ಚಿತ್ರಿಸಲಾಗದಿದ್ದರೂ ಮಕ್ಕಳ ಕಾದಂಬರಿಗೆ ತಕ್ಕುದಾದ ಸಕಲ ಸಾಮಗ್ರಿಯನ್ನು ಮೈಗೂಡಿಸಿಕೊಂಡು ಕಾದಂಬರಿ ಮುಂದೆ ಸಾಗುತ್ತದೆ. ಕಾದಂಬರಿಯ ಆರಂಭದಲ್ಲಿ ಕೊಂಚ ಸಾವಧಾನ ಮತ್ತು ಜಡವೆನಿಸುವ ವಿವರಗಳಿವೆಯಾದರೂ ಕ್ರಮೇಣವಾಗಿ ತನ್ನದೇಯಾದ ವಿಶಿಷ್ಟ ಜಾಡಿನಲ್ಲಿ ಮುಂದೆ ಸಾಗುತ್ತದೆ. ಗಜ್ಯಾ ಈ ಕಾದಂಬರಿಯ ನಾಯಕ. ಚಿಕ್ಕ ವಯಸ್ಸಿನಲ್ಲಿಯೇ ಕುಳಿತುಂಡು ಕೆಡಬಾರದು ಎನ್ನುವ ಧೋರಣೆಯನ್ನು ಮೈಗೂಡಿಸಿಕೊಂಡಂತೆ ಬದುಕಿದ ಈ ಗಜ್ಯಾ ಊರಿನ ಅನೇಕರಿಗೆ ಮಾದರಿಯಾಗಿರುವಂತೆ ಉಡಾಳನಾಗಿಯೂ ಗುರುತಿಸಿಕೊಂಡವನು. ಗಜ್ಯಾ ಮತ್ತು ಅವನ ಸ್ನೇಹಿತರಲ್ಲಿ ಆ ವಯಸ್ಸಿಗೆ ತಕ್ಕಂತ ಸಹಜವಾಗಿರಬಹುದಾದ ಹುಡುಗ ಬುದ್ಧ್ಢಿಯ ಗುಣಗಳೂ ಇವೆ. ಎಲ್ಲ ಕಾಲಗಳಲ್ಲಿ ಎಲ್ಲ ಮಕ್ಕಳಲ್ಲಿ ವ್ಯಾಪಕವಾಗಿ ಕಾಣಬಹುದಾದ ಗುಣಗಳವು.
ಒಬ್ಬರನ್ನೊಬ್ಬರು ದೂರುವ ದ್ವೇಷಿಸುವ, ಮತ್ತೆ ಒಂದುಗೂಡುವ, ಕೂಡಿ ಕದಿಯುವ, ತಿನ್ನುವ, ಸೇಡಿಗಾಗಿ ಹೂಂಕರಿಸುವ ಇಂಥಾ ಹತ್ತಾರು ವಕ್ರಗುಣಂಗಣ ಪಟಾಲಮ್ಮಿನಂತಿರುವ ಆ ಹುಡುಗರು ಹಾಗಾಗಲು ಕಾರಣ ಆ ಆಲದ ಮರದ ಕೆಳಗೆ ವಾಸವಾಗಿರುವ ಅಜ್ಜ ಎನ್ನುವುದು ಹೆತ್ತವರ ದೂರುವಿಕೆ. ಗಜ್ಯಾ ಆಟವಾಡುವ ವಯಸ್ಸಿನಲ್ಲಿಯೇ ಹೊಣೆಗಾರಿಕೆಯನ್ನು ಹೆಗಲಿಗೇರಿಸಿಕೊಂಡು ತಾನು ಶಾಲೆ ಕಲಿಯದಿದ್ದರೂ ತನ್ನ ತಂಗಿಯನ್ನು ಓದಿಸಬೇಕೆಂದು ದುಡಿಯುವ ಅವನ ಗುಣವನ್ನು ಊರಿನ ಅನೇಕರು ಕೊಂಡಾಡುವ ಜೊತೆಗೆ ದಾರಿ ತಪ್ಪಿದ ಮಕ್ಕಳಿಗೆ ಗಜ್ಯಾನನ್ನು ಉದಾಹರಣೆಯಾಗಿ ಕೊಡುವಷ್ಟರ ಮಟ್ಟಿಗೆ ಮಲ್ಲೂರಿನ ಅನೇಕರಿಗೆ ಗಜ್ಯಾ ಇಷ್ಟವಾಗುತ್ತಿದ್ದ. ಗಜ್ಯಾ ಮತ್ತು ಅವನ ಸೈಕಲ್ ಇಡೀ ಮಲ್ಲೂರಿನ ಚಟುವಟಿಕೆಯ ಸಂಕೇತಗಳಾಗಿದ್ದವು. ಆತನ ಸೈಕಲ್ ಬೆಲ್ ಜಾಗೃತಿಯ ಸಂಕೇತದಂತೆ ಬಳಕೆಯಾಗುವದಿತ್ತು. ಕಾದಂಬರಿಕಾರ ಕಾಲನ ಓಟವನ್ನು ಸೈಕಲ್ ಜೊತೆಗೆ ಮತ್ತು ಅದರ ಗಂಟೆಯನ್ನು ಕಾಲ ಸರಿಯುವ ಎಚ್ಚರದ ನಾದವಾಗಿ ಬಳಸಿರುವುದು ಗಮನಾರ್ಹವಾದುದು. ಓಡಿ ಹೋದ ಹುಡುಗ ಇಲ್ಲಿ ಬೇರೆ ಯಾರೂ ಅಲ್ಲ ಆ ಸೈಕಲ್ ಸವಾರ ಗಜ್ಯಾ. ಆತ ದಿಕ್ಕು ದೆಸೆಯಿಲ್ಲದೇ ಓಡಿ ಹೋದವನಲ್ಲ, ಬದುಕನ್ನು ರೂಪಿಸಿಕೊಳ್ಳಲು ಹೋದವನು. ಸಿನೇಮಾ ಒಂದರಲ್ಲಿ ನಟಿಸುವ ಅವಕಾಶ ಸಿಕ್ಕ ಕಾರಣದಿಂದ ಕರೀಕಟ್ಟೆ ಮಾಸ್ತರರ ಜೊತೆಗೆ ಹೋಗಿ ಸಿನೇಮಾದಲ್ಲಿ ಪಾತ್ರ ನಿರ್ವಹಿಸಿ ಮರಳಿ ಬರುವಷ್ಟರಲ್ಲಿ ಮಲ್ಲೂರಿನ ಪಾಲಿಗೆ, ಗಜ್ಯಾನ ಜೊತೆಗಾರರಿಗೆ ಆತ ಓಡಿ ಹೋದ ಹುಡುಗನಾಗಿರುತ್ತಾನೆ. ಗಜ್ಯಾ ದಿನಾಲು ಊರಲ್ಲಿ ಸುತ್ತಿ ಸುಳಿಯುವಾಗ ಕಾಣದ ಅವನ ಹರಕತ್ತು ಒಂದೆರಡು ದಿನ ಅವನಿಲ್ಲದಿರುವಾಗ ಎದ್ದು ತೋರುವ ಜೊತೆಗೆ, ಅವನಿಗಾಗಿ ಇಡೀ ಊರಿನ ಬೆಟ್ಟ ಗುಡ್ಡಗಳನ್ನು ಹತ್ತಿ ಹುಡುಕುವ ರೀತಿಯಲ್ಲಿಯೇ ಓಡಿ ಹೋದ ಹುಡುಗನ ಪಾತ್ರದ ಹಿಕಮತ್ತು ಓದುಗನಿಗೆ ಮನದಟ್ಟಾಗುತ್ತದೆ.
ಇದು ಹೇಳೀ ಕೇಳೀ ಮಕ್ಕಳ ಕಾದಂಬರಿ. ಹೀಗಾಗಿ ಕಾದಂಬರಿಕಾರ ತಕ್ಕ ಮಟ್ಟಿಗೆ ಭಾಷೆಯನ್ನು ಸಡಿಲುಗೊಳಿಸಿ ಕತೆ ಹೇಳುತ್ತಾ ಹೋಗಿರುವದಿದೆ. ಜೊತೆಗೆ ಕತೆಯ ಹಂದರ ಜಾಳುಜಾಳಾಗದಂತೆ ಎಚ್ಚರವಹಿಸುವ ಜೊತೆಗೆ ಒಂದು ಮಕ್ಕಳ ಕಾದಂಬರಿಯ ಸೊಗಸಿಗೆ ಏನು ಸಾಮಗ್ರಿ ಬೇಕೋ ಅದೆಲ್ಲವನ್ನು ಒದಗಿಸಿಕೊಟ್ಟು ಕಾದಂಬರಿಗೆ ಪೂರಕವಾಗಿ ಸಲ್ಲಬಹುದಾದ ಹಿತಕರ ಪರಿಸರವನ್ನು ಕಾದಂಬರಿಕಾರ ಕಟ್ಟಿಕೊಟ್ಟಿದ್ದಾರೆ. ಈ ಕಾದಂಬರಿಯ ಭಾಷೆ, ವಸ್ತು, ತಂತ್ರ, ವಿನ್ಯಾಸ, ನಿರೂಪಣೆ ಎಲ್ಲವೂ ಮಕ್ಕಳ ಕಾದಂಬರಿಗೆ ಸಲ್ಲುವಂತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...