Homeಸಾಹಿತ್ಯ-ಸಂಸ್ಕೃತಿಪುಸ್ತಕ ವಿಮರ್ಶೆಓಡಿ ಹೋದ ಹುಡುಗ ಮರಳಿ ಬಂದ ಕಥೆ

ಓಡಿ ಹೋದ ಹುಡುಗ ಮರಳಿ ಬಂದ ಕಥೆ

‘ಓಡಿ ಹೋದ ಹುಡುಗ’ ಇದು ಅಭಿನವ ಪ್ರಕಾಶನ ಪ್ರಕಟಿಸಿರುವ ಕತೆಗಾರ ಬಸು ಬೇವಿನಗಿಡದ ಅವರ ಮಕ್ಕಳ ಕಾದಂಬರಿ.

- Advertisement -
| ಡಾ.ಎಸ್.ಬಿ.ಜೋಗುರ |
‘ಓಡಿ ಹೋದ ಹುಡುಗ’ ಇದು ಅಭಿನವ ಪ್ರಕಾಶನ ಪ್ರಕಟಿಸಿರುವ ಕತೆಗಾರ ಬಸು ಬೇವಿನಗಿಡದ ಅವರ  ಮಕ್ಕಳ ಕಾದಂಬರಿ. ಈ ಕಾದಂಬರಿಯ ಬಹುತೇಕ ಪಾತ್ರಗಳು ಮಲ್ಲೂರಲ್ಲಿ ಸುತ್ತಿ ಸುಳಿಯುತ್ತವೆ. ಈ ಕಾದಂಬರಿಯನ್ನು ಓದತೊಡಗಿದಾಗ ಓದುಗರಿಗೆ ತಮ್ಮ ತಮ್ಮ ಬಾಲ್ಯದ ಸ್ವಚ್ಚಂದ ಮನದ ಸುಳಿದಾಟವನ್ನು ನೆನಪಿಸಿಕೊಡುವ ಜೊತೆಗೆ, ಗಜ್ಯಾ ಎಂಬ ಬಾಲಕನ ಮೂಲಕ ಇಡೀ ಊರನ್ನು ನಿದ್ದೆಯಿಂದೆಬ್ಬಿಸಿ ಚಟುವಟಿಕೆಗೆ ನೂಕುವ ಕ್ರಿಯಾಶೀಲತೆಯಂತೆ ಕಾದಂಬರಿಕಾರರು ಗಜ್ಯಾ ಪಾತ್ರವನ್ನು ಸೃಷ್ಟಿಸಿದ್ದಾರೆ. ಹಾಗೆ ನೋಡಿದರೆ ಈ ಕಾದಂಬರಿಯಲ್ಲಿ ಹೊಸತೇನೂ ಮಹತ್ತರವಾಗಿ ಚಿತ್ರಿಸಲಾಗದಿದ್ದರೂ ಮಕ್ಕಳ ಕಾದಂಬರಿಗೆ ತಕ್ಕುದಾದ ಸಕಲ ಸಾಮಗ್ರಿಯನ್ನು ಮೈಗೂಡಿಸಿಕೊಂಡು ಕಾದಂಬರಿ ಮುಂದೆ ಸಾಗುತ್ತದೆ. ಕಾದಂಬರಿಯ ಆರಂಭದಲ್ಲಿ ಕೊಂಚ ಸಾವಧಾನ ಮತ್ತು ಜಡವೆನಿಸುವ ವಿವರಗಳಿವೆಯಾದರೂ ಕ್ರಮೇಣವಾಗಿ ತನ್ನದೇಯಾದ ವಿಶಿಷ್ಟ ಜಾಡಿನಲ್ಲಿ ಮುಂದೆ ಸಾಗುತ್ತದೆ. ಗಜ್ಯಾ ಈ ಕಾದಂಬರಿಯ ನಾಯಕ. ಚಿಕ್ಕ ವಯಸ್ಸಿನಲ್ಲಿಯೇ ಕುಳಿತುಂಡು ಕೆಡಬಾರದು ಎನ್ನುವ ಧೋರಣೆಯನ್ನು ಮೈಗೂಡಿಸಿಕೊಂಡಂತೆ ಬದುಕಿದ ಈ ಗಜ್ಯಾ ಊರಿನ ಅನೇಕರಿಗೆ ಮಾದರಿಯಾಗಿರುವಂತೆ ಉಡಾಳನಾಗಿಯೂ ಗುರುತಿಸಿಕೊಂಡವನು. ಗಜ್ಯಾ ಮತ್ತು ಅವನ ಸ್ನೇಹಿತರಲ್ಲಿ ಆ ವಯಸ್ಸಿಗೆ ತಕ್ಕಂತ ಸಹಜವಾಗಿರಬಹುದಾದ ಹುಡುಗ ಬುದ್ಧ್ಢಿಯ ಗುಣಗಳೂ ಇವೆ. ಎಲ್ಲ ಕಾಲಗಳಲ್ಲಿ ಎಲ್ಲ ಮಕ್ಕಳಲ್ಲಿ ವ್ಯಾಪಕವಾಗಿ ಕಾಣಬಹುದಾದ ಗುಣಗಳವು.
ಒಬ್ಬರನ್ನೊಬ್ಬರು ದೂರುವ ದ್ವೇಷಿಸುವ, ಮತ್ತೆ ಒಂದುಗೂಡುವ, ಕೂಡಿ ಕದಿಯುವ, ತಿನ್ನುವ, ಸೇಡಿಗಾಗಿ ಹೂಂಕರಿಸುವ ಇಂಥಾ ಹತ್ತಾರು ವಕ್ರಗುಣಂಗಣ ಪಟಾಲಮ್ಮಿನಂತಿರುವ ಆ ಹುಡುಗರು ಹಾಗಾಗಲು ಕಾರಣ ಆ ಆಲದ ಮರದ ಕೆಳಗೆ ವಾಸವಾಗಿರುವ ಅಜ್ಜ ಎನ್ನುವುದು ಹೆತ್ತವರ ದೂರುವಿಕೆ. ಗಜ್ಯಾ ಆಟವಾಡುವ ವಯಸ್ಸಿನಲ್ಲಿಯೇ ಹೊಣೆಗಾರಿಕೆಯನ್ನು ಹೆಗಲಿಗೇರಿಸಿಕೊಂಡು ತಾನು ಶಾಲೆ ಕಲಿಯದಿದ್ದರೂ ತನ್ನ ತಂಗಿಯನ್ನು ಓದಿಸಬೇಕೆಂದು ದುಡಿಯುವ ಅವನ ಗುಣವನ್ನು ಊರಿನ ಅನೇಕರು ಕೊಂಡಾಡುವ ಜೊತೆಗೆ ದಾರಿ ತಪ್ಪಿದ ಮಕ್ಕಳಿಗೆ ಗಜ್ಯಾನನ್ನು ಉದಾಹರಣೆಯಾಗಿ ಕೊಡುವಷ್ಟರ ಮಟ್ಟಿಗೆ ಮಲ್ಲೂರಿನ ಅನೇಕರಿಗೆ ಗಜ್ಯಾ ಇಷ್ಟವಾಗುತ್ತಿದ್ದ. ಗಜ್ಯಾ ಮತ್ತು ಅವನ ಸೈಕಲ್ ಇಡೀ ಮಲ್ಲೂರಿನ ಚಟುವಟಿಕೆಯ ಸಂಕೇತಗಳಾಗಿದ್ದವು. ಆತನ ಸೈಕಲ್ ಬೆಲ್ ಜಾಗೃತಿಯ ಸಂಕೇತದಂತೆ ಬಳಕೆಯಾಗುವದಿತ್ತು. ಕಾದಂಬರಿಕಾರ ಕಾಲನ ಓಟವನ್ನು ಸೈಕಲ್ ಜೊತೆಗೆ ಮತ್ತು ಅದರ ಗಂಟೆಯನ್ನು ಕಾಲ ಸರಿಯುವ ಎಚ್ಚರದ ನಾದವಾಗಿ ಬಳಸಿರುವುದು ಗಮನಾರ್ಹವಾದುದು. ಓಡಿ ಹೋದ ಹುಡುಗ ಇಲ್ಲಿ ಬೇರೆ ಯಾರೂ ಅಲ್ಲ ಆ ಸೈಕಲ್ ಸವಾರ ಗಜ್ಯಾ. ಆತ ದಿಕ್ಕು ದೆಸೆಯಿಲ್ಲದೇ ಓಡಿ ಹೋದವನಲ್ಲ, ಬದುಕನ್ನು ರೂಪಿಸಿಕೊಳ್ಳಲು ಹೋದವನು. ಸಿನೇಮಾ ಒಂದರಲ್ಲಿ ನಟಿಸುವ ಅವಕಾಶ ಸಿಕ್ಕ ಕಾರಣದಿಂದ ಕರೀಕಟ್ಟೆ ಮಾಸ್ತರರ ಜೊತೆಗೆ ಹೋಗಿ ಸಿನೇಮಾದಲ್ಲಿ ಪಾತ್ರ ನಿರ್ವಹಿಸಿ ಮರಳಿ ಬರುವಷ್ಟರಲ್ಲಿ ಮಲ್ಲೂರಿನ ಪಾಲಿಗೆ, ಗಜ್ಯಾನ ಜೊತೆಗಾರರಿಗೆ ಆತ ಓಡಿ ಹೋದ ಹುಡುಗನಾಗಿರುತ್ತಾನೆ. ಗಜ್ಯಾ ದಿನಾಲು ಊರಲ್ಲಿ ಸುತ್ತಿ ಸುಳಿಯುವಾಗ ಕಾಣದ ಅವನ ಹರಕತ್ತು ಒಂದೆರಡು ದಿನ ಅವನಿಲ್ಲದಿರುವಾಗ ಎದ್ದು ತೋರುವ ಜೊತೆಗೆ, ಅವನಿಗಾಗಿ ಇಡೀ ಊರಿನ ಬೆಟ್ಟ ಗುಡ್ಡಗಳನ್ನು ಹತ್ತಿ ಹುಡುಕುವ ರೀತಿಯಲ್ಲಿಯೇ ಓಡಿ ಹೋದ ಹುಡುಗನ ಪಾತ್ರದ ಹಿಕಮತ್ತು ಓದುಗನಿಗೆ ಮನದಟ್ಟಾಗುತ್ತದೆ.
ಇದು ಹೇಳೀ ಕೇಳೀ ಮಕ್ಕಳ ಕಾದಂಬರಿ. ಹೀಗಾಗಿ ಕಾದಂಬರಿಕಾರ ತಕ್ಕ ಮಟ್ಟಿಗೆ ಭಾಷೆಯನ್ನು ಸಡಿಲುಗೊಳಿಸಿ ಕತೆ ಹೇಳುತ್ತಾ ಹೋಗಿರುವದಿದೆ. ಜೊತೆಗೆ ಕತೆಯ ಹಂದರ ಜಾಳುಜಾಳಾಗದಂತೆ ಎಚ್ಚರವಹಿಸುವ ಜೊತೆಗೆ ಒಂದು ಮಕ್ಕಳ ಕಾದಂಬರಿಯ ಸೊಗಸಿಗೆ ಏನು ಸಾಮಗ್ರಿ ಬೇಕೋ ಅದೆಲ್ಲವನ್ನು ಒದಗಿಸಿಕೊಟ್ಟು ಕಾದಂಬರಿಗೆ ಪೂರಕವಾಗಿ ಸಲ್ಲಬಹುದಾದ ಹಿತಕರ ಪರಿಸರವನ್ನು ಕಾದಂಬರಿಕಾರ ಕಟ್ಟಿಕೊಟ್ಟಿದ್ದಾರೆ. ಈ ಕಾದಂಬರಿಯ ಭಾಷೆ, ವಸ್ತು, ತಂತ್ರ, ವಿನ್ಯಾಸ, ನಿರೂಪಣೆ ಎಲ್ಲವೂ ಮಕ್ಕಳ ಕಾದಂಬರಿಗೆ ಸಲ್ಲುವಂತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...