Homeಸಾಹಿತ್ಯ-ಸಂಸ್ಕೃತಿಪುಸ್ತಕ ವಿಮರ್ಶೆಓಡಿ ಹೋದ ಹುಡುಗ ಮರಳಿ ಬಂದ ಕಥೆ

ಓಡಿ ಹೋದ ಹುಡುಗ ಮರಳಿ ಬಂದ ಕಥೆ

‘ಓಡಿ ಹೋದ ಹುಡುಗ’ ಇದು ಅಭಿನವ ಪ್ರಕಾಶನ ಪ್ರಕಟಿಸಿರುವ ಕತೆಗಾರ ಬಸು ಬೇವಿನಗಿಡದ ಅವರ ಮಕ್ಕಳ ಕಾದಂಬರಿ.

- Advertisement -
| ಡಾ.ಎಸ್.ಬಿ.ಜೋಗುರ |
‘ಓಡಿ ಹೋದ ಹುಡುಗ’ ಇದು ಅಭಿನವ ಪ್ರಕಾಶನ ಪ್ರಕಟಿಸಿರುವ ಕತೆಗಾರ ಬಸು ಬೇವಿನಗಿಡದ ಅವರ  ಮಕ್ಕಳ ಕಾದಂಬರಿ. ಈ ಕಾದಂಬರಿಯ ಬಹುತೇಕ ಪಾತ್ರಗಳು ಮಲ್ಲೂರಲ್ಲಿ ಸುತ್ತಿ ಸುಳಿಯುತ್ತವೆ. ಈ ಕಾದಂಬರಿಯನ್ನು ಓದತೊಡಗಿದಾಗ ಓದುಗರಿಗೆ ತಮ್ಮ ತಮ್ಮ ಬಾಲ್ಯದ ಸ್ವಚ್ಚಂದ ಮನದ ಸುಳಿದಾಟವನ್ನು ನೆನಪಿಸಿಕೊಡುವ ಜೊತೆಗೆ, ಗಜ್ಯಾ ಎಂಬ ಬಾಲಕನ ಮೂಲಕ ಇಡೀ ಊರನ್ನು ನಿದ್ದೆಯಿಂದೆಬ್ಬಿಸಿ ಚಟುವಟಿಕೆಗೆ ನೂಕುವ ಕ್ರಿಯಾಶೀಲತೆಯಂತೆ ಕಾದಂಬರಿಕಾರರು ಗಜ್ಯಾ ಪಾತ್ರವನ್ನು ಸೃಷ್ಟಿಸಿದ್ದಾರೆ. ಹಾಗೆ ನೋಡಿದರೆ ಈ ಕಾದಂಬರಿಯಲ್ಲಿ ಹೊಸತೇನೂ ಮಹತ್ತರವಾಗಿ ಚಿತ್ರಿಸಲಾಗದಿದ್ದರೂ ಮಕ್ಕಳ ಕಾದಂಬರಿಗೆ ತಕ್ಕುದಾದ ಸಕಲ ಸಾಮಗ್ರಿಯನ್ನು ಮೈಗೂಡಿಸಿಕೊಂಡು ಕಾದಂಬರಿ ಮುಂದೆ ಸಾಗುತ್ತದೆ. ಕಾದಂಬರಿಯ ಆರಂಭದಲ್ಲಿ ಕೊಂಚ ಸಾವಧಾನ ಮತ್ತು ಜಡವೆನಿಸುವ ವಿವರಗಳಿವೆಯಾದರೂ ಕ್ರಮೇಣವಾಗಿ ತನ್ನದೇಯಾದ ವಿಶಿಷ್ಟ ಜಾಡಿನಲ್ಲಿ ಮುಂದೆ ಸಾಗುತ್ತದೆ. ಗಜ್ಯಾ ಈ ಕಾದಂಬರಿಯ ನಾಯಕ. ಚಿಕ್ಕ ವಯಸ್ಸಿನಲ್ಲಿಯೇ ಕುಳಿತುಂಡು ಕೆಡಬಾರದು ಎನ್ನುವ ಧೋರಣೆಯನ್ನು ಮೈಗೂಡಿಸಿಕೊಂಡಂತೆ ಬದುಕಿದ ಈ ಗಜ್ಯಾ ಊರಿನ ಅನೇಕರಿಗೆ ಮಾದರಿಯಾಗಿರುವಂತೆ ಉಡಾಳನಾಗಿಯೂ ಗುರುತಿಸಿಕೊಂಡವನು. ಗಜ್ಯಾ ಮತ್ತು ಅವನ ಸ್ನೇಹಿತರಲ್ಲಿ ಆ ವಯಸ್ಸಿಗೆ ತಕ್ಕಂತ ಸಹಜವಾಗಿರಬಹುದಾದ ಹುಡುಗ ಬುದ್ಧ್ಢಿಯ ಗುಣಗಳೂ ಇವೆ. ಎಲ್ಲ ಕಾಲಗಳಲ್ಲಿ ಎಲ್ಲ ಮಕ್ಕಳಲ್ಲಿ ವ್ಯಾಪಕವಾಗಿ ಕಾಣಬಹುದಾದ ಗುಣಗಳವು.
ಒಬ್ಬರನ್ನೊಬ್ಬರು ದೂರುವ ದ್ವೇಷಿಸುವ, ಮತ್ತೆ ಒಂದುಗೂಡುವ, ಕೂಡಿ ಕದಿಯುವ, ತಿನ್ನುವ, ಸೇಡಿಗಾಗಿ ಹೂಂಕರಿಸುವ ಇಂಥಾ ಹತ್ತಾರು ವಕ್ರಗುಣಂಗಣ ಪಟಾಲಮ್ಮಿನಂತಿರುವ ಆ ಹುಡುಗರು ಹಾಗಾಗಲು ಕಾರಣ ಆ ಆಲದ ಮರದ ಕೆಳಗೆ ವಾಸವಾಗಿರುವ ಅಜ್ಜ ಎನ್ನುವುದು ಹೆತ್ತವರ ದೂರುವಿಕೆ. ಗಜ್ಯಾ ಆಟವಾಡುವ ವಯಸ್ಸಿನಲ್ಲಿಯೇ ಹೊಣೆಗಾರಿಕೆಯನ್ನು ಹೆಗಲಿಗೇರಿಸಿಕೊಂಡು ತಾನು ಶಾಲೆ ಕಲಿಯದಿದ್ದರೂ ತನ್ನ ತಂಗಿಯನ್ನು ಓದಿಸಬೇಕೆಂದು ದುಡಿಯುವ ಅವನ ಗುಣವನ್ನು ಊರಿನ ಅನೇಕರು ಕೊಂಡಾಡುವ ಜೊತೆಗೆ ದಾರಿ ತಪ್ಪಿದ ಮಕ್ಕಳಿಗೆ ಗಜ್ಯಾನನ್ನು ಉದಾಹರಣೆಯಾಗಿ ಕೊಡುವಷ್ಟರ ಮಟ್ಟಿಗೆ ಮಲ್ಲೂರಿನ ಅನೇಕರಿಗೆ ಗಜ್ಯಾ ಇಷ್ಟವಾಗುತ್ತಿದ್ದ. ಗಜ್ಯಾ ಮತ್ತು ಅವನ ಸೈಕಲ್ ಇಡೀ ಮಲ್ಲೂರಿನ ಚಟುವಟಿಕೆಯ ಸಂಕೇತಗಳಾಗಿದ್ದವು. ಆತನ ಸೈಕಲ್ ಬೆಲ್ ಜಾಗೃತಿಯ ಸಂಕೇತದಂತೆ ಬಳಕೆಯಾಗುವದಿತ್ತು. ಕಾದಂಬರಿಕಾರ ಕಾಲನ ಓಟವನ್ನು ಸೈಕಲ್ ಜೊತೆಗೆ ಮತ್ತು ಅದರ ಗಂಟೆಯನ್ನು ಕಾಲ ಸರಿಯುವ ಎಚ್ಚರದ ನಾದವಾಗಿ ಬಳಸಿರುವುದು ಗಮನಾರ್ಹವಾದುದು. ಓಡಿ ಹೋದ ಹುಡುಗ ಇಲ್ಲಿ ಬೇರೆ ಯಾರೂ ಅಲ್ಲ ಆ ಸೈಕಲ್ ಸವಾರ ಗಜ್ಯಾ. ಆತ ದಿಕ್ಕು ದೆಸೆಯಿಲ್ಲದೇ ಓಡಿ ಹೋದವನಲ್ಲ, ಬದುಕನ್ನು ರೂಪಿಸಿಕೊಳ್ಳಲು ಹೋದವನು. ಸಿನೇಮಾ ಒಂದರಲ್ಲಿ ನಟಿಸುವ ಅವಕಾಶ ಸಿಕ್ಕ ಕಾರಣದಿಂದ ಕರೀಕಟ್ಟೆ ಮಾಸ್ತರರ ಜೊತೆಗೆ ಹೋಗಿ ಸಿನೇಮಾದಲ್ಲಿ ಪಾತ್ರ ನಿರ್ವಹಿಸಿ ಮರಳಿ ಬರುವಷ್ಟರಲ್ಲಿ ಮಲ್ಲೂರಿನ ಪಾಲಿಗೆ, ಗಜ್ಯಾನ ಜೊತೆಗಾರರಿಗೆ ಆತ ಓಡಿ ಹೋದ ಹುಡುಗನಾಗಿರುತ್ತಾನೆ. ಗಜ್ಯಾ ದಿನಾಲು ಊರಲ್ಲಿ ಸುತ್ತಿ ಸುಳಿಯುವಾಗ ಕಾಣದ ಅವನ ಹರಕತ್ತು ಒಂದೆರಡು ದಿನ ಅವನಿಲ್ಲದಿರುವಾಗ ಎದ್ದು ತೋರುವ ಜೊತೆಗೆ, ಅವನಿಗಾಗಿ ಇಡೀ ಊರಿನ ಬೆಟ್ಟ ಗುಡ್ಡಗಳನ್ನು ಹತ್ತಿ ಹುಡುಕುವ ರೀತಿಯಲ್ಲಿಯೇ ಓಡಿ ಹೋದ ಹುಡುಗನ ಪಾತ್ರದ ಹಿಕಮತ್ತು ಓದುಗನಿಗೆ ಮನದಟ್ಟಾಗುತ್ತದೆ.
ಇದು ಹೇಳೀ ಕೇಳೀ ಮಕ್ಕಳ ಕಾದಂಬರಿ. ಹೀಗಾಗಿ ಕಾದಂಬರಿಕಾರ ತಕ್ಕ ಮಟ್ಟಿಗೆ ಭಾಷೆಯನ್ನು ಸಡಿಲುಗೊಳಿಸಿ ಕತೆ ಹೇಳುತ್ತಾ ಹೋಗಿರುವದಿದೆ. ಜೊತೆಗೆ ಕತೆಯ ಹಂದರ ಜಾಳುಜಾಳಾಗದಂತೆ ಎಚ್ಚರವಹಿಸುವ ಜೊತೆಗೆ ಒಂದು ಮಕ್ಕಳ ಕಾದಂಬರಿಯ ಸೊಗಸಿಗೆ ಏನು ಸಾಮಗ್ರಿ ಬೇಕೋ ಅದೆಲ್ಲವನ್ನು ಒದಗಿಸಿಕೊಟ್ಟು ಕಾದಂಬರಿಗೆ ಪೂರಕವಾಗಿ ಸಲ್ಲಬಹುದಾದ ಹಿತಕರ ಪರಿಸರವನ್ನು ಕಾದಂಬರಿಕಾರ ಕಟ್ಟಿಕೊಟ್ಟಿದ್ದಾರೆ. ಈ ಕಾದಂಬರಿಯ ಭಾಷೆ, ವಸ್ತು, ತಂತ್ರ, ವಿನ್ಯಾಸ, ನಿರೂಪಣೆ ಎಲ್ಲವೂ ಮಕ್ಕಳ ಕಾದಂಬರಿಗೆ ಸಲ್ಲುವಂತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...