Homeಅಂಕಣಗಳುಪೆಟ್ರೋಲ್ ಮತ್ತು ಪತ್ರಿಕೋದ್ಯಮ

ಪೆಟ್ರೋಲ್ ಮತ್ತು ಪತ್ರಿಕೋದ್ಯಮ

ಪೆಟ್ರೋಲ್ ಬೆಲೆಯನ್ನು ಇನ್ನಿಲ್ಲದಂತೆ ಏರಿಸಿರುವ ಕೇಂದ್ರ ಸರ್ಕಾರ ಅದಕ್ಕೆ ಹಲವಾರು ಸಮಜಾಯಿಷಿಗಳನ್ನು ನೀಡುತ್ತಿದೆ. ತೈಲ ಉತ್ಪಾದನಾ ಕಂಪನಿಗಳ ನಷ್ಟ 42 ಸಾವಿರ ಕೋಟಿಯಿಂದ 60 ಸಾವಿರ ಕೋಟಿ

- Advertisement -
- Advertisement -

| ಗೌರಿ ಲಂಕೇಶ್ |
08 ಜೂನ್, 2008 (ಸಂಪಾದಕೀಯದಿಂದ)

ಪೆಟ್ರೋಲ್ ಬೆಲೆಯನ್ನು ಇನ್ನಿಲ್ಲದಂತೆ ಏರಿಸಿರುವ ಕೇಂದ್ರ ಸರ್ಕಾರ ಅದಕ್ಕೆ ಹಲವಾರು ಸಮಜಾಯಿಷಿಗಳನ್ನು ನೀಡುತ್ತಿದೆ. ಅವುಗಳಲ್ಲಿ ತೈಲ ಉತ್ಪಾದನಾ ಕಂಪನಿಗಳ ನಷ್ಟ 42 ಸಾವಿರ ಕೋಟಿಯಿಂದ 60 ಸಾವಿರ ಕೋಟಿ ರೂಪಾಯಿಗಳಿಗೆ ಏರದಂತೆ ತಡೆಯಲೆಂದು ಬೆಲೆಯನ್ನು ಹೆಚ್ಚಿಸಬೇಕಾಯಿತು ಎಂಬುದು ಒಂದು.

ಆದರೆ ವಿಚಿತ್ರ ಸಂಗತಿ ಯಾವುದೆಂದರೆ ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್, ಭಾರತ್ ಗ್ಯಾಸ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಗಳು ಕಳೆದ ವರ್ಷ ಇಷ್ಟೊಂದು ನಷ್ಟವನ್ನು ಕಂಡಿದ್ದರೆ, ಅದೇ ಸಾಲಿನಲ್ಲಿ ರಿಲೆಯನ್ಸ್ ಕಂಪನಿಯು ಇದೇ ತೈಲ ಉತ್ಪಾದನೆಯಲ್ಲಿ 10,372 ಕೋಟಿ ರೂಪಾಯಿಗಳಷ್ಟು ಲಾಭವನ್ನು ಕಂಡಿದೆ. ಇದು ಹೇಗೆ ಸಾಧ್ಯವಾಯಿತು?

ಇನ್ನೊಂದು ಸಂಗತಿ ಯಾವುದೆಂದರೆ ಇವತ್ತು ತೈಲ ಬೆಲೆಯನ್ನು ಏರಿಸಿ ಜನಸಾಮಾನ್ಯರನ್ನು ಸಂಕಷ್ಟಕ್ಕೆ ದೂಡಿರುವ ಕೇಂದ್ರ ಸರ್ಕಾರ ತನ್ನ 2008ನೇ ಬಜೆಟ್‍ನಲ್ಲಿ ಹೇಳಿದ್ದೇನೆಂದರೆ 2007-08ನೇ ಆರ್ಥಿಕ ವರ್ಷದಲ್ಲಿ ಕಾಪೆರ್Çರೇಟ್ ಕಂಪೆನಿಗಳಿಗೆ ನೀಡಿದ ತೆರಿಗೆ ರಿಯಾಯಿತಿಯಿಂದಾಗಿ 58,655 ಕೋಟಿ ರೂಪಾಯಿಗಳ ನಷ್ಟ ಮತ್ತು ಅಬಕಾರಿ ಶುಲ್ಕ ರಿಯಾಯಿತಿಯಿಂದಾಗಿ 87,992 ಕೋಟಿ ರೂಪಾಯಿಗಳಷ್ಟು ನಷ್ಟವಾಗಿದೆ ಎಂದು. ಇವೆರಡರ ಒಟ್ಟು ಮೊತ್ತ 1,46,642 ಕೋಟಿ ರೂಪಾಯಿಗಳು.

ಆ ಹಣವನ್ನು ವಸೂಲಿ ಮಾಡದ ಸರ್ಕಾರ ಇಂದು ತೈಲ ಬೆಲೆಯನ್ನು ಏರಿಸಿ ಈಗಾಗಲೇ ಹಣದುಬ್ಬರದಿಂದ ತತ್ತರಿಸುತ್ತಿರುವ ಜನಸಾಮಾನ್ಯರ ಮೇಲೆ ಮತ್ತಷ್ಟು ಒತ್ತಡ ಹೇರುತ್ತಿದೆ ಎಂದರೆ ಈ ಸರ್ಕಾರಕ್ಕೆ ಜನ ಏನು ಮಾಡಬೇಕು?

ಇಲ್ಲಿಯ ತನಕ ಸಿನಿಮಾ, ಆರ್ಟ್ ಗ್ಯಾಲರಿ, ನಾಟಕ ಇಂತಹವುಗಳ ಮೇಲೆ ದಾಳಿ ಇಡುತ್ತಿದ್ದ ಕೋಮುವಾದಿಗಳು ಈಗ ಪತ್ರಿಕಾ ಕಚೇರಿಗಳ ಮೇಲೂ ದಾಳಿ ಮಾಡಲಾರಂಭಿಸಿವೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ `ಲೋಕಸತ್ತಾ’ ಎಂಬ ಮರಾಠಿ ಪತ್ರಿಕೆಯ ಸಂಪಾದಕ ಕುಮಾರ್ ಕೇಟ್ಕರ್‍ರವರ ಮನೆಯ ಮೇಲೆ ಶಿವಸಂಗ್ರಾಮ್ ಪಾರ್ಟಿ ಎಂಬ ಸಂಘಟನೆಯ ಸದಸ್ಯರು ದಾಳಿ ಮಾಡಿದರು.

ಅದಕ್ಕೆ ಕಾರಣ ಕೇಟ್ಕರ್‍ರವರು ಬರೆದಿದ್ದ ಒಂದು ಲೇಖನ. ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರವು ಅಮೆರಿಕದ ಸ್ಟ್ಯಾಚು ಆಫ್ ಲಿಬರ್ಟಿದಂತೆಯೇ ಮುಂಬೈನ ಸಮುದ್ರದಲ್ಲಿ ಶಿವಾಜಿಯ ದೊಡ್ಡ ಪ್ರತಿಮೆಯನ್ನು ಸ್ಥಾಪಿಸುವ ಪ್ರಸ್ತಾಪವನ್ನು ಎತ್ತಿಕೊಂಡಿತು. ಆ ಪ್ರತಿಮೆಯನ್ನು ಸ್ಥಾಪಿಸಲು ಹಲವು ಕೋಟಿ ರೂಪಾಯಿಗಳು ವೆಚ್ಚವಾಗುತ್ತದೆಂದು ಅಂದಾಜಿಸಲಾಗಿತ್ತು.

ಹೇಳಿಕೇಳಿ ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿ ನೂರಾರು ಅಸಹಾಯಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಇತರೆಡೆ ಬಡತನ ತಾಂಡವವಾಡುತ್ತಿದೆ, ಜನ ಸಾಮಾನ್ಯರಿಗೆ ಕುಡಿಯುವ ನೀರೂ ಅಲಭ್ಯವಾಗಿದೆ. ಇಂಥ ಪರಿಸ್ಥಿತಿಯಲ್ಲಿ ಜನರ ಸಮಸ್ಯೆಯನ್ನು ನೀಗಿಸುವ ಬದಲಾಗಿ ಒಂದು ಪ್ರತಿಮೆಗೆ ಕೋಟ್ಯಾಂತರ ರೂಪಾಯಿಗಳನ್ನು ವೆಚ್ಚ ಮಾಡುವುದು ಸರಿಯೇ? ಎಂದು ಕೇಟ್ಕರ್ ತಮ್ಮ ಲೇಖನದಲ್ಲಿ ಪ್ರಶ್ನಿಸಿದರು. ಅವರ ಪ್ರಶ್ನೆ ಸರಿಯಾಗಿಯೇ ಇತ್ತು. ಆದರೆ ಶಿವಸಂಗ್ರಾಮ್ ಪಾರ್ಟಿಯವರಿಗೆ ಕೇಟ್ಕರ್ ಶಿವಾಜಿಗೆ ಅವಮಾನ ಮಾಡಿದ್ದಾರೆ ಎನಿಸಿತು. ಶಿವಾಜಿಯ ಪ್ರತಿಮೆ ಅಗತ್ಯವಿಲ್ಲ ಎಂದೇ ಆತ ಹೇಳಿದ್ದಾರೆಂದು ಭಾವಿಸಿದ ಅವರು ಕೇಟ್ಕರ್‍ರವರ ಮನೆಯ ಮೇಲೆ ದಾಳಿ ಮಾಡಿದರು. ಆದರೆ ಶಿವಸಂಗ್ರಾಮ್ ಪಾರ್ಟಿಯವರು ಶರದ್ ಪವಾರ್‍ರವರ ಎನ್‍ಸಿಪಿ ಪಕ್ಷದ ಅಂಗ ಸಂಸ್ಥೆಯಾಗಿರುವುದರಿಂದ ಅವರ ವಿರುದ್ಧ ಯಾವ ಕಾನೂನು ಕ್ರಮವನ್ನು ಅಲ್ಲಿನ ಸರ್ಕಾರ ತೆಗೆದುಕೊಂಡಿಲ್ಲ.

ಈ ವಾರ ನಡೆದಿರುವ ಈ ಪ್ರಕರಣಗಳು ಮೊದಲ ಬಾರಿಗೆ ನಡೆದಿರುವಂತಹದ್ದೇನಲ್ಲ. ಕಳೆದ ವರ್ಷ `ದಿನಸುಡರ್’ ಪತ್ರಿಕೆ ನಡೆಸಿದ ಸಮೀಕ್ಷೆಯೊಂದರಿಂದ ಉದ್ರೇಕಗೊಂಡ ಕರುಣಾನಿಧಿಯ ಬೆಂಬಲಿಗರು ಆ ಪತ್ರಿಕೆಯ ಕಚೇರಿಯ ಮೇಲೆ ದಾಳಿ ನಡೆಸಿ ಇಬ್ಬರ ಸಾವಿಗೆ ಕಾರಣರಾಗಿದ್ದರು. ಹಾಗೆಯೇ ಸರ್ವೋಚ್ಛ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಮೂರ್ತಿ ವೈ.ಕೆ. ಸಬರ್‍ವಾಲ್‍ರ ಬಗ್ಗೆ ತನಿಖಾ ವರದಿಗಳನ್ನು ಪ್ರಕಟಿಸಿದ್ದಕ್ಕೆ ದೆಹಲಿ ನ್ಯಾಯಾಲಯ ಮಿಡ್ ಡೆ ಪತ್ರಿಕೆಯ ಮೂವರು ಪತ್ರಕರ್ತರಿಗೆ ಜೈಲು ಶಿಕ್ಷೆಯನ್ನು ನೀಡಿತ್ತು.

ಪ್ರಜಾಪ್ರಭುತ್ವದ ನಾಲ್ಕನೆ ಸ್ತಂಭವಾಗಿರುವ ಪತ್ರಿಕೋದ್ಯಮದ ಮೇಲೆ ಹೀಗೆ ಒಂದೆಡೆಯಿಂದ ಕೋಮುವಾದಿಗಳಿಂದ ದಾಳಿ, ಇನ್ನೊಂದೆಡೆ ವ್ಯವಸ್ಥೆಯಿಂದ ದಾಳಿ ನಡೆದರೆ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವವಾದರೂ ಉಳಿಯುವುದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....