Homeಅಂಕಣಗಳುಪೆಟ್ರೋಲ್ ಮತ್ತು ಪತ್ರಿಕೋದ್ಯಮ

ಪೆಟ್ರೋಲ್ ಮತ್ತು ಪತ್ರಿಕೋದ್ಯಮ

ಪೆಟ್ರೋಲ್ ಬೆಲೆಯನ್ನು ಇನ್ನಿಲ್ಲದಂತೆ ಏರಿಸಿರುವ ಕೇಂದ್ರ ಸರ್ಕಾರ ಅದಕ್ಕೆ ಹಲವಾರು ಸಮಜಾಯಿಷಿಗಳನ್ನು ನೀಡುತ್ತಿದೆ. ತೈಲ ಉತ್ಪಾದನಾ ಕಂಪನಿಗಳ ನಷ್ಟ 42 ಸಾವಿರ ಕೋಟಿಯಿಂದ 60 ಸಾವಿರ ಕೋಟಿ

- Advertisement -
- Advertisement -

| ಗೌರಿ ಲಂಕೇಶ್ |
08 ಜೂನ್, 2008 (ಸಂಪಾದಕೀಯದಿಂದ)

ಪೆಟ್ರೋಲ್ ಬೆಲೆಯನ್ನು ಇನ್ನಿಲ್ಲದಂತೆ ಏರಿಸಿರುವ ಕೇಂದ್ರ ಸರ್ಕಾರ ಅದಕ್ಕೆ ಹಲವಾರು ಸಮಜಾಯಿಷಿಗಳನ್ನು ನೀಡುತ್ತಿದೆ. ಅವುಗಳಲ್ಲಿ ತೈಲ ಉತ್ಪಾದನಾ ಕಂಪನಿಗಳ ನಷ್ಟ 42 ಸಾವಿರ ಕೋಟಿಯಿಂದ 60 ಸಾವಿರ ಕೋಟಿ ರೂಪಾಯಿಗಳಿಗೆ ಏರದಂತೆ ತಡೆಯಲೆಂದು ಬೆಲೆಯನ್ನು ಹೆಚ್ಚಿಸಬೇಕಾಯಿತು ಎಂಬುದು ಒಂದು.

ಆದರೆ ವಿಚಿತ್ರ ಸಂಗತಿ ಯಾವುದೆಂದರೆ ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್, ಭಾರತ್ ಗ್ಯಾಸ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಗಳು ಕಳೆದ ವರ್ಷ ಇಷ್ಟೊಂದು ನಷ್ಟವನ್ನು ಕಂಡಿದ್ದರೆ, ಅದೇ ಸಾಲಿನಲ್ಲಿ ರಿಲೆಯನ್ಸ್ ಕಂಪನಿಯು ಇದೇ ತೈಲ ಉತ್ಪಾದನೆಯಲ್ಲಿ 10,372 ಕೋಟಿ ರೂಪಾಯಿಗಳಷ್ಟು ಲಾಭವನ್ನು ಕಂಡಿದೆ. ಇದು ಹೇಗೆ ಸಾಧ್ಯವಾಯಿತು?

ಇನ್ನೊಂದು ಸಂಗತಿ ಯಾವುದೆಂದರೆ ಇವತ್ತು ತೈಲ ಬೆಲೆಯನ್ನು ಏರಿಸಿ ಜನಸಾಮಾನ್ಯರನ್ನು ಸಂಕಷ್ಟಕ್ಕೆ ದೂಡಿರುವ ಕೇಂದ್ರ ಸರ್ಕಾರ ತನ್ನ 2008ನೇ ಬಜೆಟ್‍ನಲ್ಲಿ ಹೇಳಿದ್ದೇನೆಂದರೆ 2007-08ನೇ ಆರ್ಥಿಕ ವರ್ಷದಲ್ಲಿ ಕಾಪೆರ್Çರೇಟ್ ಕಂಪೆನಿಗಳಿಗೆ ನೀಡಿದ ತೆರಿಗೆ ರಿಯಾಯಿತಿಯಿಂದಾಗಿ 58,655 ಕೋಟಿ ರೂಪಾಯಿಗಳ ನಷ್ಟ ಮತ್ತು ಅಬಕಾರಿ ಶುಲ್ಕ ರಿಯಾಯಿತಿಯಿಂದಾಗಿ 87,992 ಕೋಟಿ ರೂಪಾಯಿಗಳಷ್ಟು ನಷ್ಟವಾಗಿದೆ ಎಂದು. ಇವೆರಡರ ಒಟ್ಟು ಮೊತ್ತ 1,46,642 ಕೋಟಿ ರೂಪಾಯಿಗಳು.

ಆ ಹಣವನ್ನು ವಸೂಲಿ ಮಾಡದ ಸರ್ಕಾರ ಇಂದು ತೈಲ ಬೆಲೆಯನ್ನು ಏರಿಸಿ ಈಗಾಗಲೇ ಹಣದುಬ್ಬರದಿಂದ ತತ್ತರಿಸುತ್ತಿರುವ ಜನಸಾಮಾನ್ಯರ ಮೇಲೆ ಮತ್ತಷ್ಟು ಒತ್ತಡ ಹೇರುತ್ತಿದೆ ಎಂದರೆ ಈ ಸರ್ಕಾರಕ್ಕೆ ಜನ ಏನು ಮಾಡಬೇಕು?

ಇಲ್ಲಿಯ ತನಕ ಸಿನಿಮಾ, ಆರ್ಟ್ ಗ್ಯಾಲರಿ, ನಾಟಕ ಇಂತಹವುಗಳ ಮೇಲೆ ದಾಳಿ ಇಡುತ್ತಿದ್ದ ಕೋಮುವಾದಿಗಳು ಈಗ ಪತ್ರಿಕಾ ಕಚೇರಿಗಳ ಮೇಲೂ ದಾಳಿ ಮಾಡಲಾರಂಭಿಸಿವೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ `ಲೋಕಸತ್ತಾ’ ಎಂಬ ಮರಾಠಿ ಪತ್ರಿಕೆಯ ಸಂಪಾದಕ ಕುಮಾರ್ ಕೇಟ್ಕರ್‍ರವರ ಮನೆಯ ಮೇಲೆ ಶಿವಸಂಗ್ರಾಮ್ ಪಾರ್ಟಿ ಎಂಬ ಸಂಘಟನೆಯ ಸದಸ್ಯರು ದಾಳಿ ಮಾಡಿದರು.

ಅದಕ್ಕೆ ಕಾರಣ ಕೇಟ್ಕರ್‍ರವರು ಬರೆದಿದ್ದ ಒಂದು ಲೇಖನ. ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರವು ಅಮೆರಿಕದ ಸ್ಟ್ಯಾಚು ಆಫ್ ಲಿಬರ್ಟಿದಂತೆಯೇ ಮುಂಬೈನ ಸಮುದ್ರದಲ್ಲಿ ಶಿವಾಜಿಯ ದೊಡ್ಡ ಪ್ರತಿಮೆಯನ್ನು ಸ್ಥಾಪಿಸುವ ಪ್ರಸ್ತಾಪವನ್ನು ಎತ್ತಿಕೊಂಡಿತು. ಆ ಪ್ರತಿಮೆಯನ್ನು ಸ್ಥಾಪಿಸಲು ಹಲವು ಕೋಟಿ ರೂಪಾಯಿಗಳು ವೆಚ್ಚವಾಗುತ್ತದೆಂದು ಅಂದಾಜಿಸಲಾಗಿತ್ತು.

ಹೇಳಿಕೇಳಿ ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿ ನೂರಾರು ಅಸಹಾಯಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಇತರೆಡೆ ಬಡತನ ತಾಂಡವವಾಡುತ್ತಿದೆ, ಜನ ಸಾಮಾನ್ಯರಿಗೆ ಕುಡಿಯುವ ನೀರೂ ಅಲಭ್ಯವಾಗಿದೆ. ಇಂಥ ಪರಿಸ್ಥಿತಿಯಲ್ಲಿ ಜನರ ಸಮಸ್ಯೆಯನ್ನು ನೀಗಿಸುವ ಬದಲಾಗಿ ಒಂದು ಪ್ರತಿಮೆಗೆ ಕೋಟ್ಯಾಂತರ ರೂಪಾಯಿಗಳನ್ನು ವೆಚ್ಚ ಮಾಡುವುದು ಸರಿಯೇ? ಎಂದು ಕೇಟ್ಕರ್ ತಮ್ಮ ಲೇಖನದಲ್ಲಿ ಪ್ರಶ್ನಿಸಿದರು. ಅವರ ಪ್ರಶ್ನೆ ಸರಿಯಾಗಿಯೇ ಇತ್ತು. ಆದರೆ ಶಿವಸಂಗ್ರಾಮ್ ಪಾರ್ಟಿಯವರಿಗೆ ಕೇಟ್ಕರ್ ಶಿವಾಜಿಗೆ ಅವಮಾನ ಮಾಡಿದ್ದಾರೆ ಎನಿಸಿತು. ಶಿವಾಜಿಯ ಪ್ರತಿಮೆ ಅಗತ್ಯವಿಲ್ಲ ಎಂದೇ ಆತ ಹೇಳಿದ್ದಾರೆಂದು ಭಾವಿಸಿದ ಅವರು ಕೇಟ್ಕರ್‍ರವರ ಮನೆಯ ಮೇಲೆ ದಾಳಿ ಮಾಡಿದರು. ಆದರೆ ಶಿವಸಂಗ್ರಾಮ್ ಪಾರ್ಟಿಯವರು ಶರದ್ ಪವಾರ್‍ರವರ ಎನ್‍ಸಿಪಿ ಪಕ್ಷದ ಅಂಗ ಸಂಸ್ಥೆಯಾಗಿರುವುದರಿಂದ ಅವರ ವಿರುದ್ಧ ಯಾವ ಕಾನೂನು ಕ್ರಮವನ್ನು ಅಲ್ಲಿನ ಸರ್ಕಾರ ತೆಗೆದುಕೊಂಡಿಲ್ಲ.

ಈ ವಾರ ನಡೆದಿರುವ ಈ ಪ್ರಕರಣಗಳು ಮೊದಲ ಬಾರಿಗೆ ನಡೆದಿರುವಂತಹದ್ದೇನಲ್ಲ. ಕಳೆದ ವರ್ಷ `ದಿನಸುಡರ್’ ಪತ್ರಿಕೆ ನಡೆಸಿದ ಸಮೀಕ್ಷೆಯೊಂದರಿಂದ ಉದ್ರೇಕಗೊಂಡ ಕರುಣಾನಿಧಿಯ ಬೆಂಬಲಿಗರು ಆ ಪತ್ರಿಕೆಯ ಕಚೇರಿಯ ಮೇಲೆ ದಾಳಿ ನಡೆಸಿ ಇಬ್ಬರ ಸಾವಿಗೆ ಕಾರಣರಾಗಿದ್ದರು. ಹಾಗೆಯೇ ಸರ್ವೋಚ್ಛ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಮೂರ್ತಿ ವೈ.ಕೆ. ಸಬರ್‍ವಾಲ್‍ರ ಬಗ್ಗೆ ತನಿಖಾ ವರದಿಗಳನ್ನು ಪ್ರಕಟಿಸಿದ್ದಕ್ಕೆ ದೆಹಲಿ ನ್ಯಾಯಾಲಯ ಮಿಡ್ ಡೆ ಪತ್ರಿಕೆಯ ಮೂವರು ಪತ್ರಕರ್ತರಿಗೆ ಜೈಲು ಶಿಕ್ಷೆಯನ್ನು ನೀಡಿತ್ತು.

ಪ್ರಜಾಪ್ರಭುತ್ವದ ನಾಲ್ಕನೆ ಸ್ತಂಭವಾಗಿರುವ ಪತ್ರಿಕೋದ್ಯಮದ ಮೇಲೆ ಹೀಗೆ ಒಂದೆಡೆಯಿಂದ ಕೋಮುವಾದಿಗಳಿಂದ ದಾಳಿ, ಇನ್ನೊಂದೆಡೆ ವ್ಯವಸ್ಥೆಯಿಂದ ದಾಳಿ ನಡೆದರೆ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವವಾದರೂ ಉಳಿಯುವುದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...