Homeಅಂಕಣಗಳುಪೆಟ್ರೋಲ್ ಮತ್ತು ಪತ್ರಿಕೋದ್ಯಮ

ಪೆಟ್ರೋಲ್ ಮತ್ತು ಪತ್ರಿಕೋದ್ಯಮ

ಪೆಟ್ರೋಲ್ ಬೆಲೆಯನ್ನು ಇನ್ನಿಲ್ಲದಂತೆ ಏರಿಸಿರುವ ಕೇಂದ್ರ ಸರ್ಕಾರ ಅದಕ್ಕೆ ಹಲವಾರು ಸಮಜಾಯಿಷಿಗಳನ್ನು ನೀಡುತ್ತಿದೆ. ತೈಲ ಉತ್ಪಾದನಾ ಕಂಪನಿಗಳ ನಷ್ಟ 42 ಸಾವಿರ ಕೋಟಿಯಿಂದ 60 ಸಾವಿರ ಕೋಟಿ

- Advertisement -
- Advertisement -

| ಗೌರಿ ಲಂಕೇಶ್ |
08 ಜೂನ್, 2008 (ಸಂಪಾದಕೀಯದಿಂದ)

ಪೆಟ್ರೋಲ್ ಬೆಲೆಯನ್ನು ಇನ್ನಿಲ್ಲದಂತೆ ಏರಿಸಿರುವ ಕೇಂದ್ರ ಸರ್ಕಾರ ಅದಕ್ಕೆ ಹಲವಾರು ಸಮಜಾಯಿಷಿಗಳನ್ನು ನೀಡುತ್ತಿದೆ. ಅವುಗಳಲ್ಲಿ ತೈಲ ಉತ್ಪಾದನಾ ಕಂಪನಿಗಳ ನಷ್ಟ 42 ಸಾವಿರ ಕೋಟಿಯಿಂದ 60 ಸಾವಿರ ಕೋಟಿ ರೂಪಾಯಿಗಳಿಗೆ ಏರದಂತೆ ತಡೆಯಲೆಂದು ಬೆಲೆಯನ್ನು ಹೆಚ್ಚಿಸಬೇಕಾಯಿತು ಎಂಬುದು ಒಂದು.

ಆದರೆ ವಿಚಿತ್ರ ಸಂಗತಿ ಯಾವುದೆಂದರೆ ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್, ಭಾರತ್ ಗ್ಯಾಸ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಗಳು ಕಳೆದ ವರ್ಷ ಇಷ್ಟೊಂದು ನಷ್ಟವನ್ನು ಕಂಡಿದ್ದರೆ, ಅದೇ ಸಾಲಿನಲ್ಲಿ ರಿಲೆಯನ್ಸ್ ಕಂಪನಿಯು ಇದೇ ತೈಲ ಉತ್ಪಾದನೆಯಲ್ಲಿ 10,372 ಕೋಟಿ ರೂಪಾಯಿಗಳಷ್ಟು ಲಾಭವನ್ನು ಕಂಡಿದೆ. ಇದು ಹೇಗೆ ಸಾಧ್ಯವಾಯಿತು?

ಇನ್ನೊಂದು ಸಂಗತಿ ಯಾವುದೆಂದರೆ ಇವತ್ತು ತೈಲ ಬೆಲೆಯನ್ನು ಏರಿಸಿ ಜನಸಾಮಾನ್ಯರನ್ನು ಸಂಕಷ್ಟಕ್ಕೆ ದೂಡಿರುವ ಕೇಂದ್ರ ಸರ್ಕಾರ ತನ್ನ 2008ನೇ ಬಜೆಟ್‍ನಲ್ಲಿ ಹೇಳಿದ್ದೇನೆಂದರೆ 2007-08ನೇ ಆರ್ಥಿಕ ವರ್ಷದಲ್ಲಿ ಕಾಪೆರ್Çರೇಟ್ ಕಂಪೆನಿಗಳಿಗೆ ನೀಡಿದ ತೆರಿಗೆ ರಿಯಾಯಿತಿಯಿಂದಾಗಿ 58,655 ಕೋಟಿ ರೂಪಾಯಿಗಳ ನಷ್ಟ ಮತ್ತು ಅಬಕಾರಿ ಶುಲ್ಕ ರಿಯಾಯಿತಿಯಿಂದಾಗಿ 87,992 ಕೋಟಿ ರೂಪಾಯಿಗಳಷ್ಟು ನಷ್ಟವಾಗಿದೆ ಎಂದು. ಇವೆರಡರ ಒಟ್ಟು ಮೊತ್ತ 1,46,642 ಕೋಟಿ ರೂಪಾಯಿಗಳು.

ಆ ಹಣವನ್ನು ವಸೂಲಿ ಮಾಡದ ಸರ್ಕಾರ ಇಂದು ತೈಲ ಬೆಲೆಯನ್ನು ಏರಿಸಿ ಈಗಾಗಲೇ ಹಣದುಬ್ಬರದಿಂದ ತತ್ತರಿಸುತ್ತಿರುವ ಜನಸಾಮಾನ್ಯರ ಮೇಲೆ ಮತ್ತಷ್ಟು ಒತ್ತಡ ಹೇರುತ್ತಿದೆ ಎಂದರೆ ಈ ಸರ್ಕಾರಕ್ಕೆ ಜನ ಏನು ಮಾಡಬೇಕು?

ಇಲ್ಲಿಯ ತನಕ ಸಿನಿಮಾ, ಆರ್ಟ್ ಗ್ಯಾಲರಿ, ನಾಟಕ ಇಂತಹವುಗಳ ಮೇಲೆ ದಾಳಿ ಇಡುತ್ತಿದ್ದ ಕೋಮುವಾದಿಗಳು ಈಗ ಪತ್ರಿಕಾ ಕಚೇರಿಗಳ ಮೇಲೂ ದಾಳಿ ಮಾಡಲಾರಂಭಿಸಿವೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ `ಲೋಕಸತ್ತಾ’ ಎಂಬ ಮರಾಠಿ ಪತ್ರಿಕೆಯ ಸಂಪಾದಕ ಕುಮಾರ್ ಕೇಟ್ಕರ್‍ರವರ ಮನೆಯ ಮೇಲೆ ಶಿವಸಂಗ್ರಾಮ್ ಪಾರ್ಟಿ ಎಂಬ ಸಂಘಟನೆಯ ಸದಸ್ಯರು ದಾಳಿ ಮಾಡಿದರು.

ಅದಕ್ಕೆ ಕಾರಣ ಕೇಟ್ಕರ್‍ರವರು ಬರೆದಿದ್ದ ಒಂದು ಲೇಖನ. ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರವು ಅಮೆರಿಕದ ಸ್ಟ್ಯಾಚು ಆಫ್ ಲಿಬರ್ಟಿದಂತೆಯೇ ಮುಂಬೈನ ಸಮುದ್ರದಲ್ಲಿ ಶಿವಾಜಿಯ ದೊಡ್ಡ ಪ್ರತಿಮೆಯನ್ನು ಸ್ಥಾಪಿಸುವ ಪ್ರಸ್ತಾಪವನ್ನು ಎತ್ತಿಕೊಂಡಿತು. ಆ ಪ್ರತಿಮೆಯನ್ನು ಸ್ಥಾಪಿಸಲು ಹಲವು ಕೋಟಿ ರೂಪಾಯಿಗಳು ವೆಚ್ಚವಾಗುತ್ತದೆಂದು ಅಂದಾಜಿಸಲಾಗಿತ್ತು.

ಹೇಳಿಕೇಳಿ ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿ ನೂರಾರು ಅಸಹಾಯಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಇತರೆಡೆ ಬಡತನ ತಾಂಡವವಾಡುತ್ತಿದೆ, ಜನ ಸಾಮಾನ್ಯರಿಗೆ ಕುಡಿಯುವ ನೀರೂ ಅಲಭ್ಯವಾಗಿದೆ. ಇಂಥ ಪರಿಸ್ಥಿತಿಯಲ್ಲಿ ಜನರ ಸಮಸ್ಯೆಯನ್ನು ನೀಗಿಸುವ ಬದಲಾಗಿ ಒಂದು ಪ್ರತಿಮೆಗೆ ಕೋಟ್ಯಾಂತರ ರೂಪಾಯಿಗಳನ್ನು ವೆಚ್ಚ ಮಾಡುವುದು ಸರಿಯೇ? ಎಂದು ಕೇಟ್ಕರ್ ತಮ್ಮ ಲೇಖನದಲ್ಲಿ ಪ್ರಶ್ನಿಸಿದರು. ಅವರ ಪ್ರಶ್ನೆ ಸರಿಯಾಗಿಯೇ ಇತ್ತು. ಆದರೆ ಶಿವಸಂಗ್ರಾಮ್ ಪಾರ್ಟಿಯವರಿಗೆ ಕೇಟ್ಕರ್ ಶಿವಾಜಿಗೆ ಅವಮಾನ ಮಾಡಿದ್ದಾರೆ ಎನಿಸಿತು. ಶಿವಾಜಿಯ ಪ್ರತಿಮೆ ಅಗತ್ಯವಿಲ್ಲ ಎಂದೇ ಆತ ಹೇಳಿದ್ದಾರೆಂದು ಭಾವಿಸಿದ ಅವರು ಕೇಟ್ಕರ್‍ರವರ ಮನೆಯ ಮೇಲೆ ದಾಳಿ ಮಾಡಿದರು. ಆದರೆ ಶಿವಸಂಗ್ರಾಮ್ ಪಾರ್ಟಿಯವರು ಶರದ್ ಪವಾರ್‍ರವರ ಎನ್‍ಸಿಪಿ ಪಕ್ಷದ ಅಂಗ ಸಂಸ್ಥೆಯಾಗಿರುವುದರಿಂದ ಅವರ ವಿರುದ್ಧ ಯಾವ ಕಾನೂನು ಕ್ರಮವನ್ನು ಅಲ್ಲಿನ ಸರ್ಕಾರ ತೆಗೆದುಕೊಂಡಿಲ್ಲ.

ಈ ವಾರ ನಡೆದಿರುವ ಈ ಪ್ರಕರಣಗಳು ಮೊದಲ ಬಾರಿಗೆ ನಡೆದಿರುವಂತಹದ್ದೇನಲ್ಲ. ಕಳೆದ ವರ್ಷ `ದಿನಸುಡರ್’ ಪತ್ರಿಕೆ ನಡೆಸಿದ ಸಮೀಕ್ಷೆಯೊಂದರಿಂದ ಉದ್ರೇಕಗೊಂಡ ಕರುಣಾನಿಧಿಯ ಬೆಂಬಲಿಗರು ಆ ಪತ್ರಿಕೆಯ ಕಚೇರಿಯ ಮೇಲೆ ದಾಳಿ ನಡೆಸಿ ಇಬ್ಬರ ಸಾವಿಗೆ ಕಾರಣರಾಗಿದ್ದರು. ಹಾಗೆಯೇ ಸರ್ವೋಚ್ಛ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಮೂರ್ತಿ ವೈ.ಕೆ. ಸಬರ್‍ವಾಲ್‍ರ ಬಗ್ಗೆ ತನಿಖಾ ವರದಿಗಳನ್ನು ಪ್ರಕಟಿಸಿದ್ದಕ್ಕೆ ದೆಹಲಿ ನ್ಯಾಯಾಲಯ ಮಿಡ್ ಡೆ ಪತ್ರಿಕೆಯ ಮೂವರು ಪತ್ರಕರ್ತರಿಗೆ ಜೈಲು ಶಿಕ್ಷೆಯನ್ನು ನೀಡಿತ್ತು.

ಪ್ರಜಾಪ್ರಭುತ್ವದ ನಾಲ್ಕನೆ ಸ್ತಂಭವಾಗಿರುವ ಪತ್ರಿಕೋದ್ಯಮದ ಮೇಲೆ ಹೀಗೆ ಒಂದೆಡೆಯಿಂದ ಕೋಮುವಾದಿಗಳಿಂದ ದಾಳಿ, ಇನ್ನೊಂದೆಡೆ ವ್ಯವಸ್ಥೆಯಿಂದ ದಾಳಿ ನಡೆದರೆ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವವಾದರೂ ಉಳಿಯುವುದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...