Homeಅಂಕಣಗಳುಪೆಟ್ರೋಲ್ ಮತ್ತು ಪತ್ರಿಕೋದ್ಯಮ

ಪೆಟ್ರೋಲ್ ಮತ್ತು ಪತ್ರಿಕೋದ್ಯಮ

ಪೆಟ್ರೋಲ್ ಬೆಲೆಯನ್ನು ಇನ್ನಿಲ್ಲದಂತೆ ಏರಿಸಿರುವ ಕೇಂದ್ರ ಸರ್ಕಾರ ಅದಕ್ಕೆ ಹಲವಾರು ಸಮಜಾಯಿಷಿಗಳನ್ನು ನೀಡುತ್ತಿದೆ. ತೈಲ ಉತ್ಪಾದನಾ ಕಂಪನಿಗಳ ನಷ್ಟ 42 ಸಾವಿರ ಕೋಟಿಯಿಂದ 60 ಸಾವಿರ ಕೋಟಿ

- Advertisement -
- Advertisement -

| ಗೌರಿ ಲಂಕೇಶ್ |
08 ಜೂನ್, 2008 (ಸಂಪಾದಕೀಯದಿಂದ)

ಪೆಟ್ರೋಲ್ ಬೆಲೆಯನ್ನು ಇನ್ನಿಲ್ಲದಂತೆ ಏರಿಸಿರುವ ಕೇಂದ್ರ ಸರ್ಕಾರ ಅದಕ್ಕೆ ಹಲವಾರು ಸಮಜಾಯಿಷಿಗಳನ್ನು ನೀಡುತ್ತಿದೆ. ಅವುಗಳಲ್ಲಿ ತೈಲ ಉತ್ಪಾದನಾ ಕಂಪನಿಗಳ ನಷ್ಟ 42 ಸಾವಿರ ಕೋಟಿಯಿಂದ 60 ಸಾವಿರ ಕೋಟಿ ರೂಪಾಯಿಗಳಿಗೆ ಏರದಂತೆ ತಡೆಯಲೆಂದು ಬೆಲೆಯನ್ನು ಹೆಚ್ಚಿಸಬೇಕಾಯಿತು ಎಂಬುದು ಒಂದು.

ಆದರೆ ವಿಚಿತ್ರ ಸಂಗತಿ ಯಾವುದೆಂದರೆ ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್, ಭಾರತ್ ಗ್ಯಾಸ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಗಳು ಕಳೆದ ವರ್ಷ ಇಷ್ಟೊಂದು ನಷ್ಟವನ್ನು ಕಂಡಿದ್ದರೆ, ಅದೇ ಸಾಲಿನಲ್ಲಿ ರಿಲೆಯನ್ಸ್ ಕಂಪನಿಯು ಇದೇ ತೈಲ ಉತ್ಪಾದನೆಯಲ್ಲಿ 10,372 ಕೋಟಿ ರೂಪಾಯಿಗಳಷ್ಟು ಲಾಭವನ್ನು ಕಂಡಿದೆ. ಇದು ಹೇಗೆ ಸಾಧ್ಯವಾಯಿತು?

ಇನ್ನೊಂದು ಸಂಗತಿ ಯಾವುದೆಂದರೆ ಇವತ್ತು ತೈಲ ಬೆಲೆಯನ್ನು ಏರಿಸಿ ಜನಸಾಮಾನ್ಯರನ್ನು ಸಂಕಷ್ಟಕ್ಕೆ ದೂಡಿರುವ ಕೇಂದ್ರ ಸರ್ಕಾರ ತನ್ನ 2008ನೇ ಬಜೆಟ್‍ನಲ್ಲಿ ಹೇಳಿದ್ದೇನೆಂದರೆ 2007-08ನೇ ಆರ್ಥಿಕ ವರ್ಷದಲ್ಲಿ ಕಾಪೆರ್Çರೇಟ್ ಕಂಪೆನಿಗಳಿಗೆ ನೀಡಿದ ತೆರಿಗೆ ರಿಯಾಯಿತಿಯಿಂದಾಗಿ 58,655 ಕೋಟಿ ರೂಪಾಯಿಗಳ ನಷ್ಟ ಮತ್ತು ಅಬಕಾರಿ ಶುಲ್ಕ ರಿಯಾಯಿತಿಯಿಂದಾಗಿ 87,992 ಕೋಟಿ ರೂಪಾಯಿಗಳಷ್ಟು ನಷ್ಟವಾಗಿದೆ ಎಂದು. ಇವೆರಡರ ಒಟ್ಟು ಮೊತ್ತ 1,46,642 ಕೋಟಿ ರೂಪಾಯಿಗಳು.

ಆ ಹಣವನ್ನು ವಸೂಲಿ ಮಾಡದ ಸರ್ಕಾರ ಇಂದು ತೈಲ ಬೆಲೆಯನ್ನು ಏರಿಸಿ ಈಗಾಗಲೇ ಹಣದುಬ್ಬರದಿಂದ ತತ್ತರಿಸುತ್ತಿರುವ ಜನಸಾಮಾನ್ಯರ ಮೇಲೆ ಮತ್ತಷ್ಟು ಒತ್ತಡ ಹೇರುತ್ತಿದೆ ಎಂದರೆ ಈ ಸರ್ಕಾರಕ್ಕೆ ಜನ ಏನು ಮಾಡಬೇಕು?

ಇಲ್ಲಿಯ ತನಕ ಸಿನಿಮಾ, ಆರ್ಟ್ ಗ್ಯಾಲರಿ, ನಾಟಕ ಇಂತಹವುಗಳ ಮೇಲೆ ದಾಳಿ ಇಡುತ್ತಿದ್ದ ಕೋಮುವಾದಿಗಳು ಈಗ ಪತ್ರಿಕಾ ಕಚೇರಿಗಳ ಮೇಲೂ ದಾಳಿ ಮಾಡಲಾರಂಭಿಸಿವೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ `ಲೋಕಸತ್ತಾ’ ಎಂಬ ಮರಾಠಿ ಪತ್ರಿಕೆಯ ಸಂಪಾದಕ ಕುಮಾರ್ ಕೇಟ್ಕರ್‍ರವರ ಮನೆಯ ಮೇಲೆ ಶಿವಸಂಗ್ರಾಮ್ ಪಾರ್ಟಿ ಎಂಬ ಸಂಘಟನೆಯ ಸದಸ್ಯರು ದಾಳಿ ಮಾಡಿದರು.

ಅದಕ್ಕೆ ಕಾರಣ ಕೇಟ್ಕರ್‍ರವರು ಬರೆದಿದ್ದ ಒಂದು ಲೇಖನ. ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರವು ಅಮೆರಿಕದ ಸ್ಟ್ಯಾಚು ಆಫ್ ಲಿಬರ್ಟಿದಂತೆಯೇ ಮುಂಬೈನ ಸಮುದ್ರದಲ್ಲಿ ಶಿವಾಜಿಯ ದೊಡ್ಡ ಪ್ರತಿಮೆಯನ್ನು ಸ್ಥಾಪಿಸುವ ಪ್ರಸ್ತಾಪವನ್ನು ಎತ್ತಿಕೊಂಡಿತು. ಆ ಪ್ರತಿಮೆಯನ್ನು ಸ್ಥಾಪಿಸಲು ಹಲವು ಕೋಟಿ ರೂಪಾಯಿಗಳು ವೆಚ್ಚವಾಗುತ್ತದೆಂದು ಅಂದಾಜಿಸಲಾಗಿತ್ತು.

ಹೇಳಿಕೇಳಿ ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿ ನೂರಾರು ಅಸಹಾಯಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಇತರೆಡೆ ಬಡತನ ತಾಂಡವವಾಡುತ್ತಿದೆ, ಜನ ಸಾಮಾನ್ಯರಿಗೆ ಕುಡಿಯುವ ನೀರೂ ಅಲಭ್ಯವಾಗಿದೆ. ಇಂಥ ಪರಿಸ್ಥಿತಿಯಲ್ಲಿ ಜನರ ಸಮಸ್ಯೆಯನ್ನು ನೀಗಿಸುವ ಬದಲಾಗಿ ಒಂದು ಪ್ರತಿಮೆಗೆ ಕೋಟ್ಯಾಂತರ ರೂಪಾಯಿಗಳನ್ನು ವೆಚ್ಚ ಮಾಡುವುದು ಸರಿಯೇ? ಎಂದು ಕೇಟ್ಕರ್ ತಮ್ಮ ಲೇಖನದಲ್ಲಿ ಪ್ರಶ್ನಿಸಿದರು. ಅವರ ಪ್ರಶ್ನೆ ಸರಿಯಾಗಿಯೇ ಇತ್ತು. ಆದರೆ ಶಿವಸಂಗ್ರಾಮ್ ಪಾರ್ಟಿಯವರಿಗೆ ಕೇಟ್ಕರ್ ಶಿವಾಜಿಗೆ ಅವಮಾನ ಮಾಡಿದ್ದಾರೆ ಎನಿಸಿತು. ಶಿವಾಜಿಯ ಪ್ರತಿಮೆ ಅಗತ್ಯವಿಲ್ಲ ಎಂದೇ ಆತ ಹೇಳಿದ್ದಾರೆಂದು ಭಾವಿಸಿದ ಅವರು ಕೇಟ್ಕರ್‍ರವರ ಮನೆಯ ಮೇಲೆ ದಾಳಿ ಮಾಡಿದರು. ಆದರೆ ಶಿವಸಂಗ್ರಾಮ್ ಪಾರ್ಟಿಯವರು ಶರದ್ ಪವಾರ್‍ರವರ ಎನ್‍ಸಿಪಿ ಪಕ್ಷದ ಅಂಗ ಸಂಸ್ಥೆಯಾಗಿರುವುದರಿಂದ ಅವರ ವಿರುದ್ಧ ಯಾವ ಕಾನೂನು ಕ್ರಮವನ್ನು ಅಲ್ಲಿನ ಸರ್ಕಾರ ತೆಗೆದುಕೊಂಡಿಲ್ಲ.

ಈ ವಾರ ನಡೆದಿರುವ ಈ ಪ್ರಕರಣಗಳು ಮೊದಲ ಬಾರಿಗೆ ನಡೆದಿರುವಂತಹದ್ದೇನಲ್ಲ. ಕಳೆದ ವರ್ಷ `ದಿನಸುಡರ್’ ಪತ್ರಿಕೆ ನಡೆಸಿದ ಸಮೀಕ್ಷೆಯೊಂದರಿಂದ ಉದ್ರೇಕಗೊಂಡ ಕರುಣಾನಿಧಿಯ ಬೆಂಬಲಿಗರು ಆ ಪತ್ರಿಕೆಯ ಕಚೇರಿಯ ಮೇಲೆ ದಾಳಿ ನಡೆಸಿ ಇಬ್ಬರ ಸಾವಿಗೆ ಕಾರಣರಾಗಿದ್ದರು. ಹಾಗೆಯೇ ಸರ್ವೋಚ್ಛ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಮೂರ್ತಿ ವೈ.ಕೆ. ಸಬರ್‍ವಾಲ್‍ರ ಬಗ್ಗೆ ತನಿಖಾ ವರದಿಗಳನ್ನು ಪ್ರಕಟಿಸಿದ್ದಕ್ಕೆ ದೆಹಲಿ ನ್ಯಾಯಾಲಯ ಮಿಡ್ ಡೆ ಪತ್ರಿಕೆಯ ಮೂವರು ಪತ್ರಕರ್ತರಿಗೆ ಜೈಲು ಶಿಕ್ಷೆಯನ್ನು ನೀಡಿತ್ತು.

ಪ್ರಜಾಪ್ರಭುತ್ವದ ನಾಲ್ಕನೆ ಸ್ತಂಭವಾಗಿರುವ ಪತ್ರಿಕೋದ್ಯಮದ ಮೇಲೆ ಹೀಗೆ ಒಂದೆಡೆಯಿಂದ ಕೋಮುವಾದಿಗಳಿಂದ ದಾಳಿ, ಇನ್ನೊಂದೆಡೆ ವ್ಯವಸ್ಥೆಯಿಂದ ದಾಳಿ ನಡೆದರೆ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವವಾದರೂ ಉಳಿಯುವುದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...