Homeಮುಖಪುಟಪೇಜಾವರರ ಗಂಟಲಲ್ಲಿ ಹಿಂದೂತ್ವದ ಪುಂಡ!!

ಪೇಜಾವರರ ಗಂಟಲಲ್ಲಿ ಹಿಂದೂತ್ವದ ಪುಂಡ!!

- Advertisement -
- Advertisement -

ವರದಿಗಾರ |

ಸಂಘಪರಿವಾರದ ಆಸ್ಥಾನ ಪುರೋಹಿತ ಪೇಜಾವರ ವಿಶ್ವೇಶತೀರ್ಥ ಸ್ವಾಮಿಯ ಅಸಲಿ ಅವತಾರ ಅನಾವರಣವಾಗಿದೆ. ಕಳೆದ ವಾರ ಮಂಗಳೂರಲ್ಲಿ ವಿಶ್ವಹಿಂದೂ ಪರಿಷತ್ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಬೇಗ ಆಗಬೇಕೆಂದು ಜನದ್ರೋಹ ಸಭೆಯೊಂದನ್ನು ನಡೆಸಿತ್ತಲ್ಲ, ಅಲ್ಲಿ ಪೇಜಾವರರ ದಿವ್ಯ ಸಾನಿಧ್ಯವಿತ್ತು. ರಾಮಮಂದಿರಕ್ಕಾಗಿ ಪೇಜಾವರ ಸ್ವಾಮಿ ಕ್ಯಾತೆ ತೆಗೆದು ಕೂಗಾಡಿದ ಪರಿ ಭಯೋತ್ಪಾದನೆಯ ಸ್ಯಾಂಪಲ್ಲಿನಂತಿತ್ತು. ನಳಿನ್‌ಕುಮಾರ್ ಕಟೀಲ್, ಅನಂತಕುಮಾರ್ ಹೆಗಡೆ, ಪ್ರತಾಪ್‌ಸಿಂಹ, ಪ್ರಮೋದ್ ಮುತಾಲಿಕ್ ಮುಂತಾದ ಮೂರನೇ ದರ್ಜೆ ಹಿಂದೂತ್ವದ ಹಿಕಮತ್ತುದಾರರ ಗಂಟಲಲ್ಲಿ ಪೇಜಾವರ ಮಾತನಾಡಿದ್ದು ಕೇಳಿದ ಜನ ಬೆಚ್ಚಿಬಿದ್ದಿದ್ದಾರೆ. ಅಲ್ಲಿಗೆ ಈ ಅದ್ವೈತ ಸನ್ಯಾಸಿಯ ದೋಖಾ ದ್ವಂದ್ವ ಸಿದ್ಧಾಂತ ಮತ್ತೊಮ್ಮೆ ಜಗಜ್ಜಾಹೀರಾಗಿ ಹೋಗಿದೆ!

ಪರಧರ್ಮ ಸಹಿಷ್ಣು ಸಂತನ ಗೆಟಪ್ಪಿನಲ್ಲಿ ಓಡಾಡುವ ಈ ಪೊಲಿಟಿಕಲ್ ಸ್ವಾಮಿಯ ನಡೆ-ನುಡಿಯಲ್ಲಿ ಯಾವಾಗಲೂ ವಿರೋಧಾಭಾಸ-ವಿಪರ‍್ಯಾಸಗಳೇ, ಬ್ರಾಹ್ಮಣ್ಯದಡಿಯ ಅಸಮಾನತೆ-ಅಸ್ಪೃಶ್ಯತೆಗಳ ಅರ್ಥ ಮಾಡಿಸುತ್ತವೆ. ಹರಿಜನರ ಕೇರಿಗಳಿಗೆ ಹೋಗಿ ಪಾದ ತೊಳೆಸಿಕೊಳ್ಳುವ ಪೇಜಾವರರು ಮರಳಿ ಉಡುಪಿ ಮಠಕ್ಕೆ ಬರುವಾಗಲೇ ಜನಿವಾರ ಬದಲಿಸಿ ಶುದ್ಧೀಕರಣಗೊಳ್ಳುತ್ತಾರೆ. ಧರ್ಮೋನ್ಮಾದಿ ಕರಸೇವಕರು ಬಾಬರಿ ಮಸೀದಿ ಗುಮ್ಮಟ ಉರುಳಿಸುವಾಗ ಕಣ್ಣಾರೆ ಕಂಡು ಧನ್ಯತಾಭಾವದಿಂದ ಮಂದಹಾಸ ಬೀರುವ ಈ ಸ್ವಾಮಿ ತನ್ನ ಮಠದ ಆವರಣದಲ್ಲೇ ಮುಸ್ಲಿಮರಿಗೆ ಇಫ್ತಾರ್ ಕೂಟ ಏರ್ಪಡಿಸುವ ನಾಟಕವಾಡಬಲ್ಲರು.

ಉಡುಪಿ ಮಾಧ್ವಮಠದಲ್ಲಿ ಪಂಕ್ತಿಭೇದವೇ ಇಲ್ಲವೆಂದು ಹಸಿ-ಹಸಿ ಸುಳ್ಳು ಹೇಳುವ ಪೇಜಾವರ ಸ್ವಾಮಿ ಕುಕ್ಕೆ ಸುಬ್ರಹ್ಮಣ್ಯದ ಮಡೆಸ್ನಾನಕ್ಕೆ ಪರ‍್ಯಾಯವಾಗಿ ಉಡೆಸ್ನಾನದ ಆವಿಷ್ಕಾರ ಮಾಡಿ ಅಮಾಯಕ ಅಬ್ರಾಹ್ಮಣರ ದಿಕ್ಕು ತಪ್ಪಿಸುತ್ತಾರೆ. ಇವತ್ತಿಗೂ ಪೇಜಾವರರು ಗೋ-ಗೂಂಡಾಗಳಿಗೆ, ಬಾಬರಿ ಮಸೀದಿ ಧ್ವಂಸಕರಿಗೆ ಸ್ಫೂರ್ತಿಯ ಚಿಲುಮೆ. ತನ್ನ ಧಾರ್ಮಿಕ ಕಾರ್ಯಾಚರಣೆಗೆ ಅನುಕೂಲ ಆಗುತ್ತದೆಂದಾಗ ಸಾಬರನ್ನು ಮಠಕ್ಕೆ ಕರೆದು ಇಫ್ತಾರ್ ಕೂಟ ಮಾಡುವ ಪೇಜಾವರರು ಶಾಸಕ ರಘುಪತಿ ಭಟ್ಟನಂಥವರು ಕಣ್ಣುಬಿಟ್ಟರೆ ಹೆದರಿ ಮರು ವರ್ಷ ಆ ಇಫ್ತಾರ್ ಪ್ರಹಸನ ಮಾಡುವುದೇ ಇಲ್ಲಾ! ಹಿಂದೂತ್ವದ ಸೈತಾನರು ಪಾಪದ ಸಾಬರ ಬೆತ್ತಲೆ ಮಾಡಿ ಬಡಿದು ಕೇಕೆ ಹಾಕಿದರೂ, ಕೊಂದು ಎಸೆದರೂ ಕಂಡೂ ಕಾಣದಂತಿರುತ್ತಾರೆ ಪೇಜಾವರ ಸ್ವಾಮಿ. ಹಾಗಂತ ಶಾಂತಿ, ಸಹಬಾಳ್ವೆ, ಸಹಿಷ್ಣುತೆ, ಸಂವಿಧಾನದ ಬಗ್ಗೆ ಉದ್ದುದ್ದ ವ್ಯಾಖ್ಯಾನ ಕೊಡಲು ಮಾತ್ರ ಮರೆಯುವುದಿಲ್ಲ……..

ಇಂಥ ಗುಣಧರ್ಮದ ಪೇಜಾವರ ಸ್ವಾಮೀಜಿ ಮೊನ್ನೆ ಮಂಗಳೂರಲ್ಲಿ ಕೇಸರಿ ಕೂಟದಲ್ಲಿ ಉದುರಿಸಿದ ಭೀಭತ್ಸ ಅಣಿ ಮುತ್ತುಗಳು ಅವರ ಜಾಯಮಾನಕ್ಕೆ ತಕ್ಕಂತೆಯೇ ಇದೆ. ಮಾತಿನುದ್ದಕ್ಕೂ ಪೇಜಾವರರ ಮೇಲೆ ಹಿಂದೂತ್ವದ ಭಯೋತ್ಪಾದಕನ ಆವಾಹನೆ ಆದಂತಿತ್ತು. ಹಿಂದೂತ್ವದ ಕಾಳಗದ ಕಾಲಾಳುಗಳಾದ ಅವಿಭಜಿತ ದಕ್ಷಿಣ ಕನ್ನಡದ ಅಬ್ರಾಹ್ಮಣರನ್ನು ಅನಾಹುತಕ್ಕೆ ಪ್ರಚೋದಿಸುವ ಓಘ ಪೇಜಾವರರ ಭಾಷಣಕ್ಕಿತ್ತು. ಎತ್ತಿಂದೆತ್ತ ಲೆಕ್ಕಹಾಕಿ ತಾಳೆ ನೋಡಿದರೂ 2019ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೋದಿ ಮಾಮನ ಗೆಲ್ಲಿಸುವ ಮಸಲತ್ತಿನ ಮಾತುಗಾರಿಕೆ ಇದಾಗಿತ್ತೆಂಬುದು ಎಂಥ ಗಾಂಪನಿಗೂ ಅರ್ಥವಾಗುತ್ತದೆ!! ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೃವೀಕರಣಗೊಂಡಿರುವ ಹಿಂದೂತ್ವದ ಓಟ್‌ಬ್ಯಾಂಕ್ ಇನ್ನಾರು ತಿಂಗಳಲ್ಲಿ ಬರಲಿರುವ ಪಾರ್ಲಿಮೆಂಟ್ ಇಲೆಕ್ಷನ್ ತನಕ ಕಾಪಿಟ್ಟುಕೊಳ್ಳುವ ತಂತ್ರಗಾರಿಕೆ ಪೇಜಾವರ ಟೇಮಿನದಾಗಿತ್ತು.

ನಾಲ್ಕುವರೆ ವರ್ಷದಿಂದ ಸಂಘಪರಿವಾರದ ಬ್ರಾಹ್ಮಣ ರಿಂಗ್‌ಮಾಸ್ಟರ್‌ಗಳ ಪಾದುಕಾ ಪೂಜಾರಿ ಮೋದಿ ಪ್ರಧಾನಿಯಾಗಿದ್ದರೂ ಆತನಿಂದ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲಿಕ್ಕೆ ಯಾಕಾಗಲಿಲ್ಲ ಎಂಬ ಮೂಲಭೂತ ಪ್ರಶ್ನೆ ಮರೆಮಾಚಿದ ಪೇಜಾವರರು ಏಕಾಏಕಿ ಕಾಂಗ್ರೆಸ್ ಮೇಲೆ ಮುಗಿಬಿದ್ದಿದ್ದಾರೆ. ಆ ಮೂಲಕ ಇಲೆಕ್ಷನ್ ಪ್ರಚಾರ ಶುರುಮಾಡಿದ್ದಾರೆ. ಹಿಂದೂತ್ವಕ್ಕಾಗಿ ತನ್ನನ್ನು ಸಂಸದನಾಗಿಸಿದ ಜಿಲ್ಲೆಗೇ ಬೆಂಕಿ ಹಾಕ್ತೇನೆಂದು ಯಾವ ಮುಲಾಜೂ, ಮನುಷ್ಯತ್ವವೂ ಇಲ್ಲದೆ ಆರ್ಭಟಿಸುವ ನಳಿನ್‌ಕುಮಾರ್ ಕಟೀಲ್‌ನಂಥವರನ್ನು ಬಗಲಲ್ಲಿಟ್ಟುಕೊಂಡು ಪೇಜಾವರರು ಮಾಡಿದ ಭಾಷಣದ ನೀತಿ-ರೀತಿಗೆ ಕೂಗುಮಾರಿ ಖ್ಯಾತಿಯ ಚೈತ್ರಾ ಕುಂದಾಪುರ, ಸೂಲಿಬೆಲೆ ಚಕ್ರವರ್ತಿಯಂಥವರೇ ನಾಚಿ ತಲೆ ತಗ್ಗಿಸುವಂತಿತ್ತು!

ಪ್ರತಿದಿನ ಸಾವಿರ ಸುಳ್ಳು ಸಬೂಬು ಹೇಳುವ ಮೋದಿ 2019ರ ಚುನಾವಣೆಯಲ್ಲಿ ಬಚಾವಾಗದ ಪ್ರಪಾತಕ್ಕೆ ಹೋಗಿಬಿದ್ದಿದ್ದಾರೆಂಬುದು ಪೇಜಾವರರಂಥ ಹಿಂದೂ ಸಂತ ಸಂತಾನಕ್ಕೆ ಪಕ್ಕಾ ಆಗಿಹೋಗಿದೆ. ಮೋದಿಯಂಥ ಹುಂಬ ಶೋ ಮ್ಯಾನ್ ದೇಶದ ಚುಕ್ಕಾಣಿ ಹಿಡಿಯುವುದು ಸಂಘಪರಿವಾರಕ್ಕೆ ಅನಿವಾರ್ಯ ಅಗತ್ಯ. ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಅಡ್ಡಬರುತ್ತಿದೆ ಎಂದು ಬಿಂಬಿಸಿದರೆ ಜನರ ಭಾವನೆ ಕೆರಳಿಸಬಹುದೆಂಬ ದೂ(ದು)ರಾಲೋಚನೆ ಕಾವಿ ಕೂಟದ್ದು. ಹಾಗಾಗಿಯೇ ಮಂಗಳೂರಲ್ಲಿ ಪೇಜಾವರರು ಮಾತುಮಾತಿಗೆ ಕಾಂಗ್ರೆಸ್ ರಾಮಮಂದಿರ ವಿರೋಧಿ ಎಂಬಂತೆ ಪ್ರವಚನ ಮಾಡಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ವಿಶೇಷ ಕಾನೂನು ಮಾಡಬೇಕೆಂದು ಹೇಳುವ ಪೇಜಾವರ ಮಾತಿನ ಅರ್ಥ ಸುಗ್ರೀವಾಜ್ಞೆ ಮೂಲಕ ಅಯೋಧ್ಯೆಯಲ್ಲಿ ರಾಮನಿಗೆ ಗುಡಿಕಟ್ಟಬೇಕೆನ್ನುವುದೇ ಆಗಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ಸ್ಥಾಪನೆಗೆ ಕಾಂಗ್ರೆಸ್ ಸಹಕರಿಸಬೇಕೆಂದು ಎಚ್ಚರಿಕೆಯೂ ಪೇಜಾವರ ಸ್ವಾಮಿ ಕೊಟ್ಟಿದ್ದಾರೆ. ಕಾಂಗ್ರೆಸೇನಾದರೂ ರಾಮಮಂದಿರಕ್ಕೆ ಅಡ್ಡಗಾಲು ಹಾಕಿದರೆ ಮುಂಬರುವ ಚುನಾವಣೆಯಲ್ಲಿ ಆ ಪಾರ್ಟಿ ಮಣ್ಣು ಮುಕ್ಕುತ್ತದೆಯೆಂದು ಮೋದಿಯನ್ನು ಮೀರಿಸುವ ಸ್ಟೈಲಲ್ಲಿ ಪೇಜಾವರರು ಭಾಷಣ ಬಿಗಿದಿದ್ದಾರೆ. ಅಷ್ಟೇ ಅಲ್ಲ, ಮುಸ್ಲಿಮರು ರಾಮ ಮಂದಿರಕ್ಕೆ ಬೆಂಬಲಿಸಿ ಹಿಂದೂಗಳೊಂದಿಗೆ ಬಾಂಧವ್ಯ ಹೆಚ್ಚಿಸಿಕೊಳ್ಳಬೇಕು ಎಂದಿದ್ದಾರೆ. ಏನಿದರ ಅರ್ಥ? ಸಾಬರು ಅಯೋಧ್ಯೆಯಲ್ಲಿ ರಾಮ ಮಂದಿರ ಆಗದಿದ್ದರೆ ಗಂಡಾಂತರಕ್ಕೆ ಸಿಲುಕಲಿದ್ದಾರೆಂದಾ? ಹಿಂದೂತ್ವದ ದಾದಾಗಿರಿಗೆ ಶರಣಾಗದಿದ್ದರೆ ಉಳಿಗಾಲವಿಲ್ಲವೆಂದಾ? ಸಾತ್ವಿಕ ಸಂತ ತಾನೆಂದೂ ತೋರಿಸಿಕೊಳ್ಳಲು ತಿಣಕಾಡುವ ಪೇಜಾವರರ ಮಾತುಗಾರಿಕೆ ಯಾವ ಹಿಂದೂ ಭಯೋತ್ಪಾಕ ಕಾವಿ ಅಥವಾ ಖಾದಿ ಪುಂಡರ ಭಾಷಣಕ್ಕೆ ಕಮ್ಮಿಯಿದೆ?!

ಜನಾಗ್ರಹ ಸಭೆ ಚುನಾವಣಾ ರಾಜಕೀಯ ಅಲ್ಲ ಅನ್ನುತ್ತಲೇ ಬಿಜೆಪಿ ಪರ ಪರೋಕ್ಷವಾಗಿ ಬಹಿರಂಗ ಪ್ರಚಾರ ಪೇಜಾವರ ಸ್ವಾಮಿ ಮಾಡಿದ್ದಾರೆ. ಬಿಜೆಪಿ ರಾಮ ಮಂದಿರಕ್ಕೆ ಸಂಪೂರ್ಣ ಬೆಂಬಲ ಕೊಡಬೇಕೆಂದು ಹೇಳಿರುವುದೇ ವಿಕಟ ವ್ಯಂಗ್ಯ! ಲೋಕಸಭೆ ಸ್ಥಾನ ತ್ಯಜಿಸಲು ರಾಮ ಮಂದಿರಕ್ಕಾಗಿ ಬಿಜೆಪಿ ಸಂಸದರು ರೆಡಿಯಾಗಬೇಕೆಂದು ಹೇಳಿದ್ದಾರೆ. ಬರೀ ಆರು ತಿಂಗಳು ಬಾಕಿಯಿರುವಾಗ ಚೆಡ್ಡಿ ಎಂಪಿಗಳಿಗೆ ರಾಜೀನಾಮೆ ಕೊಡಿಯೆಂದು ಪೇಜಾವರರು ಹೇಳೋದು ಬಿಜೆಪಿಯನ್ನು ತಾರೀಫು ಮಾಡುವ ತಂತ್ರಗಾರಿಕೆಯಿಂದಷ್ಟೇ. ರಾಮನ ಹೆಸರಲ್ಲಿ ಪ್ರಧಾನಿಯಾದ ಮೋದಿ ನಾಲ್ಕುವರೆ ವರ್ಷದಿಂದ ಏಕೆ ರಾಮನಿಗೊಂದು ನೆಲೆಕೊಡುವ ಕೃತಜ್ಞತಾ ಭಾವದಿಂದ ಪ್ರಾಮಾಣಿಕ ಕೆಲಸ ಮಾಡಲಿಲ್ಲ ಎಂದು ಕೇಳುವ ಗಟ್ಸ್ ಪೇಜಾವರರೇಕೆ ತೋರಿಸುತ್ತಿಲ್ಲ?

ಹಿಂದೂತ್ವದ ದಿವಾಳಿಕೋರತನಕ್ಕೆ ಪೇಜಾವರರು ಸಂಕೇತವಾಗುತ್ತಿರುವುದು ದುರಂತ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...