Homeಮುಖಪುಟಪೇಜಾವರರ ಗಂಟಲಲ್ಲಿ ಹಿಂದೂತ್ವದ ಪುಂಡ!!

ಪೇಜಾವರರ ಗಂಟಲಲ್ಲಿ ಹಿಂದೂತ್ವದ ಪುಂಡ!!

- Advertisement -
- Advertisement -

ವರದಿಗಾರ |

ಸಂಘಪರಿವಾರದ ಆಸ್ಥಾನ ಪುರೋಹಿತ ಪೇಜಾವರ ವಿಶ್ವೇಶತೀರ್ಥ ಸ್ವಾಮಿಯ ಅಸಲಿ ಅವತಾರ ಅನಾವರಣವಾಗಿದೆ. ಕಳೆದ ವಾರ ಮಂಗಳೂರಲ್ಲಿ ವಿಶ್ವಹಿಂದೂ ಪರಿಷತ್ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಬೇಗ ಆಗಬೇಕೆಂದು ಜನದ್ರೋಹ ಸಭೆಯೊಂದನ್ನು ನಡೆಸಿತ್ತಲ್ಲ, ಅಲ್ಲಿ ಪೇಜಾವರರ ದಿವ್ಯ ಸಾನಿಧ್ಯವಿತ್ತು. ರಾಮಮಂದಿರಕ್ಕಾಗಿ ಪೇಜಾವರ ಸ್ವಾಮಿ ಕ್ಯಾತೆ ತೆಗೆದು ಕೂಗಾಡಿದ ಪರಿ ಭಯೋತ್ಪಾದನೆಯ ಸ್ಯಾಂಪಲ್ಲಿನಂತಿತ್ತು. ನಳಿನ್‌ಕುಮಾರ್ ಕಟೀಲ್, ಅನಂತಕುಮಾರ್ ಹೆಗಡೆ, ಪ್ರತಾಪ್‌ಸಿಂಹ, ಪ್ರಮೋದ್ ಮುತಾಲಿಕ್ ಮುಂತಾದ ಮೂರನೇ ದರ್ಜೆ ಹಿಂದೂತ್ವದ ಹಿಕಮತ್ತುದಾರರ ಗಂಟಲಲ್ಲಿ ಪೇಜಾವರ ಮಾತನಾಡಿದ್ದು ಕೇಳಿದ ಜನ ಬೆಚ್ಚಿಬಿದ್ದಿದ್ದಾರೆ. ಅಲ್ಲಿಗೆ ಈ ಅದ್ವೈತ ಸನ್ಯಾಸಿಯ ದೋಖಾ ದ್ವಂದ್ವ ಸಿದ್ಧಾಂತ ಮತ್ತೊಮ್ಮೆ ಜಗಜ್ಜಾಹೀರಾಗಿ ಹೋಗಿದೆ!

ಪರಧರ್ಮ ಸಹಿಷ್ಣು ಸಂತನ ಗೆಟಪ್ಪಿನಲ್ಲಿ ಓಡಾಡುವ ಈ ಪೊಲಿಟಿಕಲ್ ಸ್ವಾಮಿಯ ನಡೆ-ನುಡಿಯಲ್ಲಿ ಯಾವಾಗಲೂ ವಿರೋಧಾಭಾಸ-ವಿಪರ‍್ಯಾಸಗಳೇ, ಬ್ರಾಹ್ಮಣ್ಯದಡಿಯ ಅಸಮಾನತೆ-ಅಸ್ಪೃಶ್ಯತೆಗಳ ಅರ್ಥ ಮಾಡಿಸುತ್ತವೆ. ಹರಿಜನರ ಕೇರಿಗಳಿಗೆ ಹೋಗಿ ಪಾದ ತೊಳೆಸಿಕೊಳ್ಳುವ ಪೇಜಾವರರು ಮರಳಿ ಉಡುಪಿ ಮಠಕ್ಕೆ ಬರುವಾಗಲೇ ಜನಿವಾರ ಬದಲಿಸಿ ಶುದ್ಧೀಕರಣಗೊಳ್ಳುತ್ತಾರೆ. ಧರ್ಮೋನ್ಮಾದಿ ಕರಸೇವಕರು ಬಾಬರಿ ಮಸೀದಿ ಗುಮ್ಮಟ ಉರುಳಿಸುವಾಗ ಕಣ್ಣಾರೆ ಕಂಡು ಧನ್ಯತಾಭಾವದಿಂದ ಮಂದಹಾಸ ಬೀರುವ ಈ ಸ್ವಾಮಿ ತನ್ನ ಮಠದ ಆವರಣದಲ್ಲೇ ಮುಸ್ಲಿಮರಿಗೆ ಇಫ್ತಾರ್ ಕೂಟ ಏರ್ಪಡಿಸುವ ನಾಟಕವಾಡಬಲ್ಲರು.

ಉಡುಪಿ ಮಾಧ್ವಮಠದಲ್ಲಿ ಪಂಕ್ತಿಭೇದವೇ ಇಲ್ಲವೆಂದು ಹಸಿ-ಹಸಿ ಸುಳ್ಳು ಹೇಳುವ ಪೇಜಾವರ ಸ್ವಾಮಿ ಕುಕ್ಕೆ ಸುಬ್ರಹ್ಮಣ್ಯದ ಮಡೆಸ್ನಾನಕ್ಕೆ ಪರ‍್ಯಾಯವಾಗಿ ಉಡೆಸ್ನಾನದ ಆವಿಷ್ಕಾರ ಮಾಡಿ ಅಮಾಯಕ ಅಬ್ರಾಹ್ಮಣರ ದಿಕ್ಕು ತಪ್ಪಿಸುತ್ತಾರೆ. ಇವತ್ತಿಗೂ ಪೇಜಾವರರು ಗೋ-ಗೂಂಡಾಗಳಿಗೆ, ಬಾಬರಿ ಮಸೀದಿ ಧ್ವಂಸಕರಿಗೆ ಸ್ಫೂರ್ತಿಯ ಚಿಲುಮೆ. ತನ್ನ ಧಾರ್ಮಿಕ ಕಾರ್ಯಾಚರಣೆಗೆ ಅನುಕೂಲ ಆಗುತ್ತದೆಂದಾಗ ಸಾಬರನ್ನು ಮಠಕ್ಕೆ ಕರೆದು ಇಫ್ತಾರ್ ಕೂಟ ಮಾಡುವ ಪೇಜಾವರರು ಶಾಸಕ ರಘುಪತಿ ಭಟ್ಟನಂಥವರು ಕಣ್ಣುಬಿಟ್ಟರೆ ಹೆದರಿ ಮರು ವರ್ಷ ಆ ಇಫ್ತಾರ್ ಪ್ರಹಸನ ಮಾಡುವುದೇ ಇಲ್ಲಾ! ಹಿಂದೂತ್ವದ ಸೈತಾನರು ಪಾಪದ ಸಾಬರ ಬೆತ್ತಲೆ ಮಾಡಿ ಬಡಿದು ಕೇಕೆ ಹಾಕಿದರೂ, ಕೊಂದು ಎಸೆದರೂ ಕಂಡೂ ಕಾಣದಂತಿರುತ್ತಾರೆ ಪೇಜಾವರ ಸ್ವಾಮಿ. ಹಾಗಂತ ಶಾಂತಿ, ಸಹಬಾಳ್ವೆ, ಸಹಿಷ್ಣುತೆ, ಸಂವಿಧಾನದ ಬಗ್ಗೆ ಉದ್ದುದ್ದ ವ್ಯಾಖ್ಯಾನ ಕೊಡಲು ಮಾತ್ರ ಮರೆಯುವುದಿಲ್ಲ……..

ಇಂಥ ಗುಣಧರ್ಮದ ಪೇಜಾವರ ಸ್ವಾಮೀಜಿ ಮೊನ್ನೆ ಮಂಗಳೂರಲ್ಲಿ ಕೇಸರಿ ಕೂಟದಲ್ಲಿ ಉದುರಿಸಿದ ಭೀಭತ್ಸ ಅಣಿ ಮುತ್ತುಗಳು ಅವರ ಜಾಯಮಾನಕ್ಕೆ ತಕ್ಕಂತೆಯೇ ಇದೆ. ಮಾತಿನುದ್ದಕ್ಕೂ ಪೇಜಾವರರ ಮೇಲೆ ಹಿಂದೂತ್ವದ ಭಯೋತ್ಪಾದಕನ ಆವಾಹನೆ ಆದಂತಿತ್ತು. ಹಿಂದೂತ್ವದ ಕಾಳಗದ ಕಾಲಾಳುಗಳಾದ ಅವಿಭಜಿತ ದಕ್ಷಿಣ ಕನ್ನಡದ ಅಬ್ರಾಹ್ಮಣರನ್ನು ಅನಾಹುತಕ್ಕೆ ಪ್ರಚೋದಿಸುವ ಓಘ ಪೇಜಾವರರ ಭಾಷಣಕ್ಕಿತ್ತು. ಎತ್ತಿಂದೆತ್ತ ಲೆಕ್ಕಹಾಕಿ ತಾಳೆ ನೋಡಿದರೂ 2019ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೋದಿ ಮಾಮನ ಗೆಲ್ಲಿಸುವ ಮಸಲತ್ತಿನ ಮಾತುಗಾರಿಕೆ ಇದಾಗಿತ್ತೆಂಬುದು ಎಂಥ ಗಾಂಪನಿಗೂ ಅರ್ಥವಾಗುತ್ತದೆ!! ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೃವೀಕರಣಗೊಂಡಿರುವ ಹಿಂದೂತ್ವದ ಓಟ್‌ಬ್ಯಾಂಕ್ ಇನ್ನಾರು ತಿಂಗಳಲ್ಲಿ ಬರಲಿರುವ ಪಾರ್ಲಿಮೆಂಟ್ ಇಲೆಕ್ಷನ್ ತನಕ ಕಾಪಿಟ್ಟುಕೊಳ್ಳುವ ತಂತ್ರಗಾರಿಕೆ ಪೇಜಾವರ ಟೇಮಿನದಾಗಿತ್ತು.

ನಾಲ್ಕುವರೆ ವರ್ಷದಿಂದ ಸಂಘಪರಿವಾರದ ಬ್ರಾಹ್ಮಣ ರಿಂಗ್‌ಮಾಸ್ಟರ್‌ಗಳ ಪಾದುಕಾ ಪೂಜಾರಿ ಮೋದಿ ಪ್ರಧಾನಿಯಾಗಿದ್ದರೂ ಆತನಿಂದ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲಿಕ್ಕೆ ಯಾಕಾಗಲಿಲ್ಲ ಎಂಬ ಮೂಲಭೂತ ಪ್ರಶ್ನೆ ಮರೆಮಾಚಿದ ಪೇಜಾವರರು ಏಕಾಏಕಿ ಕಾಂಗ್ರೆಸ್ ಮೇಲೆ ಮುಗಿಬಿದ್ದಿದ್ದಾರೆ. ಆ ಮೂಲಕ ಇಲೆಕ್ಷನ್ ಪ್ರಚಾರ ಶುರುಮಾಡಿದ್ದಾರೆ. ಹಿಂದೂತ್ವಕ್ಕಾಗಿ ತನ್ನನ್ನು ಸಂಸದನಾಗಿಸಿದ ಜಿಲ್ಲೆಗೇ ಬೆಂಕಿ ಹಾಕ್ತೇನೆಂದು ಯಾವ ಮುಲಾಜೂ, ಮನುಷ್ಯತ್ವವೂ ಇಲ್ಲದೆ ಆರ್ಭಟಿಸುವ ನಳಿನ್‌ಕುಮಾರ್ ಕಟೀಲ್‌ನಂಥವರನ್ನು ಬಗಲಲ್ಲಿಟ್ಟುಕೊಂಡು ಪೇಜಾವರರು ಮಾಡಿದ ಭಾಷಣದ ನೀತಿ-ರೀತಿಗೆ ಕೂಗುಮಾರಿ ಖ್ಯಾತಿಯ ಚೈತ್ರಾ ಕುಂದಾಪುರ, ಸೂಲಿಬೆಲೆ ಚಕ್ರವರ್ತಿಯಂಥವರೇ ನಾಚಿ ತಲೆ ತಗ್ಗಿಸುವಂತಿತ್ತು!

ಪ್ರತಿದಿನ ಸಾವಿರ ಸುಳ್ಳು ಸಬೂಬು ಹೇಳುವ ಮೋದಿ 2019ರ ಚುನಾವಣೆಯಲ್ಲಿ ಬಚಾವಾಗದ ಪ್ರಪಾತಕ್ಕೆ ಹೋಗಿಬಿದ್ದಿದ್ದಾರೆಂಬುದು ಪೇಜಾವರರಂಥ ಹಿಂದೂ ಸಂತ ಸಂತಾನಕ್ಕೆ ಪಕ್ಕಾ ಆಗಿಹೋಗಿದೆ. ಮೋದಿಯಂಥ ಹುಂಬ ಶೋ ಮ್ಯಾನ್ ದೇಶದ ಚುಕ್ಕಾಣಿ ಹಿಡಿಯುವುದು ಸಂಘಪರಿವಾರಕ್ಕೆ ಅನಿವಾರ್ಯ ಅಗತ್ಯ. ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಅಡ್ಡಬರುತ್ತಿದೆ ಎಂದು ಬಿಂಬಿಸಿದರೆ ಜನರ ಭಾವನೆ ಕೆರಳಿಸಬಹುದೆಂಬ ದೂ(ದು)ರಾಲೋಚನೆ ಕಾವಿ ಕೂಟದ್ದು. ಹಾಗಾಗಿಯೇ ಮಂಗಳೂರಲ್ಲಿ ಪೇಜಾವರರು ಮಾತುಮಾತಿಗೆ ಕಾಂಗ್ರೆಸ್ ರಾಮಮಂದಿರ ವಿರೋಧಿ ಎಂಬಂತೆ ಪ್ರವಚನ ಮಾಡಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ವಿಶೇಷ ಕಾನೂನು ಮಾಡಬೇಕೆಂದು ಹೇಳುವ ಪೇಜಾವರ ಮಾತಿನ ಅರ್ಥ ಸುಗ್ರೀವಾಜ್ಞೆ ಮೂಲಕ ಅಯೋಧ್ಯೆಯಲ್ಲಿ ರಾಮನಿಗೆ ಗುಡಿಕಟ್ಟಬೇಕೆನ್ನುವುದೇ ಆಗಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ಸ್ಥಾಪನೆಗೆ ಕಾಂಗ್ರೆಸ್ ಸಹಕರಿಸಬೇಕೆಂದು ಎಚ್ಚರಿಕೆಯೂ ಪೇಜಾವರ ಸ್ವಾಮಿ ಕೊಟ್ಟಿದ್ದಾರೆ. ಕಾಂಗ್ರೆಸೇನಾದರೂ ರಾಮಮಂದಿರಕ್ಕೆ ಅಡ್ಡಗಾಲು ಹಾಕಿದರೆ ಮುಂಬರುವ ಚುನಾವಣೆಯಲ್ಲಿ ಆ ಪಾರ್ಟಿ ಮಣ್ಣು ಮುಕ್ಕುತ್ತದೆಯೆಂದು ಮೋದಿಯನ್ನು ಮೀರಿಸುವ ಸ್ಟೈಲಲ್ಲಿ ಪೇಜಾವರರು ಭಾಷಣ ಬಿಗಿದಿದ್ದಾರೆ. ಅಷ್ಟೇ ಅಲ್ಲ, ಮುಸ್ಲಿಮರು ರಾಮ ಮಂದಿರಕ್ಕೆ ಬೆಂಬಲಿಸಿ ಹಿಂದೂಗಳೊಂದಿಗೆ ಬಾಂಧವ್ಯ ಹೆಚ್ಚಿಸಿಕೊಳ್ಳಬೇಕು ಎಂದಿದ್ದಾರೆ. ಏನಿದರ ಅರ್ಥ? ಸಾಬರು ಅಯೋಧ್ಯೆಯಲ್ಲಿ ರಾಮ ಮಂದಿರ ಆಗದಿದ್ದರೆ ಗಂಡಾಂತರಕ್ಕೆ ಸಿಲುಕಲಿದ್ದಾರೆಂದಾ? ಹಿಂದೂತ್ವದ ದಾದಾಗಿರಿಗೆ ಶರಣಾಗದಿದ್ದರೆ ಉಳಿಗಾಲವಿಲ್ಲವೆಂದಾ? ಸಾತ್ವಿಕ ಸಂತ ತಾನೆಂದೂ ತೋರಿಸಿಕೊಳ್ಳಲು ತಿಣಕಾಡುವ ಪೇಜಾವರರ ಮಾತುಗಾರಿಕೆ ಯಾವ ಹಿಂದೂ ಭಯೋತ್ಪಾಕ ಕಾವಿ ಅಥವಾ ಖಾದಿ ಪುಂಡರ ಭಾಷಣಕ್ಕೆ ಕಮ್ಮಿಯಿದೆ?!

ಜನಾಗ್ರಹ ಸಭೆ ಚುನಾವಣಾ ರಾಜಕೀಯ ಅಲ್ಲ ಅನ್ನುತ್ತಲೇ ಬಿಜೆಪಿ ಪರ ಪರೋಕ್ಷವಾಗಿ ಬಹಿರಂಗ ಪ್ರಚಾರ ಪೇಜಾವರ ಸ್ವಾಮಿ ಮಾಡಿದ್ದಾರೆ. ಬಿಜೆಪಿ ರಾಮ ಮಂದಿರಕ್ಕೆ ಸಂಪೂರ್ಣ ಬೆಂಬಲ ಕೊಡಬೇಕೆಂದು ಹೇಳಿರುವುದೇ ವಿಕಟ ವ್ಯಂಗ್ಯ! ಲೋಕಸಭೆ ಸ್ಥಾನ ತ್ಯಜಿಸಲು ರಾಮ ಮಂದಿರಕ್ಕಾಗಿ ಬಿಜೆಪಿ ಸಂಸದರು ರೆಡಿಯಾಗಬೇಕೆಂದು ಹೇಳಿದ್ದಾರೆ. ಬರೀ ಆರು ತಿಂಗಳು ಬಾಕಿಯಿರುವಾಗ ಚೆಡ್ಡಿ ಎಂಪಿಗಳಿಗೆ ರಾಜೀನಾಮೆ ಕೊಡಿಯೆಂದು ಪೇಜಾವರರು ಹೇಳೋದು ಬಿಜೆಪಿಯನ್ನು ತಾರೀಫು ಮಾಡುವ ತಂತ್ರಗಾರಿಕೆಯಿಂದಷ್ಟೇ. ರಾಮನ ಹೆಸರಲ್ಲಿ ಪ್ರಧಾನಿಯಾದ ಮೋದಿ ನಾಲ್ಕುವರೆ ವರ್ಷದಿಂದ ಏಕೆ ರಾಮನಿಗೊಂದು ನೆಲೆಕೊಡುವ ಕೃತಜ್ಞತಾ ಭಾವದಿಂದ ಪ್ರಾಮಾಣಿಕ ಕೆಲಸ ಮಾಡಲಿಲ್ಲ ಎಂದು ಕೇಳುವ ಗಟ್ಸ್ ಪೇಜಾವರರೇಕೆ ತೋರಿಸುತ್ತಿಲ್ಲ?

ಹಿಂದೂತ್ವದ ದಿವಾಳಿಕೋರತನಕ್ಕೆ ಪೇಜಾವರರು ಸಂಕೇತವಾಗುತ್ತಿರುವುದು ದುರಂತ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...