Homeಮುಖಪುಟಪೇಜಾವರರ ಗಂಟಲಲ್ಲಿ ಹಿಂದೂತ್ವದ ಪುಂಡ!!

ಪೇಜಾವರರ ಗಂಟಲಲ್ಲಿ ಹಿಂದೂತ್ವದ ಪುಂಡ!!

- Advertisement -
- Advertisement -

ವರದಿಗಾರ |

ಸಂಘಪರಿವಾರದ ಆಸ್ಥಾನ ಪುರೋಹಿತ ಪೇಜಾವರ ವಿಶ್ವೇಶತೀರ್ಥ ಸ್ವಾಮಿಯ ಅಸಲಿ ಅವತಾರ ಅನಾವರಣವಾಗಿದೆ. ಕಳೆದ ವಾರ ಮಂಗಳೂರಲ್ಲಿ ವಿಶ್ವಹಿಂದೂ ಪರಿಷತ್ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಬೇಗ ಆಗಬೇಕೆಂದು ಜನದ್ರೋಹ ಸಭೆಯೊಂದನ್ನು ನಡೆಸಿತ್ತಲ್ಲ, ಅಲ್ಲಿ ಪೇಜಾವರರ ದಿವ್ಯ ಸಾನಿಧ್ಯವಿತ್ತು. ರಾಮಮಂದಿರಕ್ಕಾಗಿ ಪೇಜಾವರ ಸ್ವಾಮಿ ಕ್ಯಾತೆ ತೆಗೆದು ಕೂಗಾಡಿದ ಪರಿ ಭಯೋತ್ಪಾದನೆಯ ಸ್ಯಾಂಪಲ್ಲಿನಂತಿತ್ತು. ನಳಿನ್‌ಕುಮಾರ್ ಕಟೀಲ್, ಅನಂತಕುಮಾರ್ ಹೆಗಡೆ, ಪ್ರತಾಪ್‌ಸಿಂಹ, ಪ್ರಮೋದ್ ಮುತಾಲಿಕ್ ಮುಂತಾದ ಮೂರನೇ ದರ್ಜೆ ಹಿಂದೂತ್ವದ ಹಿಕಮತ್ತುದಾರರ ಗಂಟಲಲ್ಲಿ ಪೇಜಾವರ ಮಾತನಾಡಿದ್ದು ಕೇಳಿದ ಜನ ಬೆಚ್ಚಿಬಿದ್ದಿದ್ದಾರೆ. ಅಲ್ಲಿಗೆ ಈ ಅದ್ವೈತ ಸನ್ಯಾಸಿಯ ದೋಖಾ ದ್ವಂದ್ವ ಸಿದ್ಧಾಂತ ಮತ್ತೊಮ್ಮೆ ಜಗಜ್ಜಾಹೀರಾಗಿ ಹೋಗಿದೆ!

ಪರಧರ್ಮ ಸಹಿಷ್ಣು ಸಂತನ ಗೆಟಪ್ಪಿನಲ್ಲಿ ಓಡಾಡುವ ಈ ಪೊಲಿಟಿಕಲ್ ಸ್ವಾಮಿಯ ನಡೆ-ನುಡಿಯಲ್ಲಿ ಯಾವಾಗಲೂ ವಿರೋಧಾಭಾಸ-ವಿಪರ‍್ಯಾಸಗಳೇ, ಬ್ರಾಹ್ಮಣ್ಯದಡಿಯ ಅಸಮಾನತೆ-ಅಸ್ಪೃಶ್ಯತೆಗಳ ಅರ್ಥ ಮಾಡಿಸುತ್ತವೆ. ಹರಿಜನರ ಕೇರಿಗಳಿಗೆ ಹೋಗಿ ಪಾದ ತೊಳೆಸಿಕೊಳ್ಳುವ ಪೇಜಾವರರು ಮರಳಿ ಉಡುಪಿ ಮಠಕ್ಕೆ ಬರುವಾಗಲೇ ಜನಿವಾರ ಬದಲಿಸಿ ಶುದ್ಧೀಕರಣಗೊಳ್ಳುತ್ತಾರೆ. ಧರ್ಮೋನ್ಮಾದಿ ಕರಸೇವಕರು ಬಾಬರಿ ಮಸೀದಿ ಗುಮ್ಮಟ ಉರುಳಿಸುವಾಗ ಕಣ್ಣಾರೆ ಕಂಡು ಧನ್ಯತಾಭಾವದಿಂದ ಮಂದಹಾಸ ಬೀರುವ ಈ ಸ್ವಾಮಿ ತನ್ನ ಮಠದ ಆವರಣದಲ್ಲೇ ಮುಸ್ಲಿಮರಿಗೆ ಇಫ್ತಾರ್ ಕೂಟ ಏರ್ಪಡಿಸುವ ನಾಟಕವಾಡಬಲ್ಲರು.

ಉಡುಪಿ ಮಾಧ್ವಮಠದಲ್ಲಿ ಪಂಕ್ತಿಭೇದವೇ ಇಲ್ಲವೆಂದು ಹಸಿ-ಹಸಿ ಸುಳ್ಳು ಹೇಳುವ ಪೇಜಾವರ ಸ್ವಾಮಿ ಕುಕ್ಕೆ ಸುಬ್ರಹ್ಮಣ್ಯದ ಮಡೆಸ್ನಾನಕ್ಕೆ ಪರ‍್ಯಾಯವಾಗಿ ಉಡೆಸ್ನಾನದ ಆವಿಷ್ಕಾರ ಮಾಡಿ ಅಮಾಯಕ ಅಬ್ರಾಹ್ಮಣರ ದಿಕ್ಕು ತಪ್ಪಿಸುತ್ತಾರೆ. ಇವತ್ತಿಗೂ ಪೇಜಾವರರು ಗೋ-ಗೂಂಡಾಗಳಿಗೆ, ಬಾಬರಿ ಮಸೀದಿ ಧ್ವಂಸಕರಿಗೆ ಸ್ಫೂರ್ತಿಯ ಚಿಲುಮೆ. ತನ್ನ ಧಾರ್ಮಿಕ ಕಾರ್ಯಾಚರಣೆಗೆ ಅನುಕೂಲ ಆಗುತ್ತದೆಂದಾಗ ಸಾಬರನ್ನು ಮಠಕ್ಕೆ ಕರೆದು ಇಫ್ತಾರ್ ಕೂಟ ಮಾಡುವ ಪೇಜಾವರರು ಶಾಸಕ ರಘುಪತಿ ಭಟ್ಟನಂಥವರು ಕಣ್ಣುಬಿಟ್ಟರೆ ಹೆದರಿ ಮರು ವರ್ಷ ಆ ಇಫ್ತಾರ್ ಪ್ರಹಸನ ಮಾಡುವುದೇ ಇಲ್ಲಾ! ಹಿಂದೂತ್ವದ ಸೈತಾನರು ಪಾಪದ ಸಾಬರ ಬೆತ್ತಲೆ ಮಾಡಿ ಬಡಿದು ಕೇಕೆ ಹಾಕಿದರೂ, ಕೊಂದು ಎಸೆದರೂ ಕಂಡೂ ಕಾಣದಂತಿರುತ್ತಾರೆ ಪೇಜಾವರ ಸ್ವಾಮಿ. ಹಾಗಂತ ಶಾಂತಿ, ಸಹಬಾಳ್ವೆ, ಸಹಿಷ್ಣುತೆ, ಸಂವಿಧಾನದ ಬಗ್ಗೆ ಉದ್ದುದ್ದ ವ್ಯಾಖ್ಯಾನ ಕೊಡಲು ಮಾತ್ರ ಮರೆಯುವುದಿಲ್ಲ……..

ಇಂಥ ಗುಣಧರ್ಮದ ಪೇಜಾವರ ಸ್ವಾಮೀಜಿ ಮೊನ್ನೆ ಮಂಗಳೂರಲ್ಲಿ ಕೇಸರಿ ಕೂಟದಲ್ಲಿ ಉದುರಿಸಿದ ಭೀಭತ್ಸ ಅಣಿ ಮುತ್ತುಗಳು ಅವರ ಜಾಯಮಾನಕ್ಕೆ ತಕ್ಕಂತೆಯೇ ಇದೆ. ಮಾತಿನುದ್ದಕ್ಕೂ ಪೇಜಾವರರ ಮೇಲೆ ಹಿಂದೂತ್ವದ ಭಯೋತ್ಪಾದಕನ ಆವಾಹನೆ ಆದಂತಿತ್ತು. ಹಿಂದೂತ್ವದ ಕಾಳಗದ ಕಾಲಾಳುಗಳಾದ ಅವಿಭಜಿತ ದಕ್ಷಿಣ ಕನ್ನಡದ ಅಬ್ರಾಹ್ಮಣರನ್ನು ಅನಾಹುತಕ್ಕೆ ಪ್ರಚೋದಿಸುವ ಓಘ ಪೇಜಾವರರ ಭಾಷಣಕ್ಕಿತ್ತು. ಎತ್ತಿಂದೆತ್ತ ಲೆಕ್ಕಹಾಕಿ ತಾಳೆ ನೋಡಿದರೂ 2019ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೋದಿ ಮಾಮನ ಗೆಲ್ಲಿಸುವ ಮಸಲತ್ತಿನ ಮಾತುಗಾರಿಕೆ ಇದಾಗಿತ್ತೆಂಬುದು ಎಂಥ ಗಾಂಪನಿಗೂ ಅರ್ಥವಾಗುತ್ತದೆ!! ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೃವೀಕರಣಗೊಂಡಿರುವ ಹಿಂದೂತ್ವದ ಓಟ್‌ಬ್ಯಾಂಕ್ ಇನ್ನಾರು ತಿಂಗಳಲ್ಲಿ ಬರಲಿರುವ ಪಾರ್ಲಿಮೆಂಟ್ ಇಲೆಕ್ಷನ್ ತನಕ ಕಾಪಿಟ್ಟುಕೊಳ್ಳುವ ತಂತ್ರಗಾರಿಕೆ ಪೇಜಾವರ ಟೇಮಿನದಾಗಿತ್ತು.

ನಾಲ್ಕುವರೆ ವರ್ಷದಿಂದ ಸಂಘಪರಿವಾರದ ಬ್ರಾಹ್ಮಣ ರಿಂಗ್‌ಮಾಸ್ಟರ್‌ಗಳ ಪಾದುಕಾ ಪೂಜಾರಿ ಮೋದಿ ಪ್ರಧಾನಿಯಾಗಿದ್ದರೂ ಆತನಿಂದ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲಿಕ್ಕೆ ಯಾಕಾಗಲಿಲ್ಲ ಎಂಬ ಮೂಲಭೂತ ಪ್ರಶ್ನೆ ಮರೆಮಾಚಿದ ಪೇಜಾವರರು ಏಕಾಏಕಿ ಕಾಂಗ್ರೆಸ್ ಮೇಲೆ ಮುಗಿಬಿದ್ದಿದ್ದಾರೆ. ಆ ಮೂಲಕ ಇಲೆಕ್ಷನ್ ಪ್ರಚಾರ ಶುರುಮಾಡಿದ್ದಾರೆ. ಹಿಂದೂತ್ವಕ್ಕಾಗಿ ತನ್ನನ್ನು ಸಂಸದನಾಗಿಸಿದ ಜಿಲ್ಲೆಗೇ ಬೆಂಕಿ ಹಾಕ್ತೇನೆಂದು ಯಾವ ಮುಲಾಜೂ, ಮನುಷ್ಯತ್ವವೂ ಇಲ್ಲದೆ ಆರ್ಭಟಿಸುವ ನಳಿನ್‌ಕುಮಾರ್ ಕಟೀಲ್‌ನಂಥವರನ್ನು ಬಗಲಲ್ಲಿಟ್ಟುಕೊಂಡು ಪೇಜಾವರರು ಮಾಡಿದ ಭಾಷಣದ ನೀತಿ-ರೀತಿಗೆ ಕೂಗುಮಾರಿ ಖ್ಯಾತಿಯ ಚೈತ್ರಾ ಕುಂದಾಪುರ, ಸೂಲಿಬೆಲೆ ಚಕ್ರವರ್ತಿಯಂಥವರೇ ನಾಚಿ ತಲೆ ತಗ್ಗಿಸುವಂತಿತ್ತು!

ಪ್ರತಿದಿನ ಸಾವಿರ ಸುಳ್ಳು ಸಬೂಬು ಹೇಳುವ ಮೋದಿ 2019ರ ಚುನಾವಣೆಯಲ್ಲಿ ಬಚಾವಾಗದ ಪ್ರಪಾತಕ್ಕೆ ಹೋಗಿಬಿದ್ದಿದ್ದಾರೆಂಬುದು ಪೇಜಾವರರಂಥ ಹಿಂದೂ ಸಂತ ಸಂತಾನಕ್ಕೆ ಪಕ್ಕಾ ಆಗಿಹೋಗಿದೆ. ಮೋದಿಯಂಥ ಹುಂಬ ಶೋ ಮ್ಯಾನ್ ದೇಶದ ಚುಕ್ಕಾಣಿ ಹಿಡಿಯುವುದು ಸಂಘಪರಿವಾರಕ್ಕೆ ಅನಿವಾರ್ಯ ಅಗತ್ಯ. ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಅಡ್ಡಬರುತ್ತಿದೆ ಎಂದು ಬಿಂಬಿಸಿದರೆ ಜನರ ಭಾವನೆ ಕೆರಳಿಸಬಹುದೆಂಬ ದೂ(ದು)ರಾಲೋಚನೆ ಕಾವಿ ಕೂಟದ್ದು. ಹಾಗಾಗಿಯೇ ಮಂಗಳೂರಲ್ಲಿ ಪೇಜಾವರರು ಮಾತುಮಾತಿಗೆ ಕಾಂಗ್ರೆಸ್ ರಾಮಮಂದಿರ ವಿರೋಧಿ ಎಂಬಂತೆ ಪ್ರವಚನ ಮಾಡಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ವಿಶೇಷ ಕಾನೂನು ಮಾಡಬೇಕೆಂದು ಹೇಳುವ ಪೇಜಾವರ ಮಾತಿನ ಅರ್ಥ ಸುಗ್ರೀವಾಜ್ಞೆ ಮೂಲಕ ಅಯೋಧ್ಯೆಯಲ್ಲಿ ರಾಮನಿಗೆ ಗುಡಿಕಟ್ಟಬೇಕೆನ್ನುವುದೇ ಆಗಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ಸ್ಥಾಪನೆಗೆ ಕಾಂಗ್ರೆಸ್ ಸಹಕರಿಸಬೇಕೆಂದು ಎಚ್ಚರಿಕೆಯೂ ಪೇಜಾವರ ಸ್ವಾಮಿ ಕೊಟ್ಟಿದ್ದಾರೆ. ಕಾಂಗ್ರೆಸೇನಾದರೂ ರಾಮಮಂದಿರಕ್ಕೆ ಅಡ್ಡಗಾಲು ಹಾಕಿದರೆ ಮುಂಬರುವ ಚುನಾವಣೆಯಲ್ಲಿ ಆ ಪಾರ್ಟಿ ಮಣ್ಣು ಮುಕ್ಕುತ್ತದೆಯೆಂದು ಮೋದಿಯನ್ನು ಮೀರಿಸುವ ಸ್ಟೈಲಲ್ಲಿ ಪೇಜಾವರರು ಭಾಷಣ ಬಿಗಿದಿದ್ದಾರೆ. ಅಷ್ಟೇ ಅಲ್ಲ, ಮುಸ್ಲಿಮರು ರಾಮ ಮಂದಿರಕ್ಕೆ ಬೆಂಬಲಿಸಿ ಹಿಂದೂಗಳೊಂದಿಗೆ ಬಾಂಧವ್ಯ ಹೆಚ್ಚಿಸಿಕೊಳ್ಳಬೇಕು ಎಂದಿದ್ದಾರೆ. ಏನಿದರ ಅರ್ಥ? ಸಾಬರು ಅಯೋಧ್ಯೆಯಲ್ಲಿ ರಾಮ ಮಂದಿರ ಆಗದಿದ್ದರೆ ಗಂಡಾಂತರಕ್ಕೆ ಸಿಲುಕಲಿದ್ದಾರೆಂದಾ? ಹಿಂದೂತ್ವದ ದಾದಾಗಿರಿಗೆ ಶರಣಾಗದಿದ್ದರೆ ಉಳಿಗಾಲವಿಲ್ಲವೆಂದಾ? ಸಾತ್ವಿಕ ಸಂತ ತಾನೆಂದೂ ತೋರಿಸಿಕೊಳ್ಳಲು ತಿಣಕಾಡುವ ಪೇಜಾವರರ ಮಾತುಗಾರಿಕೆ ಯಾವ ಹಿಂದೂ ಭಯೋತ್ಪಾಕ ಕಾವಿ ಅಥವಾ ಖಾದಿ ಪುಂಡರ ಭಾಷಣಕ್ಕೆ ಕಮ್ಮಿಯಿದೆ?!

ಜನಾಗ್ರಹ ಸಭೆ ಚುನಾವಣಾ ರಾಜಕೀಯ ಅಲ್ಲ ಅನ್ನುತ್ತಲೇ ಬಿಜೆಪಿ ಪರ ಪರೋಕ್ಷವಾಗಿ ಬಹಿರಂಗ ಪ್ರಚಾರ ಪೇಜಾವರ ಸ್ವಾಮಿ ಮಾಡಿದ್ದಾರೆ. ಬಿಜೆಪಿ ರಾಮ ಮಂದಿರಕ್ಕೆ ಸಂಪೂರ್ಣ ಬೆಂಬಲ ಕೊಡಬೇಕೆಂದು ಹೇಳಿರುವುದೇ ವಿಕಟ ವ್ಯಂಗ್ಯ! ಲೋಕಸಭೆ ಸ್ಥಾನ ತ್ಯಜಿಸಲು ರಾಮ ಮಂದಿರಕ್ಕಾಗಿ ಬಿಜೆಪಿ ಸಂಸದರು ರೆಡಿಯಾಗಬೇಕೆಂದು ಹೇಳಿದ್ದಾರೆ. ಬರೀ ಆರು ತಿಂಗಳು ಬಾಕಿಯಿರುವಾಗ ಚೆಡ್ಡಿ ಎಂಪಿಗಳಿಗೆ ರಾಜೀನಾಮೆ ಕೊಡಿಯೆಂದು ಪೇಜಾವರರು ಹೇಳೋದು ಬಿಜೆಪಿಯನ್ನು ತಾರೀಫು ಮಾಡುವ ತಂತ್ರಗಾರಿಕೆಯಿಂದಷ್ಟೇ. ರಾಮನ ಹೆಸರಲ್ಲಿ ಪ್ರಧಾನಿಯಾದ ಮೋದಿ ನಾಲ್ಕುವರೆ ವರ್ಷದಿಂದ ಏಕೆ ರಾಮನಿಗೊಂದು ನೆಲೆಕೊಡುವ ಕೃತಜ್ಞತಾ ಭಾವದಿಂದ ಪ್ರಾಮಾಣಿಕ ಕೆಲಸ ಮಾಡಲಿಲ್ಲ ಎಂದು ಕೇಳುವ ಗಟ್ಸ್ ಪೇಜಾವರರೇಕೆ ತೋರಿಸುತ್ತಿಲ್ಲ?

ಹಿಂದೂತ್ವದ ದಿವಾಳಿಕೋರತನಕ್ಕೆ ಪೇಜಾವರರು ಸಂಕೇತವಾಗುತ್ತಿರುವುದು ದುರಂತ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....